Homeಮುಖಪುಟಪಠ್ಯದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ, ಜಾತ್ಯತೀತತೆಯ ಅಧ್ಯಾಯಗಳನ್ನು ಕೈಬಿಟ್ಟ CBSE

ಪಠ್ಯದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ, ಜಾತ್ಯತೀತತೆಯ ಅಧ್ಯಾಯಗಳನ್ನು ಕೈಬಿಟ್ಟ CBSE

"ನಮಗೆ ಸ್ಥಳೀಯ ಸರ್ಕಾರಗಳು ಏಕೆ ಬೇಕು?" ಮತ್ತು “ಭಾರತದಲ್ಲಿ ಸ್ಥಳೀಯ ಸರ್ಕಾರದ ಬೆಳವಣಿಗೆ”ಯನ್ನು ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆ.

- Advertisement -
- Advertisement -

2020-21ರ ಶೈಕ್ಷಣಿಕ ವರ್ಷಕ್ಕೆ 11ನೇ ತರಗತಿಯ ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ ಮತ್ತು ಜಾತ್ಯತೀತತೆಯ ಅಧ್ಯಾಯಗಳನ್ನು CBSE (ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ) ಕೈಬಿಟ್ಟಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಪಠ್ಯಕ್ರಮವನ್ನು ತರ್ಕಬದ್ಧಗೊಳಿಸುವ ಭಾಗವಾಗಿ ಈ ಪರಿಷ್ಕರಣೆಗಳನ್ನು ಮಾಡಲಾಗಿದೆ ಎಂದು ಮಂಡಳಿ ತಿಳಿಸಿದೆ.

“ನಮಗೆ ಸ್ಥಳೀಯ ಸರ್ಕಾರಗಳು ಏಕೆ ಬೇಕು?” ಮತ್ತು “ಭಾರತದಲ್ಲಿ ಸ್ಥಳೀಯ ಸರ್ಕಾರದ ಬೆಳವಣಿಗೆ”ಯನ್ನು ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆ. ಪರಿಷ್ಕೃತ ಪಠ್ಯಕ್ರಮ ಮತ್ತು ಅಳಿಸಿದ ಅಧ್ಯಾಯಗಳು ಮತ್ತು ವಿಷಯಗಳ ಪಟ್ಟಿಯನ್ನು CBSE ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ.

ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆ, ಲಿಂಗ, ಧರ್ಮ ಮತ್ತು ಜಾತಿ; ಪ್ರಮುಖ ಹೋರಾಟಗಳು ಮತ್ತು ಚಳುವಳಿ, ಇತರ ವಿಭಾಗಗಳಲ್ಲಿನ ಅಧ್ಯಾಯಗಳನ್ನು ತೆಗೆದುಹಾಕಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜಕೀಯ ವಿಜ್ಞಾನ ಪಠ್ಯಕ್ರಮವನ್ನು ಪುನರ್ರಚಿಸಲಾಗಿದೆ.

ಈ ಅಧ್ಯಾಯಗಳನ್ನು ಇನ್ನು ಮುಂದೆ ಇರುವುದಿಲ್ಲ. ಆದರೆ ಅಸ್ತಿತ್ವದಲ್ಲಿರುವ ವಿಷಯಗಳ ಪ್ರಸ್ತುತತೆಯ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಲು ಶಿಕ್ಷಕರನ್ನು ಕೇಳಲಾಗಿದೆ. ಶಾಲೆಗಳ ಮುಖ್ಯಸ್ಥರು ಮತ್ತು ಶಿಕ್ಷಕರು ವಿಭಿನ್ನ ವಿಷಯಗಳನ್ನು ಸಂಪರ್ಕಿಸಲು ಅಗತ್ಯವಿರುವ ಮಟ್ಟಿಗೆ ವಿದ್ಯಾರ್ಥಿಗಳಿಗೆ ವಿವರಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಬಹುದು ಎಂದು CBSE ಹೇಳಿಕೆಯಲ್ಲಿ ತಿಳಿಸಿದೆ. ಜೊತೆಗೆ ಕಡಿಮೆಯಾದ ಪಠ್ಯಕ್ರಮವು ಮಂಡಳಿಯ ಆಂತರಿಕ ಮೌಲ್ಯಮಾಪನ ಮತ್ತು ವರ್ಷಾಂತ್ಯದ ಪರೀಕ್ಷೆಯ ವಿಷಯಗಳ ಭಾಗವಾಗಿರುವುದಿಲ್ಲ ಎಂದು ತಿಳಿಸಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಕಾರಣಕ್ಕೆ 2020-21ರ ಶೈಕ್ಷಣಿಕ ವರ್ಷಕ್ಕೆ ಒಂಬತ್ತರಿಂದ 12ನೇ ತರಗತಿವರೆಗಿನ ಪಠ್ಯಕ್ರಮವನ್ನು 30%ವರೆಗೆ ಕಡಿಮೆ ಮಾಡಲು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ನಿರ್ದೇಶನದ ನೀಡಿತ್ತು. ಆ ಭಾಗವಾಗಿ ಪಠ್ಯವನ್ನು ಕೈಬಿಡಲಾಗಿದೆ ಎಂದು ಸಿಬಿಎಸ್‌ಇ ತಿಳಿಸಿದೆ.

ಮಾರ್ಚ್ 24 ರಂದು ದೇಶಾದ್ಯಂತ ಲಾಕ್‌ಡೌನ್ ಹೇರುವ ಒಂದು ವಾರದ ಮೊದಲು ಭಾರತದ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲಾಯಿತು. ಅವುಗಳು ಮತ್ತೆ ಪ್ರಾರಂಭವಾಗುವುದರ ಕುರಿತು ಅನಿಶ್ಚಿತತೆ ಎದುರಾಗಿದೆ.

ಭಾರತ ಮತ್ತು ವಿಶ್ವದ ಇತರ ಭಾಗಗಳಲ್ಲಿ ಚಾಲ್ತಿಯಲ್ಲಿರುವ “ಅಸಾಧಾರಣ ಪರಿಸ್ಥಿತಿ” ಯಿಂದಾಗಿ ಶಾಲೆಗಳ ಪಠ್ಯಕ್ರಮವನ್ನು ಪರಿಷ್ಕರಿಸಲಾಗಿದೆ ಎಂದು ಸಿಬಿಎಸ್‌ಇ ಹೇಳಿದೆ. ಕಲಿಕೆಯ ಮಟ್ಟವನ್ನು ಸಾಧಿಸುವ ಪ್ರಾಮುಖ್ಯತೆಯನ್ನು ಪರಿಗಣಿಸಿ, ಪಠ್ಯಕ್ರಮದ ಮುಖ್ಯ ಪರಿಕಲ್ಪನೆಗಳನ್ನು ಉಳಿಸಿಕೊಳ್ಳುವ ಮೂಲಕ ಸಾಧ್ಯವಾದಷ್ಟು ಮಟ್ಟಿಗೆ ತರ್ಕಬದ್ಧಗೊಳಿಸಲಾಗಿದೆ ಎಂದು ಮಂಡಳಿಯು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳ ಮೇಲಿನ ಹೊರೆ ಕಡಿಮೆ ಮಾಡುವುದು ಹೇಗೆ ಎಂಬ ಬಗ್ಗೆ ಕೇಂದ್ರವು ಶಿಕ್ಷಣ ತಜ್ಞರ ಸಲಹೆಗಳನ್ನು ಕೇಳಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ತಿಳಿಸಿದ್ದಾರೆ. “ನಾವು ಒಂದೂವರೆ ಸಾವಿರಕ್ಕೂ ಹೆಚ್ಚಿನ ಸಲಹೆಗಳನ್ನು ಸ್ವೀಕರಿಸಿದ್ದೇವೆ ಎಂದು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಅಗಾಧ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....