Homeಚಳವಳಿಸಿಬಿಐ ದಾಳಿಗಳು ಮತ್ತು ವಕೀಲರು, ಪತ್ರಕರ್ತರ ಕಾನೂನುಬಾಹಿರ ಬಂಧನಗಳು: ಕರಾಳ ದಿನಗಳ ಮುನ್ಸೂಚನೆ

ಸಿಬಿಐ ದಾಳಿಗಳು ಮತ್ತು ವಕೀಲರು, ಪತ್ರಕರ್ತರ ಕಾನೂನುಬಾಹಿರ ಬಂಧನಗಳು: ಕರಾಳ ದಿನಗಳ ಮುನ್ಸೂಚನೆ

ಮೋದಿ ಅಮಿತ್ ಶಾ ರವರ ಸಿಬಿಐ ದಾಳಿಗಳು ಮತ್ತು ನಕ್ಸಲ್ ಲಿಂಕ್ ಆರೋಪಗಳು, ಮಾನವ ಹಕ್ಕು ಕಾರ್ಯಕರ್ತರನ್ನು ತೆಪ್ಪಗಾಗಿಸುವ ಸಾಧನಗಳಾಗಿವೆ ಅಷ್ಟೇ..

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ-2 ಸರ್ಕಾರವು ಯಾವುದೇ ನೈಜ ಮತ್ತು ಗ್ರಹಿತ ವಿರೋಧಗಳನ್ನು ಮೆಟ್ಟಿ ಹಾಕಲು ಒಂದಿನಿತೂ ಸಮಯವನ್ನು ವ್ಯರ್ಥ ಮಾಡುತ್ತಿಲ್ಲ. ಗುಜರಾತ್ ಗಲಭೆಗಳಲ್ಲಿ ಮೋದಿ ಪಾತ್ರವಿದೆಯೆಂದು ಆರೋಪಿಸಿದ್ದ ಸಂಜೀವ್ ಭಟ್ಟ ಅವರಿಗೆ ಜೀವಾವಧಿ ಶಿಕ್ಷೆ ಆಗುವಂತೆ ಮಾಡುವ ಮೂಲಕ ಇದು ಆರಂಭವಾಯಿತು. ನಂತರದಲ್ಲಿ ಉತ್ತರ ಪ್ರದೇಶದ ಯೋಗಿ ಸರ್ಕಾರದ ಟೀಕಾಕಾರರಾಗಿದ್ದ ಪರ್ತಕರ್ತರ ಮೇಲೆ ದಾಳಿ ಮತ್ತು ಬಂಧನಗಳಾದವು.

ಈ ವಾರವಷ್ಟೇ ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಇಂದಿರಾ ಜೈಸಿಂಗ್ ಅವರ ಮನೆ ಮತ್ತು ಲಾಯರ್ಸ್ ಕಲೆಕ್ಟಿವ್ ಕಚೇರಿ ಮೇಲೆ ಸಿಬಿಐ ದಾಳಿ ನಡೆದಿದ್ದು ಇದೆಲ್ಲದರ ಮುಂದುವರಿಕೆ. ಇಂದಿರಾರವರು 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಅವರ ಮತ್ತು ಅವರ ನೀತಿಗಳ ಪ್ರಖರ ಟೀಕಾಕಾರರಾಗಿದ್ದಾರೆ.

ಆನಂದ್ ಗ್ರೋವರ್ ಮತ್ತು ಇಂದಿರಾ ಜೈಸಿಂಗ್

ಇಂದಿರಾ ಮತ್ತು ಅವರ ಸಂಸ್ಥೇ ಲಾಯರ್ಸ್ ಕಲೆಕ್ಟಿವ್ ಬಿಜೆಪಿ ವಿರುದ್ಧ ಹಲವಾರು ಕಾನೂನು ಪ್ರಕರಣಗಳನ್ನು ಕೈಗೆತ್ತಿಕೊಂಡಿದೆ. ಸಂಜೀವ್ ಭಟ್ ಮತ್ತು ತೀಸ್ತಾ ಸೆಟೆಲ್ ವಾಡ್ ಕೇಸುಗಳು ಇದರಲ್ಲಿ ಮುಖ್ಯವಾಗಿವೆ. 2002ರ ಗುಜರಾತ್ ಗಲಭೆಯಲ್ಲಿ ಅಂದಿನ ಗುಜರಾತ್ ಸಿಎಂ ಆಗಿದ್ದ ನರೇಂದ್ರ ಮೋದಿ ಪಾತ್ರವಿತ್ತು ಎಂದು ಸಂಜೀವ್ ಭಟ್ ಆರೋಪಿಸಿದ್ದರು. 2002ರ ಗುಜರಾತ್ ಗಲಭೆಯ ಸಂತ್ರಸ್ಥರ ಪರವಾಗಿ ತೀಸ್ತಾ ಅವರ ಸಂಸ್ಥೇ ಕಾನೂನಾತ್ಕ ಹೋರಾಟ ನಡೆಸುತ್ತ ಬಂದಿದೆ. ತೀಸ್ತಾರ ಮೇಲಿನ ಹಣ ದುರುಪಯೋಗ ಪ್ರಕರಣದ ಕೇಸನ್ನು ಇಂದಿರಾ ಜೈಸಿಂಗ್ ಅವರೇ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಇಂದಿರಾ ಜೈಸಿಂಗ್ ಯಾರು? ಅವರ ಮೇಲೆ ಮೋದಿ ಶಾಗೇಕೆ ಕೋಪ?

ಗ್ರೀನ್‍ಪೀಸ್ ಕಾರ್ಯಕರ್ತೆ ಪ್ರಿಯಾ ಪಿಳ್ಳೈ ಅವರಿಗೆ ಭಾರತದ ಆಚೆ ಪ್ರವಾಸಿಸದಂತೆ ನಿರ್ಬಂಧ ಹೇರಿದ್ದರ ವಿರುದ್ದವೂ ಇಂದಿರಾ ವಕೀಲಿಕೆ ಮಾಡಿದ್ದರು. ಸುಪ್ರಿಂಕೋರ್ಟಿನಲ್ಲಿ ಹಿರಿಯ ನ್ಯಾಯಾಧೀಶರನ್ನು ನೇಮಿಸುವ ಪ್ರಕ್ರಿಯೆಯನ್ನು ಇಂದಿರಾ ಟಿಕಿಸುತ್ತ ಬಂದಿದ್ದು, 2016ರಲ್ಲಿ ಅವರು ಕೋರ್ಟಿನಲ್ಲಿ ಅದನ್ನು ಪ್ರಶ್ನಿಸಿದ್ದರು. ನ್ಯಾಯಾಧೀಶ ಲೋಯಾ ಸಾವಿನ ಪ್ರಕರಣದ ವಿಚಾರಣಗೆ ನ್ಯಾಯಾಧೀಶರನ್ನು ನೇಮಿಸುವಲ್ಲಿ ಆದ ಲೋಪವನ್ನೂ ಇಂದಿರಾ ವಿರೋಧಿಸಿದ್ದರು.

ಉತ್ತರಪ್ರದೇಶದಲ್ಲಿ ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರನ್ನು ಕಾನೂನುಬಾಹಿರವಾಗಿ ಬಂಧಿಸಿದ್ದ ಪ್ರಕರಣದ ನಂತರ ಇಲ್ಲಿವರೆಗೆ ಐವರು ಪತ್ರಕರ್ತರು ಮತ್ತ ಮಾನವ ಹಕ್ಕು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಈ ಪ್ರಕರಣಗಳು ಸಣ್ಣ ಪಟ್ಟಣಗಳಿಗೆ ಸಂಬಂಧಿಸಿದ್ದವಾದ್ದರಿಂದ ಕನೋಜಿಯಾ ಪ್ರಕರಣದಂತೆ ಸುದ್ದಿಯಾಗಲಿಲ್ಲ.

1. 9, ಜೂನ್ 2019ರಂದು ಜಾರ್ಖಂಡಿನಲ್ಲಿ ಪತ್ರಕರ್ತ ಮತ್ತ ಸಾಮಾಜಿಕ ಕಾರ್ಯಕರ್ತ ರೂಪೇಶಕುಮಾರ್ ಮತ್ತು ವಕೀಲ ಮಿಥಿಲೇಶ್ ಕುಮಾರ್ ಸಿಂಗ್ ಬಂಧನ.

2. 8, ಜುಲೈ 2019, ಕೃಪಾಶಂಕರ್ ಮತ್ತು ಅವರ ಪತ್ನಿ ಪ್ರತಿಭಾ ಅವರನ್ನು ಹೊಟೆಲ್ ಒಂದರಿಂದ ಕರೆದೊಯ್ದು ಬಂಧಿಸಲಾಯಿತು. ಕೃಪಾಶಂಕರ್ ಯುಪಿಯ ದಿನಪತ್ರಿಕೆ ‘ವಿರುದ್ಧ್’ನ ಸಂಪಾದಕರು ಮತ್ತು ಹಿಂದೂತ್ವ ಫ್ಯಾಸಿಸಂ ವಿರೋಧಿ ವೇದಿಕೆಯ ಸದಸ್ಯರು.

3. 9, ಜುಲೈ 2019, ಸಾಮಾಜಿಕ ಕಾರ್ಯಕರ್ತರು ಮತ್ತು ಶಿಕ್ಷಕರಾದ ಮನಿಶ್ ಮತ್ತು ಅವರ ಪತ್ನಿ ಅಮಿತಾ ಶ್ರೀವಾಸ್ತವ್ ಬಂಧನ.

ಈ ಎಲ್ಲ ಪ್ರಕರಣಗಳಲ್ಲಿ ಒಂದು ನಿರ್ದಿಷ್ಟ ಪ್ಯಾಟರ್ನ್ ಇದ್ದು, ಮೊದಲಿಗೆ ಅಪಹರಿಸಿ ನಂತರ ಬಂಧಿಸುವುದು. ನಕ್ಸಲ್‍ರೊಂದಿಗೆ ಸಂಪರ್ಕ ಎಂಬ ಆರೋಪದ ಮೇಲೆ ಆ ಮೂರು ಬಂಧನಗಳನ್ನು ಮಾಡಲಾಗಿದೆ. ಕಳೆದ 6 ತಿಂಗಳಿಂದ ಇಂಥವನ್ನೆಲ್ಲ ನಾವು ನೋಡುತ್ತಿದ್ದೇವೆ.

ನಕ್ಸಲ್ ಸಂಪರ್ಕ ಎಂಬ ನಿರಾಧಾರ ಆರೋಪದ ಮೇಲೆ ಮೋದಿ ಸರ್ಕಾರ ಮಾನವ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸುತ್ತ ನಡೆದಿದೆ. ಈ ಕಾರ್ಯಕರ್ತರ ಅಪರಾಧವಾದರೂ ಏನು? ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಅವರು ಮಾತನಾಡುತ್ತಿರುವುದು ಮತ್ತು ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು.

ತನ್ನ ನೀತಿಗಳ ಟೀಕೆ ಮಾಡುವ ಸಣ್ಣ ಪಟ್ಟಣಗಳ ಮಾನವ ಹಕ್ಕು ಕಾರ್ಯಕರ್ತರು, ಪತ್ರಕರ್ತರು ಮತ್ತು ಖ್ಯಾತ ವಕೀಲರನ್ನು ಬಂಧಿಸುವ ಮೂಲಕ ಮೋದಿ ಸರ್ಕಾರವು ತನ್ನ ಟೀಕಾಕಾರರು ಮತ್ತು ವಿರೋಧಿಗಳನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ರವಾನಿಸುತ್ತಿದೆ. ಅದು ಎಲ್ಲಾ ವಿರೋಧ ಮತ್ತು ಭಿನ್ನಮತವನ್ನು ಮಟ್ಟ ಹಾಕಲು ಹೊರಟಿದೆ. ನಮ್ಮ ಮುಂದಿನ ಪ್ರಶ್ನೆ: ಎಷ್ಟು ದಿನಾ ಅಂತ ನಾವು ಮೌನವಾಗಿರುವುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...