Homeಮುಖಪುಟಲಂಚದ ಆರೋಪ: CBFC ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಲಂಚದ ಆರೋಪ: CBFC ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

- Advertisement -
- Advertisement -

ಸೆನ್ಸಾರ್ ಪ್ರಮಾಣಪತ್ರ ನೀಡಲು ಮುಂಬೈನ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್‌ನಲ್ಲಿ ಲಂಚದ ಆರೋಪದ ಹಿನ್ನೆಲೆ ಸಿಬಿಎಫ್‌ಸಿ ಅಧಿಕಾರಿಗಳು ಮತ್ತು ಮೂವರು ಖಾಸಗಿ ವ್ಯಕ್ತಿಗಳ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ.

ತಮ್ಮ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡಲು ಮುಂಬೈನ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್‌ನಲ್ಲಿ(ಸಿಬಿಎಫ್‌ಸಿ) ಲಂಚ ಪಡೆದಿದ್ದಾರೆ ಎಂದು ತಮಿಳು ನಟ ವಿಶಾಲ್ ಆರೋಪ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ವಿಶಾಲ್ ಅವರು ತಮ್ಮ ತಮಿಳು ಚಿತ್ರ ‘ಮಾರ್ಕ್ ಆಂಟೋನಿಯ’ ಹಿಂದಿ ಆವೃತ್ತಿಯ ಬಿಡುಗಡೆಯ ಪ್ರಮಾಣ ಪತ್ರಕ್ಕೆ  CBFC ಗೆ 6.5 ಲಕ್ಷ ರೂಪಾಯಿಗಳನ್ನು ಪಾವತಿಸಬೇಕೆಂದು ಬೇಡಿಕೆ ಇಡಲಾಗಿತ್ತು ಎಂದು ಹೇಳಿದ್ದಾರೆ.

ಸಿಬಿಐ ಅಧಿಕಾರಿಗಳು ಆರೋಪಿತ ಸಿಬಿಎಫ್‌ಸಿ ಸಿಬ್ಬಂದಿಯ  ಹೆಸರು ಬಹಿರಂಗಪಡಿಸಿಲ್ಲ. ಆದರೆ ಇತರ ಮೂವರನ್ನು ಮೆರ್ಲಿನ್ ಮೆನಗಾ, ಜೀಜಾ ರಾಮದಾಸ್ ಮತ್ತು ರಾಜನ್ ಎಂ ಎಂದು ಗುರುತಿಸಲಾಗಿದೆ. ಅವರು ಸೆಪ್ಟೆಂಬರ್‌ನಲ್ಲಿ 7 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆರೋಪಿಸಲಾಗಿದೆ.

ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ನಲ್ಲಿ ಹೆಸರಿಸಿರುವ ವ್ಯಕ್ತಿಗಳ ಸ್ಥಳಗಳು ಸೇರಿ ಮುಂಬೈನಲ್ಲಿ 4 ಕಡೆ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿದೆ.

24 ಗಂಟೆಗಳಲ್ಲಿ ತಮ್ಮ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಪ್ರಮಾಣಪತ್ರ ನೀಡಲು ಲಂಚ ಕೇಳಿದ್ದರು ಎಂದು ವಿಶಾಲ್ ಆರೋಪಿಸಿದ್ದರು.

ಈ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಗಮನಹರಿಸಬೇಕು. ಚಿತ್ರದ ಸೆನ್ಸಾರ್‌ಗಾಗಿ ಆನ್‌ಲೈನ್‌ನಲ್ಲಿ ನಾವು ಅರ್ಜಿ ಸಲ್ಲಿಸಿದ್ದೆವು. ಆದರೆ ನಾವು ಕಚೇರಿಗೆ ಭೇಟಿಕೊಟ್ಟಾಗ ವ್ಯಕ್ತಿಯೊಬ್ಬರು ಸರ್ಟಿಫಿಕೇಟ್ ನೀಡಲು 6.5 ಲಕ್ಷ ಲಂಚ ಕೇಳಿದ್ದಾರೆ. ಚಿತ್ರವನ್ನು ವೀಕ್ಷಿಸಿ ಪರಿಶೀಲನೆ ನಡೆಸಲು 3 ಲಕ್ಷ ಮತ್ತು ಸರ್ಟಿಫಿಕೇಟ್ ನೀಡಲು 3.5 ಲಕ್ಷ ಕೇಳಿದ್ದರು. ಬೇರೆ ದಾರಿ ಇಲ್ಲದೆ ಹಣ ಪಾವತಿಸಿ ಸರ್ಟಿಫಿಕೇಟ್ ಪಡೆದಿದ್ದೇನೆ ಎಂದು ವಿಶಾಲ್ ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ವಿಶಾಲ್‌ ಆರೋಪಗಳ ಬೆನ್ನಲ್ಲೇ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪ್ರತಿಕ್ರಿಯಿಸಿದ್ದು, ಸರ್ಕಾರವು ಭ್ರಷ್ಟಾಚಾರದ ವಿಚಾರದಲ್ಲಿ ಶೂನ್ಯ ಸಹಿಷ್ಣುತೆಯನ್ನು ಹೊಂದಿದೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದೆ.

ಇದನ್ನು ಓದಿ: ನಾಂದೇಡ್‌: ಸರಣಿ ಸಾವು ಸಂಭವಿಸಿದ ಸರ್ಕಾರಿ ಆಸ್ಪತ್ರೆಯ ಡೀನ್‌ ವಿರುದ್ಧ ಎಫ್ಐಆರ್‌ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...