Homeಮುಖಪುಟಪಠ್ಯದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ, ಜಾತ್ಯತೀತತೆಯ ಅಧ್ಯಾಯಗಳನ್ನು ಕೈಬಿಟ್ಟ CBSE

ಪಠ್ಯದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ, ಜಾತ್ಯತೀತತೆಯ ಅಧ್ಯಾಯಗಳನ್ನು ಕೈಬಿಟ್ಟ CBSE

"ನಮಗೆ ಸ್ಥಳೀಯ ಸರ್ಕಾರಗಳು ಏಕೆ ಬೇಕು?" ಮತ್ತು “ಭಾರತದಲ್ಲಿ ಸ್ಥಳೀಯ ಸರ್ಕಾರದ ಬೆಳವಣಿಗೆ”ಯನ್ನು ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆ.

- Advertisement -
- Advertisement -

2020-21ರ ಶೈಕ್ಷಣಿಕ ವರ್ಷಕ್ಕೆ 11ನೇ ತರಗತಿಯ ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ ಮತ್ತು ಜಾತ್ಯತೀತತೆಯ ಅಧ್ಯಾಯಗಳನ್ನು CBSE (ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ) ಕೈಬಿಟ್ಟಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಪಠ್ಯಕ್ರಮವನ್ನು ತರ್ಕಬದ್ಧಗೊಳಿಸುವ ಭಾಗವಾಗಿ ಈ ಪರಿಷ್ಕರಣೆಗಳನ್ನು ಮಾಡಲಾಗಿದೆ ಎಂದು ಮಂಡಳಿ ತಿಳಿಸಿದೆ.

“ನಮಗೆ ಸ್ಥಳೀಯ ಸರ್ಕಾರಗಳು ಏಕೆ ಬೇಕು?” ಮತ್ತು “ಭಾರತದಲ್ಲಿ ಸ್ಥಳೀಯ ಸರ್ಕಾರದ ಬೆಳವಣಿಗೆ”ಯನ್ನು ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆ. ಪರಿಷ್ಕೃತ ಪಠ್ಯಕ್ರಮ ಮತ್ತು ಅಳಿಸಿದ ಅಧ್ಯಾಯಗಳು ಮತ್ತು ವಿಷಯಗಳ ಪಟ್ಟಿಯನ್ನು CBSE ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ.

ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆ, ಲಿಂಗ, ಧರ್ಮ ಮತ್ತು ಜಾತಿ; ಪ್ರಮುಖ ಹೋರಾಟಗಳು ಮತ್ತು ಚಳುವಳಿ, ಇತರ ವಿಭಾಗಗಳಲ್ಲಿನ ಅಧ್ಯಾಯಗಳನ್ನು ತೆಗೆದುಹಾಕಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜಕೀಯ ವಿಜ್ಞಾನ ಪಠ್ಯಕ್ರಮವನ್ನು ಪುನರ್ರಚಿಸಲಾಗಿದೆ.

ಈ ಅಧ್ಯಾಯಗಳನ್ನು ಇನ್ನು ಮುಂದೆ ಇರುವುದಿಲ್ಲ. ಆದರೆ ಅಸ್ತಿತ್ವದಲ್ಲಿರುವ ವಿಷಯಗಳ ಪ್ರಸ್ತುತತೆಯ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಲು ಶಿಕ್ಷಕರನ್ನು ಕೇಳಲಾಗಿದೆ. ಶಾಲೆಗಳ ಮುಖ್ಯಸ್ಥರು ಮತ್ತು ಶಿಕ್ಷಕರು ವಿಭಿನ್ನ ವಿಷಯಗಳನ್ನು ಸಂಪರ್ಕಿಸಲು ಅಗತ್ಯವಿರುವ ಮಟ್ಟಿಗೆ ವಿದ್ಯಾರ್ಥಿಗಳಿಗೆ ವಿವರಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಬಹುದು ಎಂದು CBSE ಹೇಳಿಕೆಯಲ್ಲಿ ತಿಳಿಸಿದೆ. ಜೊತೆಗೆ ಕಡಿಮೆಯಾದ ಪಠ್ಯಕ್ರಮವು ಮಂಡಳಿಯ ಆಂತರಿಕ ಮೌಲ್ಯಮಾಪನ ಮತ್ತು ವರ್ಷಾಂತ್ಯದ ಪರೀಕ್ಷೆಯ ವಿಷಯಗಳ ಭಾಗವಾಗಿರುವುದಿಲ್ಲ ಎಂದು ತಿಳಿಸಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಕಾರಣಕ್ಕೆ 2020-21ರ ಶೈಕ್ಷಣಿಕ ವರ್ಷಕ್ಕೆ ಒಂಬತ್ತರಿಂದ 12ನೇ ತರಗತಿವರೆಗಿನ ಪಠ್ಯಕ್ರಮವನ್ನು 30%ವರೆಗೆ ಕಡಿಮೆ ಮಾಡಲು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ನಿರ್ದೇಶನದ ನೀಡಿತ್ತು. ಆ ಭಾಗವಾಗಿ ಪಠ್ಯವನ್ನು ಕೈಬಿಡಲಾಗಿದೆ ಎಂದು ಸಿಬಿಎಸ್‌ಇ ತಿಳಿಸಿದೆ.

ಮಾರ್ಚ್ 24 ರಂದು ದೇಶಾದ್ಯಂತ ಲಾಕ್‌ಡೌನ್ ಹೇರುವ ಒಂದು ವಾರದ ಮೊದಲು ಭಾರತದ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲಾಯಿತು. ಅವುಗಳು ಮತ್ತೆ ಪ್ರಾರಂಭವಾಗುವುದರ ಕುರಿತು ಅನಿಶ್ಚಿತತೆ ಎದುರಾಗಿದೆ.

ಭಾರತ ಮತ್ತು ವಿಶ್ವದ ಇತರ ಭಾಗಗಳಲ್ಲಿ ಚಾಲ್ತಿಯಲ್ಲಿರುವ “ಅಸಾಧಾರಣ ಪರಿಸ್ಥಿತಿ” ಯಿಂದಾಗಿ ಶಾಲೆಗಳ ಪಠ್ಯಕ್ರಮವನ್ನು ಪರಿಷ್ಕರಿಸಲಾಗಿದೆ ಎಂದು ಸಿಬಿಎಸ್‌ಇ ಹೇಳಿದೆ. ಕಲಿಕೆಯ ಮಟ್ಟವನ್ನು ಸಾಧಿಸುವ ಪ್ರಾಮುಖ್ಯತೆಯನ್ನು ಪರಿಗಣಿಸಿ, ಪಠ್ಯಕ್ರಮದ ಮುಖ್ಯ ಪರಿಕಲ್ಪನೆಗಳನ್ನು ಉಳಿಸಿಕೊಳ್ಳುವ ಮೂಲಕ ಸಾಧ್ಯವಾದಷ್ಟು ಮಟ್ಟಿಗೆ ತರ್ಕಬದ್ಧಗೊಳಿಸಲಾಗಿದೆ ಎಂದು ಮಂಡಳಿಯು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳ ಮೇಲಿನ ಹೊರೆ ಕಡಿಮೆ ಮಾಡುವುದು ಹೇಗೆ ಎಂಬ ಬಗ್ಗೆ ಕೇಂದ್ರವು ಶಿಕ್ಷಣ ತಜ್ಞರ ಸಲಹೆಗಳನ್ನು ಕೇಳಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ತಿಳಿಸಿದ್ದಾರೆ. “ನಾವು ಒಂದೂವರೆ ಸಾವಿರಕ್ಕೂ ಹೆಚ್ಚಿನ ಸಲಹೆಗಳನ್ನು ಸ್ವೀಕರಿಸಿದ್ದೇವೆ ಎಂದು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಅಗಾಧ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...