Homeಮುಖಪುಟರೈತ ಹೋರಾಟಗಾರರನ್ನು ಕಿಡಿಗೇಡಿಗಳು ಎಂದು ಕರೆದು ಪ್ರಶ್ನೆ ಕೇಳಿದ ಚೆನ್ನೈನ CBSE ಶಾಲೆ!

ರೈತ ಹೋರಾಟಗಾರರನ್ನು ಕಿಡಿಗೇಡಿಗಳು ಎಂದು ಕರೆದು ಪ್ರಶ್ನೆ ಕೇಳಿದ ಚೆನ್ನೈನ CBSE ಶಾಲೆ!

- Advertisement -
- Advertisement -

ಚೆನ್ನೈನ ಸಿಬಿಎಸ್ಇ ಶಾಲೆಯಲ್ಲಿ 10 ನೇ ತರಗತಿ ಇಂಗ್ಲಿಷ್‌ ಪ್ರಶ್ನೆ ಪತ್ರಿಕೆಯಲ್ಲಿ ವಿದಾತ್ಮಕ ಪ್ರಶ್ನೆಯನ್ನು ಕೇಳಲಾಗಿದ್ದು, ‘ಗಣರಾಜ್ಯೋತ್ಸವದಂದು ಕಿಡಿಗೇಡಿಗಳು ಬಾಹ್ಯ ಪ್ರಚೋದನೆಯಡಿ ಹಿಂಸೆ ನೆಡೆಸಿದ್ದು, ಈ ಹಿಂಸಾಚಾರವನ್ನು ಖಂಡಿಸಿ ದಿನ ಪತ್ರಿಕೆಯೊಂದಕ್ಕೆ ಪತ್ರ ಬರೆಯಿರಿ’ ಎಂದು 5 ಅಂಕಕ್ಕೆ ಪ್ರಶ್ನೆಯನ್ನು ಕೇಳಲಾಗಿದೆ.

ವಿವಾದಿತ ಪ್ರಶ್ನೆ ಪತ್ರಿಕೆಯ ಚಿತ್ರವನ್ನು ಖ್ಯಾತ ಸಂಗೀತಕಾರ ಟಿ.ಎಂ. ಕೃಷ್ಣ ತಮ್ಮ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದು, ಪ್ರಸ್ತುತ ಚಿತ್ರವು ವ್ಯಾಪಕವಾಗಿ ಹರಿದಾಡುತ್ತಿದೆ. ಅವರು ತನ್ನ ಟ್ವೀಟ್‌ನಲ್ಲಿ, “ಇದು ಜನಪ್ರಿಯ ಚೆನ್ನೈ ಶಾಲೆಯ 10 ನೇ ತರಗತಿಯ ಇಂಗ್ಲಿಷ್ ಪ್ರಶ್ನೆ ಪತ್ರಿಕೆಯ ಮಾದರಿ. ಘಟನೆ ಬಗ್ಗೆ ಮತ್ತು ಕೃಷಿ ಮಸೂದೆಗಳ ಬಗ್ಗೆ ಇನ್ನೂ ಚರ್ಚಿಸಲಾಗುತ್ತದೆ. ಆದರೆ ಇಲ್ಲಿ ಘಟನೆಯನ್ನು ‘ಬಾಹ್ಯ ಪ್ರಚೋದನೆಯಡಿ ಹಿಂಸೆ ನಡೆಸುತ್ತಿರುವ ಕಿಡಿಗೇಡಿಗಳು’ ಎಂದು ಹೇಳಲಾಗುತ್ತಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಈ ಪತ್ರಿಕೆಯ ಪರೀಕ್ಷೆ ಫೆಬ್ರವರಿ 11 ರಂದು ನಡೆದಿದ್ದು, ಈ ಪ್ರಶ್ನೆಯು ಎರಡನೇ ಪರಿಷ್ಕರಣೆ ಪರೀಕ್ಷೆಯ ಭಾಗವಾಗಿತ್ತು ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಉನ್ನಾವೊ ದಲಿತ ಬಾಲಕಿಯರ ಸಾವು: ಪ್ರೀತಿ ನಿರಾಕರಿಸಿದ್ದಕ್ಕೆ ವಿಷಪ್ರಾಶನ ಮಾಡಿದವನ ಬಂಧನ

“ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದ ಹಿಂಸಾಚಾರವು ನಾಗರಿಕರಲ್ಲಿ ಅಸಮಾಧಾನ ಸೃಷ್ಟಿಸಿದೆ. ಕೃಷಿ ಕಾನೂನು ವಿರುದ್ದದ ಪ್ರತಿಭಟನಾಕಾರರು ಸಾರ್ವಜನಿಕ ಆಸ್ತಿಯನ್ನು ನಾಶಪಡಿಸಿದರು ಮತ್ತು ಹಾಡಹಗಲೇ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದರು. ವೈಯಕ್ತಿಕ ಅಗತ್ಯ ಮತ್ತು ಲಾಭಗಳಿಗಿಂತಲೂ ದೇಶ ಮೊದಲು ಎಂದು ಅರಿತುಕೊಳ್ಳಲು ವಿಫಲವಾದ ದುಷ್ಕರ್ಮಿಗಳ ಇಂತಹ ಭಯಾನಕ, ಹಿಂಸಾತ್ಮಕ ಕೃತ್ಯಗಳನ್ನು ಖಂಡಿಸಿ, ನಿಮ್ಮ ನಗರದಲ್ಲಿನ ದಿನಪತ್ರಿಕೆಯೊಂದರ ಸಂಪಾದಕರಿಗೆ ಪತ್ರ ಬರೆಯಿರಿ” ಎಂದು ಪ್ರಶ್ನೆಯು ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿಯನ್ನು ನೀಡಿದೆ.

“ಸಾರ್ವಜನಿಕ ಆಸ್ತಿಯನ್ನು ನಾಶಪಡಿಸುವುದು, ರಾಷ್ಟ್ರಧ್ವಜವನ್ನು ಅವಮಾನಿಸುವುದು ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು ಸೇರಿದಂತೆ ಇನ್ನಿತರ ಅಕ್ರಮ ಅಪರಾಧಗಳನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗುವುದಿಲ್ಲ. ಬಾಹ್ಯ ಪ್ರಚೋದನೆಯಡಿಯಲ್ಲಿ ಕಾರ್ಯನಿರ್ವಹಿಸುವ ಇಂತಹ ಹಿಂಸಾತ್ಮಕ ಕಿಡಿಗೇಡಿಗಳನ್ನು ತಡೆಯಲು ಹಲವು ಸಲಹೆಗಳನ್ನು ನೀಡಿ” ಎಂದು ಕೂಡಾ ಪ್ರಶ್ನೆ ಪತ್ರಿಕೆಯು ಕೇಳಿದೆ.

ಇದನ್ನೂ ಓದಿ: ಕೇಂದ್ರ ಗೃಹ ಸಚಿವ ಅಮಿತ್‌‌‌‌ ಶಾಗೆ ಸಮನ್ಸ್ ಜಾರಿಗೊಳಿಸಿದ ಪಶ್ಚಿಮ ಬಂಗಾಳ ನ್ಯಾಯಾಲಯ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ 2 ತಿಂಗಳುಗಳ ಕಾಲದಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರು ಜನವರಿ 26 ರ ಗಣರಾಜ್ಯೋತ್ಸವದಂದು ಟ್ರಾಕ್ಟರ್‌ ರ್‍ಯಾಲಿ ನಡೆಸಿದ್ದರು. ಈ ವೇಳೆ ರ್‍ಯಾಲಿಯು 99% ಶಾಂತಿಯುತವಾಗಿತ್ತು. ಆದರೆ ರೈತ ಸಂಘಟನೆಯ ಒಂದು ಗುಂಪು ಕೆಂಪುಕೋಟೆಗೆ ನುಗ್ಗಿ ಧಾರ್ಮಿಕ ಧ್ವಜ ಹಾರಿಸಿತ್ತು. ಆನಂತರ ದೀಪ್‌ ಸಿಧು ಎಂಬ ನಟನನ್ನು ಬಂಧಿಸಿದ್ದು ಆತ ಬಿಜೆಪಿ ಕಾರ್ಯಕರ್ತ ಎಂದು ಆರೋಪಿಸಲಾಗಿದೆ.

ಆದರೆ ಈ ಘಟನೆಯನ್ನು ರೈತ ಮುಖಂಡರು ಖಂಡಿಸಿದ್ದು, ಘಟನೆಯಿಂದ ಅಂತರ ಕಾಯ್ದುಕೊಂಡಿದ್ದರು. ದೆಹಲಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 152 ಜನರನ್ನು ಬಂಧಿಸಿದ್ದಾರೆ. ಘಟನೆಯ ಪ್ರಮುಖ ಆರೋಪಿ ದೀಪ್‌ ಸಿಧು, ಬಿಜೆಪಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದವರು ಎಂದು ಈಗಾಗಲೇ ವರದಿಯಾಗಿದೆ.

ಇದನ್ನೂ ಓದಿ: ಯುವಜನರನ್ನು ಗುರಿಯಾಗಿಸಿ ಪ್ರಜಾಪ್ರಭುತ್ವದ ಕತ್ತು ಹಿಸುಕಬೇಡಿ: ಲಿಯೋ ಸಾಲ್ಡಾನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...