Homeಮುಖಪುಟಪಠ್ಯದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ, ಜಾತ್ಯತೀತತೆಯ ಅಧ್ಯಾಯಗಳನ್ನು ಕೈಬಿಟ್ಟ CBSE

ಪಠ್ಯದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ, ಜಾತ್ಯತೀತತೆಯ ಅಧ್ಯಾಯಗಳನ್ನು ಕೈಬಿಟ್ಟ CBSE

"ನಮಗೆ ಸ್ಥಳೀಯ ಸರ್ಕಾರಗಳು ಏಕೆ ಬೇಕು?" ಮತ್ತು “ಭಾರತದಲ್ಲಿ ಸ್ಥಳೀಯ ಸರ್ಕಾರದ ಬೆಳವಣಿಗೆ”ಯನ್ನು ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆ.

- Advertisement -
- Advertisement -

2020-21ರ ಶೈಕ್ಷಣಿಕ ವರ್ಷಕ್ಕೆ 11ನೇ ತರಗತಿಯ ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ ಮತ್ತು ಜಾತ್ಯತೀತತೆಯ ಅಧ್ಯಾಯಗಳನ್ನು CBSE (ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ) ಕೈಬಿಟ್ಟಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಪಠ್ಯಕ್ರಮವನ್ನು ತರ್ಕಬದ್ಧಗೊಳಿಸುವ ಭಾಗವಾಗಿ ಈ ಪರಿಷ್ಕರಣೆಗಳನ್ನು ಮಾಡಲಾಗಿದೆ ಎಂದು ಮಂಡಳಿ ತಿಳಿಸಿದೆ.

“ನಮಗೆ ಸ್ಥಳೀಯ ಸರ್ಕಾರಗಳು ಏಕೆ ಬೇಕು?” ಮತ್ತು “ಭಾರತದಲ್ಲಿ ಸ್ಥಳೀಯ ಸರ್ಕಾರದ ಬೆಳವಣಿಗೆ”ಯನ್ನು ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆ. ಪರಿಷ್ಕೃತ ಪಠ್ಯಕ್ರಮ ಮತ್ತು ಅಳಿಸಿದ ಅಧ್ಯಾಯಗಳು ಮತ್ತು ವಿಷಯಗಳ ಪಟ್ಟಿಯನ್ನು CBSE ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ.

ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆ, ಲಿಂಗ, ಧರ್ಮ ಮತ್ತು ಜಾತಿ; ಪ್ರಮುಖ ಹೋರಾಟಗಳು ಮತ್ತು ಚಳುವಳಿ, ಇತರ ವಿಭಾಗಗಳಲ್ಲಿನ ಅಧ್ಯಾಯಗಳನ್ನು ತೆಗೆದುಹಾಕಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜಕೀಯ ವಿಜ್ಞಾನ ಪಠ್ಯಕ್ರಮವನ್ನು ಪುನರ್ರಚಿಸಲಾಗಿದೆ.

ಈ ಅಧ್ಯಾಯಗಳನ್ನು ಇನ್ನು ಮುಂದೆ ಇರುವುದಿಲ್ಲ. ಆದರೆ ಅಸ್ತಿತ್ವದಲ್ಲಿರುವ ವಿಷಯಗಳ ಪ್ರಸ್ತುತತೆಯ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಲು ಶಿಕ್ಷಕರನ್ನು ಕೇಳಲಾಗಿದೆ. ಶಾಲೆಗಳ ಮುಖ್ಯಸ್ಥರು ಮತ್ತು ಶಿಕ್ಷಕರು ವಿಭಿನ್ನ ವಿಷಯಗಳನ್ನು ಸಂಪರ್ಕಿಸಲು ಅಗತ್ಯವಿರುವ ಮಟ್ಟಿಗೆ ವಿದ್ಯಾರ್ಥಿಗಳಿಗೆ ವಿವರಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಬಹುದು ಎಂದು CBSE ಹೇಳಿಕೆಯಲ್ಲಿ ತಿಳಿಸಿದೆ. ಜೊತೆಗೆ ಕಡಿಮೆಯಾದ ಪಠ್ಯಕ್ರಮವು ಮಂಡಳಿಯ ಆಂತರಿಕ ಮೌಲ್ಯಮಾಪನ ಮತ್ತು ವರ್ಷಾಂತ್ಯದ ಪರೀಕ್ಷೆಯ ವಿಷಯಗಳ ಭಾಗವಾಗಿರುವುದಿಲ್ಲ ಎಂದು ತಿಳಿಸಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಕಾರಣಕ್ಕೆ 2020-21ರ ಶೈಕ್ಷಣಿಕ ವರ್ಷಕ್ಕೆ ಒಂಬತ್ತರಿಂದ 12ನೇ ತರಗತಿವರೆಗಿನ ಪಠ್ಯಕ್ರಮವನ್ನು 30%ವರೆಗೆ ಕಡಿಮೆ ಮಾಡಲು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ನಿರ್ದೇಶನದ ನೀಡಿತ್ತು. ಆ ಭಾಗವಾಗಿ ಪಠ್ಯವನ್ನು ಕೈಬಿಡಲಾಗಿದೆ ಎಂದು ಸಿಬಿಎಸ್‌ಇ ತಿಳಿಸಿದೆ.

ಮಾರ್ಚ್ 24 ರಂದು ದೇಶಾದ್ಯಂತ ಲಾಕ್‌ಡೌನ್ ಹೇರುವ ಒಂದು ವಾರದ ಮೊದಲು ಭಾರತದ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲಾಯಿತು. ಅವುಗಳು ಮತ್ತೆ ಪ್ರಾರಂಭವಾಗುವುದರ ಕುರಿತು ಅನಿಶ್ಚಿತತೆ ಎದುರಾಗಿದೆ.

ಭಾರತ ಮತ್ತು ವಿಶ್ವದ ಇತರ ಭಾಗಗಳಲ್ಲಿ ಚಾಲ್ತಿಯಲ್ಲಿರುವ “ಅಸಾಧಾರಣ ಪರಿಸ್ಥಿತಿ” ಯಿಂದಾಗಿ ಶಾಲೆಗಳ ಪಠ್ಯಕ್ರಮವನ್ನು ಪರಿಷ್ಕರಿಸಲಾಗಿದೆ ಎಂದು ಸಿಬಿಎಸ್‌ಇ ಹೇಳಿದೆ. ಕಲಿಕೆಯ ಮಟ್ಟವನ್ನು ಸಾಧಿಸುವ ಪ್ರಾಮುಖ್ಯತೆಯನ್ನು ಪರಿಗಣಿಸಿ, ಪಠ್ಯಕ್ರಮದ ಮುಖ್ಯ ಪರಿಕಲ್ಪನೆಗಳನ್ನು ಉಳಿಸಿಕೊಳ್ಳುವ ಮೂಲಕ ಸಾಧ್ಯವಾದಷ್ಟು ಮಟ್ಟಿಗೆ ತರ್ಕಬದ್ಧಗೊಳಿಸಲಾಗಿದೆ ಎಂದು ಮಂಡಳಿಯು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳ ಮೇಲಿನ ಹೊರೆ ಕಡಿಮೆ ಮಾಡುವುದು ಹೇಗೆ ಎಂಬ ಬಗ್ಗೆ ಕೇಂದ್ರವು ಶಿಕ್ಷಣ ತಜ್ಞರ ಸಲಹೆಗಳನ್ನು ಕೇಳಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ತಿಳಿಸಿದ್ದಾರೆ. “ನಾವು ಒಂದೂವರೆ ಸಾವಿರಕ್ಕೂ ಹೆಚ್ಚಿನ ಸಲಹೆಗಳನ್ನು ಸ್ವೀಕರಿಸಿದ್ದೇವೆ ಎಂದು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಅಗಾಧ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...