Homeಚಳವಳಿಸಿಬಿಐ ದಾಳಿಗಳು ಮತ್ತು ವಕೀಲರು, ಪತ್ರಕರ್ತರ ಕಾನೂನುಬಾಹಿರ ಬಂಧನಗಳು: ಕರಾಳ ದಿನಗಳ ಮುನ್ಸೂಚನೆ

ಸಿಬಿಐ ದಾಳಿಗಳು ಮತ್ತು ವಕೀಲರು, ಪತ್ರಕರ್ತರ ಕಾನೂನುಬಾಹಿರ ಬಂಧನಗಳು: ಕರಾಳ ದಿನಗಳ ಮುನ್ಸೂಚನೆ

ಮೋದಿ ಅಮಿತ್ ಶಾ ರವರ ಸಿಬಿಐ ದಾಳಿಗಳು ಮತ್ತು ನಕ್ಸಲ್ ಲಿಂಕ್ ಆರೋಪಗಳು, ಮಾನವ ಹಕ್ಕು ಕಾರ್ಯಕರ್ತರನ್ನು ತೆಪ್ಪಗಾಗಿಸುವ ಸಾಧನಗಳಾಗಿವೆ ಅಷ್ಟೇ..

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ-2 ಸರ್ಕಾರವು ಯಾವುದೇ ನೈಜ ಮತ್ತು ಗ್ರಹಿತ ವಿರೋಧಗಳನ್ನು ಮೆಟ್ಟಿ ಹಾಕಲು ಒಂದಿನಿತೂ ಸಮಯವನ್ನು ವ್ಯರ್ಥ ಮಾಡುತ್ತಿಲ್ಲ. ಗುಜರಾತ್ ಗಲಭೆಗಳಲ್ಲಿ ಮೋದಿ ಪಾತ್ರವಿದೆಯೆಂದು ಆರೋಪಿಸಿದ್ದ ಸಂಜೀವ್ ಭಟ್ಟ ಅವರಿಗೆ ಜೀವಾವಧಿ ಶಿಕ್ಷೆ ಆಗುವಂತೆ ಮಾಡುವ ಮೂಲಕ ಇದು ಆರಂಭವಾಯಿತು. ನಂತರದಲ್ಲಿ ಉತ್ತರ ಪ್ರದೇಶದ ಯೋಗಿ ಸರ್ಕಾರದ ಟೀಕಾಕಾರರಾಗಿದ್ದ ಪರ್ತಕರ್ತರ ಮೇಲೆ ದಾಳಿ ಮತ್ತು ಬಂಧನಗಳಾದವು.

ಈ ವಾರವಷ್ಟೇ ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಇಂದಿರಾ ಜೈಸಿಂಗ್ ಅವರ ಮನೆ ಮತ್ತು ಲಾಯರ್ಸ್ ಕಲೆಕ್ಟಿವ್ ಕಚೇರಿ ಮೇಲೆ ಸಿಬಿಐ ದಾಳಿ ನಡೆದಿದ್ದು ಇದೆಲ್ಲದರ ಮುಂದುವರಿಕೆ. ಇಂದಿರಾರವರು 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಅವರ ಮತ್ತು ಅವರ ನೀತಿಗಳ ಪ್ರಖರ ಟೀಕಾಕಾರರಾಗಿದ್ದಾರೆ.

ಆನಂದ್ ಗ್ರೋವರ್ ಮತ್ತು ಇಂದಿರಾ ಜೈಸಿಂಗ್

ಇಂದಿರಾ ಮತ್ತು ಅವರ ಸಂಸ್ಥೇ ಲಾಯರ್ಸ್ ಕಲೆಕ್ಟಿವ್ ಬಿಜೆಪಿ ವಿರುದ್ಧ ಹಲವಾರು ಕಾನೂನು ಪ್ರಕರಣಗಳನ್ನು ಕೈಗೆತ್ತಿಕೊಂಡಿದೆ. ಸಂಜೀವ್ ಭಟ್ ಮತ್ತು ತೀಸ್ತಾ ಸೆಟೆಲ್ ವಾಡ್ ಕೇಸುಗಳು ಇದರಲ್ಲಿ ಮುಖ್ಯವಾಗಿವೆ. 2002ರ ಗುಜರಾತ್ ಗಲಭೆಯಲ್ಲಿ ಅಂದಿನ ಗುಜರಾತ್ ಸಿಎಂ ಆಗಿದ್ದ ನರೇಂದ್ರ ಮೋದಿ ಪಾತ್ರವಿತ್ತು ಎಂದು ಸಂಜೀವ್ ಭಟ್ ಆರೋಪಿಸಿದ್ದರು. 2002ರ ಗುಜರಾತ್ ಗಲಭೆಯ ಸಂತ್ರಸ್ಥರ ಪರವಾಗಿ ತೀಸ್ತಾ ಅವರ ಸಂಸ್ಥೇ ಕಾನೂನಾತ್ಕ ಹೋರಾಟ ನಡೆಸುತ್ತ ಬಂದಿದೆ. ತೀಸ್ತಾರ ಮೇಲಿನ ಹಣ ದುರುಪಯೋಗ ಪ್ರಕರಣದ ಕೇಸನ್ನು ಇಂದಿರಾ ಜೈಸಿಂಗ್ ಅವರೇ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಇಂದಿರಾ ಜೈಸಿಂಗ್ ಯಾರು? ಅವರ ಮೇಲೆ ಮೋದಿ ಶಾಗೇಕೆ ಕೋಪ?

ಗ್ರೀನ್‍ಪೀಸ್ ಕಾರ್ಯಕರ್ತೆ ಪ್ರಿಯಾ ಪಿಳ್ಳೈ ಅವರಿಗೆ ಭಾರತದ ಆಚೆ ಪ್ರವಾಸಿಸದಂತೆ ನಿರ್ಬಂಧ ಹೇರಿದ್ದರ ವಿರುದ್ದವೂ ಇಂದಿರಾ ವಕೀಲಿಕೆ ಮಾಡಿದ್ದರು. ಸುಪ್ರಿಂಕೋರ್ಟಿನಲ್ಲಿ ಹಿರಿಯ ನ್ಯಾಯಾಧೀಶರನ್ನು ನೇಮಿಸುವ ಪ್ರಕ್ರಿಯೆಯನ್ನು ಇಂದಿರಾ ಟಿಕಿಸುತ್ತ ಬಂದಿದ್ದು, 2016ರಲ್ಲಿ ಅವರು ಕೋರ್ಟಿನಲ್ಲಿ ಅದನ್ನು ಪ್ರಶ್ನಿಸಿದ್ದರು. ನ್ಯಾಯಾಧೀಶ ಲೋಯಾ ಸಾವಿನ ಪ್ರಕರಣದ ವಿಚಾರಣಗೆ ನ್ಯಾಯಾಧೀಶರನ್ನು ನೇಮಿಸುವಲ್ಲಿ ಆದ ಲೋಪವನ್ನೂ ಇಂದಿರಾ ವಿರೋಧಿಸಿದ್ದರು.

ಉತ್ತರಪ್ರದೇಶದಲ್ಲಿ ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರನ್ನು ಕಾನೂನುಬಾಹಿರವಾಗಿ ಬಂಧಿಸಿದ್ದ ಪ್ರಕರಣದ ನಂತರ ಇಲ್ಲಿವರೆಗೆ ಐವರು ಪತ್ರಕರ್ತರು ಮತ್ತ ಮಾನವ ಹಕ್ಕು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಈ ಪ್ರಕರಣಗಳು ಸಣ್ಣ ಪಟ್ಟಣಗಳಿಗೆ ಸಂಬಂಧಿಸಿದ್ದವಾದ್ದರಿಂದ ಕನೋಜಿಯಾ ಪ್ರಕರಣದಂತೆ ಸುದ್ದಿಯಾಗಲಿಲ್ಲ.

1. 9, ಜೂನ್ 2019ರಂದು ಜಾರ್ಖಂಡಿನಲ್ಲಿ ಪತ್ರಕರ್ತ ಮತ್ತ ಸಾಮಾಜಿಕ ಕಾರ್ಯಕರ್ತ ರೂಪೇಶಕುಮಾರ್ ಮತ್ತು ವಕೀಲ ಮಿಥಿಲೇಶ್ ಕುಮಾರ್ ಸಿಂಗ್ ಬಂಧನ.

2. 8, ಜುಲೈ 2019, ಕೃಪಾಶಂಕರ್ ಮತ್ತು ಅವರ ಪತ್ನಿ ಪ್ರತಿಭಾ ಅವರನ್ನು ಹೊಟೆಲ್ ಒಂದರಿಂದ ಕರೆದೊಯ್ದು ಬಂಧಿಸಲಾಯಿತು. ಕೃಪಾಶಂಕರ್ ಯುಪಿಯ ದಿನಪತ್ರಿಕೆ ‘ವಿರುದ್ಧ್’ನ ಸಂಪಾದಕರು ಮತ್ತು ಹಿಂದೂತ್ವ ಫ್ಯಾಸಿಸಂ ವಿರೋಧಿ ವೇದಿಕೆಯ ಸದಸ್ಯರು.

3. 9, ಜುಲೈ 2019, ಸಾಮಾಜಿಕ ಕಾರ್ಯಕರ್ತರು ಮತ್ತು ಶಿಕ್ಷಕರಾದ ಮನಿಶ್ ಮತ್ತು ಅವರ ಪತ್ನಿ ಅಮಿತಾ ಶ್ರೀವಾಸ್ತವ್ ಬಂಧನ.

ಈ ಎಲ್ಲ ಪ್ರಕರಣಗಳಲ್ಲಿ ಒಂದು ನಿರ್ದಿಷ್ಟ ಪ್ಯಾಟರ್ನ್ ಇದ್ದು, ಮೊದಲಿಗೆ ಅಪಹರಿಸಿ ನಂತರ ಬಂಧಿಸುವುದು. ನಕ್ಸಲ್‍ರೊಂದಿಗೆ ಸಂಪರ್ಕ ಎಂಬ ಆರೋಪದ ಮೇಲೆ ಆ ಮೂರು ಬಂಧನಗಳನ್ನು ಮಾಡಲಾಗಿದೆ. ಕಳೆದ 6 ತಿಂಗಳಿಂದ ಇಂಥವನ್ನೆಲ್ಲ ನಾವು ನೋಡುತ್ತಿದ್ದೇವೆ.

ನಕ್ಸಲ್ ಸಂಪರ್ಕ ಎಂಬ ನಿರಾಧಾರ ಆರೋಪದ ಮೇಲೆ ಮೋದಿ ಸರ್ಕಾರ ಮಾನವ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸುತ್ತ ನಡೆದಿದೆ. ಈ ಕಾರ್ಯಕರ್ತರ ಅಪರಾಧವಾದರೂ ಏನು? ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಅವರು ಮಾತನಾಡುತ್ತಿರುವುದು ಮತ್ತು ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು.

ತನ್ನ ನೀತಿಗಳ ಟೀಕೆ ಮಾಡುವ ಸಣ್ಣ ಪಟ್ಟಣಗಳ ಮಾನವ ಹಕ್ಕು ಕಾರ್ಯಕರ್ತರು, ಪತ್ರಕರ್ತರು ಮತ್ತು ಖ್ಯಾತ ವಕೀಲರನ್ನು ಬಂಧಿಸುವ ಮೂಲಕ ಮೋದಿ ಸರ್ಕಾರವು ತನ್ನ ಟೀಕಾಕಾರರು ಮತ್ತು ವಿರೋಧಿಗಳನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ರವಾನಿಸುತ್ತಿದೆ. ಅದು ಎಲ್ಲಾ ವಿರೋಧ ಮತ್ತು ಭಿನ್ನಮತವನ್ನು ಮಟ್ಟ ಹಾಕಲು ಹೊರಟಿದೆ. ನಮ್ಮ ಮುಂದಿನ ಪ್ರಶ್ನೆ: ಎಷ್ಟು ದಿನಾ ಅಂತ ನಾವು ಮೌನವಾಗಿರುವುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...