Homeಕರ್ನಾಟಕಸಿಬಿಐ ದಾಳಿ: ರಾಜಕೀಯ ಷಡ್ಯಂತ್ರ ಎಂದ ಸಂಸದ ಡಿ.ಕೆ.ಸುರೇಶ್

ಸಿಬಿಐ ದಾಳಿ: ರಾಜಕೀಯ ಷಡ್ಯಂತ್ರ ಎಂದ ಸಂಸದ ಡಿ.ಕೆ.ಸುರೇಶ್

’ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ’- ಸಂಸದ ಡಿ.ಕೆ.ಸುರೇಶ್

- Advertisement -
- Advertisement -

ಇಂದು ಬೆಳ್ಳಂಬೆಳಿಗ್ಗೆಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಏಕಕಾಲದಲ್ಲಿ ಸಹೋದರರಿಬ್ಬರ ಮನೆ ಮೇಲೆ ಮತ್ತು ಕನಕಪುರದ ಹಲವು ಸ್ಥಳಗಳಲ್ಲಿ ದಾಳಿ ನಡೆದಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಮನೆ, ಕನಕಪುರ ತಾಲ್ಲೂಕಿನ ದೊಡ್ಡ ಆಲನಹಳ್ಳಿ ಮನೆ ಸೇರಿ ಡಿಕೆ ಶಿವಕುಮಾರ್ ಜೊತೆ ಸಂಬಂಧ ಇರುವ 15 ಸ್ಥಳಗಳ ಮೇಲೆ ಸಿಬಿಐ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ.

ಸಿಬಿಐ ದಾಳಿಗೆ ಪ್ರತಿಕ್ರಿಯಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ ಖಂಡನೆ

ಸಿಬಿಐ ದಾಳಿಯನ್ನು ರಾಜಕೀಯ ಷಡ್ಯಂತ್ರ ಎಂದಿರುವ ಸಂಸದ ಡಿ.ಕೆ.ಸುರೇಶ್, ’ಈ ಎಲ್ಲಾ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ. ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ’ ಎಂದಿದ್ದಾರೆ.

 

’ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ’ ಎಂದು ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಹಾಗಾಗಿ ಈ ವಿಚಾರದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ ಎಂದು ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ.

‘ಇಂದು ಮುಂಜಾನೆಯಿಂದ ನಡೆದ ಸಿಬಿಐ ವಿಚಾರಣೆ ಈಗಷ್ಟೆ ಮುಕ್ತಾಯವಾಗಿದೆ. ಹಿಂದೆ IT ಮತ್ತು ED ಅಧಿಕಾರಿಗಳು ನಡೆಸಿದ ವಿಚಾರಣೆಯ ದಾಖಲೆ ಪ್ರತಿಗಳ ನಕಲನ್ನು ಸಿಬಿಐ ಅಧಿಕಾರಿಗಳು ತಗೆದುಕೊಂಡಿರುತ್ತಾರೆ. ನನ್ನ ದೆಹಲಿ ನಿವಾಸದಲ್ಲಿ ಇನ್ನೂ ಪರಿಶೀಲನೆ ನಡೆಯುತ್ತಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ಸ್ಪಂದಿಸಿದ್ದೇವೆ’ ಎಂದು ತಾವು ಸಿಬಿಐಗೆ ಸಂಪೂರ್ಣ ಸಹಕಾರ ನೀಡಿದ್ದೇವೆ ಎಂದು ಡಿ.ಕೆ.ಸುರೇಶ್ ತಿಳಿಸಿದ್ದಾರೆ.

ಬೆಳಗ್ಗೆ ಸಹೋದರರಿಬ್ಬರ ಮನೆ ಮೇಲೆ ಸಿಬಿಐ ದಾಳಿಯಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ” ಎಂದು ಕಿಡಿಕಾರಿದ್ದರು.

ರಾಜ್ಯದ ಹಲವು ಕಡೆಗಳಲ್ಲಿ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನೆಗೆ ಎನ್‌ಎಸ್‌ಯುಐ ಸಂಘಟನೆ ಮುತ್ತಿಗೆ ಹಾಕಲು ಪ್ರಯತ್ನಿಸಿತ್ತು. ಎನ್‌ಎಸ್‌ಯುಐನ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ಒಲ್ಲದ ಮನಸ್ಸಿನಿಂದ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಿ.ಟಿ.ರವಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...