Homeಮುಖಪುಟಇಂದು ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಕುರಿತು ಇಂದ್ರಾಣಿ ಮುಖರ್ಜಿ ವಿಚಾರಣೆ

ಇಂದು ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಕುರಿತು ಇಂದ್ರಾಣಿ ಮುಖರ್ಜಿ ವಿಚಾರಣೆ

- Advertisement -
- Advertisement -

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳನ್ನು ಹತ್ಯೆ ಮಾಡಿದ ಆರೋಪದಡಿ ಜೈಲಿನಲ್ಲಿರುವ ಇಂದ್ರಾಣಿ ಮುಖರ್ಜಿ ಅವರನ್ನು ಪ್ರಶ್ನಿಸಲು ಸಿಬಿಐಗೆ ವಿಶೇಷ ನ್ಯಾಯಾಲಯ ಸೋಮವಾರ ಅನುಮತಿ ನೀಡಿದೆ. ಇದೇ ಪ್ರಕರಣದಲ್ಲಿ ಕೇಂದ್ರ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಈಗಾಗಲೇ ಬಂಧಿಸಲಾಗಿದೆ.

ಮಗಳ ಕೊಲೆ ಪ್ರಕರಣದ ಸಹ ಆರೋಪಿಗಳಾದ ಇಂದ್ರಾಣಿ ಮುಖರ್ಜಿ ಮತ್ತು ಅವರ ಪತಿ ಪೀಟರ್ ಮುಖರ್ಜಿ ಐಎನ್‌ಎಕ್ಸ್ ಮೀಡಿಯಾ ಗ್ರೂಪ್‌ನ ಮಾಜಿ ಪ್ರವರ್ತಕರಾಗಿದ್ದಾರೆ. ಚಿದಂಬರಂ ಮತ್ತು ಅವರ ಮಗ ಕಾರ್ತಿ ವಿರುದ್ಧ ಇಂದ್ರಾಣಿ ಮುಖರ್ಜಿ ಅವರು ತಪ್ಪೊಪ್ಪಿಗೆಯ ಹೇಳಿಕೆಯನ್ನು ದಾಖಲಿಸಿದ್ದರು. ನಂತರ ಅವರನ್ನು ಸದರಿ ಪ್ರಕರಣದಲ್ಲಿ ಅನುಮೋದಕರೆಂದು ಘೋಷಿಸಲಾಗಿದೆ.

ಭ್ರಷ್ಟಾಚಾರ ಪ್ರಕರಣದ ಭಾಗವಾಗಿ ಕೆಲವು ಹಣಕಾಸಿನ ವಹಿವಾಟುಗಳ ಬಗ್ಗೆ ಸ್ಪಷ್ಟತೆ ಬೇಕು ಎಂದು ಇಂದ್ರಾನಿ ಮುಖರ್ಜಿ ಅವರನ್ನು ಪ್ರಶ್ನಿಸಲು ಕೇಂದ್ರೀಯ ತನಿಖಾ ದಳ ಸೋಮವಾರ ನ್ಯಾಯಾಲಯದ ಅನುಮತಿಯನ್ನು ಕೋರಿತ್ತು. ವಿಶೇಷ ಸಿಬಿಐ ನ್ಯಾಯಾಧೀಶ ಜೆ ಸಿ ಜಗ್ಡೇಲ್ ಅವರು ನಗರದ ಬೈಕುಲ್ಲಾ ಜೈಲಿನೊಳಗೆ ಇಂದ್ರಾಣಿ ಮುಖರ್ಜಿ ಅವರನ್ನು ಪ್ರಶ್ನಿಸಲು ಕೇಂದ್ರ ಏಜೆನ್ಸಿಗೆ ಅನುಮತಿ ನೀಡಿದರು. ಅಲ್ಲಿ ಅವರ ಮಗಳು ಶೀನಾ ಬೋರಾ ಅವರ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

47 ವರ್ಷದ ಮಾಜಿ ಮಾಧ್ಯಮ ಕಾರ್ಯನಿರ್ವಾಹಕಿ ಇಂದ್ರಾಣಿಯನ್ನು ಇಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ರ ನಡುವೆ ಪ್ರಶ್ನಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಅವರನ್ನು ಆಗಸ್ಟ್ 21 ರಂದು ಸಿಬಿಐ ಬಂಧಿಸಿತ್ತು. ಕಾಂಗ್ರೆಸ್ ನಾಯಕನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿಡಲಾಗಿದೆ.

ಇಂದ್ರಾಣಿ ಮುಖರ್ಜಿ ಅವರು ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು, ಅವರು ಮತ್ತು ಅವರ ಪತಿ ಸೇರಿ  ದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ಕಚೇರಿಯಲ್ಲಿ ಚಿದಂಬರಂ ಅವರನ್ನು ಹಣಕಾಸು ಸಚಿವರಾಗಿದ್ದಾಗ ಭೇಟಿಯಾಗಿದ್ದರು ಎಂದು ಆರೋಪಿಸಲಾಗಿದೆ.

ತನ್ನ ಮಗ ಕಾರ್ತಿಗೆ ವ್ಯವಹಾರದಲ್ಲಿ ನೀವು ಸಹಾಯ ಮಾಡಿದರೆ ನಿಮ್ಮ ಐಎನ್‌ಎಕ್ಸ್ ಮೀಡಿಯಾಕ್ಕೆ ವಿದೇಶಿ ಹೂಡಿಕೆಗೆ ಅನುಮೋದನೆ ನೀಡುತ್ತೇವೆ ಎಂದು ಚಿದಂಬರಂ ಹೇಳಿದ್ದರು ಎಂದು ಇಂದ್ರಾಣಿ ಹೇಳಿಕೊಂಡಿದ್ದಾಳೆ.

ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ 305 ಕೋಟಿ ರೂ.ಗಳ ವಿದೇಶಿ ಹಣವನ್ನು ಪಡೆದಿದ್ದಕ್ಕಾಗಿ ಐಎನ್‌ಎಕ್ಸ್ ಮೀಡಿಯಾ ಗ್ರೂಪ್‌ಗೆ ನೀಡಿದ್ದ ಎಫ್‌ಐಪಿಬಿ ಕ್ಲಿಯರೆನ್ಸ್‌ನಲ್ಲಿನ ಅಕ್ರಮಗಳ ಆರೋಪದಲ್ಲಿ ಸಿಬಿಐ 2017 ರ ಮೇ 15 ರಂದು ಎಫ್‌ಐಆರ್ ದಾಖಲಿಸಿದೆ. ಇದಾದ ನಂತರ ಇ.ಡಿ ಈ ನಿಟ್ಟಿನಲ್ಲಿ 2018 ರಲ್ಲಿ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿದೆ.

73 ವರ್ಷದ ಚಿದಂಬರಂ ಮತ್ತು ಅವರ ಮಗ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. ಚಿದಂಬರಂ ವಿರುದ್ಧ ತನಿಖಾ ಸಂಸ್ಥೆಗಳ ಕ್ರಮವನ್ನು “ರಾಜಕೀಯ ಪ್ರೇರಿತ” ಎಂದು ಕಾಂಗ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...