Homeಕರ್ನಾಟಕಸಿಸಿಬಿ- ಕೆಎಂಎಫ್ ವಿಜಿಲೆನ್ಸ್ ವಿಂಗ್ ಜಂಟಿ ಕಾರ್ಯಾಚರಣೆ; ನಕಲಿ ನಂದಿನಿ ತುಪ್ಪ ತಯಾರಿಸುತ್ತಿದ್ದ ಜಾಲ ಪತ್ತೆ

ಸಿಸಿಬಿ- ಕೆಎಂಎಫ್ ವಿಜಿಲೆನ್ಸ್ ವಿಂಗ್ ಜಂಟಿ ಕಾರ್ಯಾಚರಣೆ; ನಕಲಿ ನಂದಿನಿ ತುಪ್ಪ ತಯಾರಿಸುತ್ತಿದ್ದ ಜಾಲ ಪತ್ತೆ

- Advertisement -
- Advertisement -

ಬೆಂಗಳೂರಿನಾದ್ಯಂತ ನಂದಿನಿ ಡೈರಿ ಪಾರ್ಲರ್‌ಗಳಿಗೆ ನಕಲಿ ತುಪ್ಪ ಉತ್ಪನ್ನಗಳನ್ನು ಪೂರೈಸುತ್ತಿದ್ದ ಜಾಲವನ್ನು ಭೇದಿಸಲಾಗಿದ್ದು, ಅಧಿಕೃತ ವಿತರಕರೇ ಹಣದಾಸೆಗೆ ನಡೆಸುತ್ತಿದ್ದ ಕಲಬೆರಕೆ ಕೃತ್ಯವನ್ನು ಅಧಿಕಾರಿಗಳು ಬಯಲು ಮಾಡಿದ್ದಾರೆ.

ತಮಿಳುನಾಡಿನಲ್ಲಿ ಕಲಬೆರಕೆ ತುಪ್ಪ ಉತ್ಪಾದಿಸಿ, ನಕಲಿ ನಂದಿನಿ ಸ್ಯಾಚೆಟ್‌ಗಳು ಮತ್ತು ಪ್ಲಾಸ್ಟಿಕ್ ಬಾಟಲಿಗಳಲ್ಲಿ ತುಂಬಿಸಿ, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಪರವಾನಗಿಗಳನ್ನು ಹೊಂದಿರುವ ಬೆಂಗಳೂರಿನ ಆರೋಪಿಗಳಿಗೆ ಪೂರೈಸಿದ್ದಾರೆ ಎಂದು ತನಿಖೆಯಿಂದ ಬಹಿರಂಗವಾಗಿದೆ. ಆರೋಪಿತ ವಿತರಕರು ನಕಲಿ ತುಪ್ಪವನ್ನು ಸಗಟು ಅಂಗಡಿಗಳು, ಚಿಲ್ಲರೆ ಮಾರಾಟ ಮಳಿಗೆಗಳು ಮತ್ತು ನಂದಿನಿ ಪಾರ್ಲರ್‌ಗಳಿಗೆ ಪೂರ್ಣ ಮಾರುಕಟ್ಟೆ ಬೆಲೆಗೆ ಮಾರಾಟ ಮಾಡಿದ್ದಾರೆ.

ತುಪ್ಪ ಪೂರೈಕೆಯಲ್ಲಿ ವ್ಯತ್ಯಾಸ ಗಮನಿಸಿದ ಕೆಎಂಎಫ್ ಅಧಿಕಾರಿಗಳು ತನಿಖೆಗೆ ಇಳಿದ ನಂತರ ಹಗರಣ ಬೆಳಕಿಗೆ ಬಂದಿದೆ. ನಿಯಮಿತವಾಗಿ ದೊಡ್ಡ ಪ್ರಮಾಣದ ತುಪ್ಪದ ಆರ್ಡರ್‌ಗಳನ್ನು ನೀಡುತ್ತಿದ್ದ ಅಧಿಕೃತ ಕೆಎಂಎಫ್ ಡೀಲರ್-ಕಮ್-ವಿತರಕ ಮಹೇಂದ್ರ ಇದ್ದಕ್ಕಿದ್ದಂತೆ ತನ್ನ ಆರ್ಡರ್‌ ಕಡಿತಗೊಳಿಸಲು ಪ್ರಾರಂಭಿಸಿದರು. ಸಾಮಾನ್ಯವಾಗಿ ಆರ್ಡರ್‌ ಮಾಡುತ್ತಿದ್ದ 100 ಲೀಟರ್‌ಗಳ ಬದಲಿಗೆ, ಅವರು ಇತ್ತೀಚಿನ ತಿಂಗಳುಗಳಲ್ಲಿ ಕೇವಲ 50 ಲೀಟರ್‌ಗಳನ್ನು ಆರ್ಡರ್ ಮಾಡುತ್ತಿದ್ದರು.

ಇದರಿಂದ ಅಧಿಕಾರಿಗಳಿಗೆ ಅನುಮಾನ ಶುರುವಾಗಿದೆ. ಪ್ರಮುಖ ಆರೋಪಿ ಮಹೇಂದ್ರ, ಪಾಮ್ ಆಯಿಲ್ ಮತ್ತು ಇತರ ಕೊಬ್ಬನ್ನು ನಿಜವಾದ ನಂದಿನಿ ತುಪ್ಪದೊಂದಿಗೆ ಬೆರೆಸಿ, 1 ಲೀಟರ್ ನಿಜವಾದ ತುಪ್ಪದಿಂದ 5 ಲೀಟರ್ ಕಲಬೆರಕೆ ಉತ್ಪನ್ನವನ್ನಾಗಿ ಪರಿವರ್ತಿಸುತ್ತಿದ್ದ ಎಂದು ತಿಳಿದುಬಂದಿದೆ. ನಂತರ ಈ ನಕಲಿ ತುಪ್ಪವನ್ನು ನಗರದಾದ್ಯಂತ ನಂದಿನಿ ಪಾರ್ಲರ್‌ಗಳಿಗೆ ಸರಬರಾಜು ಮಾಡುತ್ತಿದ್ದ.

ಸಿಸಿಬಿ ವಿಶೇಷ ತನಿಖಾ ದಳ ಮತ್ತು ಕೆಎಂಎಫ್ ವಿಜಿಲೆನ್ಸ್ ವಿಂಗ್ ಜಂಟಿ ಕಾರ್ಯಾಚರಣೆ ನಡೆಸಿ, ರಹಸ್ಯವಾಗಿ ಸಂಗ್ರಹಿಸಿದ ಗುಪ್ತಚರ ಮಾಹಿತಿಯ ಮೇರೆಗೆ ಜಾಲವನ್ನು ಪತ್ತೆಹಚ್ಚಿತು. ಶುಕ್ರವಾರ, ಈ ತಂಡಗಳು ಚಾಮರಾಜಪೇಟೆಯಲ್ಲಿರುವ ಕೃಷ್ಣ ಎಂಟರ್‌ಪ್ರೈಸಸ್‌ಗೆ ಸೇರಿದ, ಪ್ರಮುಖ ಆರೋಪಿ ಮತ್ತು ಅವರ ಕುಟುಂಬದ ಒಡೆತನದ ಗೋದಾಮುಗಳು, ಅಂಗಡಿ ಸೇರಿದಂತೆ ಸರಕು ವಾಹನಗಳ ಮೇಲೆ ದಾಳಿ ನಡೆಸಿದವು. ಕಲಬೆರಕೆ ತುಪ್ಪ ಸಾಗಿಸುತ್ತಿದ್ದ ವಾಹನವನ್ನು ವಶಪಡಿಸಿಕೊಂಡು ಚಾಲಕನನ್ನು ಬಂಧಿಸಲಾಯಿತು.

ತನಿಖೆ ವಿಸ್ತರಿಸಿದ ಕೆಎಂಎಫ್ ವಿಜಿಲೆನ್ಸ್ ತಂಡ, ಮಹೇಂದ್ರನ ಕಾರ್ಯಾಚರಣೆಯ ಸಂಪೂರ್ಣ ವ್ಯಾಪ್ತಿಯನ್ನು ಬಹಿರಂಗಪಡಿದೆ. ಮೂಲಗಳ ಪ್ರಕಾರ, ಅವನು ತನ್ನ ಮಗಳ ಮದುವೆಗೆ ಹಣ ಸಂಗ್ರಹಿಸಲು ಕಲಬೆರಕೆ ಆರಂಭಿಸಿದ್ದ ಎಂದು ಆರೋಪಿಸಲಾಗಿದೆ.

“ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಅಧಿಕಾರಿಗಳು 8,136 ಲೀಟರ್ ಕಲಬೆರಕೆ ತುಪ್ಪ, ತೆಂಗಿನಕಾಯಿ ಮತ್ತು ತಾಳೆ ಎಣ್ಣೆ, 1.19 ಲಕ್ಷ ರೂ. ನಗದು, ನಾಲ್ಕು ಸರಕು ವಾಹನಗಳು, ಕಲಬೆರಕೆ ತುಪ್ಪ ತಯಾರಿಸಲು ಬಳಸಿದ ಯಂತ್ರೋಪಕರಣಗಳು ಮತ್ತು ಇತರ ಸಂಬಂಧಿತ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಆಸ್ತಿಯ ಒಟ್ಟು ಮೌಲ್ಯ ಸುಮಾರು 1.27 ಕೋಟಿ ರೂ.” ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...