Homeಮುಖಪುಟರೈತ ಹೋರಾಟಗಾರರನ್ನು ಕಿಡಿಗೇಡಿಗಳು ಎಂದು ಕರೆದು ಪ್ರಶ್ನೆ ಕೇಳಿದ ಚೆನ್ನೈನ CBSE ಶಾಲೆ!

ರೈತ ಹೋರಾಟಗಾರರನ್ನು ಕಿಡಿಗೇಡಿಗಳು ಎಂದು ಕರೆದು ಪ್ರಶ್ನೆ ಕೇಳಿದ ಚೆನ್ನೈನ CBSE ಶಾಲೆ!

- Advertisement -
- Advertisement -

ಚೆನ್ನೈನ ಸಿಬಿಎಸ್ಇ ಶಾಲೆಯಲ್ಲಿ 10 ನೇ ತರಗತಿ ಇಂಗ್ಲಿಷ್‌ ಪ್ರಶ್ನೆ ಪತ್ರಿಕೆಯಲ್ಲಿ ವಿದಾತ್ಮಕ ಪ್ರಶ್ನೆಯನ್ನು ಕೇಳಲಾಗಿದ್ದು, ‘ಗಣರಾಜ್ಯೋತ್ಸವದಂದು ಕಿಡಿಗೇಡಿಗಳು ಬಾಹ್ಯ ಪ್ರಚೋದನೆಯಡಿ ಹಿಂಸೆ ನೆಡೆಸಿದ್ದು, ಈ ಹಿಂಸಾಚಾರವನ್ನು ಖಂಡಿಸಿ ದಿನ ಪತ್ರಿಕೆಯೊಂದಕ್ಕೆ ಪತ್ರ ಬರೆಯಿರಿ’ ಎಂದು 5 ಅಂಕಕ್ಕೆ ಪ್ರಶ್ನೆಯನ್ನು ಕೇಳಲಾಗಿದೆ.

ವಿವಾದಿತ ಪ್ರಶ್ನೆ ಪತ್ರಿಕೆಯ ಚಿತ್ರವನ್ನು ಖ್ಯಾತ ಸಂಗೀತಕಾರ ಟಿ.ಎಂ. ಕೃಷ್ಣ ತಮ್ಮ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದು, ಪ್ರಸ್ತುತ ಚಿತ್ರವು ವ್ಯಾಪಕವಾಗಿ ಹರಿದಾಡುತ್ತಿದೆ. ಅವರು ತನ್ನ ಟ್ವೀಟ್‌ನಲ್ಲಿ, “ಇದು ಜನಪ್ರಿಯ ಚೆನ್ನೈ ಶಾಲೆಯ 10 ನೇ ತರಗತಿಯ ಇಂಗ್ಲಿಷ್ ಪ್ರಶ್ನೆ ಪತ್ರಿಕೆಯ ಮಾದರಿ. ಘಟನೆ ಬಗ್ಗೆ ಮತ್ತು ಕೃಷಿ ಮಸೂದೆಗಳ ಬಗ್ಗೆ ಇನ್ನೂ ಚರ್ಚಿಸಲಾಗುತ್ತದೆ. ಆದರೆ ಇಲ್ಲಿ ಘಟನೆಯನ್ನು ‘ಬಾಹ್ಯ ಪ್ರಚೋದನೆಯಡಿ ಹಿಂಸೆ ನಡೆಸುತ್ತಿರುವ ಕಿಡಿಗೇಡಿಗಳು’ ಎಂದು ಹೇಳಲಾಗುತ್ತಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಈ ಪತ್ರಿಕೆಯ ಪರೀಕ್ಷೆ ಫೆಬ್ರವರಿ 11 ರಂದು ನಡೆದಿದ್ದು, ಈ ಪ್ರಶ್ನೆಯು ಎರಡನೇ ಪರಿಷ್ಕರಣೆ ಪರೀಕ್ಷೆಯ ಭಾಗವಾಗಿತ್ತು ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

“ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದ ಹಿಂಸಾಚಾರವು ನಾಗರಿಕರಲ್ಲಿ ಅಸಮಾಧಾನ ಸೃಷ್ಟಿಸಿದೆ. ಕೃಷಿ ಕಾನೂನು ವಿರುದ್ದದ ಪ್ರತಿಭಟನಾಕಾರರು ಸಾರ್ವಜನಿಕ ಆಸ್ತಿಯನ್ನು ನಾಶಪಡಿಸಿದರು ಮತ್ತು ಹಾಡಹಗಲೇ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದರು. ವೈಯಕ್ತಿಕ ಅಗತ್ಯ ಮತ್ತು ಲಾಭಗಳಿಗಿಂತಲೂ ದೇಶ ಮೊದಲು ಎಂದು ಅರಿತುಕೊಳ್ಳಲು ವಿಫಲವಾದ ದುಷ್ಕರ್ಮಿಗಳ ಇಂತಹ ಭಯಾನಕ, ಹಿಂಸಾತ್ಮಕ ಕೃತ್ಯಗಳನ್ನು ಖಂಡಿಸಿ, ನಿಮ್ಮ ನಗರದಲ್ಲಿನ ದಿನಪತ್ರಿಕೆಯೊಂದರ ಸಂಪಾದಕರಿಗೆ ಪತ್ರ ಬರೆಯಿರಿ” ಎಂದು ಪ್ರಶ್ನೆಯು ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿಯನ್ನು ನೀಡಿದೆ.

“ಸಾರ್ವಜನಿಕ ಆಸ್ತಿಯನ್ನು ನಾಶಪಡಿಸುವುದು, ರಾಷ್ಟ್ರಧ್ವಜವನ್ನು ಅವಮಾನಿಸುವುದು ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು ಸೇರಿದಂತೆ ಇನ್ನಿತರ ಅಕ್ರಮ ಅಪರಾಧಗಳನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗುವುದಿಲ್ಲ. ಬಾಹ್ಯ ಪ್ರಚೋದನೆಯಡಿಯಲ್ಲಿ ಕಾರ್ಯನಿರ್ವಹಿಸುವ ಇಂತಹ ಹಿಂಸಾತ್ಮಕ ಕಿಡಿಗೇಡಿಗಳನ್ನು ತಡೆಯಲು ಹಲವು ಸಲಹೆಗಳನ್ನು ನೀಡಿ” ಎಂದು ಕೂಡಾ ಪ್ರಶ್ನೆ ಪತ್ರಿಕೆಯು ಕೇಳಿದೆ.

ಇದನ್ನೂ ಓದಿ: ಕೇಂದ್ರ ಗೃಹ ಸಚಿವ ಅಮಿತ್‌‌‌‌ ಶಾಗೆ ಸಮನ್ಸ್ ಜಾರಿಗೊಳಿಸಿದ ಪಶ್ಚಿಮ ಬಂಗಾಳ ನ್ಯಾಯಾಲಯ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ 2 ತಿಂಗಳುಗಳ ಕಾಲದಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರು ಜನವರಿ 26 ರ ಗಣರಾಜ್ಯೋತ್ಸವದಂದು ಟ್ರಾಕ್ಟರ್‌ ರ್‍ಯಾಲಿ ನಡೆಸಿದ್ದರು. ಈ ವೇಳೆ ರ್‍ಯಾಲಿಯು 99% ಶಾಂತಿಯುತವಾಗಿತ್ತು. ಆದರೆ ರೈತ ಸಂಘಟನೆಯ ಒಂದು ಗುಂಪು ಕೆಂಪುಕೋಟೆಗೆ ನುಗ್ಗಿ ಧಾರ್ಮಿಕ ಧ್ವಜ ಹಾರಿಸಿತ್ತು. ಆನಂತರ ದೀಪ್‌ ಸಿಧು ಎಂಬ ನಟನನ್ನು ಬಂಧಿಸಿದ್ದು ಆತ ಬಿಜೆಪಿ ಕಾರ್ಯಕರ್ತ ಎಂದು ಆರೋಪಿಸಲಾಗಿದೆ.

ಆದರೆ ಈ ಘಟನೆಯನ್ನು ರೈತ ಮುಖಂಡರು ಖಂಡಿಸಿದ್ದು, ಘಟನೆಯಿಂದ ಅಂತರ ಕಾಯ್ದುಕೊಂಡಿದ್ದರು. ದೆಹಲಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 152 ಜನರನ್ನು ಬಂಧಿಸಿದ್ದಾರೆ. ಘಟನೆಯ ಪ್ರಮುಖ ಆರೋಪಿ ದೀಪ್‌ ಸಿಧು, ಬಿಜೆಪಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದವರು ಎಂದು ಈಗಾಗಲೇ ವರದಿಯಾಗಿದೆ.

ಇದನ್ನೂ ಓದಿ: ಯುವಜನರನ್ನು ಗುರಿಯಾಗಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಬೇಡಿ: ಲಿಯೋ ಸಾಲ್ಡಾನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...