Homeಚಳವಳಿಸಿಬಿಐ ದಾಳಿಗಳು ಮತ್ತು ವಕೀಲರು, ಪತ್ರಕರ್ತರ ಕಾನೂನುಬಾಹಿರ ಬಂಧನಗಳು: ಕರಾಳ ದಿನಗಳ ಮುನ್ಸೂಚನೆ

ಸಿಬಿಐ ದಾಳಿಗಳು ಮತ್ತು ವಕೀಲರು, ಪತ್ರಕರ್ತರ ಕಾನೂನುಬಾಹಿರ ಬಂಧನಗಳು: ಕರಾಳ ದಿನಗಳ ಮುನ್ಸೂಚನೆ

ಮೋದಿ ಅಮಿತ್ ಶಾ ರವರ ಸಿಬಿಐ ದಾಳಿಗಳು ಮತ್ತು ನಕ್ಸಲ್ ಲಿಂಕ್ ಆರೋಪಗಳು, ಮಾನವ ಹಕ್ಕು ಕಾರ್ಯಕರ್ತರನ್ನು ತೆಪ್ಪಗಾಗಿಸುವ ಸಾಧನಗಳಾಗಿವೆ ಅಷ್ಟೇ..

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ-2 ಸರ್ಕಾರವು ಯಾವುದೇ ನೈಜ ಮತ್ತು ಗ್ರಹಿತ ವಿರೋಧಗಳನ್ನು ಮೆಟ್ಟಿ ಹಾಕಲು ಒಂದಿನಿತೂ ಸಮಯವನ್ನು ವ್ಯರ್ಥ ಮಾಡುತ್ತಿಲ್ಲ. ಗುಜರಾತ್ ಗಲಭೆಗಳಲ್ಲಿ ಮೋದಿ ಪಾತ್ರವಿದೆಯೆಂದು ಆರೋಪಿಸಿದ್ದ ಸಂಜೀವ್ ಭಟ್ಟ ಅವರಿಗೆ ಜೀವಾವಧಿ ಶಿಕ್ಷೆ ಆಗುವಂತೆ ಮಾಡುವ ಮೂಲಕ ಇದು ಆರಂಭವಾಯಿತು. ನಂತರದಲ್ಲಿ ಉತ್ತರ ಪ್ರದೇಶದ ಯೋಗಿ ಸರ್ಕಾರದ ಟೀಕಾಕಾರರಾಗಿದ್ದ ಪರ್ತಕರ್ತರ ಮೇಲೆ ದಾಳಿ ಮತ್ತು ಬಂಧನಗಳಾದವು.

ಈ ವಾರವಷ್ಟೇ ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಇಂದಿರಾ ಜೈಸಿಂಗ್ ಅವರ ಮನೆ ಮತ್ತು ಲಾಯರ್ಸ್ ಕಲೆಕ್ಟಿವ್ ಕಚೇರಿ ಮೇಲೆ ಸಿಬಿಐ ದಾಳಿ ನಡೆದಿದ್ದು ಇದೆಲ್ಲದರ ಮುಂದುವರಿಕೆ. ಇಂದಿರಾರವರು 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಅವರ ಮತ್ತು ಅವರ ನೀತಿಗಳ ಪ್ರಖರ ಟೀಕಾಕಾರರಾಗಿದ್ದಾರೆ.

ಆನಂದ್ ಗ್ರೋವರ್ ಮತ್ತು ಇಂದಿರಾ ಜೈಸಿಂಗ್

ಇಂದಿರಾ ಮತ್ತು ಅವರ ಸಂಸ್ಥೇ ಲಾಯರ್ಸ್ ಕಲೆಕ್ಟಿವ್ ಬಿಜೆಪಿ ವಿರುದ್ಧ ಹಲವಾರು ಕಾನೂನು ಪ್ರಕರಣಗಳನ್ನು ಕೈಗೆತ್ತಿಕೊಂಡಿದೆ. ಸಂಜೀವ್ ಭಟ್ ಮತ್ತು ತೀಸ್ತಾ ಸೆಟೆಲ್ ವಾಡ್ ಕೇಸುಗಳು ಇದರಲ್ಲಿ ಮುಖ್ಯವಾಗಿವೆ. 2002ರ ಗುಜರಾತ್ ಗಲಭೆಯಲ್ಲಿ ಅಂದಿನ ಗುಜರಾತ್ ಸಿಎಂ ಆಗಿದ್ದ ನರೇಂದ್ರ ಮೋದಿ ಪಾತ್ರವಿತ್ತು ಎಂದು ಸಂಜೀವ್ ಭಟ್ ಆರೋಪಿಸಿದ್ದರು. 2002ರ ಗುಜರಾತ್ ಗಲಭೆಯ ಸಂತ್ರಸ್ಥರ ಪರವಾಗಿ ತೀಸ್ತಾ ಅವರ ಸಂಸ್ಥೇ ಕಾನೂನಾತ್ಕ ಹೋರಾಟ ನಡೆಸುತ್ತ ಬಂದಿದೆ. ತೀಸ್ತಾರ ಮೇಲಿನ ಹಣ ದುರುಪಯೋಗ ಪ್ರಕರಣದ ಕೇಸನ್ನು ಇಂದಿರಾ ಜೈಸಿಂಗ್ ಅವರೇ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಇಂದಿರಾ ಜೈಸಿಂಗ್ ಯಾರು? ಅವರ ಮೇಲೆ ಮೋದಿ ಶಾಗೇಕೆ ಕೋಪ?

ಗ್ರೀನ್‍ಪೀಸ್ ಕಾರ್ಯಕರ್ತೆ ಪ್ರಿಯಾ ಪಿಳ್ಳೈ ಅವರಿಗೆ ಭಾರತದ ಆಚೆ ಪ್ರವಾಸಿಸದಂತೆ ನಿರ್ಬಂಧ ಹೇರಿದ್ದರ ವಿರುದ್ದವೂ ಇಂದಿರಾ ವಕೀಲಿಕೆ ಮಾಡಿದ್ದರು. ಸುಪ್ರಿಂಕೋರ್ಟಿನಲ್ಲಿ ಹಿರಿಯ ನ್ಯಾಯಾಧೀಶರನ್ನು ನೇಮಿಸುವ ಪ್ರಕ್ರಿಯೆಯನ್ನು ಇಂದಿರಾ ಟಿಕಿಸುತ್ತ ಬಂದಿದ್ದು, 2016ರಲ್ಲಿ ಅವರು ಕೋರ್ಟಿನಲ್ಲಿ ಅದನ್ನು ಪ್ರಶ್ನಿಸಿದ್ದರು. ನ್ಯಾಯಾಧೀಶ ಲೋಯಾ ಸಾವಿನ ಪ್ರಕರಣದ ವಿಚಾರಣಗೆ ನ್ಯಾಯಾಧೀಶರನ್ನು ನೇಮಿಸುವಲ್ಲಿ ಆದ ಲೋಪವನ್ನೂ ಇಂದಿರಾ ವಿರೋಧಿಸಿದ್ದರು.

ಉತ್ತರಪ್ರದೇಶದಲ್ಲಿ ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರನ್ನು ಕಾನೂನುಬಾಹಿರವಾಗಿ ಬಂಧಿಸಿದ್ದ ಪ್ರಕರಣದ ನಂತರ ಇಲ್ಲಿವರೆಗೆ ಐವರು ಪತ್ರಕರ್ತರು ಮತ್ತ ಮಾನವ ಹಕ್ಕು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಈ ಪ್ರಕರಣಗಳು ಸಣ್ಣ ಪಟ್ಟಣಗಳಿಗೆ ಸಂಬಂಧಿಸಿದ್ದವಾದ್ದರಿಂದ ಕನೋಜಿಯಾ ಪ್ರಕರಣದಂತೆ ಸುದ್ದಿಯಾಗಲಿಲ್ಲ.

1. 9, ಜೂನ್ 2019ರಂದು ಜಾರ್ಖಂಡಿನಲ್ಲಿ ಪತ್ರಕರ್ತ ಮತ್ತ ಸಾಮಾಜಿಕ ಕಾರ್ಯಕರ್ತ ರೂಪೇಶಕುಮಾರ್ ಮತ್ತು ವಕೀಲ ಮಿಥಿಲೇಶ್ ಕುಮಾರ್ ಸಿಂಗ್ ಬಂಧನ.

2. 8, ಜುಲೈ 2019, ಕೃಪಾಶಂಕರ್ ಮತ್ತು ಅವರ ಪತ್ನಿ ಪ್ರತಿಭಾ ಅವರನ್ನು ಹೊಟೆಲ್ ಒಂದರಿಂದ ಕರೆದೊಯ್ದು ಬಂಧಿಸಲಾಯಿತು. ಕೃಪಾಶಂಕರ್ ಯುಪಿಯ ದಿನಪತ್ರಿಕೆ ‘ವಿರುದ್ಧ್’ನ ಸಂಪಾದಕರು ಮತ್ತು ಹಿಂದೂತ್ವ ಫ್ಯಾಸಿಸಂ ವಿರೋಧಿ ವೇದಿಕೆಯ ಸದಸ್ಯರು.

3. 9, ಜುಲೈ 2019, ಸಾಮಾಜಿಕ ಕಾರ್ಯಕರ್ತರು ಮತ್ತು ಶಿಕ್ಷಕರಾದ ಮನಿಶ್ ಮತ್ತು ಅವರ ಪತ್ನಿ ಅಮಿತಾ ಶ್ರೀವಾಸ್ತವ್ ಬಂಧನ.

ಈ ಎಲ್ಲ ಪ್ರಕರಣಗಳಲ್ಲಿ ಒಂದು ನಿರ್ದಿಷ್ಟ ಪ್ಯಾಟರ್ನ್ ಇದ್ದು, ಮೊದಲಿಗೆ ಅಪಹರಿಸಿ ನಂತರ ಬಂಧಿಸುವುದು. ನಕ್ಸಲ್‍ರೊಂದಿಗೆ ಸಂಪರ್ಕ ಎಂಬ ಆರೋಪದ ಮೇಲೆ ಆ ಮೂರು ಬಂಧನಗಳನ್ನು ಮಾಡಲಾಗಿದೆ. ಕಳೆದ 6 ತಿಂಗಳಿಂದ ಇಂಥವನ್ನೆಲ್ಲ ನಾವು ನೋಡುತ್ತಿದ್ದೇವೆ.

ನಕ್ಸಲ್ ಸಂಪರ್ಕ ಎಂಬ ನಿರಾಧಾರ ಆರೋಪದ ಮೇಲೆ ಮೋದಿ ಸರ್ಕಾರ ಮಾನವ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸುತ್ತ ನಡೆದಿದೆ. ಈ ಕಾರ್ಯಕರ್ತರ ಅಪರಾಧವಾದರೂ ಏನು? ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಅವರು ಮಾತನಾಡುತ್ತಿರುವುದು ಮತ್ತು ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು.

ತನ್ನ ನೀತಿಗಳ ಟೀಕೆ ಮಾಡುವ ಸಣ್ಣ ಪಟ್ಟಣಗಳ ಮಾನವ ಹಕ್ಕು ಕಾರ್ಯಕರ್ತರು, ಪತ್ರಕರ್ತರು ಮತ್ತು ಖ್ಯಾತ ವಕೀಲರನ್ನು ಬಂಧಿಸುವ ಮೂಲಕ ಮೋದಿ ಸರ್ಕಾರವು ತನ್ನ ಟೀಕಾಕಾರರು ಮತ್ತು ವಿರೋಧಿಗಳನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ರವಾನಿಸುತ್ತಿದೆ. ಅದು ಎಲ್ಲಾ ವಿರೋಧ ಮತ್ತು ಭಿನ್ನಮತವನ್ನು ಮಟ್ಟ ಹಾಕಲು ಹೊರಟಿದೆ. ನಮ್ಮ ಮುಂದಿನ ಪ್ರಶ್ನೆ: ಎಷ್ಟು ದಿನಾ ಅಂತ ನಾವು ಮೌನವಾಗಿರುವುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...