Homeಮುಖಪುಟಸುಶಾಂತ್ ಸಿಂಗ್ ಸಾವು ಪ್ರಕರಣದ ಮುಕ್ತಾಯ ವರದಿ ಸಲ್ಲಿಸಿದ ಸಿಬಿಐ: ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್

ಸುಶಾಂತ್ ಸಿಂಗ್ ಸಾವು ಪ್ರಕರಣದ ಮುಕ್ತಾಯ ವರದಿ ಸಲ್ಲಿಸಿದ ಸಿಬಿಐ: ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಎರಡು ಪ್ರತ್ಯೇಕ ಮುಕ್ತಾಯ ವರದಿಗಳನ್ನು ಸಲ್ಲಿಸಿದೆ ಮತ್ತು ಪ್ರಕರಣದ ಹಿಂದೆ ಯಾವುದೇ ಕೈವಾಡಗಳಿಲ್ಲ ಎಂದು ಹೇಳಿದೆ.

ಸುಶಾಂತ್ ಸಿಂಗ್ ತಂದೆ ಕೆ.ಕೆ ಸಿಂಗ್ ದಾಖಲಿಸಿದ್ದ ಆತ್ಮಹತ್ಯೆಗೆ ಪ್ರಚೋದನೆ ದೂರು ಮತ್ತು ಸುಶಾಂತ್ ಸಹೋದರಿಯರ ವಿರುದ್ಧ ರಿಯಾ ಚಕ್ರವರ್ತಿ ದಾಖಲಿಸಿದ್ದ ಆತ್ಮಹತ್ಯೆಗೆ ಪ್ರಚೋದನೆ ದೂರಿಗೆ ಸಂಬಂಧಿಸಿದಂತೆ ಸಿಬಿಐ ಮುಕ್ತಾಯದ ವರದಿಗಳನ್ನು ನೀಡಿದೆ.

ಕೆ.ಕೆ ಸಿಂಗ್ ಅವರ ದೂರಿಗೆ ಸಂಬಂಧಿಸಿದ ತನಿಖೆಯ ಮುಕ್ತಾಯದ ವರದಿಯನ್ನು ಸಿಬಿಐ ಪಾಟ್ನಾದ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದರೆ, ಎರಡನೆಯ ವರದಿಯನ್ನು ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.

ನಟ ಸುಶಾಂತ್ ಸಿಂಗ್ (34) ಜೂನ್ 2020ರಲ್ಲಿ ಮುಂಬೈನ ಬಾಂದ್ರಾದ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಸಂಬಂಧ ಮುಂಬೈ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು, ಸುಶಾಂತ್ ಕುಟುಂಬಸ್ಥರು ಮತ್ತು ಬಾಲಿವುಡ್‌ನ ಕೆಲವು ವ್ಯಕ್ತಿಗಳು ಸೇರಿದಂತೆ 50ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದರು.

ಸುಶಾಂತ್ ಆತ್ಮಹತ್ಯೆಗೆ ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬದವರು ಪ್ರಚೋದನೆ ನೀಡಿದ್ದಾರೆ ಮತ್ತು ಸುಶಾಂತ್ ಹಣವನ್ನು ಅವರು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸುಶಾಂತ್ ತಂದೆ ಕೆ.ಕೆ ಸಿಂಗ್ 2020ರ ಜುಲೈನಲ್ಲಿ ಪಾಟ್ನಾ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣದ ತನಿಖೆ ನಡೆಸಿದ ಸಿಬಿಐ ಮುಕ್ತಾಯದ ವರದಿಗಳನ್ನು ಸಲ್ಲಿಸಿದ್ದು, ಸುಶಾಂತ್ ಅವರ ಆತ್ಮಹತ್ಯೆಗೆ ಯಾರಾದರೂ ಪ್ರಚೋದನೆ ನೀಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಹೇಳಿದೆ. ರಿಯಾ ಚಕ್ರವರ್ತಿ ಮತ್ತು ಆಕೆಯ ಕುಟುಂಬದ ಮೇಲಿನ ಆರೋಪಗಳನ್ನು ತೆರವುಗೊಳಿಸಿದೆ.

ಸಿಬಿಐ ಮುಕ್ತಾಯ ವರದಿ ಸಲ್ಲಿಸಿರುವ ಬಗ್ಗೆ ರಿಯಾ ಅವರ ವಕೀಲ ಸತೀಶ್ ಮನೆಶಿಂಡೆ ಪ್ರತಿಕ್ರಿಯಿಸಿದ್ದು, “ರಿಯಾ ಮತ್ತು ಆಕೆಯ ಕುಟುಂಬಸ್ಥರ ವಿರುದ್ದ ಮಾಧ್ಯಮಗಳಲ್ಲಿ ಸುಳ್ಳು ಆರೋಪ ಹೊರಿಸಿ ಸುದ್ದಿ ಹಬ್ಬಿಸಲಾಗಿತ್ತು. ಪ್ರಕರಣದ ತನಿಖೆಯ ವರದಿಯು ನ್ಯಾಯ ಮತ್ತು ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಗಟ್ಟಿಗೊಳಿಸಿದೆ” ಎಂದು ಹೇಳಿದ್ದಾರೆ.

“ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಸುಮಾರು 4 ವರ್ಷಗಳ ನಂತರ ಸಿಬಿಐ ಮುಕ್ತಾಯ ವರದಿಯನ್ನು ಸಲ್ಲಿಸಿದೆ. ಪ್ರಕರಣದ ಪ್ರತಿಯೊಂದು ಅಂಶವನ್ನು ಎಲ್ಲಾ ಕೋನಗಳಿಂದ ಕೂಲಂಕಷವಾಗಿ ತನಿಖೆ ಮಾಡಿ ಪ್ರಕರಣವನ್ನು ಮುಕ್ತಾಯಗೊಳಿಸಿದ್ದಕ್ಕಾಗಿ ನಾವು ಸಿಬಿಐಗೆ ಕೃತಜ್ಞರಾಗಿರುತ್ತೇವೆ. ಸಾಮಾಜಿಕ ಮಾಧ್ಯಮ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಸುಳ್ಳು ಆರೋಪ ಅನಗತ್ಯವಾಗಿತ್ತು” ಎಂದಿದ್ದಾರೆ.

“ಕೋವಿಡ್ ಅವಧಿಯಲ್ಲಿ ದೇಶದಲ್ಲಿ ಬೇರೇನೂ ನಡೆಯದ ಕಾರಣ ಎಲ್ಲರೂ ಟಿವಿ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಅಂಟಿಕೊಂಡಿದ್ದರು. ಮುಗ್ಧ ಜನರನ್ನು ದಾರಿ ತಪ್ಪಿಸಿ ಅವರಿಗೆ ಸುಳ್ಳು ಸುದ್ದಿ ಹಬ್ಬಲಾಗಿತ್ತು. ಇನ್ಯಾವುದೇ ಸಂದರ್ಭದಲ್ಲೂ ಇದು ಪುನರಾವರ್ತನೆಯಾಗದಿರಲಿ ಎಂದು ನಾನು ಆಶಿಸುತ್ತೇನೆ” ಎಂದು ಸತೀಶ್ ಹೇಳಿದ್ದಾರೆ.

“ಮಾಧ್ಯಮಗಳ ಪ್ರಮುಖರು ತಾವು ಮಾಡಿದ್ದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ರಿಯಾ ಚಕ್ರವರ್ತಿ ಹೇಳಲಾಗದ ದುಃಖಗಳನ್ನು ಅನುಭವಿಸಬೇಕಾಯಿತು ಮತ್ತು ನ್ಯಾಯಮೂರ್ತಿ ಸಾರಂಗ್ ವಿ ಕೊತ್ವಾಲ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವವರೆಗೆ ಯಾವುದೇ ತಪ್ಪಿಲ್ಲದೆ 27 ದಿನಗಳ ಕಾಲ ಜೈಲಿನಲ್ಲಿದ್ದರು. ಮೌನವಾಗಿದ್ದದಕ್ಕೆ ಮತ್ತು ಎಲ್ಲಾ ಯಾತನೆಗಳನ್ನು ಅನುಭವಿಸಿದ್ದಕ್ಕೆ ರಿಯಾ ಅವರಿಗೆ ಮತ್ತು ಅವರ ಕುಟುಂಬಕ್ಕೆ ನಾನು ವಂದನೆ ಸಲ್ಲಿಸುತ್ತೇನೆ” ಎಂದು ಸತೀಶ್ ಹೇಳಿಕೊಂಡಿದ್ದಾರೆ.

ರಿಯಾ ಅವರು ತನ್ನ ಗೆಳೆಯರು ಮತ್ತು ನನ್ನೊಂದಿಗೆ ಸೈನಿಕ ಶಾಲೆಯಲ್ಲಿ ಓದಿದ ನನ್ನ ಗೆಳೆಯನ ಜೊತೆ ನನ್ನ ಭೇಟಿಯಾಗಿ ಸಮಸ್ಯೆ ಹೇಳಿಕೊಂಡಿದ್ದರು. ನಾನು ಪ್ರಕರಣ ಕೈಗೆತ್ತಿಕೊಂಡ ಬಳಿಕ ಜೀವ ಬೆದರಿಕೆಗಳು ಬಂದಿತ್ತು. ಆದರೆ, ನಾನು ನನ್ನ ಕರ್ತವ್ಯ ನಿರ್ವಹಿಸುವುದಿರಂದ ತಡೆಯಲು ಯಾರಿಗೂ ಆಗಿಲ್ಲ” ಎಂದು ಸತೀಶ್ ತಿಳಿಸಿದ್ದಾರೆ.

ಬಿಕ್ಕಟ್ಟು-ದಾಳಿಗಳಿಂದಾಗಿ ದಲಿತ ನಾಯಕರು ರಾಜಕೀಯದಲ್ಲಿ ಬದುಕುಳಿಯುವುದು ಕಷ್ಟ: ಕೇರಳ ಸಂಸದ ಕೆ. ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...