Homeಮುಖಪುಟಪಠ್ಯದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ, ಜಾತ್ಯತೀತತೆಯ ಅಧ್ಯಾಯಗಳನ್ನು ಕೈಬಿಟ್ಟ CBSE

ಪಠ್ಯದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ, ಜಾತ್ಯತೀತತೆಯ ಅಧ್ಯಾಯಗಳನ್ನು ಕೈಬಿಟ್ಟ CBSE

"ನಮಗೆ ಸ್ಥಳೀಯ ಸರ್ಕಾರಗಳು ಏಕೆ ಬೇಕು?" ಮತ್ತು “ಭಾರತದಲ್ಲಿ ಸ್ಥಳೀಯ ಸರ್ಕಾರದ ಬೆಳವಣಿಗೆ”ಯನ್ನು ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆ.

- Advertisement -
- Advertisement -

2020-21ರ ಶೈಕ್ಷಣಿಕ ವರ್ಷಕ್ಕೆ 11ನೇ ತರಗತಿಯ ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ ಮತ್ತು ಜಾತ್ಯತೀತತೆಯ ಅಧ್ಯಾಯಗಳನ್ನು CBSE (ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ) ಕೈಬಿಟ್ಟಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಪಠ್ಯಕ್ರಮವನ್ನು ತರ್ಕಬದ್ಧಗೊಳಿಸುವ ಭಾಗವಾಗಿ ಈ ಪರಿಷ್ಕರಣೆಗಳನ್ನು ಮಾಡಲಾಗಿದೆ ಎಂದು ಮಂಡಳಿ ತಿಳಿಸಿದೆ.

“ನಮಗೆ ಸ್ಥಳೀಯ ಸರ್ಕಾರಗಳು ಏಕೆ ಬೇಕು?” ಮತ್ತು “ಭಾರತದಲ್ಲಿ ಸ್ಥಳೀಯ ಸರ್ಕಾರದ ಬೆಳವಣಿಗೆ”ಯನ್ನು ಪಠ್ಯಕ್ರಮದಿಂದ ತೆಗೆದುಹಾಕಲಾಗಿದೆ. ಪರಿಷ್ಕೃತ ಪಠ್ಯಕ್ರಮ ಮತ್ತು ಅಳಿಸಿದ ಅಧ್ಯಾಯಗಳು ಮತ್ತು ವಿಷಯಗಳ ಪಟ್ಟಿಯನ್ನು CBSE ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ.

ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆ, ಲಿಂಗ, ಧರ್ಮ ಮತ್ತು ಜಾತಿ; ಪ್ರಮುಖ ಹೋರಾಟಗಳು ಮತ್ತು ಚಳುವಳಿ, ಇತರ ವಿಭಾಗಗಳಲ್ಲಿನ ಅಧ್ಯಾಯಗಳನ್ನು ತೆಗೆದುಹಾಕಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜಕೀಯ ವಿಜ್ಞಾನ ಪಠ್ಯಕ್ರಮವನ್ನು ಪುನರ್ರಚಿಸಲಾಗಿದೆ.

ಈ ಅಧ್ಯಾಯಗಳನ್ನು ಇನ್ನು ಮುಂದೆ ಇರುವುದಿಲ್ಲ. ಆದರೆ ಅಸ್ತಿತ್ವದಲ್ಲಿರುವ ವಿಷಯಗಳ ಪ್ರಸ್ತುತತೆಯ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಲು ಶಿಕ್ಷಕರನ್ನು ಕೇಳಲಾಗಿದೆ. ಶಾಲೆಗಳ ಮುಖ್ಯಸ್ಥರು ಮತ್ತು ಶಿಕ್ಷಕರು ವಿಭಿನ್ನ ವಿಷಯಗಳನ್ನು ಸಂಪರ್ಕಿಸಲು ಅಗತ್ಯವಿರುವ ಮಟ್ಟಿಗೆ ವಿದ್ಯಾರ್ಥಿಗಳಿಗೆ ವಿವರಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಬಹುದು ಎಂದು CBSE ಹೇಳಿಕೆಯಲ್ಲಿ ತಿಳಿಸಿದೆ. ಜೊತೆಗೆ ಕಡಿಮೆಯಾದ ಪಠ್ಯಕ್ರಮವು ಮಂಡಳಿಯ ಆಂತರಿಕ ಮೌಲ್ಯಮಾಪನ ಮತ್ತು ವರ್ಷಾಂತ್ಯದ ಪರೀಕ್ಷೆಯ ವಿಷಯಗಳ ಭಾಗವಾಗಿರುವುದಿಲ್ಲ ಎಂದು ತಿಳಿಸಿದೆ.

ಕೊರೊನಾ ಸಾಂಕ್ರಾಮಿಕ ರೋಗದ ಕಾರಣಕ್ಕೆ 2020-21ರ ಶೈಕ್ಷಣಿಕ ವರ್ಷಕ್ಕೆ ಒಂಬತ್ತರಿಂದ 12ನೇ ತರಗತಿವರೆಗಿನ ಪಠ್ಯಕ್ರಮವನ್ನು 30%ವರೆಗೆ ಕಡಿಮೆ ಮಾಡಲು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ನಿರ್ದೇಶನದ ನೀಡಿತ್ತು. ಆ ಭಾಗವಾಗಿ ಪಠ್ಯವನ್ನು ಕೈಬಿಡಲಾಗಿದೆ ಎಂದು ಸಿಬಿಎಸ್‌ಇ ತಿಳಿಸಿದೆ.

ಮಾರ್ಚ್ 24 ರಂದು ದೇಶಾದ್ಯಂತ ಲಾಕ್‌ಡೌನ್ ಹೇರುವ ಒಂದು ವಾರದ ಮೊದಲು ಭಾರತದ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲಾಯಿತು. ಅವುಗಳು ಮತ್ತೆ ಪ್ರಾರಂಭವಾಗುವುದರ ಕುರಿತು ಅನಿಶ್ಚಿತತೆ ಎದುರಾಗಿದೆ.

ಭಾರತ ಮತ್ತು ವಿಶ್ವದ ಇತರ ಭಾಗಗಳಲ್ಲಿ ಚಾಲ್ತಿಯಲ್ಲಿರುವ “ಅಸಾಧಾರಣ ಪರಿಸ್ಥಿತಿ” ಯಿಂದಾಗಿ ಶಾಲೆಗಳ ಪಠ್ಯಕ್ರಮವನ್ನು ಪರಿಷ್ಕರಿಸಲಾಗಿದೆ ಎಂದು ಸಿಬಿಎಸ್‌ಇ ಹೇಳಿದೆ. ಕಲಿಕೆಯ ಮಟ್ಟವನ್ನು ಸಾಧಿಸುವ ಪ್ರಾಮುಖ್ಯತೆಯನ್ನು ಪರಿಗಣಿಸಿ, ಪಠ್ಯಕ್ರಮದ ಮುಖ್ಯ ಪರಿಕಲ್ಪನೆಗಳನ್ನು ಉಳಿಸಿಕೊಳ್ಳುವ ಮೂಲಕ ಸಾಧ್ಯವಾದಷ್ಟು ಮಟ್ಟಿಗೆ ತರ್ಕಬದ್ಧಗೊಳಿಸಲಾಗಿದೆ ಎಂದು ಮಂಡಳಿಯು ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳ ಮೇಲಿನ ಹೊರೆ ಕಡಿಮೆ ಮಾಡುವುದು ಹೇಗೆ ಎಂಬ ಬಗ್ಗೆ ಕೇಂದ್ರವು ಶಿಕ್ಷಣ ತಜ್ಞರ ಸಲಹೆಗಳನ್ನು ಕೇಳಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ತಿಳಿಸಿದ್ದಾರೆ. “ನಾವು ಒಂದೂವರೆ ಸಾವಿರಕ್ಕೂ ಹೆಚ್ಚಿನ ಸಲಹೆಗಳನ್ನು ಸ್ವೀಕರಿಸಿದ್ದೇವೆ ಎಂದು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಅಗಾಧ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...