Homeಮುಖಪುಟತಮಿಳುನಾಡು ಲಾಕಪ್ ಡೆತ್‌: ಎರಡು ಪ್ರಕರಣಗಳನ್ನು ದಾಖಲಿಸಿದ ಸಿಬಿಐ

ತಮಿಳುನಾಡು ಲಾಕಪ್ ಡೆತ್‌: ಎರಡು ಪ್ರಕರಣಗಳನ್ನು ದಾಖಲಿಸಿದ ಸಿಬಿಐ

ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಈವರೆಗೆ ಬಂಧಿಸಲಾಗಿದೆ.

- Advertisement -
- Advertisement -

ಲಾಕ್‌ಡೌನ್ ಉಲ್ಲಂಘಿಸಿ ತಮ್ಮ ಅಂಗಡಿಯನ್ನು ತೆರೆದಿಟ್ಟಿದ್ದಕ್ಕಾಗಿ ತಮಿಳುನಾಡಿನ ತುತುಕುಡಿಯ ಪೊಲೀಸ್ ಠಾಣೆಯಲ್ಲಿ ಚಿತ್ರಹಿಂಸೆಗೊಳಗಾಗಿ ಸಾವಿಗೀಡಾದ ತಂದೆ-ಮಗನ ಲಾಕಪ್‌ಡೆತ್‌‌ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ಬುಧವಾರ ಎರಡು ಪ್ರಕರಣಗಳನ್ನು ದಾಖಲಿಸಿದೆ.

ತನಿಖೆಗಾಗಿ ರಚಿಸಲಾದ ಸಿಬಿಐ ತಂಡವನ್ನು ತನಿಖಾ ಸ್ಥಳಕ್ಕೆ ಕಳುಹಿಸಲಾಗುತ್ತಿದೆ.

ಪಿ ಜಯರಾಜ್ ಮತ್ತು ಜೆ ಬೆನಿಕ್ಸ್ ಸಾವಿನ ಬಗ್ಗೆ ಕೇಂದ್ರದ ಸಂಸ್ಥೆ ತನಿಖೆ ನಡೆಸುವಂತೆ ಕೋರಿ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದ ಪತ್ರದ ಕೇಂದ್ರ ಸರ್ಕಾರ ಮಂಗಳವಾರ ಈ ಪ್ರಕರಣವನ್ನು ಸಿಬಿಐಗೆ ತನಿಖೆಗೆ ಒಪ್ಪಿಸಿದೆ.

ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಈವರೆಗೆ ಬಂಧಿಸಲಾಗಿದೆ.

ಪಿ. ಜಯರಾಜ್ (59) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರನ್ನು ಕೊರೊನಾ ವೈರಸ್ ಲಾಕ್ ಡೌನ್ ಜೂನ್ 19 ರಂದು ವಿಧಿಸಲಾಗಿದ್ದ ಕರ್ಫ್ಯೂ ಸಮಯದಲ್ಲಿ ತಮ್ಮ ಮೊಬೈಲ್ ಫೋನ್ ಅಂಗಡಿಯನ್ನು ತೆರೆದಿಟ್ಟದ್ದಕ್ಕಾಗಿ ಬಂಧಿಸಲಾಯಿತು.

ತಂದೆ ಹಾಗೂ ಮಗನನ್ನು ಪೊಲೀಸ್ ಕಸ್ಟಡಿಯಲ್ಲಿ ಹಿಂಸಿಸಲಾಯಿತು ಎಂದು ಆರೋಪಿಸಲಾಗಿದೆ, ನಂತರ ಅವರನ್ನು ಜೂನ್ 22 ರಂದು ಕೋವಿಲ್ಪಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅದೇ ರಾತ್ರಿ ಮಗ ಸಾವನ್ನಪ್ಪಿದ್ದರೆ, ತಂದೆ ಜೂನ್ 23 ರ ಬೆಳಿಗ್ಗೆ ಕೊನೆಯುಸಿರೆಳೆದಿದ್ದರು.

ಈ ಪ್ರಕರಣದಲ್ಲಿ ಒಬ್ಬ ಮಹಿಳಾ ಪೊಲೀಸ್ ಮಾತ್ರ ಪ್ರತ್ಯಕ್ಷದರ್ಶಿಯಾಗಿದ್ದು, ಘಟನೆಯ ತನಿಖೆ ನಡೆಸಿದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಂ ಎಸ್ ಬಾರತಿದಾಸನ್ ಅವರಿಗೆ, ಜೂನ್ 19 ರಂದು ರಾತ್ರಿಯಿಡೀ ಜಯರಾಜ್ ಮತ್ತು ಬೆನ್ನಿಕ್ಸ್ ಇಬ್ಬರನ್ನು ಥಳಿಸಲಾಯಿತು ಎಂದು ಹೇಳಿದ್ದಾರೆ.

“ಲಾಠಿ ಹಾಗೂ ಮೇಜಿನ ಮೇಲೆ ರಕ್ತದ ಕಲೆಗಳಿವೆ” ಎಂದು ಅವರು ಹೇಳಿದ್ದರಿಂದ ತಕ್ಷಣ ಅವುಗಳನ್ನು ವಶಕ್ಕೆ ಪಡೆಯಲು ಮ್ಯಾಜಿಸ್ಟ್ರೇಟ್ ಕೇಳಿದ್ದಾರೆ.


ಓದಿ: ಪೊಲೀಸರ ರಕ್ತದಲ್ಲಿ ತೊಯ್ದ ‘ಉತ್ತಮ’ಪ್ರದೇಶ : ಶಿವಸೇನೆ ಟೀಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...