Homeಮುಖಪುಟಬಿಹಾರದಲ್ಲಿ ಇಂದು ವಿಶ್ವಾಸಮತ ಯಾಚನೆ ಬೆನ್ನಲ್ಲೆ RJD ಹಿರಿಯ ನಾಯಕರ ಮನೆ ಮೇಲೆ CBI ದಾಳಿ

ಬಿಹಾರದಲ್ಲಿ ಇಂದು ವಿಶ್ವಾಸಮತ ಯಾಚನೆ ಬೆನ್ನಲ್ಲೆ RJD ಹಿರಿಯ ನಾಯಕರ ಮನೆ ಮೇಲೆ CBI ದಾಳಿ

- Advertisement -
- Advertisement -

ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ರಚಿಸಿ ಎರಡು ವಾರಗಳ ನಂತರ ಇಂದು ಸಿಎಂ ನಿತೀಶ್ ಕುಮಾರ್‌ರವರು ಬಹುಮತ ಸಾಬೀತುಪಡಿಸಲು ಮುಂದಾಗಿದ್ದಾರೆ. ಇದೇ ಸಂದರ್ಭದಲ್ಲಿ ಸರ್ಕಾರದ ಭಾಗವಾಗಿರುವ ಆರ್‌ಜೆಡಿಯ ಹಿರಿಯ ಮುಖಂಡರ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ.

ಇಂದು ಬೆಳಿಗ್ಗೆ ಆರ್‌ಜೆಡಿಯ ರಾಜ್ಯಸಭಾ ಸಂಸದ ಅಹ್ಮದ್ ಅಶ್ಫಾಕ್ ಕರೀಂ ಮತ್ತು ಬಿಹಾರದ ವಿಧಾನ ಪರಿಷತ್ ಸದಸ್ಯ ಸುನೀಲ್ ಸಿಂಗ್ ಮನೆಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯುಪಿಎ-1 ರ ಕಾಲದಲ್ಲಿ ಲಾಲೂ ಪ್ರಸಾದ್ ಯಾದವ್‌ರವರು ರೈಲ್ವೆ ಸಚಿವರಾಗಿದ್ದಾಗ ಉದ್ಯೋಗ ನೀಡುವುದಕ್ಕಾಗಿ ಭೂಮಿ ಲಂಚ ಪಡೆದ ಹಗರಣದ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಬಿಹಾರದಲ್ಲಿ ಅಧಿಕಾರ ಕೈತಪ್ಪಿದ್ದರಿಂದ ಬಿಜೆಪಿ ತೀವ್ರ ಹತಾಶೆಗೊಂಡಿರುವ ಕಾರಣ ಸಿಬಿಐ ಮತ್ತು ಇತರ ಕೇಂದ್ರೀಯ ಸಂಸ್ಥೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂದು ಆರ್‌ಜೆಡಿ ಪಕ್ಷವು ನಿನ್ನೆ ರಾತ್ರಿ ಟ್ವೀಟ್ ಮಾಡಿತ್ತು. “ಬಿಹಾರದಲ್ಲಿ ಉಗ್ರ ಬಿಜೆಪಿ ಮಿತ್ರಪಕ್ಷಗಳಾದ ಸಿಬಿಐ, ಇಡಿ, ಐಟಿ ಶೀಘ್ರದಲ್ಲೇ ದಾಳಿಗೆ ತಯಾರಿ ನಡೆಸುತ್ತಿವೆ. ಪಾಟ್ನಾದಲ್ಲಿ ಸಭೆ ಆರಂಭವಾಗಿದೆ. ನಾಳೆ ಮಹತ್ವದ ದಿನ” ಎಂದು ಆರ್‌ಜೆಡಿ ಹೇಳಿತ್ತು.

ದಾಳಿ ನಂತರ ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಆರ್‌ಜೆಡಿ ಪಕ್ಷವು “ಸೋಕಾಲ್ಡ್ ರೈಲ್ವೇ ಉದ್ಯೋಗದ ಕುರಿತು ಹಲವಾರು ಕಡೆ ಸಿಬಿಐ ದಾಳಿ ನಡೆಸಿದೆ. ಆದರೆ ಅವರಿಗೆ ಏನು ಸಿಕ್ಕಿಲ್ಲ” ಎಂದು ಹೇಳಿದೆ.

“ಲಾಲು ಪ್ರಸಾದ್ ಯಾದವ್‌ರವರು 2004 ರಿಂದ 2009 ರವರೆಗೆ ರೈಲ್ವೆ ಸಚಿವರಾಗಿದ್ದರು. ಆದರೆ ಅವರ ಅಧಿಕಾರಾವಧಿ ಮುಗಿದ 13 ವರ್ಷಗಳ ನಂತರ ಸಿಬಿಐ ದಾಳಿ ನಡೆಸುತ್ತಿದೆ ಎಂದರೆ ಅದು ಎಂತಹ ಅಸಹ್ಯ ಸಂಸ್ಥೆ ಎಂದು ನಿಮಗೆ ಅರ್ಥವಾಗುತ್ತದೆ. ಇದಕ್ಕೆಲ್ಲ ಲಾಲೂ ಕುಟುಂಬವು ತಲೆಬಾಗುವುದಿಲ್ಲ ಮತ್ತು ಹೆದರುವುದಿಲ್ಲ” ಎಂದು ಆರ್‌ಜೆಡಿ ಹೇಳಿಕೊಂಡಿದೆ.

2004 ಮತ್ತು 2009 ರ ನಡುವೆ ರೈಲ್ವೆ ಉದ್ಯೋಗಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿತ್ತು. ಯಾದವ್ ಮತ್ತು ಅವರ ಕುಟುಂಬ ಸದಸ್ಯರು ರೈಲ್ವೇ ಉದ್ಯೋಗಗಳನ್ನು ನೀಡಲು ಲಂಚವಾಗಿ ಭೂಮಿ ಮತ್ತು ಆಸ್ತಿಗಳನ್ನು ಪಡೆದಿದ್ದಾರೆ ಎಂದು ಆರೋಪಿಸಿ ಈ ವರ್ಷದ ಮೇ ತಿಂಗಳಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಜೂನ್ ತಿಂಗಳಿನಲ್ಲಿ ಲಾಲೂರವರ ಸಹಚರ ಭೋಲಾ ಯಾದವ್‌ರನ್ನು ಬಂಧಿಸಲಾಗಿತ್ತು. ಅವರ ವಿಚಾರಣೆಯ ನಂತರ ಇಂದು ದಾಳಿ ನಡೆಸಿದ್ದೇವೆ ಎಂದು ಸಿಬಿಐ ಹೇಳಿದೆ.

ಇದನ್ನೂ ಓದಿ: ಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....