Homeಮುಖಪುಟಸಿಬಿಎಸ್ಸಿ ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಕೇಂದ್ರಕ್ಕೆ ಪತ್ರ ಬರೆದ ಒಡಿಸ್ಸಾ ಸಿಎಂ ನವೀನ್ ಪಟ್ನಾಯಕ್,...

ಸಿಬಿಎಸ್ಸಿ ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಕೇಂದ್ರಕ್ಕೆ ಪತ್ರ ಬರೆದ ಒಡಿಸ್ಸಾ ಸಿಎಂ ನವೀನ್ ಪಟ್ನಾಯಕ್, ದನಿಗೂಡಿಸಿದ ಕೇಜ್ರಿವಾಲ್

- Advertisement -
- Advertisement -

ಸಿಬಿಎಸ್ಸಿ ಪರೀಕ್ಷಾ ಶುಲ್ಕ ಹೆಚ್ಚಳವನ್ನು ವಿರೋಧಿಸಿ ಒಡಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಯವರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ರಮೇಶ್ ಮೋಖ್ರಿಯಾಲ್ ನಿಶಾಂಕ್ ರವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹಮತ ವ್ಯಕ್ತಪಡಿಸಿ ದನಿಗೂಡಿಸಿದ್ದಾರೆ.

ಹಾಲಿ ಈ ಶಾಲೆಗಳಲ್ಲಿ ಸಾಮಾನ್ಯ ವಿದ್ಯಾರ್ಥಿಗಳು 750 ರೂ ಪಾವತಿಸುತ್ತಿದ್ದರೆ ಈಗ ಏಕಾಏಕಿ 1500ಕ್ಕೆ ಅಂದರೆ ಎರಡು ಪಟ್ಟು ಏರಿಸಲಾಗಿದೆ. ಇನ್ನು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು 50 ರೂ ಪಾವತಿಸುತ್ತಿದ್ದರೆ ಇನ್ನು ಮುಂದೆ 1200ಕ್ಕೆ ಅಂದರೆ ಇಪ್ಪಲ್ನಾಕ್ಕು ಪಟ್ಟು ಹೆಚ್ಚು ಮಾಡಲಾಗಿದೆ. ಅತ್ಯಂತ ಕಡಿಮೆ ಶುಲ್ಕದಲ್ಲಿ ಅತ್ಯುತ್ತಮ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ದ ಕೇಂದ್ರೀಯ ಶಾಲೆಗಳಲ್ಲಿನ ಈ ದುಬಾರಿ ಶುಲ್ಕ ಹೆಚ್ಚಳವು ಜನರಿಗೆ ದೊಡ್ಡ ಶಾಕ್ ಆಗಿದೆ.

ಇಷ್ಟು ದೊಡ್ಡ ಮಟ್ಟದಲ್ಲಿ ಶುಲ್ಕ ಹೆಚ್ಚಳ ಮಾಡಿರುವುದು ಅಸಹಜ ಏರಿಕೆಯಾಗಿದೆ, ಅದರಲ್ಲೂ ದಲಿತ ವಿದ್ಯಾರ್ಥಿಗಳ 24 ಪಟ್ಟು ಫೀಸು ಹೆಚ್ಚಳ ದೊಡ್ಡ ಶಾಕ್ ಆಗಿದೆ ಎಂದು ತಮ್ಮ ಪತ್ರದಲ್ಲಿ ನವೀನ್ ಪಟ್ನಾಯಕ್ ಉಲ್ಲೇಖಿಸಿದ್ದಾರೆ.

ನಿಮಗೆ ಗೊತ್ತಿರುವಂತೆ ಒಡಿಸ್ಸಾದ ಗ್ರಾಮೀಣ ಭಾಗಗಳಲ್ಲಿ ಸಿಬಿಎಸ್ಸಿ ಅಡಿಯಲ್ಲಿ 200 ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆದಿದ್ದೇವೆ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಮಕ್ಕಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಈ ಪ್ರಯತ್ನವನ್ನು ಸರ್ಕಾರದಿಂದ ಮಾಡಲಾಗಿದೆ. ಆದರೆ ಕೇಂದ್ರದ ಈ ಪರೀಕ್ಷಾ ಶುಲ್ಕ ಹೆಚ್ಚಳದಿಂದ ಆ ವಿದ್ಯಾರ್ಥಿಗಳು ತೊಂದರೆಗೊಳಗಲಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ಪರೀಕ್ಷಾ ಶುಲ್ಕ ಹೆಚ್ಚಳದ ತಮ್ಮ ನಿರ್ಧಾರವನ್ನು ಮರುಪರೀಶಿಲಿಸಬೇಕೆಂದು ಒತ್ತಾಯಿಸಿದ್ದಾರೆ.

ನೀವು ಈ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳುತ್ತೀರಿ ಮತ್ತು ಬಗೆಹರಿಸುತ್ತೀನೆಂದು ನಂಬಿದ್ದೇವೆ ಎಂದು ಪತ್ರವನ್ನು ಅಂತ್ಯಗೊಳಿಸಿದ್ದಾರೆ.

ಶಿಕ್ಷಣ ಎನ್ನುವುದು ಸೇವೆಯೇ ಹೊರತು ವ್ಯಾಪಾರವಲ್ಲ. ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವಂತೆ ನಮ್ಮ ಸಂವಿಧಾನವೂ ಹೇಳುತ್ತದೆ. ಆದರೆ ಕೇಂದ್ರ ಸರ್ಕಾರ ಈ ರೀತಿಯ ಕ್ರಮಗಳ ಮೂಲಕ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಹೆಸರು ಹಾಳುಗೆಡವಲು ಪ್ರಯತ್ನಿಸುತ್ತಿರುವುದು ಖಂಡನೀಯ. ಇದರಿಂದ ಬಡಮಕ್ಕಳು ತಮಗೆ ಸಿಗುತ್ತಿರುವ ಅತ್ಯುತ್ತಮ ಶಿಕ್ಷಣದಿಂದ ವಂಚಿತರಾಗುತ್ತಾರೆ. ಶಿಕ್ಷಣವನ್ನು ಬಂಡವಾಳ ಮಾಡಿಕೊಂಡು ಶಿಕ್ಷಣದ ವ್ಯಾಪಾರ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪೂರಕವಾದ ವಾತಾವರಣವನ್ನು ಕಲ್ಪಸಿಕೊಟ್ಟಂತಾಗುತ್ತದೆ. ಹಾಗಾಗಿ ಸರ್ಕಾರ ಈ ಕ್ರಮವನ್ನು ಹಿಂತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ತಿಳಿಸಿದೆ.

ಇಂದು ಶಿಕ್ಷಣಕ್ಕೆ ಉತ್ತೇಜನ ನೀಡುವ ಹಲವಾರು ಕ್ರಮಗಳ ನಂತರವೂ ಸಾವಿರಾರು ಮಕ್ಕಳು ಶಾಲೆಯಿಂದ ಹೊರಗುಳಿದಿರುವುದು ನಮಗೆಲ್ಲಾ ಗೊತ್ತೆ ಇದೆ. ಇಂತಹ ಸಂದರ್ಭದಲ್ಲಿ ಉಚಿತ ಮತ್ತು ಗುಣಮಟ್ಟದ ಶಿಕ್ಷಣವನ್ನು ಖಾತ್ರಿಗೊಳಿಸಬೇಕಾದ ಸರ್ಕಾರ ಮಕ್ಕಳ ಶುಲ್ಕವನ್ನು ಹೆಚ್ಚು ಮಾಡುತ್ತಿರುವುದು ಮತ್ತಷ್ಟು ಮಕ್ಕಳನ್ನು ಶಾಲೆಗಳಿಂದ ಹೊರದೂಡುತ್ತಿರುವುದನ್ನು ಯಾವುದೇ ಕಾರಣಗಳಿಂದಲೂ ಒಪ್ಪಲು ಸಾಧ್ಯವಿಲ್ಲ. ಬದಲಗೆ ಶುಲ್ಕವನ್ನು ಉಚಿತ ಮಾಡುವುದರ ಜೊತೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಕೇಂದ್ರೀಯ ಶಾಲೆಗಳ ಮಾದರಿಯ ಶಿಕ್ಷಣವನ್ನು ಜಾರಿಗೊಳಿಸಬೇಕೆಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...