Homeಮುಖಪುಟಸಿಬಿಎಸ್ಸಿ ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಕೇಂದ್ರಕ್ಕೆ ಪತ್ರ ಬರೆದ ಒಡಿಸ್ಸಾ ಸಿಎಂ ನವೀನ್ ಪಟ್ನಾಯಕ್,...

ಸಿಬಿಎಸ್ಸಿ ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಕೇಂದ್ರಕ್ಕೆ ಪತ್ರ ಬರೆದ ಒಡಿಸ್ಸಾ ಸಿಎಂ ನವೀನ್ ಪಟ್ನಾಯಕ್, ದನಿಗೂಡಿಸಿದ ಕೇಜ್ರಿವಾಲ್

- Advertisement -
- Advertisement -

ಸಿಬಿಎಸ್ಸಿ ಪರೀಕ್ಷಾ ಶುಲ್ಕ ಹೆಚ್ಚಳವನ್ನು ವಿರೋಧಿಸಿ ಒಡಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಯವರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ರಮೇಶ್ ಮೋಖ್ರಿಯಾಲ್ ನಿಶಾಂಕ್ ರವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹಮತ ವ್ಯಕ್ತಪಡಿಸಿ ದನಿಗೂಡಿಸಿದ್ದಾರೆ.

ಹಾಲಿ ಈ ಶಾಲೆಗಳಲ್ಲಿ ಸಾಮಾನ್ಯ ವಿದ್ಯಾರ್ಥಿಗಳು 750 ರೂ ಪಾವತಿಸುತ್ತಿದ್ದರೆ ಈಗ ಏಕಾಏಕಿ 1500ಕ್ಕೆ ಅಂದರೆ ಎರಡು ಪಟ್ಟು ಏರಿಸಲಾಗಿದೆ. ಇನ್ನು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು 50 ರೂ ಪಾವತಿಸುತ್ತಿದ್ದರೆ ಇನ್ನು ಮುಂದೆ 1200ಕ್ಕೆ ಅಂದರೆ ಇಪ್ಪಲ್ನಾಕ್ಕು ಪಟ್ಟು ಹೆಚ್ಚು ಮಾಡಲಾಗಿದೆ. ಅತ್ಯಂತ ಕಡಿಮೆ ಶುಲ್ಕದಲ್ಲಿ ಅತ್ಯುತ್ತಮ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ದ ಕೇಂದ್ರೀಯ ಶಾಲೆಗಳಲ್ಲಿನ ಈ ದುಬಾರಿ ಶುಲ್ಕ ಹೆಚ್ಚಳವು ಜನರಿಗೆ ದೊಡ್ಡ ಶಾಕ್ ಆಗಿದೆ.

ಇಷ್ಟು ದೊಡ್ಡ ಮಟ್ಟದಲ್ಲಿ ಶುಲ್ಕ ಹೆಚ್ಚಳ ಮಾಡಿರುವುದು ಅಸಹಜ ಏರಿಕೆಯಾಗಿದೆ, ಅದರಲ್ಲೂ ದಲಿತ ವಿದ್ಯಾರ್ಥಿಗಳ 24 ಪಟ್ಟು ಫೀಸು ಹೆಚ್ಚಳ ದೊಡ್ಡ ಶಾಕ್ ಆಗಿದೆ ಎಂದು ತಮ್ಮ ಪತ್ರದಲ್ಲಿ ನವೀನ್ ಪಟ್ನಾಯಕ್ ಉಲ್ಲೇಖಿಸಿದ್ದಾರೆ.

ನಿಮಗೆ ಗೊತ್ತಿರುವಂತೆ ಒಡಿಸ್ಸಾದ ಗ್ರಾಮೀಣ ಭಾಗಗಳಲ್ಲಿ ಸಿಬಿಎಸ್ಸಿ ಅಡಿಯಲ್ಲಿ 200 ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆದಿದ್ದೇವೆ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಮಕ್ಕಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಈ ಪ್ರಯತ್ನವನ್ನು ಸರ್ಕಾರದಿಂದ ಮಾಡಲಾಗಿದೆ. ಆದರೆ ಕೇಂದ್ರದ ಈ ಪರೀಕ್ಷಾ ಶುಲ್ಕ ಹೆಚ್ಚಳದಿಂದ ಆ ವಿದ್ಯಾರ್ಥಿಗಳು ತೊಂದರೆಗೊಳಗಲಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ಪರೀಕ್ಷಾ ಶುಲ್ಕ ಹೆಚ್ಚಳದ ತಮ್ಮ ನಿರ್ಧಾರವನ್ನು ಮರುಪರೀಶಿಲಿಸಬೇಕೆಂದು ಒತ್ತಾಯಿಸಿದ್ದಾರೆ.

ನೀವು ಈ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳುತ್ತೀರಿ ಮತ್ತು ಬಗೆಹರಿಸುತ್ತೀನೆಂದು ನಂಬಿದ್ದೇವೆ ಎಂದು ಪತ್ರವನ್ನು ಅಂತ್ಯಗೊಳಿಸಿದ್ದಾರೆ.

ಶಿಕ್ಷಣ ಎನ್ನುವುದು ಸೇವೆಯೇ ಹೊರತು ವ್ಯಾಪಾರವಲ್ಲ. ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವಂತೆ ನಮ್ಮ ಸಂವಿಧಾನವೂ ಹೇಳುತ್ತದೆ. ಆದರೆ ಕೇಂದ್ರ ಸರ್ಕಾರ ಈ ರೀತಿಯ ಕ್ರಮಗಳ ಮೂಲಕ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಹೆಸರು ಹಾಳುಗೆಡವಲು ಪ್ರಯತ್ನಿಸುತ್ತಿರುವುದು ಖಂಡನೀಯ. ಇದರಿಂದ ಬಡಮಕ್ಕಳು ತಮಗೆ ಸಿಗುತ್ತಿರುವ ಅತ್ಯುತ್ತಮ ಶಿಕ್ಷಣದಿಂದ ವಂಚಿತರಾಗುತ್ತಾರೆ. ಶಿಕ್ಷಣವನ್ನು ಬಂಡವಾಳ ಮಾಡಿಕೊಂಡು ಶಿಕ್ಷಣದ ವ್ಯಾಪಾರ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪೂರಕವಾದ ವಾತಾವರಣವನ್ನು ಕಲ್ಪಸಿಕೊಟ್ಟಂತಾಗುತ್ತದೆ. ಹಾಗಾಗಿ ಸರ್ಕಾರ ಈ ಕ್ರಮವನ್ನು ಹಿಂತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ತಿಳಿಸಿದೆ.

ಇಂದು ಶಿಕ್ಷಣಕ್ಕೆ ಉತ್ತೇಜನ ನೀಡುವ ಹಲವಾರು ಕ್ರಮಗಳ ನಂತರವೂ ಸಾವಿರಾರು ಮಕ್ಕಳು ಶಾಲೆಯಿಂದ ಹೊರಗುಳಿದಿರುವುದು ನಮಗೆಲ್ಲಾ ಗೊತ್ತೆ ಇದೆ. ಇಂತಹ ಸಂದರ್ಭದಲ್ಲಿ ಉಚಿತ ಮತ್ತು ಗುಣಮಟ್ಟದ ಶಿಕ್ಷಣವನ್ನು ಖಾತ್ರಿಗೊಳಿಸಬೇಕಾದ ಸರ್ಕಾರ ಮಕ್ಕಳ ಶುಲ್ಕವನ್ನು ಹೆಚ್ಚು ಮಾಡುತ್ತಿರುವುದು ಮತ್ತಷ್ಟು ಮಕ್ಕಳನ್ನು ಶಾಲೆಗಳಿಂದ ಹೊರದೂಡುತ್ತಿರುವುದನ್ನು ಯಾವುದೇ ಕಾರಣಗಳಿಂದಲೂ ಒಪ್ಪಲು ಸಾಧ್ಯವಿಲ್ಲ. ಬದಲಗೆ ಶುಲ್ಕವನ್ನು ಉಚಿತ ಮಾಡುವುದರ ಜೊತೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಕೇಂದ್ರೀಯ ಶಾಲೆಗಳ ಮಾದರಿಯ ಶಿಕ್ಷಣವನ್ನು ಜಾರಿಗೊಳಿಸಬೇಕೆಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...