Homeಕರ್ನಾಟಕಸಿಸಿಬಿ- ಕೆಎಂಎಫ್ ವಿಜಿಲೆನ್ಸ್ ವಿಂಗ್ ಜಂಟಿ ಕಾರ್ಯಾಚರಣೆ; ನಕಲಿ ನಂದಿನಿ ತುಪ್ಪ ತಯಾರಿಸುತ್ತಿದ್ದ ಜಾಲ ಪತ್ತೆ

ಸಿಸಿಬಿ- ಕೆಎಂಎಫ್ ವಿಜಿಲೆನ್ಸ್ ವಿಂಗ್ ಜಂಟಿ ಕಾರ್ಯಾಚರಣೆ; ನಕಲಿ ನಂದಿನಿ ತುಪ್ಪ ತಯಾರಿಸುತ್ತಿದ್ದ ಜಾಲ ಪತ್ತೆ

- Advertisement -
- Advertisement -

ಬೆಂಗಳೂರಿನಾದ್ಯಂತ ನಂದಿನಿ ಡೈರಿ ಪಾರ್ಲರ್‌ಗಳಿಗೆ ನಕಲಿ ತುಪ್ಪ ಉತ್ಪನ್ನಗಳನ್ನು ಪೂರೈಸುತ್ತಿದ್ದ ಜಾಲವನ್ನು ಭೇದಿಸಲಾಗಿದ್ದು, ಅಧಿಕೃತ ವಿತರಕರೇ ಹಣದಾಸೆಗೆ ನಡೆಸುತ್ತಿದ್ದ ಕಲಬೆರಕೆ ಕೃತ್ಯವನ್ನು ಅಧಿಕಾರಿಗಳು ಬಯಲು ಮಾಡಿದ್ದಾರೆ.

ತಮಿಳುನಾಡಿನಲ್ಲಿ ಕಲಬೆರಕೆ ತುಪ್ಪ ಉತ್ಪಾದಿಸಿ, ನಕಲಿ ನಂದಿನಿ ಸ್ಯಾಚೆಟ್‌ಗಳು ಮತ್ತು ಪ್ಲಾಸ್ಟಿಕ್ ಬಾಟಲಿಗಳಲ್ಲಿ ತುಂಬಿಸಿ, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಪರವಾನಗಿಗಳನ್ನು ಹೊಂದಿರುವ ಬೆಂಗಳೂರಿನ ಆರೋಪಿಗಳಿಗೆ ಪೂರೈಸಿದ್ದಾರೆ ಎಂದು ತನಿಖೆಯಿಂದ ಬಹಿರಂಗವಾಗಿದೆ. ಆರೋಪಿತ ವಿತರಕರು ನಕಲಿ ತುಪ್ಪವನ್ನು ಸಗಟು ಅಂಗಡಿಗಳು, ಚಿಲ್ಲರೆ ಮಾರಾಟ ಮಳಿಗೆಗಳು ಮತ್ತು ನಂದಿನಿ ಪಾರ್ಲರ್‌ಗಳಿಗೆ ಪೂರ್ಣ ಮಾರುಕಟ್ಟೆ ಬೆಲೆಗೆ ಮಾರಾಟ ಮಾಡಿದ್ದಾರೆ.

ತುಪ್ಪ ಪೂರೈಕೆಯಲ್ಲಿ ವ್ಯತ್ಯಾಸ ಗಮನಿಸಿದ ಕೆಎಂಎಫ್ ಅಧಿಕಾರಿಗಳು ತನಿಖೆಗೆ ಇಳಿದ ನಂತರ ಹಗರಣ ಬೆಳಕಿಗೆ ಬಂದಿದೆ. ನಿಯಮಿತವಾಗಿ ದೊಡ್ಡ ಪ್ರಮಾಣದ ತುಪ್ಪದ ಆರ್ಡರ್‌ಗಳನ್ನು ನೀಡುತ್ತಿದ್ದ ಅಧಿಕೃತ ಕೆಎಂಎಫ್ ಡೀಲರ್-ಕಮ್-ವಿತರಕ ಮಹೇಂದ್ರ ಇದ್ದಕ್ಕಿದ್ದಂತೆ ತನ್ನ ಆರ್ಡರ್‌ ಕಡಿತಗೊಳಿಸಲು ಪ್ರಾರಂಭಿಸಿದರು. ಸಾಮಾನ್ಯವಾಗಿ ಆರ್ಡರ್‌ ಮಾಡುತ್ತಿದ್ದ 100 ಲೀಟರ್‌ಗಳ ಬದಲಿಗೆ, ಅವರು ಇತ್ತೀಚಿನ ತಿಂಗಳುಗಳಲ್ಲಿ ಕೇವಲ 50 ಲೀಟರ್‌ಗಳನ್ನು ಆರ್ಡರ್ ಮಾಡುತ್ತಿದ್ದರು.

ಇದರಿಂದ ಅಧಿಕಾರಿಗಳಿಗೆ ಅನುಮಾನ ಶುರುವಾಗಿದೆ. ಪ್ರಮುಖ ಆರೋಪಿ ಮಹೇಂದ್ರ, ಪಾಮ್ ಆಯಿಲ್ ಮತ್ತು ಇತರ ಕೊಬ್ಬನ್ನು ನಿಜವಾದ ನಂದಿನಿ ತುಪ್ಪದೊಂದಿಗೆ ಬೆರೆಸಿ, 1 ಲೀಟರ್ ನಿಜವಾದ ತುಪ್ಪದಿಂದ 5 ಲೀಟರ್ ಕಲಬೆರಕೆ ಉತ್ಪನ್ನವನ್ನಾಗಿ ಪರಿವರ್ತಿಸುತ್ತಿದ್ದ ಎಂದು ತಿಳಿದುಬಂದಿದೆ. ನಂತರ ಈ ನಕಲಿ ತುಪ್ಪವನ್ನು ನಗರದಾದ್ಯಂತ ನಂದಿನಿ ಪಾರ್ಲರ್‌ಗಳಿಗೆ ಸರಬರಾಜು ಮಾಡುತ್ತಿದ್ದ.

ಸಿಸಿಬಿ ವಿಶೇಷ ತನಿಖಾ ದಳ ಮತ್ತು ಕೆಎಂಎಫ್ ವಿಜಿಲೆನ್ಸ್ ವಿಂಗ್ ಜಂಟಿ ಕಾರ್ಯಾಚರಣೆ ನಡೆಸಿ, ರಹಸ್ಯವಾಗಿ ಸಂಗ್ರಹಿಸಿದ ಗುಪ್ತಚರ ಮಾಹಿತಿಯ ಮೇರೆಗೆ ಜಾಲವನ್ನು ಪತ್ತೆಹಚ್ಚಿತು. ಶುಕ್ರವಾರ, ಈ ತಂಡಗಳು ಚಾಮರಾಜಪೇಟೆಯಲ್ಲಿರುವ ಕೃಷ್ಣ ಎಂಟರ್‌ಪ್ರೈಸಸ್‌ಗೆ ಸೇರಿದ, ಪ್ರಮುಖ ಆರೋಪಿ ಮತ್ತು ಅವರ ಕುಟುಂಬದ ಒಡೆತನದ ಗೋದಾಮುಗಳು, ಅಂಗಡಿ ಸೇರಿದಂತೆ ಸರಕು ವಾಹನಗಳ ಮೇಲೆ ದಾಳಿ ನಡೆಸಿದವು. ಕಲಬೆರಕೆ ತುಪ್ಪ ಸಾಗಿಸುತ್ತಿದ್ದ ವಾಹನವನ್ನು ವಶಪಡಿಸಿಕೊಂಡು ಚಾಲಕನನ್ನು ಬಂಧಿಸಲಾಯಿತು.

ತನಿಖೆ ವಿಸ್ತರಿಸಿದ ಕೆಎಂಎಫ್ ವಿಜಿಲೆನ್ಸ್ ತಂಡ, ಮಹೇಂದ್ರನ ಕಾರ್ಯಾಚರಣೆಯ ಸಂಪೂರ್ಣ ವ್ಯಾಪ್ತಿಯನ್ನು ಬಹಿರಂಗಪಡಿದೆ. ಮೂಲಗಳ ಪ್ರಕಾರ, ಅವನು ತನ್ನ ಮಗಳ ಮದುವೆಗೆ ಹಣ ಸಂಗ್ರಹಿಸಲು ಕಲಬೆರಕೆ ಆರಂಭಿಸಿದ್ದ ಎಂದು ಆರೋಪಿಸಲಾಗಿದೆ.

“ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಅಧಿಕಾರಿಗಳು 8,136 ಲೀಟರ್ ಕಲಬೆರಕೆ ತುಪ್ಪ, ತೆಂಗಿನಕಾಯಿ ಮತ್ತು ತಾಳೆ ಎಣ್ಣೆ, 1.19 ಲಕ್ಷ ರೂ. ನಗದು, ನಾಲ್ಕು ಸರಕು ವಾಹನಗಳು, ಕಲಬೆರಕೆ ತುಪ್ಪ ತಯಾರಿಸಲು ಬಳಸಿದ ಯಂತ್ರೋಪಕರಣಗಳು ಮತ್ತು ಇತರ ಸಂಬಂಧಿತ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಆಸ್ತಿಯ ಒಟ್ಟು ಮೌಲ್ಯ ಸುಮಾರು 1.27 ಕೋಟಿ ರೂ.” ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...