Homeಕರ್ನಾಟಕಸಿಬಿಐ ದಾಳಿ: ರಾಜಕೀಯ ಷಡ್ಯಂತ್ರ ಎಂದ ಸಂಸದ ಡಿ.ಕೆ.ಸುರೇಶ್

ಸಿಬಿಐ ದಾಳಿ: ರಾಜಕೀಯ ಷಡ್ಯಂತ್ರ ಎಂದ ಸಂಸದ ಡಿ.ಕೆ.ಸುರೇಶ್

’ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ’- ಸಂಸದ ಡಿ.ಕೆ.ಸುರೇಶ್

- Advertisement -
- Advertisement -

ಇಂದು ಬೆಳ್ಳಂಬೆಳಿಗ್ಗೆಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಏಕಕಾಲದಲ್ಲಿ ಸಹೋದರರಿಬ್ಬರ ಮನೆ ಮೇಲೆ ಮತ್ತು ಕನಕಪುರದ ಹಲವು ಸ್ಥಳಗಳಲ್ಲಿ ದಾಳಿ ನಡೆದಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಮನೆ, ಕನಕಪುರ ತಾಲ್ಲೂಕಿನ ದೊಡ್ಡ ಆಲನಹಳ್ಳಿ ಮನೆ ಸೇರಿ ಡಿಕೆ ಶಿವಕುಮಾರ್ ಜೊತೆ ಸಂಬಂಧ ಇರುವ 15 ಸ್ಥಳಗಳ ಮೇಲೆ ಸಿಬಿಐ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ.

ಸಿಬಿಐ ದಾಳಿಗೆ ಪ್ರತಿಕ್ರಿಯಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ ಖಂಡನೆ

ಸಿಬಿಐ ದಾಳಿಯನ್ನು ರಾಜಕೀಯ ಷಡ್ಯಂತ್ರ ಎಂದಿರುವ ಸಂಸದ ಡಿ.ಕೆ.ಸುರೇಶ್, ’ಈ ಎಲ್ಲಾ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ. ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ’ ಎಂದಿದ್ದಾರೆ.

 

’ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ’ ಎಂದು ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಹಾಗಾಗಿ ಈ ವಿಚಾರದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ ಎಂದು ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ.

‘ಇಂದು ಮುಂಜಾನೆಯಿಂದ ನಡೆದ ಸಿಬಿಐ ವಿಚಾರಣೆ ಈಗಷ್ಟೆ ಮುಕ್ತಾಯವಾಗಿದೆ. ಹಿಂದೆ IT ಮತ್ತು ED ಅಧಿಕಾರಿಗಳು ನಡೆಸಿದ ವಿಚಾರಣೆಯ ದಾಖಲೆ ಪ್ರತಿಗಳ ನಕಲನ್ನು ಸಿಬಿಐ ಅಧಿಕಾರಿಗಳು ತಗೆದುಕೊಂಡಿರುತ್ತಾರೆ. ನನ್ನ ದೆಹಲಿ ನಿವಾಸದಲ್ಲಿ ಇನ್ನೂ ಪರಿಶೀಲನೆ ನಡೆಯುತ್ತಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ಸ್ಪಂದಿಸಿದ್ದೇವೆ’ ಎಂದು ತಾವು ಸಿಬಿಐಗೆ ಸಂಪೂರ್ಣ ಸಹಕಾರ ನೀಡಿದ್ದೇವೆ ಎಂದು ಡಿ.ಕೆ.ಸುರೇಶ್ ತಿಳಿಸಿದ್ದಾರೆ.

ಬೆಳಗ್ಗೆ ಸಹೋದರರಿಬ್ಬರ ಮನೆ ಮೇಲೆ ಸಿಬಿಐ ದಾಳಿಯಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ” ಎಂದು ಕಿಡಿಕಾರಿದ್ದರು.

ರಾಜ್ಯದ ಹಲವು ಕಡೆಗಳಲ್ಲಿ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನೆಗೆ ಎನ್‌ಎಸ್‌ಯುಐ ಸಂಘಟನೆ ಮುತ್ತಿಗೆ ಹಾಕಲು ಪ್ರಯತ್ನಿಸಿತ್ತು. ಎನ್‌ಎಸ್‌ಯುಐನ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ಒಲ್ಲದ ಮನಸ್ಸಿನಿಂದ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಿ.ಟಿ.ರವಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...