Homeಚಳವಳಿಸಿಬಿಐ ದಾಳಿಗಳು ಮತ್ತು ವಕೀಲರು, ಪತ್ರಕರ್ತರ ಕಾನೂನುಬಾಹಿರ ಬಂಧನಗಳು: ಕರಾಳ ದಿನಗಳ ಮುನ್ಸೂಚನೆ

ಸಿಬಿಐ ದಾಳಿಗಳು ಮತ್ತು ವಕೀಲರು, ಪತ್ರಕರ್ತರ ಕಾನೂನುಬಾಹಿರ ಬಂಧನಗಳು: ಕರಾಳ ದಿನಗಳ ಮುನ್ಸೂಚನೆ

ಮೋದಿ ಅಮಿತ್ ಶಾ ರವರ ಸಿಬಿಐ ದಾಳಿಗಳು ಮತ್ತು ನಕ್ಸಲ್ ಲಿಂಕ್ ಆರೋಪಗಳು, ಮಾನವ ಹಕ್ಕು ಕಾರ್ಯಕರ್ತರನ್ನು ತೆಪ್ಪಗಾಗಿಸುವ ಸಾಧನಗಳಾಗಿವೆ ಅಷ್ಟೇ..

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ-2 ಸರ್ಕಾರವು ಯಾವುದೇ ನೈಜ ಮತ್ತು ಗ್ರಹಿತ ವಿರೋಧಗಳನ್ನು ಮೆಟ್ಟಿ ಹಾಕಲು ಒಂದಿನಿತೂ ಸಮಯವನ್ನು ವ್ಯರ್ಥ ಮಾಡುತ್ತಿಲ್ಲ. ಗುಜರಾತ್ ಗಲಭೆಗಳಲ್ಲಿ ಮೋದಿ ಪಾತ್ರವಿದೆಯೆಂದು ಆರೋಪಿಸಿದ್ದ ಸಂಜೀವ್ ಭಟ್ಟ ಅವರಿಗೆ ಜೀವಾವಧಿ ಶಿಕ್ಷೆ ಆಗುವಂತೆ ಮಾಡುವ ಮೂಲಕ ಇದು ಆರಂಭವಾಯಿತು. ನಂತರದಲ್ಲಿ ಉತ್ತರ ಪ್ರದೇಶದ ಯೋಗಿ ಸರ್ಕಾರದ ಟೀಕಾಕಾರರಾಗಿದ್ದ ಪರ್ತಕರ್ತರ ಮೇಲೆ ದಾಳಿ ಮತ್ತು ಬಂಧನಗಳಾದವು.

ಈ ವಾರವಷ್ಟೇ ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಇಂದಿರಾ ಜೈಸಿಂಗ್ ಅವರ ಮನೆ ಮತ್ತು ಲಾಯರ್ಸ್ ಕಲೆಕ್ಟಿವ್ ಕಚೇರಿ ಮೇಲೆ ಸಿಬಿಐ ದಾಳಿ ನಡೆದಿದ್ದು ಇದೆಲ್ಲದರ ಮುಂದುವರಿಕೆ. ಇಂದಿರಾರವರು 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಅವರ ಮತ್ತು ಅವರ ನೀತಿಗಳ ಪ್ರಖರ ಟೀಕಾಕಾರರಾಗಿದ್ದಾರೆ.

ಆನಂದ್ ಗ್ರೋವರ್ ಮತ್ತು ಇಂದಿರಾ ಜೈಸಿಂಗ್

ಇಂದಿರಾ ಮತ್ತು ಅವರ ಸಂಸ್ಥೇ ಲಾಯರ್ಸ್ ಕಲೆಕ್ಟಿವ್ ಬಿಜೆಪಿ ವಿರುದ್ಧ ಹಲವಾರು ಕಾನೂನು ಪ್ರಕರಣಗಳನ್ನು ಕೈಗೆತ್ತಿಕೊಂಡಿದೆ. ಸಂಜೀವ್ ಭಟ್ ಮತ್ತು ತೀಸ್ತಾ ಸೆಟೆಲ್ ವಾಡ್ ಕೇಸುಗಳು ಇದರಲ್ಲಿ ಮುಖ್ಯವಾಗಿವೆ. 2002ರ ಗುಜರಾತ್ ಗಲಭೆಯಲ್ಲಿ ಅಂದಿನ ಗುಜರಾತ್ ಸಿಎಂ ಆಗಿದ್ದ ನರೇಂದ್ರ ಮೋದಿ ಪಾತ್ರವಿತ್ತು ಎಂದು ಸಂಜೀವ್ ಭಟ್ ಆರೋಪಿಸಿದ್ದರು. 2002ರ ಗುಜರಾತ್ ಗಲಭೆಯ ಸಂತ್ರಸ್ಥರ ಪರವಾಗಿ ತೀಸ್ತಾ ಅವರ ಸಂಸ್ಥೇ ಕಾನೂನಾತ್ಕ ಹೋರಾಟ ನಡೆಸುತ್ತ ಬಂದಿದೆ. ತೀಸ್ತಾರ ಮೇಲಿನ ಹಣ ದುರುಪಯೋಗ ಪ್ರಕರಣದ ಕೇಸನ್ನು ಇಂದಿರಾ ಜೈಸಿಂಗ್ ಅವರೇ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಇಂದಿರಾ ಜೈಸಿಂಗ್ ಯಾರು? ಅವರ ಮೇಲೆ ಮೋದಿ ಶಾಗೇಕೆ ಕೋಪ?

ಗ್ರೀನ್‍ಪೀಸ್ ಕಾರ್ಯಕರ್ತೆ ಪ್ರಿಯಾ ಪಿಳ್ಳೈ ಅವರಿಗೆ ಭಾರತದ ಆಚೆ ಪ್ರವಾಸಿಸದಂತೆ ನಿರ್ಬಂಧ ಹೇರಿದ್ದರ ವಿರುದ್ದವೂ ಇಂದಿರಾ ವಕೀಲಿಕೆ ಮಾಡಿದ್ದರು. ಸುಪ್ರಿಂಕೋರ್ಟಿನಲ್ಲಿ ಹಿರಿಯ ನ್ಯಾಯಾಧೀಶರನ್ನು ನೇಮಿಸುವ ಪ್ರಕ್ರಿಯೆಯನ್ನು ಇಂದಿರಾ ಟಿಕಿಸುತ್ತ ಬಂದಿದ್ದು, 2016ರಲ್ಲಿ ಅವರು ಕೋರ್ಟಿನಲ್ಲಿ ಅದನ್ನು ಪ್ರಶ್ನಿಸಿದ್ದರು. ನ್ಯಾಯಾಧೀಶ ಲೋಯಾ ಸಾವಿನ ಪ್ರಕರಣದ ವಿಚಾರಣಗೆ ನ್ಯಾಯಾಧೀಶರನ್ನು ನೇಮಿಸುವಲ್ಲಿ ಆದ ಲೋಪವನ್ನೂ ಇಂದಿರಾ ವಿರೋಧಿಸಿದ್ದರು.

ಉತ್ತರಪ್ರದೇಶದಲ್ಲಿ ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರನ್ನು ಕಾನೂನುಬಾಹಿರವಾಗಿ ಬಂಧಿಸಿದ್ದ ಪ್ರಕರಣದ ನಂತರ ಇಲ್ಲಿವರೆಗೆ ಐವರು ಪತ್ರಕರ್ತರು ಮತ್ತ ಮಾನವ ಹಕ್ಕು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಈ ಪ್ರಕರಣಗಳು ಸಣ್ಣ ಪಟ್ಟಣಗಳಿಗೆ ಸಂಬಂಧಿಸಿದ್ದವಾದ್ದರಿಂದ ಕನೋಜಿಯಾ ಪ್ರಕರಣದಂತೆ ಸುದ್ದಿಯಾಗಲಿಲ್ಲ.

1. 9, ಜೂನ್ 2019ರಂದು ಜಾರ್ಖಂಡಿನಲ್ಲಿ ಪತ್ರಕರ್ತ ಮತ್ತ ಸಾಮಾಜಿಕ ಕಾರ್ಯಕರ್ತ ರೂಪೇಶಕುಮಾರ್ ಮತ್ತು ವಕೀಲ ಮಿಥಿಲೇಶ್ ಕುಮಾರ್ ಸಿಂಗ್ ಬಂಧನ.

2. 8, ಜುಲೈ 2019, ಕೃಪಾಶಂಕರ್ ಮತ್ತು ಅವರ ಪತ್ನಿ ಪ್ರತಿಭಾ ಅವರನ್ನು ಹೊಟೆಲ್ ಒಂದರಿಂದ ಕರೆದೊಯ್ದು ಬಂಧಿಸಲಾಯಿತು. ಕೃಪಾಶಂಕರ್ ಯುಪಿಯ ದಿನಪತ್ರಿಕೆ ‘ವಿರುದ್ಧ್’ನ ಸಂಪಾದಕರು ಮತ್ತು ಹಿಂದೂತ್ವ ಫ್ಯಾಸಿಸಂ ವಿರೋಧಿ ವೇದಿಕೆಯ ಸದಸ್ಯರು.

3. 9, ಜುಲೈ 2019, ಸಾಮಾಜಿಕ ಕಾರ್ಯಕರ್ತರು ಮತ್ತು ಶಿಕ್ಷಕರಾದ ಮನಿಶ್ ಮತ್ತು ಅವರ ಪತ್ನಿ ಅಮಿತಾ ಶ್ರೀವಾಸ್ತವ್ ಬಂಧನ.

ಈ ಎಲ್ಲ ಪ್ರಕರಣಗಳಲ್ಲಿ ಒಂದು ನಿರ್ದಿಷ್ಟ ಪ್ಯಾಟರ್ನ್ ಇದ್ದು, ಮೊದಲಿಗೆ ಅಪಹರಿಸಿ ನಂತರ ಬಂಧಿಸುವುದು. ನಕ್ಸಲ್‍ರೊಂದಿಗೆ ಸಂಪರ್ಕ ಎಂಬ ಆರೋಪದ ಮೇಲೆ ಆ ಮೂರು ಬಂಧನಗಳನ್ನು ಮಾಡಲಾಗಿದೆ. ಕಳೆದ 6 ತಿಂಗಳಿಂದ ಇಂಥವನ್ನೆಲ್ಲ ನಾವು ನೋಡುತ್ತಿದ್ದೇವೆ.

ನಕ್ಸಲ್ ಸಂಪರ್ಕ ಎಂಬ ನಿರಾಧಾರ ಆರೋಪದ ಮೇಲೆ ಮೋದಿ ಸರ್ಕಾರ ಮಾನವ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸುತ್ತ ನಡೆದಿದೆ. ಈ ಕಾರ್ಯಕರ್ತರ ಅಪರಾಧವಾದರೂ ಏನು? ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಅವರು ಮಾತನಾಡುತ್ತಿರುವುದು ಮತ್ತು ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು.

ತನ್ನ ನೀತಿಗಳ ಟೀಕೆ ಮಾಡುವ ಸಣ್ಣ ಪಟ್ಟಣಗಳ ಮಾನವ ಹಕ್ಕು ಕಾರ್ಯಕರ್ತರು, ಪತ್ರಕರ್ತರು ಮತ್ತು ಖ್ಯಾತ ವಕೀಲರನ್ನು ಬಂಧಿಸುವ ಮೂಲಕ ಮೋದಿ ಸರ್ಕಾರವು ತನ್ನ ಟೀಕಾಕಾರರು ಮತ್ತು ವಿರೋಧಿಗಳನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ರವಾನಿಸುತ್ತಿದೆ. ಅದು ಎಲ್ಲಾ ವಿರೋಧ ಮತ್ತು ಭಿನ್ನಮತವನ್ನು ಮಟ್ಟ ಹಾಕಲು ಹೊರಟಿದೆ. ನಮ್ಮ ಮುಂದಿನ ಪ್ರಶ್ನೆ: ಎಷ್ಟು ದಿನಾ ಅಂತ ನಾವು ಮೌನವಾಗಿರುವುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...