Homeಮುಖಪುಟಸಿಬಿಎಸ್ಸಿ ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಕೇಂದ್ರಕ್ಕೆ ಪತ್ರ ಬರೆದ ಒಡಿಸ್ಸಾ ಸಿಎಂ ನವೀನ್ ಪಟ್ನಾಯಕ್,...

ಸಿಬಿಎಸ್ಸಿ ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಕೇಂದ್ರಕ್ಕೆ ಪತ್ರ ಬರೆದ ಒಡಿಸ್ಸಾ ಸಿಎಂ ನವೀನ್ ಪಟ್ನಾಯಕ್, ದನಿಗೂಡಿಸಿದ ಕೇಜ್ರಿವಾಲ್

- Advertisement -
- Advertisement -

ಸಿಬಿಎಸ್ಸಿ ಪರೀಕ್ಷಾ ಶುಲ್ಕ ಹೆಚ್ಚಳವನ್ನು ವಿರೋಧಿಸಿ ಒಡಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಯವರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ರಮೇಶ್ ಮೋಖ್ರಿಯಾಲ್ ನಿಶಾಂಕ್ ರವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹಮತ ವ್ಯಕ್ತಪಡಿಸಿ ದನಿಗೂಡಿಸಿದ್ದಾರೆ.

ಹಾಲಿ ಈ ಶಾಲೆಗಳಲ್ಲಿ ಸಾಮಾನ್ಯ ವಿದ್ಯಾರ್ಥಿಗಳು 750 ರೂ ಪಾವತಿಸುತ್ತಿದ್ದರೆ ಈಗ ಏಕಾಏಕಿ 1500ಕ್ಕೆ ಅಂದರೆ ಎರಡು ಪಟ್ಟು ಏರಿಸಲಾಗಿದೆ. ಇನ್ನು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು 50 ರೂ ಪಾವತಿಸುತ್ತಿದ್ದರೆ ಇನ್ನು ಮುಂದೆ 1200ಕ್ಕೆ ಅಂದರೆ ಇಪ್ಪಲ್ನಾಕ್ಕು ಪಟ್ಟು ಹೆಚ್ಚು ಮಾಡಲಾಗಿದೆ. ಅತ್ಯಂತ ಕಡಿಮೆ ಶುಲ್ಕದಲ್ಲಿ ಅತ್ಯುತ್ತಮ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ದ ಕೇಂದ್ರೀಯ ಶಾಲೆಗಳಲ್ಲಿನ ಈ ದುಬಾರಿ ಶುಲ್ಕ ಹೆಚ್ಚಳವು ಜನರಿಗೆ ದೊಡ್ಡ ಶಾಕ್ ಆಗಿದೆ.

ಇಷ್ಟು ದೊಡ್ಡ ಮಟ್ಟದಲ್ಲಿ ಶುಲ್ಕ ಹೆಚ್ಚಳ ಮಾಡಿರುವುದು ಅಸಹಜ ಏರಿಕೆಯಾಗಿದೆ, ಅದರಲ್ಲೂ ದಲಿತ ವಿದ್ಯಾರ್ಥಿಗಳ 24 ಪಟ್ಟು ಫೀಸು ಹೆಚ್ಚಳ ದೊಡ್ಡ ಶಾಕ್ ಆಗಿದೆ ಎಂದು ತಮ್ಮ ಪತ್ರದಲ್ಲಿ ನವೀನ್ ಪಟ್ನಾಯಕ್ ಉಲ್ಲೇಖಿಸಿದ್ದಾರೆ.

ನಿಮಗೆ ಗೊತ್ತಿರುವಂತೆ ಒಡಿಸ್ಸಾದ ಗ್ರಾಮೀಣ ಭಾಗಗಳಲ್ಲಿ ಸಿಬಿಎಸ್ಸಿ ಅಡಿಯಲ್ಲಿ 200 ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆದಿದ್ದೇವೆ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಮಕ್ಕಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಈ ಪ್ರಯತ್ನವನ್ನು ಸರ್ಕಾರದಿಂದ ಮಾಡಲಾಗಿದೆ. ಆದರೆ ಕೇಂದ್ರದ ಈ ಪರೀಕ್ಷಾ ಶುಲ್ಕ ಹೆಚ್ಚಳದಿಂದ ಆ ವಿದ್ಯಾರ್ಥಿಗಳು ತೊಂದರೆಗೊಳಗಲಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ಪರೀಕ್ಷಾ ಶುಲ್ಕ ಹೆಚ್ಚಳದ ತಮ್ಮ ನಿರ್ಧಾರವನ್ನು ಮರುಪರೀಶಿಲಿಸಬೇಕೆಂದು ಒತ್ತಾಯಿಸಿದ್ದಾರೆ.

ನೀವು ಈ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳುತ್ತೀರಿ ಮತ್ತು ಬಗೆಹರಿಸುತ್ತೀನೆಂದು ನಂಬಿದ್ದೇವೆ ಎಂದು ಪತ್ರವನ್ನು ಅಂತ್ಯಗೊಳಿಸಿದ್ದಾರೆ.

ಶಿಕ್ಷಣ ಎನ್ನುವುದು ಸೇವೆಯೇ ಹೊರತು ವ್ಯಾಪಾರವಲ್ಲ. ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವಂತೆ ನಮ್ಮ ಸಂವಿಧಾನವೂ ಹೇಳುತ್ತದೆ. ಆದರೆ ಕೇಂದ್ರ ಸರ್ಕಾರ ಈ ರೀತಿಯ ಕ್ರಮಗಳ ಮೂಲಕ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಹೆಸರು ಹಾಳುಗೆಡವಲು ಪ್ರಯತ್ನಿಸುತ್ತಿರುವುದು ಖಂಡನೀಯ. ಇದರಿಂದ ಬಡಮಕ್ಕಳು ತಮಗೆ ಸಿಗುತ್ತಿರುವ ಅತ್ಯುತ್ತಮ ಶಿಕ್ಷಣದಿಂದ ವಂಚಿತರಾಗುತ್ತಾರೆ. ಶಿಕ್ಷಣವನ್ನು ಬಂಡವಾಳ ಮಾಡಿಕೊಂಡು ಶಿಕ್ಷಣದ ವ್ಯಾಪಾರ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪೂರಕವಾದ ವಾತಾವರಣವನ್ನು ಕಲ್ಪಸಿಕೊಟ್ಟಂತಾಗುತ್ತದೆ. ಹಾಗಾಗಿ ಸರ್ಕಾರ ಈ ಕ್ರಮವನ್ನು ಹಿಂತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ತಿಳಿಸಿದೆ.

ಇಂದು ಶಿಕ್ಷಣಕ್ಕೆ ಉತ್ತೇಜನ ನೀಡುವ ಹಲವಾರು ಕ್ರಮಗಳ ನಂತರವೂ ಸಾವಿರಾರು ಮಕ್ಕಳು ಶಾಲೆಯಿಂದ ಹೊರಗುಳಿದಿರುವುದು ನಮಗೆಲ್ಲಾ ಗೊತ್ತೆ ಇದೆ. ಇಂತಹ ಸಂದರ್ಭದಲ್ಲಿ ಉಚಿತ ಮತ್ತು ಗುಣಮಟ್ಟದ ಶಿಕ್ಷಣವನ್ನು ಖಾತ್ರಿಗೊಳಿಸಬೇಕಾದ ಸರ್ಕಾರ ಮಕ್ಕಳ ಶುಲ್ಕವನ್ನು ಹೆಚ್ಚು ಮಾಡುತ್ತಿರುವುದು ಮತ್ತಷ್ಟು ಮಕ್ಕಳನ್ನು ಶಾಲೆಗಳಿಂದ ಹೊರದೂಡುತ್ತಿರುವುದನ್ನು ಯಾವುದೇ ಕಾರಣಗಳಿಂದಲೂ ಒಪ್ಪಲು ಸಾಧ್ಯವಿಲ್ಲ. ಬದಲಗೆ ಶುಲ್ಕವನ್ನು ಉಚಿತ ಮಾಡುವುದರ ಜೊತೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಕೇಂದ್ರೀಯ ಶಾಲೆಗಳ ಮಾದರಿಯ ಶಿಕ್ಷಣವನ್ನು ಜಾರಿಗೊಳಿಸಬೇಕೆಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...