Homeಮುಖಪುಟಬ್ಯಾಂಕ್‌ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಮೂರು ಹೊಸ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬ್ಯಾಂಕ್‌ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಮೂರು ಹೊಸ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬ್ಯಾಂಕ್‌ಗಳಲ್ಲಿ ಉಂಟಾಗಿರುವ ಹೆಚ್ಚುವರಿ 6,746 ಕೋಟಿ ರೂಪಾಯಿ ನಷ್ಟವನ್ನು ಈ ಎಫ್‌ಐಆರ್‌ಗಳು ಉಲ್ಲೇಖಿಸಿವೆ

- Advertisement -
- Advertisement -

ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧ ಪಂಜಾಬ್ ನ್ಯಾಷನಲ್ ಬ್ಯಾಂಕಿನ ದೂರಿನ ಆಧಾರದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮೂರು ಹೊಸ ಎಫ್‌ಐಆ‌ರ್‌‌ಗಳನ್ನು ದಾಖಲಿಸಿದೆ. ಪಂಜಾಬ್‌ ಬ್ಯಾಂಕ್‌ ಮತ್ತು ಇತರ ಒಕ್ಕೂಟದ ಬ್ಯಾಂಕ್‌ಗಳಲ್ಲಿ ಉಂಟಾಗಿರುವ ಹೆಚ್ಚುವರಿ 6,746 ಕೋಟಿ ರೂಪಾಯಿ ನಷ್ಟವನ್ನು ಈ ಎಫ್‌ಐಆರ್‌ಗಳು ಉಲ್ಲೇಖಿಸಿವೆ.

13,000 ಕೋಟಿ ರೂಪಾಯಿಗಳನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಕ್ಸಿಯವರು ಕೇಂದ್ರೀಯ ತನಿಖಾ ಸಂಸ್ಥೆ ಮತ್ತು ಜಾರಿ ನಿರ್ದೇಶನಾಲಯಕ್ಕೆ ಬೇಕಾಗಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ನೀರವ್ ಮೋದಿ ಸದ್ಯ ಯುನೈಟೆಡ್ ಕಿಂಗ್‌ಡಂನ ಜೈಲಿನಲ್ಲಿದ್ದಾನೆ.

ಚೋಕ್ಸಿ 2017ರಲ್ಲಿ ಆಂಟಿಗುವಾ ಮತ್ತು ಬಾರ್ಬುಡಾಗೆ ಪಲಾಯನ ಮಾಡಿದರು. ಕೇಂದ್ರೀಯ ತನಿಖಾ ದಳವು 2018ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿದೆ.

ಮಾರ್ಚ್ 21ರಂದು ಬ್ಯಾಂಕ್ ಹೆಚ್ಚುವರಿ ಆರೋಪಗಳನ್ನು ಸಲ್ಲಿಸಿದ್ದು, ಚೋಕ್ಸಿಯ ಗೀತಾಂಜಲಿ ಜೆಮ್ಸ್ ಲಿಮಿಟೆಡ್, ನಕ್ಷತ್ರ ಬ್ರಾಂಡ್ಸ್ ಲಿಮಿಟೆಡ್ ಮತ್ತು ಗಿಲಿ ಇಂಡಿಯಾ ಲಿಮಿಟೆಡ್‌ನಿಂದ ಉಂಟಾದ ನಷ್ಟವನ್ನು ಪ್ರಸ್ತಾಪಿಸಿದೆ.

ಚೋಕ್ಸಿಯ ವಕೀಲ ವಿಜಯ್ ಅಗರ್ವಾಲ್ ಅವರು ಹೊಸ ಎಫ್‌ಐಆರ್‌ಗಳನ್ನು ಟೀಕಿಸಿದ್ದಾರೆ. “ಒಂದು ಎಫ್‌ಐಆರ್ ದಾಖಲಾದಾಗ ಮತ್ತು ಬ್ಯಾಂಕ್‌ಗಳಿಗೆ ಆದ ಒಟ್ಟು ನಷ್ಟಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಸಿದಾಗ, ಪ್ರತಿ ಸಣ್ಣ ವ್ಯವಹಾರಕ್ಕೂ ಈಗ ಪ್ರತ್ಯೇಕ ಎಫ್‌ಐಆರ್ ಹೇಗೆ ಸಲ್ಲಿಸಲು ಸಾಧ್ಯ? ಆ ತರ್ಕದೊಂದಿಗೆ ಹೇಳುವುದಾದರೆ- ಒಟ್ಟು 13,000 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಹೇಳಿಕೊಂಡರೆ ಅವರು ಪ್ರತಿ ರೂಪಾಯಿಗೆ ತಲಾ ಒಂದು ಎಫ್‌ಐಆರ್ ದಾಖಲಿಸಬೇಕು” ಎಂದಿದ್ದಾರೆ.

“ಒಕ್ಕೂಟವು ಕೇವಲ ಒಂದು ಪ್ರಥಮ ಮಾಹಿತಿ ವರದಿಯನ್ನು ಮಾತ್ರ ಸಲ್ಲಿಸಬಹುದು ಎಂದು ವಿಜಿಲೆನ್ಸ್ ಕೈಪಿಡಿ ಸುತ್ತೋಲೆ ಇದೆ” ಎಂದು ಅಗರ್ವಾಲ್ ವಾದಿಸಿದ್ದಾರೆ.

ಗೀತಾಂಜಲಿ ಜೆಮ್ಸ್ ಲಿಮಿಟೆಡ್ ಮತ್ತು ಅದರ ಹಿರಿಯ ಅಧಿಕಾರಿಗಳು ಐಸಿಐಸಿಐ ನೇತೃತ್ವದ 28 ಬ್ಯಾಂಕ್‌ಗಳ ಒಕ್ಕೂಟದಲ್ಲಿ 2010 ಮತ್ತು 2018 ರ ನಡುವೆ 5,564.54 ಕೋಟಿ ರೂಪಾಯಿಗಳ ವಂಚನೆ ಮಾಡಿರುವಾಗಿ ಚೋಕ್ಸಿ ವಿರುದ್ಧದ ಎಫ್‌ಐಆರ್‌ ಆರೋಪಿಸಿದೆ. ವಜ್ರದ ವ್ಯಾಪಾರಿ ಮತ್ತು ಅವರ ಸಂಸ್ಥೆಗಳು 5564.54 ಕೋಟಿ ರೂಪಾಯಿಗಳನ್ನು ಬ್ಯಾಂಕ್‌ಗಳ ಒಕ್ಕೂಟಕ್ಕೆ ವಂಚಿಸಿದ್ದಾರೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ದೂರಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇತೃತ್ವದ ಒಂಬತ್ತು ಬ್ಯಾಂಕ್‌ಗಳ ಒಕ್ಕೂಟಕ್ಕೆ ಚೋಕ್ಸಿ, ಅವರ ಸಂಸ್ಥೆ ನಕ್ಷತ್ರ ಬ್ರಾಂಡ್ಸ್ ಲಿಮಿಟೆಡ್ ಮತ್ತು ಇತರರು 807 ಕೋಟಿ ರೂ. ವಂಚಿಸಿರುವುದಾಗಿ ಎರಡನೇ ಎಫ್‌ಐಆರ್‌‌ ತಿಳಿಸಿದೆ.

ಮೂರನೇ ಎಫ್‌ಐಆರ್‌, ಇದೇ ಅವಧಿಯಲ್ಲಿ ಪಿಎನ್‌ಬಿಯಲ್ಲಿ ಚೋಕ್ಸಿ ಮತ್ತು ಗಿಲಿ ಇಂಡಿಯಾ ಲಿಮಿಟೆಡ್ ಮಾಡಿರುವ 375 ಕೋಟಿ ರೂಪಾಯಿಗಳ ವಂಚನೆಗೆ ಸಂಬಂಧಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...