Homeಮುಖಪುಟಇಂದು ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಕುರಿತು ಇಂದ್ರಾಣಿ ಮುಖರ್ಜಿ ವಿಚಾರಣೆ

ಇಂದು ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಕುರಿತು ಇಂದ್ರಾಣಿ ಮುಖರ್ಜಿ ವಿಚಾರಣೆ

- Advertisement -
- Advertisement -

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳನ್ನು ಹತ್ಯೆ ಮಾಡಿದ ಆರೋಪದಡಿ ಜೈಲಿನಲ್ಲಿರುವ ಇಂದ್ರಾಣಿ ಮುಖರ್ಜಿ ಅವರನ್ನು ಪ್ರಶ್ನಿಸಲು ಸಿಬಿಐಗೆ ವಿಶೇಷ ನ್ಯಾಯಾಲಯ ಸೋಮವಾರ ಅನುಮತಿ ನೀಡಿದೆ. ಇದೇ ಪ್ರಕರಣದಲ್ಲಿ ಕೇಂದ್ರ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಈಗಾಗಲೇ ಬಂಧಿಸಲಾಗಿದೆ.

ಮಗಳ ಕೊಲೆ ಪ್ರಕರಣದ ಸಹ ಆರೋಪಿಗಳಾದ ಇಂದ್ರಾಣಿ ಮುಖರ್ಜಿ ಮತ್ತು ಅವರ ಪತಿ ಪೀಟರ್ ಮುಖರ್ಜಿ ಐಎನ್‌ಎಕ್ಸ್ ಮೀಡಿಯಾ ಗ್ರೂಪ್‌ನ ಮಾಜಿ ಪ್ರವರ್ತಕರಾಗಿದ್ದಾರೆ. ಚಿದಂಬರಂ ಮತ್ತು ಅವರ ಮಗ ಕಾರ್ತಿ ವಿರುದ್ಧ ಇಂದ್ರಾಣಿ ಮುಖರ್ಜಿ ಅವರು ತಪ್ಪೊಪ್ಪಿಗೆಯ ಹೇಳಿಕೆಯನ್ನು ದಾಖಲಿಸಿದ್ದರು. ನಂತರ ಅವರನ್ನು ಸದರಿ ಪ್ರಕರಣದಲ್ಲಿ ಅನುಮೋದಕರೆಂದು ಘೋಷಿಸಲಾಗಿದೆ.

ಭ್ರಷ್ಟಾಚಾರ ಪ್ರಕರಣದ ಭಾಗವಾಗಿ ಕೆಲವು ಹಣಕಾಸಿನ ವಹಿವಾಟುಗಳ ಬಗ್ಗೆ ಸ್ಪಷ್ಟತೆ ಬೇಕು ಎಂದು ಇಂದ್ರಾನಿ ಮುಖರ್ಜಿ ಅವರನ್ನು ಪ್ರಶ್ನಿಸಲು ಕೇಂದ್ರೀಯ ತನಿಖಾ ದಳ ಸೋಮವಾರ ನ್ಯಾಯಾಲಯದ ಅನುಮತಿಯನ್ನು ಕೋರಿತ್ತು. ವಿಶೇಷ ಸಿಬಿಐ ನ್ಯಾಯಾಧೀಶ ಜೆ ಸಿ ಜಗ್ಡೇಲ್ ಅವರು ನಗರದ ಬೈಕುಲ್ಲಾ ಜೈಲಿನೊಳಗೆ ಇಂದ್ರಾಣಿ ಮುಖರ್ಜಿ ಅವರನ್ನು ಪ್ರಶ್ನಿಸಲು ಕೇಂದ್ರ ಏಜೆನ್ಸಿಗೆ ಅನುಮತಿ ನೀಡಿದರು. ಅಲ್ಲಿ ಅವರ ಮಗಳು ಶೀನಾ ಬೋರಾ ಅವರ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

47 ವರ್ಷದ ಮಾಜಿ ಮಾಧ್ಯಮ ಕಾರ್ಯನಿರ್ವಾಹಕಿ ಇಂದ್ರಾಣಿಯನ್ನು ಇಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ರ ನಡುವೆ ಪ್ರಶ್ನಿಸಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಅವರನ್ನು ಆಗಸ್ಟ್ 21 ರಂದು ಸಿಬಿಐ ಬಂಧಿಸಿತ್ತು. ಕಾಂಗ್ರೆಸ್ ನಾಯಕನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿಡಲಾಗಿದೆ.

ಇಂದ್ರಾಣಿ ಮುಖರ್ಜಿ ಅವರು ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು, ಅವರು ಮತ್ತು ಅವರ ಪತಿ ಸೇರಿ  ದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ಕಚೇರಿಯಲ್ಲಿ ಚಿದಂಬರಂ ಅವರನ್ನು ಹಣಕಾಸು ಸಚಿವರಾಗಿದ್ದಾಗ ಭೇಟಿಯಾಗಿದ್ದರು ಎಂದು ಆರೋಪಿಸಲಾಗಿದೆ.

ತನ್ನ ಮಗ ಕಾರ್ತಿಗೆ ವ್ಯವಹಾರದಲ್ಲಿ ನೀವು ಸಹಾಯ ಮಾಡಿದರೆ ನಿಮ್ಮ ಐಎನ್‌ಎಕ್ಸ್ ಮೀಡಿಯಾಕ್ಕೆ ವಿದೇಶಿ ಹೂಡಿಕೆಗೆ ಅನುಮೋದನೆ ನೀಡುತ್ತೇವೆ ಎಂದು ಚಿದಂಬರಂ ಹೇಳಿದ್ದರು ಎಂದು ಇಂದ್ರಾಣಿ ಹೇಳಿಕೊಂಡಿದ್ದಾಳೆ.

ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ 305 ಕೋಟಿ ರೂ.ಗಳ ವಿದೇಶಿ ಹಣವನ್ನು ಪಡೆದಿದ್ದಕ್ಕಾಗಿ ಐಎನ್‌ಎಕ್ಸ್ ಮೀಡಿಯಾ ಗ್ರೂಪ್‌ಗೆ ನೀಡಿದ್ದ ಎಫ್‌ಐಪಿಬಿ ಕ್ಲಿಯರೆನ್ಸ್‌ನಲ್ಲಿನ ಅಕ್ರಮಗಳ ಆರೋಪದಲ್ಲಿ ಸಿಬಿಐ 2017 ರ ಮೇ 15 ರಂದು ಎಫ್‌ಐಆರ್ ದಾಖಲಿಸಿದೆ. ಇದಾದ ನಂತರ ಇ.ಡಿ ಈ ನಿಟ್ಟಿನಲ್ಲಿ 2018 ರಲ್ಲಿ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿದೆ.

73 ವರ್ಷದ ಚಿದಂಬರಂ ಮತ್ತು ಅವರ ಮಗ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. ಚಿದಂಬರಂ ವಿರುದ್ಧ ತನಿಖಾ ಸಂಸ್ಥೆಗಳ ಕ್ರಮವನ್ನು “ರಾಜಕೀಯ ಪ್ರೇರಿತ” ಎಂದು ಕಾಂಗ್ರೆಸ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...