Homeಚಳವಳಿಸಿಬಿಐ ದಾಳಿಗಳು ಮತ್ತು ವಕೀಲರು, ಪತ್ರಕರ್ತರ ಕಾನೂನುಬಾಹಿರ ಬಂಧನಗಳು: ಕರಾಳ ದಿನಗಳ ಮುನ್ಸೂಚನೆ

ಸಿಬಿಐ ದಾಳಿಗಳು ಮತ್ತು ವಕೀಲರು, ಪತ್ರಕರ್ತರ ಕಾನೂನುಬಾಹಿರ ಬಂಧನಗಳು: ಕರಾಳ ದಿನಗಳ ಮುನ್ಸೂಚನೆ

ಮೋದಿ ಅಮಿತ್ ಶಾ ರವರ ಸಿಬಿಐ ದಾಳಿಗಳು ಮತ್ತು ನಕ್ಸಲ್ ಲಿಂಕ್ ಆರೋಪಗಳು, ಮಾನವ ಹಕ್ಕು ಕಾರ್ಯಕರ್ತರನ್ನು ತೆಪ್ಪಗಾಗಿಸುವ ಸಾಧನಗಳಾಗಿವೆ ಅಷ್ಟೇ..

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ-2 ಸರ್ಕಾರವು ಯಾವುದೇ ನೈಜ ಮತ್ತು ಗ್ರಹಿತ ವಿರೋಧಗಳನ್ನು ಮೆಟ್ಟಿ ಹಾಕಲು ಒಂದಿನಿತೂ ಸಮಯವನ್ನು ವ್ಯರ್ಥ ಮಾಡುತ್ತಿಲ್ಲ. ಗುಜರಾತ್ ಗಲಭೆಗಳಲ್ಲಿ ಮೋದಿ ಪಾತ್ರವಿದೆಯೆಂದು ಆರೋಪಿಸಿದ್ದ ಸಂಜೀವ್ ಭಟ್ಟ ಅವರಿಗೆ ಜೀವಾವಧಿ ಶಿಕ್ಷೆ ಆಗುವಂತೆ ಮಾಡುವ ಮೂಲಕ ಇದು ಆರಂಭವಾಯಿತು. ನಂತರದಲ್ಲಿ ಉತ್ತರ ಪ್ರದೇಶದ ಯೋಗಿ ಸರ್ಕಾರದ ಟೀಕಾಕಾರರಾಗಿದ್ದ ಪರ್ತಕರ್ತರ ಮೇಲೆ ದಾಳಿ ಮತ್ತು ಬಂಧನಗಳಾದವು.

ಈ ವಾರವಷ್ಟೇ ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಇಂದಿರಾ ಜೈಸಿಂಗ್ ಅವರ ಮನೆ ಮತ್ತು ಲಾಯರ್ಸ್ ಕಲೆಕ್ಟಿವ್ ಕಚೇರಿ ಮೇಲೆ ಸಿಬಿಐ ದಾಳಿ ನಡೆದಿದ್ದು ಇದೆಲ್ಲದರ ಮುಂದುವರಿಕೆ. ಇಂದಿರಾರವರು 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಅವರ ಮತ್ತು ಅವರ ನೀತಿಗಳ ಪ್ರಖರ ಟೀಕಾಕಾರರಾಗಿದ್ದಾರೆ.

ಆನಂದ್ ಗ್ರೋವರ್ ಮತ್ತು ಇಂದಿರಾ ಜೈಸಿಂಗ್

ಇಂದಿರಾ ಮತ್ತು ಅವರ ಸಂಸ್ಥೇ ಲಾಯರ್ಸ್ ಕಲೆಕ್ಟಿವ್ ಬಿಜೆಪಿ ವಿರುದ್ಧ ಹಲವಾರು ಕಾನೂನು ಪ್ರಕರಣಗಳನ್ನು ಕೈಗೆತ್ತಿಕೊಂಡಿದೆ. ಸಂಜೀವ್ ಭಟ್ ಮತ್ತು ತೀಸ್ತಾ ಸೆಟೆಲ್ ವಾಡ್ ಕೇಸುಗಳು ಇದರಲ್ಲಿ ಮುಖ್ಯವಾಗಿವೆ. 2002ರ ಗುಜರಾತ್ ಗಲಭೆಯಲ್ಲಿ ಅಂದಿನ ಗುಜರಾತ್ ಸಿಎಂ ಆಗಿದ್ದ ನರೇಂದ್ರ ಮೋದಿ ಪಾತ್ರವಿತ್ತು ಎಂದು ಸಂಜೀವ್ ಭಟ್ ಆರೋಪಿಸಿದ್ದರು. 2002ರ ಗುಜರಾತ್ ಗಲಭೆಯ ಸಂತ್ರಸ್ಥರ ಪರವಾಗಿ ತೀಸ್ತಾ ಅವರ ಸಂಸ್ಥೇ ಕಾನೂನಾತ್ಕ ಹೋರಾಟ ನಡೆಸುತ್ತ ಬಂದಿದೆ. ತೀಸ್ತಾರ ಮೇಲಿನ ಹಣ ದುರುಪಯೋಗ ಪ್ರಕರಣದ ಕೇಸನ್ನು ಇಂದಿರಾ ಜೈಸಿಂಗ್ ಅವರೇ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಇಂದಿರಾ ಜೈಸಿಂಗ್ ಯಾರು? ಅವರ ಮೇಲೆ ಮೋದಿ ಶಾಗೇಕೆ ಕೋಪ?

ಗ್ರೀನ್‍ಪೀಸ್ ಕಾರ್ಯಕರ್ತೆ ಪ್ರಿಯಾ ಪಿಳ್ಳೈ ಅವರಿಗೆ ಭಾರತದ ಆಚೆ ಪ್ರವಾಸಿಸದಂತೆ ನಿರ್ಬಂಧ ಹೇರಿದ್ದರ ವಿರುದ್ದವೂ ಇಂದಿರಾ ವಕೀಲಿಕೆ ಮಾಡಿದ್ದರು. ಸುಪ್ರಿಂಕೋರ್ಟಿನಲ್ಲಿ ಹಿರಿಯ ನ್ಯಾಯಾಧೀಶರನ್ನು ನೇಮಿಸುವ ಪ್ರಕ್ರಿಯೆಯನ್ನು ಇಂದಿರಾ ಟಿಕಿಸುತ್ತ ಬಂದಿದ್ದು, 2016ರಲ್ಲಿ ಅವರು ಕೋರ್ಟಿನಲ್ಲಿ ಅದನ್ನು ಪ್ರಶ್ನಿಸಿದ್ದರು. ನ್ಯಾಯಾಧೀಶ ಲೋಯಾ ಸಾವಿನ ಪ್ರಕರಣದ ವಿಚಾರಣಗೆ ನ್ಯಾಯಾಧೀಶರನ್ನು ನೇಮಿಸುವಲ್ಲಿ ಆದ ಲೋಪವನ್ನೂ ಇಂದಿರಾ ವಿರೋಧಿಸಿದ್ದರು.

ಉತ್ತರಪ್ರದೇಶದಲ್ಲಿ ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರನ್ನು ಕಾನೂನುಬಾಹಿರವಾಗಿ ಬಂಧಿಸಿದ್ದ ಪ್ರಕರಣದ ನಂತರ ಇಲ್ಲಿವರೆಗೆ ಐವರು ಪತ್ರಕರ್ತರು ಮತ್ತ ಮಾನವ ಹಕ್ಕು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಈ ಪ್ರಕರಣಗಳು ಸಣ್ಣ ಪಟ್ಟಣಗಳಿಗೆ ಸಂಬಂಧಿಸಿದ್ದವಾದ್ದರಿಂದ ಕನೋಜಿಯಾ ಪ್ರಕರಣದಂತೆ ಸುದ್ದಿಯಾಗಲಿಲ್ಲ.

1. 9, ಜೂನ್ 2019ರಂದು ಜಾರ್ಖಂಡಿನಲ್ಲಿ ಪತ್ರಕರ್ತ ಮತ್ತ ಸಾಮಾಜಿಕ ಕಾರ್ಯಕರ್ತ ರೂಪೇಶಕುಮಾರ್ ಮತ್ತು ವಕೀಲ ಮಿಥಿಲೇಶ್ ಕುಮಾರ್ ಸಿಂಗ್ ಬಂಧನ.

2. 8, ಜುಲೈ 2019, ಕೃಪಾಶಂಕರ್ ಮತ್ತು ಅವರ ಪತ್ನಿ ಪ್ರತಿಭಾ ಅವರನ್ನು ಹೊಟೆಲ್ ಒಂದರಿಂದ ಕರೆದೊಯ್ದು ಬಂಧಿಸಲಾಯಿತು. ಕೃಪಾಶಂಕರ್ ಯುಪಿಯ ದಿನಪತ್ರಿಕೆ ‘ವಿರುದ್ಧ್’ನ ಸಂಪಾದಕರು ಮತ್ತು ಹಿಂದೂತ್ವ ಫ್ಯಾಸಿಸಂ ವಿರೋಧಿ ವೇದಿಕೆಯ ಸದಸ್ಯರು.

3. 9, ಜುಲೈ 2019, ಸಾಮಾಜಿಕ ಕಾರ್ಯಕರ್ತರು ಮತ್ತು ಶಿಕ್ಷಕರಾದ ಮನಿಶ್ ಮತ್ತು ಅವರ ಪತ್ನಿ ಅಮಿತಾ ಶ್ರೀವಾಸ್ತವ್ ಬಂಧನ.

ಈ ಎಲ್ಲ ಪ್ರಕರಣಗಳಲ್ಲಿ ಒಂದು ನಿರ್ದಿಷ್ಟ ಪ್ಯಾಟರ್ನ್ ಇದ್ದು, ಮೊದಲಿಗೆ ಅಪಹರಿಸಿ ನಂತರ ಬಂಧಿಸುವುದು. ನಕ್ಸಲ್‍ರೊಂದಿಗೆ ಸಂಪರ್ಕ ಎಂಬ ಆರೋಪದ ಮೇಲೆ ಆ ಮೂರು ಬಂಧನಗಳನ್ನು ಮಾಡಲಾಗಿದೆ. ಕಳೆದ 6 ತಿಂಗಳಿಂದ ಇಂಥವನ್ನೆಲ್ಲ ನಾವು ನೋಡುತ್ತಿದ್ದೇವೆ.

ನಕ್ಸಲ್ ಸಂಪರ್ಕ ಎಂಬ ನಿರಾಧಾರ ಆರೋಪದ ಮೇಲೆ ಮೋದಿ ಸರ್ಕಾರ ಮಾನವ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸುತ್ತ ನಡೆದಿದೆ. ಈ ಕಾರ್ಯಕರ್ತರ ಅಪರಾಧವಾದರೂ ಏನು? ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಅವರು ಮಾತನಾಡುತ್ತಿರುವುದು ಮತ್ತು ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು.

ತನ್ನ ನೀತಿಗಳ ಟೀಕೆ ಮಾಡುವ ಸಣ್ಣ ಪಟ್ಟಣಗಳ ಮಾನವ ಹಕ್ಕು ಕಾರ್ಯಕರ್ತರು, ಪತ್ರಕರ್ತರು ಮತ್ತು ಖ್ಯಾತ ವಕೀಲರನ್ನು ಬಂಧಿಸುವ ಮೂಲಕ ಮೋದಿ ಸರ್ಕಾರವು ತನ್ನ ಟೀಕಾಕಾರರು ಮತ್ತು ವಿರೋಧಿಗಳನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ರವಾನಿಸುತ್ತಿದೆ. ಅದು ಎಲ್ಲಾ ವಿರೋಧ ಮತ್ತು ಭಿನ್ನಮತವನ್ನು ಮಟ್ಟ ಹಾಕಲು ಹೊರಟಿದೆ. ನಮ್ಮ ಮುಂದಿನ ಪ್ರಶ್ನೆ: ಎಷ್ಟು ದಿನಾ ಅಂತ ನಾವು ಮೌನವಾಗಿರುವುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...