Homeಮುಖಪುಟಬ್ಯಾಂಕ್‌ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಮೂರು ಹೊಸ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬ್ಯಾಂಕ್‌ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಮೂರು ಹೊಸ ಎಫ್‌ಐಆರ್‌ ದಾಖಲಿಸಿದ ಸಿಬಿಐ

ಬ್ಯಾಂಕ್‌ಗಳಲ್ಲಿ ಉಂಟಾಗಿರುವ ಹೆಚ್ಚುವರಿ 6,746 ಕೋಟಿ ರೂಪಾಯಿ ನಷ್ಟವನ್ನು ಈ ಎಫ್‌ಐಆರ್‌ಗಳು ಉಲ್ಲೇಖಿಸಿವೆ

- Advertisement -
- Advertisement -

ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧ ಪಂಜಾಬ್ ನ್ಯಾಷನಲ್ ಬ್ಯಾಂಕಿನ ದೂರಿನ ಆಧಾರದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮೂರು ಹೊಸ ಎಫ್‌ಐಆ‌ರ್‌‌ಗಳನ್ನು ದಾಖಲಿಸಿದೆ. ಪಂಜಾಬ್‌ ಬ್ಯಾಂಕ್‌ ಮತ್ತು ಇತರ ಒಕ್ಕೂಟದ ಬ್ಯಾಂಕ್‌ಗಳಲ್ಲಿ ಉಂಟಾಗಿರುವ ಹೆಚ್ಚುವರಿ 6,746 ಕೋಟಿ ರೂಪಾಯಿ ನಷ್ಟವನ್ನು ಈ ಎಫ್‌ಐಆರ್‌ಗಳು ಉಲ್ಲೇಖಿಸಿವೆ.

13,000 ಕೋಟಿ ರೂಪಾಯಿಗಳನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋಕ್ಸಿಯವರು ಕೇಂದ್ರೀಯ ತನಿಖಾ ಸಂಸ್ಥೆ ಮತ್ತು ಜಾರಿ ನಿರ್ದೇಶನಾಲಯಕ್ಕೆ ಬೇಕಾಗಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ನೀರವ್ ಮೋದಿ ಸದ್ಯ ಯುನೈಟೆಡ್ ಕಿಂಗ್‌ಡಂನ ಜೈಲಿನಲ್ಲಿದ್ದಾನೆ.

ಚೋಕ್ಸಿ 2017ರಲ್ಲಿ ಆಂಟಿಗುವಾ ಮತ್ತು ಬಾರ್ಬುಡಾಗೆ ಪಲಾಯನ ಮಾಡಿದರು. ಕೇಂದ್ರೀಯ ತನಿಖಾ ದಳವು 2018ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿದೆ.

ಮಾರ್ಚ್ 21ರಂದು ಬ್ಯಾಂಕ್ ಹೆಚ್ಚುವರಿ ಆರೋಪಗಳನ್ನು ಸಲ್ಲಿಸಿದ್ದು, ಚೋಕ್ಸಿಯ ಗೀತಾಂಜಲಿ ಜೆಮ್ಸ್ ಲಿಮಿಟೆಡ್, ನಕ್ಷತ್ರ ಬ್ರಾಂಡ್ಸ್ ಲಿಮಿಟೆಡ್ ಮತ್ತು ಗಿಲಿ ಇಂಡಿಯಾ ಲಿಮಿಟೆಡ್‌ನಿಂದ ಉಂಟಾದ ನಷ್ಟವನ್ನು ಪ್ರಸ್ತಾಪಿಸಿದೆ.

ಚೋಕ್ಸಿಯ ವಕೀಲ ವಿಜಯ್ ಅಗರ್ವಾಲ್ ಅವರು ಹೊಸ ಎಫ್‌ಐಆರ್‌ಗಳನ್ನು ಟೀಕಿಸಿದ್ದಾರೆ. “ಒಂದು ಎಫ್‌ಐಆರ್ ದಾಖಲಾದಾಗ ಮತ್ತು ಬ್ಯಾಂಕ್‌ಗಳಿಗೆ ಆದ ಒಟ್ಟು ನಷ್ಟಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಸಿದಾಗ, ಪ್ರತಿ ಸಣ್ಣ ವ್ಯವಹಾರಕ್ಕೂ ಈಗ ಪ್ರತ್ಯೇಕ ಎಫ್‌ಐಆರ್ ಹೇಗೆ ಸಲ್ಲಿಸಲು ಸಾಧ್ಯ? ಆ ತರ್ಕದೊಂದಿಗೆ ಹೇಳುವುದಾದರೆ- ಒಟ್ಟು 13,000 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಹೇಳಿಕೊಂಡರೆ ಅವರು ಪ್ರತಿ ರೂಪಾಯಿಗೆ ತಲಾ ಒಂದು ಎಫ್‌ಐಆರ್ ದಾಖಲಿಸಬೇಕು” ಎಂದಿದ್ದಾರೆ.

“ಒಕ್ಕೂಟವು ಕೇವಲ ಒಂದು ಪ್ರಥಮ ಮಾಹಿತಿ ವರದಿಯನ್ನು ಮಾತ್ರ ಸಲ್ಲಿಸಬಹುದು ಎಂದು ವಿಜಿಲೆನ್ಸ್ ಕೈಪಿಡಿ ಸುತ್ತೋಲೆ ಇದೆ” ಎಂದು ಅಗರ್ವಾಲ್ ವಾದಿಸಿದ್ದಾರೆ.

ಗೀತಾಂಜಲಿ ಜೆಮ್ಸ್ ಲಿಮಿಟೆಡ್ ಮತ್ತು ಅದರ ಹಿರಿಯ ಅಧಿಕಾರಿಗಳು ಐಸಿಐಸಿಐ ನೇತೃತ್ವದ 28 ಬ್ಯಾಂಕ್‌ಗಳ ಒಕ್ಕೂಟದಲ್ಲಿ 2010 ಮತ್ತು 2018 ರ ನಡುವೆ 5,564.54 ಕೋಟಿ ರೂಪಾಯಿಗಳ ವಂಚನೆ ಮಾಡಿರುವಾಗಿ ಚೋಕ್ಸಿ ವಿರುದ್ಧದ ಎಫ್‌ಐಆರ್‌ ಆರೋಪಿಸಿದೆ. ವಜ್ರದ ವ್ಯಾಪಾರಿ ಮತ್ತು ಅವರ ಸಂಸ್ಥೆಗಳು 5564.54 ಕೋಟಿ ರೂಪಾಯಿಗಳನ್ನು ಬ್ಯಾಂಕ್‌ಗಳ ಒಕ್ಕೂಟಕ್ಕೆ ವಂಚಿಸಿದ್ದಾರೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ದೂರಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇತೃತ್ವದ ಒಂಬತ್ತು ಬ್ಯಾಂಕ್‌ಗಳ ಒಕ್ಕೂಟಕ್ಕೆ ಚೋಕ್ಸಿ, ಅವರ ಸಂಸ್ಥೆ ನಕ್ಷತ್ರ ಬ್ರಾಂಡ್ಸ್ ಲಿಮಿಟೆಡ್ ಮತ್ತು ಇತರರು 807 ಕೋಟಿ ರೂ. ವಂಚಿಸಿರುವುದಾಗಿ ಎರಡನೇ ಎಫ್‌ಐಆರ್‌‌ ತಿಳಿಸಿದೆ.

ಮೂರನೇ ಎಫ್‌ಐಆರ್‌, ಇದೇ ಅವಧಿಯಲ್ಲಿ ಪಿಎನ್‌ಬಿಯಲ್ಲಿ ಚೋಕ್ಸಿ ಮತ್ತು ಗಿಲಿ ಇಂಡಿಯಾ ಲಿಮಿಟೆಡ್ ಮಾಡಿರುವ 375 ಕೋಟಿ ರೂಪಾಯಿಗಳ ವಂಚನೆಗೆ ಸಂಬಂಧಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...