Homeಕರ್ನಾಟಕಸಿಸಿಬಿ- ಕೆಎಂಎಫ್ ವಿಜಿಲೆನ್ಸ್ ವಿಂಗ್ ಜಂಟಿ ಕಾರ್ಯಾಚರಣೆ; ನಕಲಿ ನಂದಿನಿ ತುಪ್ಪ ತಯಾರಿಸುತ್ತಿದ್ದ ಜಾಲ ಪತ್ತೆ

ಸಿಸಿಬಿ- ಕೆಎಂಎಫ್ ವಿಜಿಲೆನ್ಸ್ ವಿಂಗ್ ಜಂಟಿ ಕಾರ್ಯಾಚರಣೆ; ನಕಲಿ ನಂದಿನಿ ತುಪ್ಪ ತಯಾರಿಸುತ್ತಿದ್ದ ಜಾಲ ಪತ್ತೆ

- Advertisement -
- Advertisement -

ಬೆಂಗಳೂರಿನಾದ್ಯಂತ ನಂದಿನಿ ಡೈರಿ ಪಾರ್ಲರ್‌ಗಳಿಗೆ ನಕಲಿ ತುಪ್ಪ ಉತ್ಪನ್ನಗಳನ್ನು ಪೂರೈಸುತ್ತಿದ್ದ ಜಾಲವನ್ನು ಭೇದಿಸಲಾಗಿದ್ದು, ಅಧಿಕೃತ ವಿತರಕರೇ ಹಣದಾಸೆಗೆ ನಡೆಸುತ್ತಿದ್ದ ಕಲಬೆರಕೆ ಕೃತ್ಯವನ್ನು ಅಧಿಕಾರಿಗಳು ಬಯಲು ಮಾಡಿದ್ದಾರೆ.

ತಮಿಳುನಾಡಿನಲ್ಲಿ ಕಲಬೆರಕೆ ತುಪ್ಪ ಉತ್ಪಾದಿಸಿ, ನಕಲಿ ನಂದಿನಿ ಸ್ಯಾಚೆಟ್‌ಗಳು ಮತ್ತು ಪ್ಲಾಸ್ಟಿಕ್ ಬಾಟಲಿಗಳಲ್ಲಿ ತುಂಬಿಸಿ, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಪರವಾನಗಿಗಳನ್ನು ಹೊಂದಿರುವ ಬೆಂಗಳೂರಿನ ಆರೋಪಿಗಳಿಗೆ ಪೂರೈಸಿದ್ದಾರೆ ಎಂದು ತನಿಖೆಯಿಂದ ಬಹಿರಂಗವಾಗಿದೆ. ಆರೋಪಿತ ವಿತರಕರು ನಕಲಿ ತುಪ್ಪವನ್ನು ಸಗಟು ಅಂಗಡಿಗಳು, ಚಿಲ್ಲರೆ ಮಾರಾಟ ಮಳಿಗೆಗಳು ಮತ್ತು ನಂದಿನಿ ಪಾರ್ಲರ್‌ಗಳಿಗೆ ಪೂರ್ಣ ಮಾರುಕಟ್ಟೆ ಬೆಲೆಗೆ ಮಾರಾಟ ಮಾಡಿದ್ದಾರೆ.

ತುಪ್ಪ ಪೂರೈಕೆಯಲ್ಲಿ ವ್ಯತ್ಯಾಸ ಗಮನಿಸಿದ ಕೆಎಂಎಫ್ ಅಧಿಕಾರಿಗಳು ತನಿಖೆಗೆ ಇಳಿದ ನಂತರ ಹಗರಣ ಬೆಳಕಿಗೆ ಬಂದಿದೆ. ನಿಯಮಿತವಾಗಿ ದೊಡ್ಡ ಪ್ರಮಾಣದ ತುಪ್ಪದ ಆರ್ಡರ್‌ಗಳನ್ನು ನೀಡುತ್ತಿದ್ದ ಅಧಿಕೃತ ಕೆಎಂಎಫ್ ಡೀಲರ್-ಕಮ್-ವಿತರಕ ಮಹೇಂದ್ರ ಇದ್ದಕ್ಕಿದ್ದಂತೆ ತನ್ನ ಆರ್ಡರ್‌ ಕಡಿತಗೊಳಿಸಲು ಪ್ರಾರಂಭಿಸಿದರು. ಸಾಮಾನ್ಯವಾಗಿ ಆರ್ಡರ್‌ ಮಾಡುತ್ತಿದ್ದ 100 ಲೀಟರ್‌ಗಳ ಬದಲಿಗೆ, ಅವರು ಇತ್ತೀಚಿನ ತಿಂಗಳುಗಳಲ್ಲಿ ಕೇವಲ 50 ಲೀಟರ್‌ಗಳನ್ನು ಆರ್ಡರ್ ಮಾಡುತ್ತಿದ್ದರು.

ಇದರಿಂದ ಅಧಿಕಾರಿಗಳಿಗೆ ಅನುಮಾನ ಶುರುವಾಗಿದೆ. ಪ್ರಮುಖ ಆರೋಪಿ ಮಹೇಂದ್ರ, ಪಾಮ್ ಆಯಿಲ್ ಮತ್ತು ಇತರ ಕೊಬ್ಬನ್ನು ನಿಜವಾದ ನಂದಿನಿ ತುಪ್ಪದೊಂದಿಗೆ ಬೆರೆಸಿ, 1 ಲೀಟರ್ ನಿಜವಾದ ತುಪ್ಪದಿಂದ 5 ಲೀಟರ್ ಕಲಬೆರಕೆ ಉತ್ಪನ್ನವನ್ನಾಗಿ ಪರಿವರ್ತಿಸುತ್ತಿದ್ದ ಎಂದು ತಿಳಿದುಬಂದಿದೆ. ನಂತರ ಈ ನಕಲಿ ತುಪ್ಪವನ್ನು ನಗರದಾದ್ಯಂತ ನಂದಿನಿ ಪಾರ್ಲರ್‌ಗಳಿಗೆ ಸರಬರಾಜು ಮಾಡುತ್ತಿದ್ದ.

ಸಿಸಿಬಿ ವಿಶೇಷ ತನಿಖಾ ದಳ ಮತ್ತು ಕೆಎಂಎಫ್ ವಿಜಿಲೆನ್ಸ್ ವಿಂಗ್ ಜಂಟಿ ಕಾರ್ಯಾಚರಣೆ ನಡೆಸಿ, ರಹಸ್ಯವಾಗಿ ಸಂಗ್ರಹಿಸಿದ ಗುಪ್ತಚರ ಮಾಹಿತಿಯ ಮೇರೆಗೆ ಜಾಲವನ್ನು ಪತ್ತೆಹಚ್ಚಿತು. ಶುಕ್ರವಾರ, ಈ ತಂಡಗಳು ಚಾಮರಾಜಪೇಟೆಯಲ್ಲಿರುವ ಕೃಷ್ಣ ಎಂಟರ್‌ಪ್ರೈಸಸ್‌ಗೆ ಸೇರಿದ, ಪ್ರಮುಖ ಆರೋಪಿ ಮತ್ತು ಅವರ ಕುಟುಂಬದ ಒಡೆತನದ ಗೋದಾಮುಗಳು, ಅಂಗಡಿ ಸೇರಿದಂತೆ ಸರಕು ವಾಹನಗಳ ಮೇಲೆ ದಾಳಿ ನಡೆಸಿದವು. ಕಲಬೆರಕೆ ತುಪ್ಪ ಸಾಗಿಸುತ್ತಿದ್ದ ವಾಹನವನ್ನು ವಶಪಡಿಸಿಕೊಂಡು ಚಾಲಕನನ್ನು ಬಂಧಿಸಲಾಯಿತು.

ತನಿಖೆ ವಿಸ್ತರಿಸಿದ ಕೆಎಂಎಫ್ ವಿಜಿಲೆನ್ಸ್ ತಂಡ, ಮಹೇಂದ್ರನ ಕಾರ್ಯಾಚರಣೆಯ ಸಂಪೂರ್ಣ ವ್ಯಾಪ್ತಿಯನ್ನು ಬಹಿರಂಗಪಡಿದೆ. ಮೂಲಗಳ ಪ್ರಕಾರ, ಅವನು ತನ್ನ ಮಗಳ ಮದುವೆಗೆ ಹಣ ಸಂಗ್ರಹಿಸಲು ಕಲಬೆರಕೆ ಆರಂಭಿಸಿದ್ದ ಎಂದು ಆರೋಪಿಸಲಾಗಿದೆ.

“ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಅಧಿಕಾರಿಗಳು 8,136 ಲೀಟರ್ ಕಲಬೆರಕೆ ತುಪ್ಪ, ತೆಂಗಿನಕಾಯಿ ಮತ್ತು ತಾಳೆ ಎಣ್ಣೆ, 1.19 ಲಕ್ಷ ರೂ. ನಗದು, ನಾಲ್ಕು ಸರಕು ವಾಹನಗಳು, ಕಲಬೆರಕೆ ತುಪ್ಪ ತಯಾರಿಸಲು ಬಳಸಿದ ಯಂತ್ರೋಪಕರಣಗಳು ಮತ್ತು ಇತರ ಸಂಬಂಧಿತ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಆಸ್ತಿಯ ಒಟ್ಟು ಮೌಲ್ಯ ಸುಮಾರು 1.27 ಕೋಟಿ ರೂ.” ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...