Homeಕರ್ನಾಟಕಸಿಸಿಬಿ- ಕೆಎಂಎಫ್ ವಿಜಿಲೆನ್ಸ್ ವಿಂಗ್ ಜಂಟಿ ಕಾರ್ಯಾಚರಣೆ; ನಕಲಿ ನಂದಿನಿ ತುಪ್ಪ ತಯಾರಿಸುತ್ತಿದ್ದ ಜಾಲ ಪತ್ತೆ

ಸಿಸಿಬಿ- ಕೆಎಂಎಫ್ ವಿಜಿಲೆನ್ಸ್ ವಿಂಗ್ ಜಂಟಿ ಕಾರ್ಯಾಚರಣೆ; ನಕಲಿ ನಂದಿನಿ ತುಪ್ಪ ತಯಾರಿಸುತ್ತಿದ್ದ ಜಾಲ ಪತ್ತೆ

- Advertisement -
- Advertisement -

ಬೆಂಗಳೂರಿನಾದ್ಯಂತ ನಂದಿನಿ ಡೈರಿ ಪಾರ್ಲರ್‌ಗಳಿಗೆ ನಕಲಿ ತುಪ್ಪ ಉತ್ಪನ್ನಗಳನ್ನು ಪೂರೈಸುತ್ತಿದ್ದ ಜಾಲವನ್ನು ಭೇದಿಸಲಾಗಿದ್ದು, ಅಧಿಕೃತ ವಿತರಕರೇ ಹಣದಾಸೆಗೆ ನಡೆಸುತ್ತಿದ್ದ ಕಲಬೆರಕೆ ಕೃತ್ಯವನ್ನು ಅಧಿಕಾರಿಗಳು ಬಯಲು ಮಾಡಿದ್ದಾರೆ.

ತಮಿಳುನಾಡಿನಲ್ಲಿ ಕಲಬೆರಕೆ ತುಪ್ಪ ಉತ್ಪಾದಿಸಿ, ನಕಲಿ ನಂದಿನಿ ಸ್ಯಾಚೆಟ್‌ಗಳು ಮತ್ತು ಪ್ಲಾಸ್ಟಿಕ್ ಬಾಟಲಿಗಳಲ್ಲಿ ತುಂಬಿಸಿ, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಪರವಾನಗಿಗಳನ್ನು ಹೊಂದಿರುವ ಬೆಂಗಳೂರಿನ ಆರೋಪಿಗಳಿಗೆ ಪೂರೈಸಿದ್ದಾರೆ ಎಂದು ತನಿಖೆಯಿಂದ ಬಹಿರಂಗವಾಗಿದೆ. ಆರೋಪಿತ ವಿತರಕರು ನಕಲಿ ತುಪ್ಪವನ್ನು ಸಗಟು ಅಂಗಡಿಗಳು, ಚಿಲ್ಲರೆ ಮಾರಾಟ ಮಳಿಗೆಗಳು ಮತ್ತು ನಂದಿನಿ ಪಾರ್ಲರ್‌ಗಳಿಗೆ ಪೂರ್ಣ ಮಾರುಕಟ್ಟೆ ಬೆಲೆಗೆ ಮಾರಾಟ ಮಾಡಿದ್ದಾರೆ.

ತುಪ್ಪ ಪೂರೈಕೆಯಲ್ಲಿ ವ್ಯತ್ಯಾಸ ಗಮನಿಸಿದ ಕೆಎಂಎಫ್ ಅಧಿಕಾರಿಗಳು ತನಿಖೆಗೆ ಇಳಿದ ನಂತರ ಹಗರಣ ಬೆಳಕಿಗೆ ಬಂದಿದೆ. ನಿಯಮಿತವಾಗಿ ದೊಡ್ಡ ಪ್ರಮಾಣದ ತುಪ್ಪದ ಆರ್ಡರ್‌ಗಳನ್ನು ನೀಡುತ್ತಿದ್ದ ಅಧಿಕೃತ ಕೆಎಂಎಫ್ ಡೀಲರ್-ಕಮ್-ವಿತರಕ ಮಹೇಂದ್ರ ಇದ್ದಕ್ಕಿದ್ದಂತೆ ತನ್ನ ಆರ್ಡರ್‌ ಕಡಿತಗೊಳಿಸಲು ಪ್ರಾರಂಭಿಸಿದರು. ಸಾಮಾನ್ಯವಾಗಿ ಆರ್ಡರ್‌ ಮಾಡುತ್ತಿದ್ದ 100 ಲೀಟರ್‌ಗಳ ಬದಲಿಗೆ, ಅವರು ಇತ್ತೀಚಿನ ತಿಂಗಳುಗಳಲ್ಲಿ ಕೇವಲ 50 ಲೀಟರ್‌ಗಳನ್ನು ಆರ್ಡರ್ ಮಾಡುತ್ತಿದ್ದರು.

ಇದರಿಂದ ಅಧಿಕಾರಿಗಳಿಗೆ ಅನುಮಾನ ಶುರುವಾಗಿದೆ. ಪ್ರಮುಖ ಆರೋಪಿ ಮಹೇಂದ್ರ, ಪಾಮ್ ಆಯಿಲ್ ಮತ್ತು ಇತರ ಕೊಬ್ಬನ್ನು ನಿಜವಾದ ನಂದಿನಿ ತುಪ್ಪದೊಂದಿಗೆ ಬೆರೆಸಿ, 1 ಲೀಟರ್ ನಿಜವಾದ ತುಪ್ಪದಿಂದ 5 ಲೀಟರ್ ಕಲಬೆರಕೆ ಉತ್ಪನ್ನವನ್ನಾಗಿ ಪರಿವರ್ತಿಸುತ್ತಿದ್ದ ಎಂದು ತಿಳಿದುಬಂದಿದೆ. ನಂತರ ಈ ನಕಲಿ ತುಪ್ಪವನ್ನು ನಗರದಾದ್ಯಂತ ನಂದಿನಿ ಪಾರ್ಲರ್‌ಗಳಿಗೆ ಸರಬರಾಜು ಮಾಡುತ್ತಿದ್ದ.

ಸಿಸಿಬಿ ವಿಶೇಷ ತನಿಖಾ ದಳ ಮತ್ತು ಕೆಎಂಎಫ್ ವಿಜಿಲೆನ್ಸ್ ವಿಂಗ್ ಜಂಟಿ ಕಾರ್ಯಾಚರಣೆ ನಡೆಸಿ, ರಹಸ್ಯವಾಗಿ ಸಂಗ್ರಹಿಸಿದ ಗುಪ್ತಚರ ಮಾಹಿತಿಯ ಮೇರೆಗೆ ಜಾಲವನ್ನು ಪತ್ತೆಹಚ್ಚಿತು. ಶುಕ್ರವಾರ, ಈ ತಂಡಗಳು ಚಾಮರಾಜಪೇಟೆಯಲ್ಲಿರುವ ಕೃಷ್ಣ ಎಂಟರ್‌ಪ್ರೈಸಸ್‌ಗೆ ಸೇರಿದ, ಪ್ರಮುಖ ಆರೋಪಿ ಮತ್ತು ಅವರ ಕುಟುಂಬದ ಒಡೆತನದ ಗೋದಾಮುಗಳು, ಅಂಗಡಿ ಸೇರಿದಂತೆ ಸರಕು ವಾಹನಗಳ ಮೇಲೆ ದಾಳಿ ನಡೆಸಿದವು. ಕಲಬೆರಕೆ ತುಪ್ಪ ಸಾಗಿಸುತ್ತಿದ್ದ ವಾಹನವನ್ನು ವಶಪಡಿಸಿಕೊಂಡು ಚಾಲಕನನ್ನು ಬಂಧಿಸಲಾಯಿತು.

ತನಿಖೆ ವಿಸ್ತರಿಸಿದ ಕೆಎಂಎಫ್ ವಿಜಿಲೆನ್ಸ್ ತಂಡ, ಮಹೇಂದ್ರನ ಕಾರ್ಯಾಚರಣೆಯ ಸಂಪೂರ್ಣ ವ್ಯಾಪ್ತಿಯನ್ನು ಬಹಿರಂಗಪಡಿದೆ. ಮೂಲಗಳ ಪ್ರಕಾರ, ಅವನು ತನ್ನ ಮಗಳ ಮದುವೆಗೆ ಹಣ ಸಂಗ್ರಹಿಸಲು ಕಲಬೆರಕೆ ಆರಂಭಿಸಿದ್ದ ಎಂದು ಆರೋಪಿಸಲಾಗಿದೆ.

“ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಅಧಿಕಾರಿಗಳು 8,136 ಲೀಟರ್ ಕಲಬೆರಕೆ ತುಪ್ಪ, ತೆಂಗಿನಕಾಯಿ ಮತ್ತು ತಾಳೆ ಎಣ್ಣೆ, 1.19 ಲಕ್ಷ ರೂ. ನಗದು, ನಾಲ್ಕು ಸರಕು ವಾಹನಗಳು, ಕಲಬೆರಕೆ ತುಪ್ಪ ತಯಾರಿಸಲು ಬಳಸಿದ ಯಂತ್ರೋಪಕರಣಗಳು ಮತ್ತು ಇತರ ಸಂಬಂಧಿತ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಆಸ್ತಿಯ ಒಟ್ಟು ಮೌಲ್ಯ ಸುಮಾರು 1.27 ಕೋಟಿ ರೂ.” ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...