Homeಚಳವಳಿಸಿಬಿಐ ದಾಳಿಗಳು ಮತ್ತು ವಕೀಲರು, ಪತ್ರಕರ್ತರ ಕಾನೂನುಬಾಹಿರ ಬಂಧನಗಳು: ಕರಾಳ ದಿನಗಳ ಮುನ್ಸೂಚನೆ

ಸಿಬಿಐ ದಾಳಿಗಳು ಮತ್ತು ವಕೀಲರು, ಪತ್ರಕರ್ತರ ಕಾನೂನುಬಾಹಿರ ಬಂಧನಗಳು: ಕರಾಳ ದಿನಗಳ ಮುನ್ಸೂಚನೆ

ಮೋದಿ ಅಮಿತ್ ಶಾ ರವರ ಸಿಬಿಐ ದಾಳಿಗಳು ಮತ್ತು ನಕ್ಸಲ್ ಲಿಂಕ್ ಆರೋಪಗಳು, ಮಾನವ ಹಕ್ಕು ಕಾರ್ಯಕರ್ತರನ್ನು ತೆಪ್ಪಗಾಗಿಸುವ ಸಾಧನಗಳಾಗಿವೆ ಅಷ್ಟೇ..

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ-2 ಸರ್ಕಾರವು ಯಾವುದೇ ನೈಜ ಮತ್ತು ಗ್ರಹಿತ ವಿರೋಧಗಳನ್ನು ಮೆಟ್ಟಿ ಹಾಕಲು ಒಂದಿನಿತೂ ಸಮಯವನ್ನು ವ್ಯರ್ಥ ಮಾಡುತ್ತಿಲ್ಲ. ಗುಜರಾತ್ ಗಲಭೆಗಳಲ್ಲಿ ಮೋದಿ ಪಾತ್ರವಿದೆಯೆಂದು ಆರೋಪಿಸಿದ್ದ ಸಂಜೀವ್ ಭಟ್ಟ ಅವರಿಗೆ ಜೀವಾವಧಿ ಶಿಕ್ಷೆ ಆಗುವಂತೆ ಮಾಡುವ ಮೂಲಕ ಇದು ಆರಂಭವಾಯಿತು. ನಂತರದಲ್ಲಿ ಉತ್ತರ ಪ್ರದೇಶದ ಯೋಗಿ ಸರ್ಕಾರದ ಟೀಕಾಕಾರರಾಗಿದ್ದ ಪರ್ತಕರ್ತರ ಮೇಲೆ ದಾಳಿ ಮತ್ತು ಬಂಧನಗಳಾದವು.

ಈ ವಾರವಷ್ಟೇ ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಇಂದಿರಾ ಜೈಸಿಂಗ್ ಅವರ ಮನೆ ಮತ್ತು ಲಾಯರ್ಸ್ ಕಲೆಕ್ಟಿವ್ ಕಚೇರಿ ಮೇಲೆ ಸಿಬಿಐ ದಾಳಿ ನಡೆದಿದ್ದು ಇದೆಲ್ಲದರ ಮುಂದುವರಿಕೆ. ಇಂದಿರಾರವರು 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಅವರ ಮತ್ತು ಅವರ ನೀತಿಗಳ ಪ್ರಖರ ಟೀಕಾಕಾರರಾಗಿದ್ದಾರೆ.

ಆನಂದ್ ಗ್ರೋವರ್ ಮತ್ತು ಇಂದಿರಾ ಜೈಸಿಂಗ್

ಇಂದಿರಾ ಮತ್ತು ಅವರ ಸಂಸ್ಥೇ ಲಾಯರ್ಸ್ ಕಲೆಕ್ಟಿವ್ ಬಿಜೆಪಿ ವಿರುದ್ಧ ಹಲವಾರು ಕಾನೂನು ಪ್ರಕರಣಗಳನ್ನು ಕೈಗೆತ್ತಿಕೊಂಡಿದೆ. ಸಂಜೀವ್ ಭಟ್ ಮತ್ತು ತೀಸ್ತಾ ಸೆಟೆಲ್ ವಾಡ್ ಕೇಸುಗಳು ಇದರಲ್ಲಿ ಮುಖ್ಯವಾಗಿವೆ. 2002ರ ಗುಜರಾತ್ ಗಲಭೆಯಲ್ಲಿ ಅಂದಿನ ಗುಜರಾತ್ ಸಿಎಂ ಆಗಿದ್ದ ನರೇಂದ್ರ ಮೋದಿ ಪಾತ್ರವಿತ್ತು ಎಂದು ಸಂಜೀವ್ ಭಟ್ ಆರೋಪಿಸಿದ್ದರು. 2002ರ ಗುಜರಾತ್ ಗಲಭೆಯ ಸಂತ್ರಸ್ಥರ ಪರವಾಗಿ ತೀಸ್ತಾ ಅವರ ಸಂಸ್ಥೇ ಕಾನೂನಾತ್ಕ ಹೋರಾಟ ನಡೆಸುತ್ತ ಬಂದಿದೆ. ತೀಸ್ತಾರ ಮೇಲಿನ ಹಣ ದುರುಪಯೋಗ ಪ್ರಕರಣದ ಕೇಸನ್ನು ಇಂದಿರಾ ಜೈಸಿಂಗ್ ಅವರೇ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಇಂದಿರಾ ಜೈಸಿಂಗ್ ಯಾರು? ಅವರ ಮೇಲೆ ಮೋದಿ ಶಾಗೇಕೆ ಕೋಪ?

ಗ್ರೀನ್‍ಪೀಸ್ ಕಾರ್ಯಕರ್ತೆ ಪ್ರಿಯಾ ಪಿಳ್ಳೈ ಅವರಿಗೆ ಭಾರತದ ಆಚೆ ಪ್ರವಾಸಿಸದಂತೆ ನಿರ್ಬಂಧ ಹೇರಿದ್ದರ ವಿರುದ್ದವೂ ಇಂದಿರಾ ವಕೀಲಿಕೆ ಮಾಡಿದ್ದರು. ಸುಪ್ರಿಂಕೋರ್ಟಿನಲ್ಲಿ ಹಿರಿಯ ನ್ಯಾಯಾಧೀಶರನ್ನು ನೇಮಿಸುವ ಪ್ರಕ್ರಿಯೆಯನ್ನು ಇಂದಿರಾ ಟಿಕಿಸುತ್ತ ಬಂದಿದ್ದು, 2016ರಲ್ಲಿ ಅವರು ಕೋರ್ಟಿನಲ್ಲಿ ಅದನ್ನು ಪ್ರಶ್ನಿಸಿದ್ದರು. ನ್ಯಾಯಾಧೀಶ ಲೋಯಾ ಸಾವಿನ ಪ್ರಕರಣದ ವಿಚಾರಣಗೆ ನ್ಯಾಯಾಧೀಶರನ್ನು ನೇಮಿಸುವಲ್ಲಿ ಆದ ಲೋಪವನ್ನೂ ಇಂದಿರಾ ವಿರೋಧಿಸಿದ್ದರು.

ಉತ್ತರಪ್ರದೇಶದಲ್ಲಿ ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರನ್ನು ಕಾನೂನುಬಾಹಿರವಾಗಿ ಬಂಧಿಸಿದ್ದ ಪ್ರಕರಣದ ನಂತರ ಇಲ್ಲಿವರೆಗೆ ಐವರು ಪತ್ರಕರ್ತರು ಮತ್ತ ಮಾನವ ಹಕ್ಕು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಈ ಪ್ರಕರಣಗಳು ಸಣ್ಣ ಪಟ್ಟಣಗಳಿಗೆ ಸಂಬಂಧಿಸಿದ್ದವಾದ್ದರಿಂದ ಕನೋಜಿಯಾ ಪ್ರಕರಣದಂತೆ ಸುದ್ದಿಯಾಗಲಿಲ್ಲ.

1. 9, ಜೂನ್ 2019ರಂದು ಜಾರ್ಖಂಡಿನಲ್ಲಿ ಪತ್ರಕರ್ತ ಮತ್ತ ಸಾಮಾಜಿಕ ಕಾರ್ಯಕರ್ತ ರೂಪೇಶಕುಮಾರ್ ಮತ್ತು ವಕೀಲ ಮಿಥಿಲೇಶ್ ಕುಮಾರ್ ಸಿಂಗ್ ಬಂಧನ.

2. 8, ಜುಲೈ 2019, ಕೃಪಾಶಂಕರ್ ಮತ್ತು ಅವರ ಪತ್ನಿ ಪ್ರತಿಭಾ ಅವರನ್ನು ಹೊಟೆಲ್ ಒಂದರಿಂದ ಕರೆದೊಯ್ದು ಬಂಧಿಸಲಾಯಿತು. ಕೃಪಾಶಂಕರ್ ಯುಪಿಯ ದಿನಪತ್ರಿಕೆ ‘ವಿರುದ್ಧ್’ನ ಸಂಪಾದಕರು ಮತ್ತು ಹಿಂದೂತ್ವ ಫ್ಯಾಸಿಸಂ ವಿರೋಧಿ ವೇದಿಕೆಯ ಸದಸ್ಯರು.

3. 9, ಜುಲೈ 2019, ಸಾಮಾಜಿಕ ಕಾರ್ಯಕರ್ತರು ಮತ್ತು ಶಿಕ್ಷಕರಾದ ಮನಿಶ್ ಮತ್ತು ಅವರ ಪತ್ನಿ ಅಮಿತಾ ಶ್ರೀವಾಸ್ತವ್ ಬಂಧನ.

ಈ ಎಲ್ಲ ಪ್ರಕರಣಗಳಲ್ಲಿ ಒಂದು ನಿರ್ದಿಷ್ಟ ಪ್ಯಾಟರ್ನ್ ಇದ್ದು, ಮೊದಲಿಗೆ ಅಪಹರಿಸಿ ನಂತರ ಬಂಧಿಸುವುದು. ನಕ್ಸಲ್‍ರೊಂದಿಗೆ ಸಂಪರ್ಕ ಎಂಬ ಆರೋಪದ ಮೇಲೆ ಆ ಮೂರು ಬಂಧನಗಳನ್ನು ಮಾಡಲಾಗಿದೆ. ಕಳೆದ 6 ತಿಂಗಳಿಂದ ಇಂಥವನ್ನೆಲ್ಲ ನಾವು ನೋಡುತ್ತಿದ್ದೇವೆ.

ನಕ್ಸಲ್ ಸಂಪರ್ಕ ಎಂಬ ನಿರಾಧಾರ ಆರೋಪದ ಮೇಲೆ ಮೋದಿ ಸರ್ಕಾರ ಮಾನವ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸುತ್ತ ನಡೆದಿದೆ. ಈ ಕಾರ್ಯಕರ್ತರ ಅಪರಾಧವಾದರೂ ಏನು? ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಅವರು ಮಾತನಾಡುತ್ತಿರುವುದು ಮತ್ತು ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು.

ತನ್ನ ನೀತಿಗಳ ಟೀಕೆ ಮಾಡುವ ಸಣ್ಣ ಪಟ್ಟಣಗಳ ಮಾನವ ಹಕ್ಕು ಕಾರ್ಯಕರ್ತರು, ಪತ್ರಕರ್ತರು ಮತ್ತು ಖ್ಯಾತ ವಕೀಲರನ್ನು ಬಂಧಿಸುವ ಮೂಲಕ ಮೋದಿ ಸರ್ಕಾರವು ತನ್ನ ಟೀಕಾಕಾರರು ಮತ್ತು ವಿರೋಧಿಗಳನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ರವಾನಿಸುತ್ತಿದೆ. ಅದು ಎಲ್ಲಾ ವಿರೋಧ ಮತ್ತು ಭಿನ್ನಮತವನ್ನು ಮಟ್ಟ ಹಾಕಲು ಹೊರಟಿದೆ. ನಮ್ಮ ಮುಂದಿನ ಪ್ರಶ್ನೆ: ಎಷ್ಟು ದಿನಾ ಅಂತ ನಾವು ಮೌನವಾಗಿರುವುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....