Homeಕರ್ನಾಟಕಉನ್ನಾವೊ ಸಂತ್ರಸ್ತರಿಗೆ ನಾಳೆಯೊಳಗೆ ಯುಪಿ ಸರ್ಕಾರ 25 ಲಕ್ಷ ಪರಿಹಾರ ಕೊಡಬೇಕು: ಸುಪ್ರೀಂ ಆದೇಶ

ಉನ್ನಾವೊ ಸಂತ್ರಸ್ತರಿಗೆ ನಾಳೆಯೊಳಗೆ ಯುಪಿ ಸರ್ಕಾರ 25 ಲಕ್ಷ ಪರಿಹಾರ ಕೊಡಬೇಕು: ಸುಪ್ರೀಂ ಆದೇಶ

- Advertisement -
- Advertisement -

ಉನ್ನಾವೊ ಸಂತ್ರಸ್ತ ಕುಟುಂಬಕ್ಕೆ ನಾಳೆಯೊಳಗೆ ಉತ್ತರ ಪ್ರದೇಶ ಸರ್ಕಾರ 25 ಲಕ್ಷ ಪರಿಹಾರ ಕೊಡಬೇಕೆಂದು ಇಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಅಲ್ಲದೇ ಸಂತ್ರಸ್ತೆಯ ಕಾರು ಅಪಘಾತದ ತನಿಖೆಯನ್ನು ಒಂದು ವಾರದೊಳಗೆ ಮುಗಿಸಬೇಕೆಂದು, ಅತ್ಯಾಚಾರದ ತನಿಖೆಯನ್ನು 45 ದಿನದಲ್ಲಿ ಮುಗಿಸಬೇಕೆಂದು ಸಿಬಿಐಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಿದೆ.

ರಂಜನ್ ಗಗೋಯಿ ನೇತೃತ್ವದ ಪೀಠ ಇಂದು ಸುಪ್ರೀಂ ಕೋರ್ಟ್ ನಲ್ಲಿ ಧೀರ್ಘ ವಿಚಾರಣೆ ನಡೆಸಿತು. ಸಿಬಿಐ ಪರ ವಕೀಲ ತುಷಾರ್ ಮೆಹ್ತಾ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಬೇಕೆಂಬ ಮನವಿಯನ್ನು ತಳ್ಳಿ ಹಾಕಿ ಫೋನ್ ಮೂಲಕ ಮಾಹಿತಿ ಪಡೆದು ಇಂದೇ ಮಾಹಿತಿ ಒದಗಿಸುವಂತೆ ತಾಕೀತು ಮಾಡಿತು.

ಉನ್ನಾವೊ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ 5 ಪ್ರಕರಣಗಳನ್ನು ಉತ್ತರ ಪ್ರದೇಶದಿಂದ ದೆಹಲಿಗೆ ವರ್ಗಾವಣೆ ಮಾಡಬೇಕೆಂದು ಕೋರ್ಟ್ ಸೂಚಿಸಿದೆ. 2017ರಲ್ಲಿ ಸಂತ್ರಸ್ತೆ ಕೆಲಸ ಮುಗಿಸಿ ಬರುವಾಗ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ನಿಂದ ಲೈಂಗಿಕ ದೌರ್ಜನ್ಯವಾಗಿದೆಯೆಂದು ದೂರಿದ್ದಳು.

ಅಂದಿನಿಂದ ಆಕೆಯ ಮತ್ತು ಆಕೆಯ ಕುಟುಂಬದ ಮೇಲೆ ನಿರಂತರ ದೌರ್ಜನ್ಯ ನಡೆದಿದೆ. ಆಕೆಯ ತಂದೆಯನ್ನು ಕಾನೂನುಬಾಹಿರವಾಗಿ ಶಶಸ್ತ್ರ ಹೊಂದಿದರೆಂಬ ಆರೋಪದಿಂದ ಬಂಧಿಸಲಾಗಿತ್ತು. ಅದಕ್ಕೂ ಮೊದಲು ಅವರಿಗೆ ಶಾಸಕನ ತಮ್ಮ ಅತುಲ್ ಸೆಂಗಾರ್ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ತದನಂತರ ಸಂತ್ರಸ್ತೆಯ ತಂದೆ ಜೈಲಿನಲ್ಲಿಯೇ ಅನುಮಾನಸ್ಪದವಾಗಿ ಸಾವನಪ್ಪಿದ್ದರು. ಭಾನುವಾರ ಸಂತ್ರಸ್ತೆಯು ಉನ್ನಾವೊ ದಿಂದ ಪ್ರಯಾಣಿಸುತ್ತಿರುವಾಗ ರಾಯ್ ಬರೇಲಿಯಲ್ಲಿ ಆಕೆಯ ಕಾರಿಗೆ ಅಪಘಾತವಾಗಿದ್ದು ಆಕೆಯ ಇಬ್ಬರು ಚಿಕ್ಕಮ್ಮಂದಿರು ಸಾವನಪ್ಪಿದ್ದಾರೆ. ಆಕೆಯು ಸಹ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾಳೆ.

ಇಲ್ಲಿ ಪೊಲೀಸರ ಪಕ್ಷಪಾತಿತನ, ಅಧಿಕಾರಿಗಳ ನಿರ್ಲಕ್ಷ್ಯ, ಶಾಸಕನ ಹಣಬಲದಿಂದ ಆರೋಪವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಕುರಿತು ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

” ಉನ್ನಾವೊ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಡೆ ಸಮಾಧಾನ ತಂದಿದೆ. ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಿರುವುದು, ಅಪಘಾತದ ವಿಚಾರಣೆಯನ್ನು ಒಂದು ವಾರದಲ್ಲಿ, ಅತ್ಯಾಚಾರದ ತನಿಖೆಯನ್ನು ನಲವತ್ತೈದು ದಿನಗಳಲ್ಲಿ ಮುಕ್ತಾಯ ಮಾಡುವುದು…ಎಲ್ಲವೂ. ಆದರೆ ಇವೆಲ್ಲಾ ಆಗೋಕೆ ಆಕೆ ತಂದೆಯನ್ನೂ, ತನ್ನ ಚಿಕ್ಕಮ್ಮಂದಿರಿಬ್ಬರನ್ನೂ ಕಳೆದುಕೊಂಡು ತಾನೂ ಕೋಮಾಗೆ ತಲುಪಬೇಕಾಯ್ತು ಎನ್ನುವುದು ದಿಗಿಲು ಹುಟ್ಟಿಸುವ ಸಂಗತಿ.
ನಮ್ಮ ರಾಜ್ಯದ ಅತೃಪ್ತರೆಂದು ಕರೆದುಕೊಳ್ಳುವ ಶಾಸಕರು ತಮ್ಮ ರಾಜೀನಾಮೆ ಸ್ವೀಕರಿಸುತ್ತಿಲ್ಲವೆಂದು ದಿನಕ್ಕೆರಡು ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟುವುದು‌ ಕೂಡ ದಿಗಿಲಿನ ಮತ್ತೊಂದು ತುದಿ!” ಎಂದು ರೋಹಿತ್ ಅಗಸರಹಳ್ಳಿ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಉನ್ನಾವ್ ರೇಪ್ ಕೇಸ್ – ಬಿಜೆಪಿಯಿಂದ ಆರೋಪಿ ಶಾಸಕ ಕುಲದೀಪ್ ಸಿಂಗ್ ಉಚ್ಛಾಟನೆ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...