Homeಮುಖಪುಟಬ್ಯಾಂಕ್‌ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಮೂರು ಹೊಸ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬ್ಯಾಂಕ್‌ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಮೂರು ಹೊಸ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬ್ಯಾಂಕ್‌ಗಳಲ್ಲಿ ಉಂಟಾಗಿರುವ ಹೆಚ್ಚುವರಿ 6,746 ಕೋಟಿ ರೂಪಾಯಿ ನಷ್ಟವನ್ನು ಈ ಎಫ್‌ಐಆರ್‌ಗಳು ಉಲ್ಲೇಖಿಸಿವೆ

- Advertisement -
- Advertisement -

ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧ ಪಂಜಾಬ್ ನ್ಯಾಷನಲ್ ಬ್ಯಾಂಕಿನ ದೂರಿನ ಆಧಾರದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮೂರು ಹೊಸ ಎಫ್‌ಐಆ‌ರ್‌‌ಗಳನ್ನು ದಾಖಲಿಸಿದೆ. ಪಂಜಾಬ್‌ ಬ್ಯಾಂಕ್‌ ಮತ್ತು ಇತರ ಒಕ್ಕೂಟದ ಬ್ಯಾಂಕ್‌ಗಳಲ್ಲಿ ಉಂಟಾಗಿರುವ ಹೆಚ್ಚುವರಿ 6,746 ಕೋಟಿ ರೂಪಾಯಿ ನಷ್ಟವನ್ನು ಈ ಎಫ್‌ಐಆರ್‌ಗಳು ಉಲ್ಲೇಖಿಸಿವೆ.

13,000 ಕೋಟಿ ರೂಪಾಯಿಗಳನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಕ್ಸಿಯವರು ಕೇಂದ್ರೀಯ ತನಿಖಾ ಸಂಸ್ಥೆ ಮತ್ತು ಜಾರಿ ನಿರ್ದೇಶನಾಲಯಕ್ಕೆ ಬೇಕಾಗಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ನೀರವ್ ಮೋದಿ ಸದ್ಯ ಯುನೈಟೆಡ್ ಕಿಂಗ್‌ಡಂನ ಜೈಲಿನಲ್ಲಿದ್ದಾನೆ.

ಚೋಕ್ಸಿ 2017ರಲ್ಲಿ ಆಂಟಿಗುವಾ ಮತ್ತು ಬಾರ್ಬುಡಾಗೆ ಪಲಾಯನ ಮಾಡಿದರು. ಕೇಂದ್ರೀಯ ತನಿಖಾ ದಳವು 2018ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿದೆ.

ಮಾರ್ಚ್ 21ರಂದು ಬ್ಯಾಂಕ್ ಹೆಚ್ಚುವರಿ ಆರೋಪಗಳನ್ನು ಸಲ್ಲಿಸಿದ್ದು, ಚೋಕ್ಸಿಯ ಗೀತಾಂಜಲಿ ಜೆಮ್ಸ್ ಲಿಮಿಟೆಡ್, ನಕ್ಷತ್ರ ಬ್ರಾಂಡ್ಸ್ ಲಿಮಿಟೆಡ್ ಮತ್ತು ಗಿಲಿ ಇಂಡಿಯಾ ಲಿಮಿಟೆಡ್‌ನಿಂದ ಉಂಟಾದ ನಷ್ಟವನ್ನು ಪ್ರಸ್ತಾಪಿಸಿದೆ.

ಚೋಕ್ಸಿಯ ವಕೀಲ ವಿಜಯ್ ಅಗರ್ವಾಲ್ ಅವರು ಹೊಸ ಎಫ್‌ಐಆರ್‌ಗಳನ್ನು ಟೀಕಿಸಿದ್ದಾರೆ. “ಒಂದು ಎಫ್‌ಐಆರ್ ದಾಖಲಾದಾಗ ಮತ್ತು ಬ್ಯಾಂಕ್‌ಗಳಿಗೆ ಆದ ಒಟ್ಟು ನಷ್ಟಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಸಿದಾಗ, ಪ್ರತಿ ಸಣ್ಣ ವ್ಯವಹಾರಕ್ಕೂ ಈಗ ಪ್ರತ್ಯೇಕ ಎಫ್‌ಐಆರ್ ಹೇಗೆ ಸಲ್ಲಿಸಲು ಸಾಧ್ಯ? ಆ ತರ್ಕದೊಂದಿಗೆ ಹೇಳುವುದಾದರೆ- ಒಟ್ಟು 13,000 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಹೇಳಿಕೊಂಡರೆ ಅವರು ಪ್ರತಿ ರೂಪಾಯಿಗೆ ತಲಾ ಒಂದು ಎಫ್‌ಐಆರ್ ದಾಖಲಿಸಬೇಕು” ಎಂದಿದ್ದಾರೆ.

“ಒಕ್ಕೂಟವು ಕೇವಲ ಒಂದು ಪ್ರಥಮ ಮಾಹಿತಿ ವರದಿಯನ್ನು ಮಾತ್ರ ಸಲ್ಲಿಸಬಹುದು ಎಂದು ವಿಜಿಲೆನ್ಸ್ ಕೈಪಿಡಿ ಸುತ್ತೋಲೆ ಇದೆ” ಎಂದು ಅಗರ್ವಾಲ್ ವಾದಿಸಿದ್ದಾರೆ.

ಗೀತಾಂಜಲಿ ಜೆಮ್ಸ್ ಲಿಮಿಟೆಡ್ ಮತ್ತು ಅದರ ಹಿರಿಯ ಅಧಿಕಾರಿಗಳು ಐಸಿಐಸಿಐ ನೇತೃತ್ವದ 28 ಬ್ಯಾಂಕ್‌ಗಳ ಒಕ್ಕೂಟದಲ್ಲಿ 2010 ಮತ್ತು 2018 ರ ನಡುವೆ 5,564.54 ಕೋಟಿ ರೂಪಾಯಿಗಳ ವಂಚನೆ ಮಾಡಿರುವಾಗಿ ಚೋಕ್ಸಿ ವಿರುದ್ಧದ ಎಫ್‌ಐಆರ್‌ ಆರೋಪಿಸಿದೆ. ವಜ್ರದ ವ್ಯಾಪಾರಿ ಮತ್ತು ಅವರ ಸಂಸ್ಥೆಗಳು 5564.54 ಕೋಟಿ ರೂಪಾಯಿಗಳನ್ನು ಬ್ಯಾಂಕ್‌ಗಳ ಒಕ್ಕೂಟಕ್ಕೆ ವಂಚಿಸಿದ್ದಾರೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ದೂರಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇತೃತ್ವದ ಒಂಬತ್ತು ಬ್ಯಾಂಕ್‌ಗಳ ಒಕ್ಕೂಟಕ್ಕೆ ಚೋಕ್ಸಿ, ಅವರ ಸಂಸ್ಥೆ ನಕ್ಷತ್ರ ಬ್ರಾಂಡ್ಸ್ ಲಿಮಿಟೆಡ್ ಮತ್ತು ಇತರರು 807 ಕೋಟಿ ರೂ. ವಂಚಿಸಿರುವುದಾಗಿ ಎರಡನೇ ಎಫ್‌ಐಆರ್‌‌ ತಿಳಿಸಿದೆ.

ಮೂರನೇ ಎಫ್‌ಐಆರ್‌, ಇದೇ ಅವಧಿಯಲ್ಲಿ ಪಿಎನ್‌ಬಿಯಲ್ಲಿ ಚೋಕ್ಸಿ ಮತ್ತು ಗಿಲಿ ಇಂಡಿಯಾ ಲಿಮಿಟೆಡ್ ಮಾಡಿರುವ 375 ಕೋಟಿ ರೂಪಾಯಿಗಳ ವಂಚನೆಗೆ ಸಂಬಂಧಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...