Homeಮುಖಪುಟಪಠ್ಯದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ, ಜಾತ್ಯತೀತತೆಯ ಅಧ್ಯಾಯಗಳನ್ನು ಕೈಬಿಟ್ಟ CBSE

ಪಠ್ಯದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ, ಜಾತ್ಯತೀತತೆಯ ಅಧ್ಯಾಯಗಳನ್ನು ಕೈಬಿಟ್ಟ CBSE

"ನಮಗೆ ಸ್ಥಳೀಯ ಸರ್ಕಾರಗಳು ಏಕೆ ಬೇಕು?" ಮತ್ತು “ಭಾರತದಲ್ಲಿ ಸ್ಥಳೀಯ ಸರ್ಕಾರದ ಬೆಳವಣಿಗೆ”ಯನ್ನು ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆ.

- Advertisement -
- Advertisement -

2020-21ರ ಶೈಕ್ಷಣಿಕ ವರ್ಷಕ್ಕೆ 11ನೇ ತರಗತಿಯ ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ ಮತ್ತು ಜಾತ್ಯತೀತತೆಯ ಅಧ್ಯಾಯಗಳನ್ನು CBSE (ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ) ಕೈಬಿಟ್ಟಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಪಠ್ಯಕ್ರಮವನ್ನು ತರ್ಕಬದ್ಧಗೊಳಿಸುವ ಭಾಗವಾಗಿ ಈ ಪರಿಷ್ಕರಣೆಗಳನ್ನು ಮಾಡಲಾಗಿದೆ ಎಂದು ಮಂಡಳಿ ತಿಳಿಸಿದೆ.

“ನಮಗೆ ಸ್ಥಳೀಯ ಸರ್ಕಾರಗಳು ಏಕೆ ಬೇಕು?” ಮತ್ತು “ಭಾರತದಲ್ಲಿ ಸ್ಥಳೀಯ ಸರ್ಕಾರದ ಬೆಳವಣಿಗೆ”ಯನ್ನು ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆ. ಪರಿಷ್ಕೃತ ಪಠ್ಯಕ್ರಮ ಮತ್ತು ಅಳಿಸಿದ ಅಧ್ಯಾಯಗಳು ಮತ್ತು ವಿಷಯಗಳ ಪಟ್ಟಿಯನ್ನು CBSE ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ.

ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆ, ಲಿಂಗ, ಧರ್ಮ ಮತ್ತು ಜಾತಿ; ಪ್ರಮುಖ ಹೋರಾಟಗಳು ಮತ್ತು ಚಳುವಳಿ, ಇತರ ವಿಭಾಗಗಳಲ್ಲಿನ ಅಧ್ಯಾಯಗಳನ್ನು ತೆಗೆದುಹಾಕಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜಕೀಯ ವಿಜ್ಞಾನ ಪಠ್ಯಕ್ರಮವನ್ನು ಪುನರ್ರಚಿಸಲಾಗಿದೆ.

ಈ ಅಧ್ಯಾಯಗಳನ್ನು ಇನ್ನು ಮುಂದೆ ಇರುವುದಿಲ್ಲ. ಆದರೆ ಅಸ್ತಿತ್ವದಲ್ಲಿರುವ ವಿಷಯಗಳ ಪ್ರಸ್ತುತತೆಯ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಲು ಶಿಕ್ಷಕರನ್ನು ಕೇಳಲಾಗಿದೆ. ಶಾಲೆಗಳ ಮುಖ್ಯಸ್ಥರು ಮತ್ತು ಶಿಕ್ಷಕರು ವಿಭಿನ್ನ ವಿಷಯಗಳನ್ನು ಸಂಪರ್ಕಿಸಲು ಅಗತ್ಯವಿರುವ ಮಟ್ಟಿಗೆ ವಿದ್ಯಾರ್ಥಿಗಳಿಗೆ ವಿವರಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಬಹುದು ಎಂದು CBSE ಹೇಳಿಕೆಯಲ್ಲಿ ತಿಳಿಸಿದೆ. ಜೊತೆಗೆ ಕಡಿಮೆಯಾದ ಪಠ್ಯಕ್ರಮವು ಮಂಡಳಿಯ ಆಂತರಿಕ ಮೌಲ್ಯಮಾಪನ ಮತ್ತು ವರ್ಷಾಂತ್ಯದ ಪರೀಕ್ಷೆಯ ವಿಷಯಗಳ ಭಾಗವಾಗಿರುವುದಿಲ್ಲ ಎಂದು ತಿಳಿಸಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಕಾರಣಕ್ಕೆ 2020-21ರ ಶೈಕ್ಷಣಿಕ ವರ್ಷಕ್ಕೆ ಒಂಬತ್ತರಿಂದ 12ನೇ ತರಗತಿವರೆಗಿನ ಪಠ್ಯಕ್ರಮವನ್ನು 30%ವರೆಗೆ ಕಡಿಮೆ ಮಾಡಲು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ನಿರ್ದೇಶನದ ನೀಡಿತ್ತು. ಆ ಭಾಗವಾಗಿ ಪಠ್ಯವನ್ನು ಕೈಬಿಡಲಾಗಿದೆ ಎಂದು ಸಿಬಿಎಸ್‌ಇ ತಿಳಿಸಿದೆ.

ಮಾರ್ಚ್ 24 ರಂದು ದೇಶಾದ್ಯಂತ ಲಾಕ್‌ಡೌನ್ ಹೇರುವ ಒಂದು ವಾರದ ಮೊದಲು ಭಾರತದ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲಾಯಿತು. ಅವುಗಳು ಮತ್ತೆ ಪ್ರಾರಂಭವಾಗುವುದರ ಕುರಿತು ಅನಿಶ್ಚಿತತೆ ಎದುರಾಗಿದೆ.

ಭಾರತ ಮತ್ತು ವಿಶ್ವದ ಇತರ ಭಾಗಗಳಲ್ಲಿ ಚಾಲ್ತಿಯಲ್ಲಿರುವ “ಅಸಾಧಾರಣ ಪರಿಸ್ಥಿತಿ” ಯಿಂದಾಗಿ ಶಾಲೆಗಳ ಪಠ್ಯಕ್ರಮವನ್ನು ಪರಿಷ್ಕರಿಸಲಾಗಿದೆ ಎಂದು ಸಿಬಿಎಸ್‌ಇ ಹೇಳಿದೆ. ಕಲಿಕೆಯ ಮಟ್ಟವನ್ನು ಸಾಧಿಸುವ ಪ್ರಾಮುಖ್ಯತೆಯನ್ನು ಪರಿಗಣಿಸಿ, ಪಠ್ಯಕ್ರಮದ ಮುಖ್ಯ ಪರಿಕಲ್ಪನೆಗಳನ್ನು ಉಳಿಸಿಕೊಳ್ಳುವ ಮೂಲಕ ಸಾಧ್ಯವಾದಷ್ಟು ಮಟ್ಟಿಗೆ ತರ್ಕಬದ್ಧಗೊಳಿಸಲಾಗಿದೆ ಎಂದು ಮಂಡಳಿಯು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳ ಮೇಲಿನ ಹೊರೆ ಕಡಿಮೆ ಮಾಡುವುದು ಹೇಗೆ ಎಂಬ ಬಗ್ಗೆ ಕೇಂದ್ರವು ಶಿಕ್ಷಣ ತಜ್ಞರ ಸಲಹೆಗಳನ್ನು ಕೇಳಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ತಿಳಿಸಿದ್ದಾರೆ. “ನಾವು ಒಂದೂವರೆ ಸಾವಿರಕ್ಕೂ ಹೆಚ್ಚಿನ ಸಲಹೆಗಳನ್ನು ಸ್ವೀಕರಿಸಿದ್ದೇವೆ ಎಂದು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಅಗಾಧ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...