Homeಕರ್ನಾಟಕಉನ್ನಾವೊ ಸಂತ್ರಸ್ತರಿಗೆ ನಾಳೆಯೊಳಗೆ ಯುಪಿ ಸರ್ಕಾರ 25 ಲಕ್ಷ ಪರಿಹಾರ ಕೊಡಬೇಕು: ಸುಪ್ರೀಂ ಆದೇಶ

ಉನ್ನಾವೊ ಸಂತ್ರಸ್ತರಿಗೆ ನಾಳೆಯೊಳಗೆ ಯುಪಿ ಸರ್ಕಾರ 25 ಲಕ್ಷ ಪರಿಹಾರ ಕೊಡಬೇಕು: ಸುಪ್ರೀಂ ಆದೇಶ

- Advertisement -
- Advertisement -

ಉನ್ನಾವೊ ಸಂತ್ರಸ್ತ ಕುಟುಂಬಕ್ಕೆ ನಾಳೆಯೊಳಗೆ ಉತ್ತರ ಪ್ರದೇಶ ಸರ್ಕಾರ 25 ಲಕ್ಷ ಪರಿಹಾರ ಕೊಡಬೇಕೆಂದು ಇಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಅಲ್ಲದೇ ಸಂತ್ರಸ್ತೆಯ ಕಾರು ಅಪಘಾತದ ತನಿಖೆಯನ್ನು ಒಂದು ವಾರದೊಳಗೆ ಮುಗಿಸಬೇಕೆಂದು, ಅತ್ಯಾಚಾರದ ತನಿಖೆಯನ್ನು 45 ದಿನದಲ್ಲಿ ಮುಗಿಸಬೇಕೆಂದು ಸಿಬಿಐಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಿದೆ.

ರಂಜನ್ ಗಗೋಯಿ ನೇತೃತ್ವದ ಪೀಠ ಇಂದು ಸುಪ್ರೀಂ ಕೋರ್ಟ್ ನಲ್ಲಿ ಧೀರ್ಘ ವಿಚಾರಣೆ ನಡೆಸಿತು. ಸಿಬಿಐ ಪರ ವಕೀಲ ತುಷಾರ್ ಮೆಹ್ತಾ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಬೇಕೆಂಬ ಮನವಿಯನ್ನು ತಳ್ಳಿ ಹಾಕಿ ಫೋನ್ ಮೂಲಕ ಮಾಹಿತಿ ಪಡೆದು ಇಂದೇ ಮಾಹಿತಿ ಒದಗಿಸುವಂತೆ ತಾಕೀತು ಮಾಡಿತು.

ಉನ್ನಾವೊ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ 5 ಪ್ರಕರಣಗಳನ್ನು ಉತ್ತರ ಪ್ರದೇಶದಿಂದ ದೆಹಲಿಗೆ ವರ್ಗಾವಣೆ ಮಾಡಬೇಕೆಂದು ಕೋರ್ಟ್ ಸೂಚಿಸಿದೆ. 2017ರಲ್ಲಿ ಸಂತ್ರಸ್ತೆ ಕೆಲಸ ಮುಗಿಸಿ ಬರುವಾಗ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ನಿಂದ ಲೈಂಗಿಕ ದೌರ್ಜನ್ಯವಾಗಿದೆಯೆಂದು ದೂರಿದ್ದಳು.

ಅಂದಿನಿಂದ ಆಕೆಯ ಮತ್ತು ಆಕೆಯ ಕುಟುಂಬದ ಮೇಲೆ ನಿರಂತರ ದೌರ್ಜನ್ಯ ನಡೆದಿದೆ. ಆಕೆಯ ತಂದೆಯನ್ನು ಕಾನೂನುಬಾಹಿರವಾಗಿ ಶಶಸ್ತ್ರ ಹೊಂದಿದರೆಂಬ ಆರೋಪದಿಂದ ಬಂಧಿಸಲಾಗಿತ್ತು. ಅದಕ್ಕೂ ಮೊದಲು ಅವರಿಗೆ ಶಾಸಕನ ತಮ್ಮ ಅತುಲ್ ಸೆಂಗಾರ್ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ತದನಂತರ ಸಂತ್ರಸ್ತೆಯ ತಂದೆ ಜೈಲಿನಲ್ಲಿಯೇ ಅನುಮಾನಸ್ಪದವಾಗಿ ಸಾವನಪ್ಪಿದ್ದರು. ಭಾನುವಾರ ಸಂತ್ರಸ್ತೆಯು ಉನ್ನಾವೊ ದಿಂದ ಪ್ರಯಾಣಿಸುತ್ತಿರುವಾಗ ರಾಯ್ ಬರೇಲಿಯಲ್ಲಿ ಆಕೆಯ ಕಾರಿಗೆ ಅಪಘಾತವಾಗಿದ್ದು ಆಕೆಯ ಇಬ್ಬರು ಚಿಕ್ಕಮ್ಮಂದಿರು ಸಾವನಪ್ಪಿದ್ದಾರೆ. ಆಕೆಯು ಸಹ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾಳೆ.

ಇಲ್ಲಿ ಪೊಲೀಸರ ಪಕ್ಷಪಾತಿತನ, ಅಧಿಕಾರಿಗಳ ನಿರ್ಲಕ್ಷ್ಯ, ಶಾಸಕನ ಹಣಬಲದಿಂದ ಆರೋಪವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಕುರಿತು ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

” ಉನ್ನಾವೊ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಡೆ ಸಮಾಧಾನ ತಂದಿದೆ. ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಿರುವುದು, ಅಪಘಾತದ ವಿಚಾರಣೆಯನ್ನು ಒಂದು ವಾರದಲ್ಲಿ, ಅತ್ಯಾಚಾರದ ತನಿಖೆಯನ್ನು ನಲವತ್ತೈದು ದಿನಗಳಲ್ಲಿ ಮುಕ್ತಾಯ ಮಾಡುವುದು…ಎಲ್ಲವೂ. ಆದರೆ ಇವೆಲ್ಲಾ ಆಗೋಕೆ ಆಕೆ ತಂದೆಯನ್ನೂ, ತನ್ನ ಚಿಕ್ಕಮ್ಮಂದಿರಿಬ್ಬರನ್ನೂ ಕಳೆದುಕೊಂಡು ತಾನೂ ಕೋಮಾಗೆ ತಲುಪಬೇಕಾಯ್ತು ಎನ್ನುವುದು ದಿಗಿಲು ಹುಟ್ಟಿಸುವ ಸಂಗತಿ.
ನಮ್ಮ ರಾಜ್ಯದ ಅತೃಪ್ತರೆಂದು ಕರೆದುಕೊಳ್ಳುವ ಶಾಸಕರು ತಮ್ಮ ರಾಜೀನಾಮೆ ಸ್ವೀಕರಿಸುತ್ತಿಲ್ಲವೆಂದು ದಿನಕ್ಕೆರಡು ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟುವುದು‌ ಕೂಡ ದಿಗಿಲಿನ ಮತ್ತೊಂದು ತುದಿ!” ಎಂದು ರೋಹಿತ್ ಅಗಸರಹಳ್ಳಿ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಉನ್ನಾವ್ ರೇಪ್ ಕೇಸ್ – ಬಿಜೆಪಿಯಿಂದ ಆರೋಪಿ ಶಾಸಕ ಕುಲದೀಪ್ ಸಿಂಗ್ ಉಚ್ಛಾಟನೆ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...