Homeಮುಖಪುಟಇಂದು ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಕುರಿತು ಇಂದ್ರಾಣಿ ಮುಖರ್ಜಿ ವಿಚಾರಣೆ

ಇಂದು ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಕುರಿತು ಇಂದ್ರಾಣಿ ಮುಖರ್ಜಿ ವಿಚಾರಣೆ

- Advertisement -
- Advertisement -

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳನ್ನು ಹತ್ಯೆ ಮಾಡಿದ ಆರೋಪದಡಿ ಜೈಲಿನಲ್ಲಿರುವ ಇಂದ್ರಾಣಿ ಮುಖರ್ಜಿ ಅವರನ್ನು ಪ್ರಶ್ನಿಸಲು ಸಿಬಿಐಗೆ ವಿಶೇಷ ನ್ಯಾಯಾಲಯ ಸೋಮವಾರ ಅನುಮತಿ ನೀಡಿದೆ. ಇದೇ ಪ್ರಕರಣದಲ್ಲಿ ಕೇಂದ್ರ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಈಗಾಗಲೇ ಬಂಧಿಸಲಾಗಿದೆ.

ಮಗಳ ಕೊಲೆ ಪ್ರಕರಣದ ಸಹ ಆರೋಪಿಗಳಾದ ಇಂದ್ರಾಣಿ ಮುಖರ್ಜಿ ಮತ್ತು ಅವರ ಪತಿ ಪೀಟರ್ ಮುಖರ್ಜಿ ಐಎನ್‌ಎಕ್ಸ್ ಮೀಡಿಯಾ ಗ್ರೂಪ್‌ನ ಮಾಜಿ ಪ್ರವರ್ತಕರಾಗಿದ್ದಾರೆ. ಚಿದಂಬರಂ ಮತ್ತು ಅವರ ಮಗ ಕಾರ್ತಿ ವಿರುದ್ಧ ಇಂದ್ರಾಣಿ ಮುಖರ್ಜಿ ಅವರು ತಪ್ಪೊಪ್ಪಿಗೆಯ ಹೇಳಿಕೆಯನ್ನು ದಾಖಲಿಸಿದ್ದರು. ನಂತರ ಅವರನ್ನು ಸದರಿ ಪ್ರಕರಣದಲ್ಲಿ ಅನುಮೋದಕರೆಂದು ಘೋಷಿಸಲಾಗಿದೆ.

ಭ್ರಷ್ಟಾಚಾರ ಪ್ರಕರಣದ ಭಾಗವಾಗಿ ಕೆಲವು ಹಣಕಾಸಿನ ವಹಿವಾಟುಗಳ ಬಗ್ಗೆ ಸ್ಪಷ್ಟತೆ ಬೇಕು ಎಂದು ಇಂದ್ರಾನಿ ಮುಖರ್ಜಿ ಅವರನ್ನು ಪ್ರಶ್ನಿಸಲು ಕೇಂದ್ರೀಯ ತನಿಖಾ ದಳ ಸೋಮವಾರ ನ್ಯಾಯಾಲಯದ ಅನುಮತಿಯನ್ನು ಕೋರಿತ್ತು. ವಿಶೇಷ ಸಿಬಿಐ ನ್ಯಾಯಾಧೀಶ ಜೆ ಸಿ ಜಗ್ಡೇಲ್ ಅವರು ನಗರದ ಬೈಕುಲ್ಲಾ ಜೈಲಿನೊಳಗೆ ಇಂದ್ರಾಣಿ ಮುಖರ್ಜಿ ಅವರನ್ನು ಪ್ರಶ್ನಿಸಲು ಕೇಂದ್ರ ಏಜೆನ್ಸಿಗೆ ಅನುಮತಿ ನೀಡಿದರು. ಅಲ್ಲಿ ಅವರ ಮಗಳು ಶೀನಾ ಬೋರಾ ಅವರ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

47 ವರ್ಷದ ಮಾಜಿ ಮಾಧ್ಯಮ ಕಾರ್ಯನಿರ್ವಾಹಕಿ ಇಂದ್ರಾಣಿಯನ್ನು ಇಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ರ ನಡುವೆ ಪ್ರಶ್ನಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಅವರನ್ನು ಆಗಸ್ಟ್ 21 ರಂದು ಸಿಬಿಐ ಬಂಧಿಸಿತ್ತು. ಕಾಂಗ್ರೆಸ್ ನಾಯಕನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿಡಲಾಗಿದೆ.

ಇಂದ್ರಾಣಿ ಮುಖರ್ಜಿ ಅವರು ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು, ಅವರು ಮತ್ತು ಅವರ ಪತಿ ಸೇರಿ  ದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ಕಚೇರಿಯಲ್ಲಿ ಚಿದಂಬರಂ ಅವರನ್ನು ಹಣಕಾಸು ಸಚಿವರಾಗಿದ್ದಾಗ ಭೇಟಿಯಾಗಿದ್ದರು ಎಂದು ಆರೋಪಿಸಲಾಗಿದೆ.

ತನ್ನ ಮಗ ಕಾರ್ತಿಗೆ ವ್ಯವಹಾರದಲ್ಲಿ ನೀವು ಸಹಾಯ ಮಾಡಿದರೆ ನಿಮ್ಮ ಐಎನ್‌ಎಕ್ಸ್ ಮೀಡಿಯಾಕ್ಕೆ ವಿದೇಶಿ ಹೂಡಿಕೆಗೆ ಅನುಮೋದನೆ ನೀಡುತ್ತೇವೆ ಎಂದು ಚಿದಂಬರಂ ಹೇಳಿದ್ದರು ಎಂದು ಇಂದ್ರಾಣಿ ಹೇಳಿಕೊಂಡಿದ್ದಾಳೆ.

ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ 305 ಕೋಟಿ ರೂ.ಗಳ ವಿದೇಶಿ ಹಣವನ್ನು ಪಡೆದಿದ್ದಕ್ಕಾಗಿ ಐಎನ್‌ಎಕ್ಸ್ ಮೀಡಿಯಾ ಗ್ರೂಪ್‌ಗೆ ನೀಡಿದ್ದ ಎಫ್‌ಐಪಿಬಿ ಕ್ಲಿಯರೆನ್ಸ್‌ನಲ್ಲಿನ ಅಕ್ರಮಗಳ ಆರೋಪದಲ್ಲಿ ಸಿಬಿಐ 2017 ರ ಮೇ 15 ರಂದು ಎಫ್‌ಐಆರ್ ದಾಖಲಿಸಿದೆ. ಇದಾದ ನಂತರ ಇ.ಡಿ ಈ ನಿಟ್ಟಿನಲ್ಲಿ 2018 ರಲ್ಲಿ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿದೆ.

73 ವರ್ಷದ ಚಿದಂಬರಂ ಮತ್ತು ಅವರ ಮಗ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. ಚಿದಂಬರಂ ವಿರುದ್ಧ ತನಿಖಾ ಸಂಸ್ಥೆಗಳ ಕ್ರಮವನ್ನು “ರಾಜಕೀಯ ಪ್ರೇರಿತ” ಎಂದು ಕಾಂಗ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...