HomeಮುಖಪುಟTRP ಹಗರಣ: ಉತ್ತರಪ್ರದೇಶ ಸರ್ಕಾರದ ಶಿಫಾರಸ್ಸಿನ ಮೇರೆಗೆ ತನಿಖೆ ವಹಿಸಿಕೊಂಡ ಸಿಬಿಐ

TRP ಹಗರಣ: ಉತ್ತರಪ್ರದೇಶ ಸರ್ಕಾರದ ಶಿಫಾರಸ್ಸಿನ ಮೇರೆಗೆ ತನಿಖೆ ವಹಿಸಿಕೊಂಡ ಸಿಬಿಐ

ತನಿಖೆ ನಡೆಯುತ್ತಿರುವ ಕಾರಣ ಮೂರು ತಿಂಗಳವರೆಗೆ ಸುದ್ದಿ ಚಾನೆಲ್‌ಗಳಿಗೆ ಸಾಪ್ತಾಹಿಕ ರೇಟಿಂಗ್‌ ನೀಡದಿಲು ನಿರ್ಧರಿಸಲಾಗಿದೆ ಎಂದು ಟೆಲಿವಿಷನ್ ರೇಟಿಂಗ್ ಏಜೆನ್ಸಿ BARC ತಿಳಿಸಿದೆ.

- Advertisement -
- Advertisement -

ಟೆಲಿವಿಷನ್ ರೇಟಿಂಗ್ ಪಾಯಿಂಟ್‌ಗಳನ್ನು (TRP) ತಿರುಚಿರುವ ಆರೋಪ ಪ್ರಕರಣವನ್ನು ಕೇಂದ್ರ ತನಿಖಾ ದಳ ಕೈಗೆತ್ತಿಕೊಂಡಿದೆ. ಉತ್ತರ ಪ್ರದೇಶ ಸರ್ಕಾರದ ಶಿಫಾರಸಿನ ಮೇರೆಗೆ ಲಕ್ನೋ ಪೊಲೀಸರಿಂದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ.

ಕಮಲ್ ಶರ್ಮಾ ಎಂಬ ವ್ಯಕ್ತಿ ನೀಡಿದ ದೂರಿನ ಮೇರೆಗೆ ಲಕ್ನೋದ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ. ಅಪರಿಚಿತ ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ನಕಲಿ ವಿಧಾನಗಳನ್ನು ಬಳಸಿಕೊಂಡು ಟಿಆರ್‌ಪಿಗಳನ್ನು ತಿರುಚಿರುವುದು ಈ ಆರೋಪಗಳಲ್ಲಿ ಸೇರಿದೆ.

ಈ ತಿಂಗಳ ಆರಂಭದಲ್ಲಿ ಮುಂಬೈ ಪೊಲೀಸರು ಈ ಹಗರಣವನ್ನು ಬೆಳಕಿಗೆ ತಂದಿದ್ದಾರೆ. ನಕಲಿ ರೇಟಿಂಗ್ ಹಗರಣದ ಆರಂಭಿಕ ತನಿಖೆಯಲ್ಲಿ ಹೊರಹೊಮ್ಮಿದ ದೊಡ್ಡ ಹೆಸರು ರಿಪಬ್ಲಿಕ್ ಟಿವಿ. ವೀಕ್ಷಕರು ಕಾರ್ಯಕ್ರಮ ವೀಕ್ಷಿಸದಿದ್ದರೂ ಸಹ ಚಾನೆಲ್ ಆನ್‌ನಲ್ಲಿ ಇರಿಸಿಕೊಳ್ಳಲು ಅವರಿಗೆ ಹಣ ನೀಡಲಾಗಿದೆ ಎಂದು ಹೇಳಲಾಗಿತ್ತು.

ಹಗರಣಕ್ಕೆ ಸಂಬಂಧಿಸಿದಂತೆ ಈವರೆಗೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಟಿವಿಗಳು ಜಾಹೀರಾತುಗಳನ್ನು ಪಡೆಯುವಲ್ಲಿ ಈ ರೇಟಿಂಗ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ. ರೇಟಿಂಗ್ ಆಧಾರದಲ್ಲಿಯೇ ಜಾಹೀರಾತುದಾರರು ಜಾಹೀರಾತು ನೀಡುತ್ತಾರೆ.

ಇದನ್ನೂ ಓದಿ: TRP ಹಗರಣ: ಎಲ್ಲರಂತೆ ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ, ರಿಪಬ್ಲಿಕ್ ಅರ್ನಾಬ್‌ಗೆ ಮುಖಭಂಗ!

ARG ಔಟ್‌ಲಿಯರ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ರಿಪಬ್ಲಿಕ್ ಟಿವಿ ಮತ್ತು ಅದರ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ವಿರುದ್ಧ ಮುಂಬೈ ಪೊಲೀಸರು ಸಲ್ಲಿಸಿದ್ದ ದಾಖಲಿಸಿದ್ದ ಎಫ್‌ಐಆರ್ ವಿರುದ್ಧ ಕಳೆದ ವಾರ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ರಿಪಬ್ಲಿಕ್ ಟಿವಿ, ಅದರ ಹಿರಿಯ ಅಧಿಕಾರಿಗಳ ವಿರುದ್ಧ ಮತ್ತು ಇತರ ಎರಡು ಸ್ಥಳೀಯ ಪ್ರಾದೇಶಿಕ ಚಾನೆಲ್‌ಗಳ ವಿರುದ್ಧ ಮುಂಬೈ ಅಪರಾಧ ವಿಭಾಗವು ಈ ಹಿಂದೆ ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿತ್ತು.

ಇನ್ನೂ ಈ ಪ್ರಕರಣದಲ್ಲಿ ಟಿಆರ್‌ಪಿ ತಿರುಚಿರುವ ಆರೋಪದ ನಡುವೆ ತನಿಖೆ ನಡೆಯುತ್ತಿರುವ ಕಾರಣ ಮೂರು ತಿಂಗಳವರೆಗೆ ಸುದ್ದಿ ಚಾನೆಲ್‌ಗಳಿಗೆ ಸಾಪ್ತಾಹಿಕ ರೇಟಿಂಗ್‌ ನೀಡದಿಲು ನಿರ್ಧರಿಸಲಾಗಿದೆ ಎಂದು ಟೆಲಿವಿಷನ್ ರೇಟಿಂಗ್ ಏಜೆನ್ಸಿ BARC (Broadcast Audience Research Council) ತಿಳಿಸಿದೆ.


ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...