Homeಮುಖಪುಟಸುಶಾಂತ್ ಸಿಂಗ್ ಸಾವು ಪ್ರಕರಣದ ಮುಕ್ತಾಯ ವರದಿ ಸಲ್ಲಿಸಿದ ಸಿಬಿಐ: ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್

ಸುಶಾಂತ್ ಸಿಂಗ್ ಸಾವು ಪ್ರಕರಣದ ಮುಕ್ತಾಯ ವರದಿ ಸಲ್ಲಿಸಿದ ಸಿಬಿಐ: ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಎರಡು ಪ್ರತ್ಯೇಕ ಮುಕ್ತಾಯ ವರದಿಗಳನ್ನು ಸಲ್ಲಿಸಿದೆ ಮತ್ತು ಪ್ರಕರಣದ ಹಿಂದೆ ಯಾವುದೇ ಕೈವಾಡಗಳಿಲ್ಲ ಎಂದು ಹೇಳಿದೆ.

ಸುಶಾಂತ್ ಸಿಂಗ್ ತಂದೆ ಕೆ.ಕೆ ಸಿಂಗ್ ದಾಖಲಿಸಿದ್ದ ಆತ್ಮಹತ್ಯೆಗೆ ಪ್ರಚೋದನೆ ದೂರು ಮತ್ತು ಸುಶಾಂತ್ ಸಹೋದರಿಯರ ವಿರುದ್ಧ ರಿಯಾ ಚಕ್ರವರ್ತಿ ದಾಖಲಿಸಿದ್ದ ಆತ್ಮಹತ್ಯೆಗೆ ಪ್ರಚೋದನೆ ದೂರಿಗೆ ಸಂಬಂಧಿಸಿದಂತೆ ಸಿಬಿಐ ಮುಕ್ತಾಯದ ವರದಿಗಳನ್ನು ನೀಡಿದೆ.

ಕೆ.ಕೆ ಸಿಂಗ್ ಅವರ ದೂರಿಗೆ ಸಂಬಂಧಿಸಿದ ತನಿಖೆಯ ಮುಕ್ತಾಯದ ವರದಿಯನ್ನು ಸಿಬಿಐ ಪಾಟ್ನಾದ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದರೆ, ಎರಡನೆಯ ವರದಿಯನ್ನು ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.

ನಟ ಸುಶಾಂತ್ ಸಿಂಗ್ (34) ಜೂನ್ 2020ರಲ್ಲಿ ಮುಂಬೈನ ಬಾಂದ್ರಾದ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಸಂಬಂಧ ಮುಂಬೈ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು, ಸುಶಾಂತ್ ಕುಟುಂಬಸ್ಥರು ಮತ್ತು ಬಾಲಿವುಡ್‌ನ ಕೆಲವು ವ್ಯಕ್ತಿಗಳು ಸೇರಿದಂತೆ 50ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದರು.

ಸುಶಾಂತ್ ಆತ್ಮಹತ್ಯೆಗೆ ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬದವರು ಪ್ರಚೋದನೆ ನೀಡಿದ್ದಾರೆ ಮತ್ತು ಸುಶಾಂತ್ ಹಣವನ್ನು ಅವರು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸುಶಾಂತ್ ತಂದೆ ಕೆ.ಕೆ ಸಿಂಗ್ 2020ರ ಜುಲೈನಲ್ಲಿ ಪಾಟ್ನಾ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣದ ತನಿಖೆ ನಡೆಸಿದ ಸಿಬಿಐ ಮುಕ್ತಾಯದ ವರದಿಗಳನ್ನು ಸಲ್ಲಿಸಿದ್ದು, ಸುಶಾಂತ್ ಅವರ ಆತ್ಮಹತ್ಯೆಗೆ ಯಾರಾದರೂ ಪ್ರಚೋದನೆ ನೀಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಹೇಳಿದೆ. ರಿಯಾ ಚಕ್ರವರ್ತಿ ಮತ್ತು ಆಕೆಯ ಕುಟುಂಬದ ಮೇಲಿನ ಆರೋಪಗಳನ್ನು ತೆರವುಗೊಳಿಸಿದೆ.

ಸಿಬಿಐ ಮುಕ್ತಾಯ ವರದಿ ಸಲ್ಲಿಸಿರುವ ಬಗ್ಗೆ ರಿಯಾ ಅವರ ವಕೀಲ ಸತೀಶ್ ಮನೆಶಿಂಡೆ ಪ್ರತಿಕ್ರಿಯಿಸಿದ್ದು, “ರಿಯಾ ಮತ್ತು ಆಕೆಯ ಕುಟುಂಬಸ್ಥರ ವಿರುದ್ದ ಮಾಧ್ಯಮಗಳಲ್ಲಿ ಸುಳ್ಳು ಆರೋಪ ಹೊರಿಸಿ ಸುದ್ದಿ ಹಬ್ಬಿಸಲಾಗಿತ್ತು. ಪ್ರಕರಣದ ತನಿಖೆಯ ವರದಿಯು ನ್ಯಾಯ ಮತ್ತು ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಗಟ್ಟಿಗೊಳಿಸಿದೆ” ಎಂದು ಹೇಳಿದ್ದಾರೆ.

“ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಸುಮಾರು 4 ವರ್ಷಗಳ ನಂತರ ಸಿಬಿಐ ಮುಕ್ತಾಯ ವರದಿಯನ್ನು ಸಲ್ಲಿಸಿದೆ. ಪ್ರಕರಣದ ಪ್ರತಿಯೊಂದು ಅಂಶವನ್ನು ಎಲ್ಲಾ ಕೋನಗಳಿಂದ ಕೂಲಂಕಷವಾಗಿ ತನಿಖೆ ಮಾಡಿ ಪ್ರಕರಣವನ್ನು ಮುಕ್ತಾಯಗೊಳಿಸಿದ್ದಕ್ಕಾಗಿ ನಾವು ಸಿಬಿಐಗೆ ಕೃತಜ್ಞರಾಗಿರುತ್ತೇವೆ. ಸಾಮಾಜಿಕ ಮಾಧ್ಯಮ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಸುಳ್ಳು ಆರೋಪ ಅನಗತ್ಯವಾಗಿತ್ತು” ಎಂದಿದ್ದಾರೆ.

“ಕೋವಿಡ್ ಅವಧಿಯಲ್ಲಿ ದೇಶದಲ್ಲಿ ಬೇರೇನೂ ನಡೆಯದ ಕಾರಣ ಎಲ್ಲರೂ ಟಿವಿ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಅಂಟಿಕೊಂಡಿದ್ದರು. ಮುಗ್ಧ ಜನರನ್ನು ದಾರಿ ತಪ್ಪಿಸಿ ಅವರಿಗೆ ಸುಳ್ಳು ಸುದ್ದಿ ಹಬ್ಬಲಾಗಿತ್ತು. ಇನ್ಯಾವುದೇ ಸಂದರ್ಭದಲ್ಲೂ ಇದು ಪುನರಾವರ್ತನೆಯಾಗದಿರಲಿ ಎಂದು ನಾನು ಆಶಿಸುತ್ತೇನೆ” ಎಂದು ಸತೀಶ್ ಹೇಳಿದ್ದಾರೆ.

“ಮಾಧ್ಯಮಗಳ ಪ್ರಮುಖರು ತಾವು ಮಾಡಿದ್ದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ರಿಯಾ ಚಕ್ರವರ್ತಿ ಹೇಳಲಾಗದ ದುಃಖಗಳನ್ನು ಅನುಭವಿಸಬೇಕಾಯಿತು ಮತ್ತು ನ್ಯಾಯಮೂರ್ತಿ ಸಾರಂಗ್ ವಿ ಕೊತ್ವಾಲ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವವರೆಗೆ ಯಾವುದೇ ತಪ್ಪಿಲ್ಲದೆ 27 ದಿನಗಳ ಕಾಲ ಜೈಲಿನಲ್ಲಿದ್ದರು. ಮೌನವಾಗಿದ್ದದಕ್ಕೆ ಮತ್ತು ಎಲ್ಲಾ ಯಾತನೆಗಳನ್ನು ಅನುಭವಿಸಿದ್ದಕ್ಕೆ ರಿಯಾ ಅವರಿಗೆ ಮತ್ತು ಅವರ ಕುಟುಂಬಕ್ಕೆ ನಾನು ವಂದನೆ ಸಲ್ಲಿಸುತ್ತೇನೆ” ಎಂದು ಸತೀಶ್ ಹೇಳಿಕೊಂಡಿದ್ದಾರೆ.

ರಿಯಾ ಅವರು ತನ್ನ ಗೆಳೆಯರು ಮತ್ತು ನನ್ನೊಂದಿಗೆ ಸೈನಿಕ ಶಾಲೆಯಲ್ಲಿ ಓದಿದ ನನ್ನ ಗೆಳೆಯನ ಜೊತೆ ನನ್ನ ಭೇಟಿಯಾಗಿ ಸಮಸ್ಯೆ ಹೇಳಿಕೊಂಡಿದ್ದರು. ನಾನು ಪ್ರಕರಣ ಕೈಗೆತ್ತಿಕೊಂಡ ಬಳಿಕ ಜೀವ ಬೆದರಿಕೆಗಳು ಬಂದಿತ್ತು. ಆದರೆ, ನಾನು ನನ್ನ ಕರ್ತವ್ಯ ನಿರ್ವಹಿಸುವುದಿರಂದ ತಡೆಯಲು ಯಾರಿಗೂ ಆಗಿಲ್ಲ” ಎಂದು ಸತೀಶ್ ತಿಳಿಸಿದ್ದಾರೆ.

ಬಿಕ್ಕಟ್ಟು-ದಾಳಿಗಳಿಂದಾಗಿ ದಲಿತ ನಾಯಕರು ರಾಜಕೀಯದಲ್ಲಿ ಬದುಕುಳಿಯುವುದು ಕಷ್ಟ: ಕೇರಳ ಸಂಸದ ಕೆ. ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...