Homeಕರ್ನಾಟಕಜಾರಕಿಹೊಳಿ ಸಿಡಿ ಮಾಡಿದವರನ್ನು ಪತ್ತೆ ಹಚ್ಚಲು SIT ರಚಿಸಿದ ರಾಜ್ಯ ಸರ್ಕಾರ

ಜಾರಕಿಹೊಳಿ ಸಿಡಿ ಮಾಡಿದವರನ್ನು ಪತ್ತೆ ಹಚ್ಚಲು SIT ರಚಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಕಳೆದ ವಾರ ಮಾಧ್ಯಮಗಳಲ್ಲಿ ಪ್ರಸಾರಗೊಂಡು ರಾಜ್ಯ ರಾಜಕೀಯದಲ್ಲಿ ಬದಲಾವಣೆಗೆ ಕಾರಣವಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಿಡಿ ಪ್ರಕರಣವನ್ನು ಷಡ್ಯಂತ್ರ ಎಂದು ಕರೆದಿರುವ ರಾಜ್ಯ ಸರ್ಕಾರ, ಸಿಡಿ ಮಾಡಿದ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.

’ಜಾರಕಿಹೊಳಿ ಸಿ.ಡಿ ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಮುಖ್ಯಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರಕರಣದ ಹಿಂದಿರುವ ವ್ಯಕ್ತಿಗಳು ಯಾರು, ಅವರ ಉದ್ದೇಶಗಳೇನು, ಸಿಡಿ ಎಲ್ಲಿ ತಯಾರಾಗಿದೆ? ವೆಬ್‌ಸೈಟ್‌ಗಳಿಗೆ ಎಲ್ಲಿಂದ ಸಿಡಿ ಅಪ್‌ಲೋಡ್ ಆಗಿದೆ ಎಂಬ ಬಗ್ಗೆ ಈ ವಿಶೇಷ ತನಿಖಾ ತಂಡ ಕೂಲಂಕಷವಾಗಿ ತನಿಖೆ ನಡೆಸಲಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ಮಾಜಿ ಸಚಿವ ರಮೇಶ ಜಾರಕಿಹೊಳಿ ನನಗೆ ಪತ್ರ ಬರೆದಿದ್ದು, ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶದಿಂದ ಹಲವರು ಸೇರಿ ತಮ್ಮ ವಿರುದ್ಧ ಷಡ್ಯಂತ್ರ ರಚಿಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ ಎಂದಿದ್ದಾರೆ.

ಪ್ರತ್ಯೇಕವಾಗಿ ಪತ್ರಿಕಾಗೋಷ್ಠಿ ಕರೆದಿದ್ದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಪ್ರಕರಣದ ಕುರಿತು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರಲ್ಲಿ ಮನವಿ ಮಾಡಿದ್ದರು. ಜೊತೆಗೆ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಿರುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಈ ಸಿಡಿ 100 ರಷ್ಟು ನಕಲಿ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ನನ್ನ ರಾಜಕೀಯ ಏಳಿಗೆ ಸಹಿಸದ ಜನ, ನನ್ನನ್ನು ಎದುರಿಸಲಾಗದವರು ಈ ಕೆಲಸ ಮಾಡಿದ್ದಾರೆ.  ನಾನು ನಿರಪರಾಧಿ’ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದರು.

ಇದನ್ನೂ ಓದಿ: ವೀರಶೈವ ಲಿಂಗಾಯತ, ಒಕ್ಕಲಿಗರ ನಿಗಮ ಸ್ಥಾಪನೆಯನ್ನು ಸ್ವಾಗತಿಸುತ್ತೇನೆ: ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

ಸಿಡಿ ನಕಲಿ ಎಂದು ಹೇಳಿ ಈಗ ಎಸ್‌ಐಟಿ ತನಿಖೆ ಯಾಕೆ ಎಂದು ಹಲವರು ಪ್ರಶ್ನಿಸಿದ್ದಾರೆ. ಮಾಜಿ ಸಚಿವರೇ ತನಗೆ ಕಾಂಗ್ರೆಸ್, ಜೆಡಿಎಸ್‌ನಲ್ಲಿ ಯಾರು ಶತ್ರುಗಳಿಲ್ಲ ಎಂದು ಹೇಳಿದ್ದರು. ಆದರೆ ಕಾಂಗ್ರೆಸ್, ಬಿಜೆಪಿ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ರಮೇಶ್ ಜಾರಕಿಹೊಳಿಯವರ ಮೇಲೆ ಯುವತಿಯೊಬ್ಬರಿಗೆ ಕೆಲಸದ ಆಮಿವೊಡ್ಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪವಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ  ವಿಡಿಯೋ ಸಿ.ಡಿ ಜೊತೆಗೆ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಕಳೆದೆರಡು ದಿನಗಳ ಹಿಂದೆ ದೂರ ವಾಪಸ್ ಪಡೆಯುವುದಾಗಿ ತಿಳಿಸಿದ್ದರು.

ರಾಜ್ಯ ರಾಜಕಾರಣದಲ್ಲಿ ಸಿಡಿ ಎಂಬ ಪದವೇ ಹೆಚ್ಚು ಓಡಾಡುತ್ತಿದೆ. ಹಲವು ರಾಜಕಾರಣಿಗಳ ಸಿಡಿಗಳು ಹೊರಬರಲಿವೆ ಎಂಬ ಮಾತುಗಳು ಹರಿದಾಡುತ್ತಿವೆ. ಆರು ಮಂದಿ ಸಚಿವರು ಈಗಾಗಲೇ ಮಾಧ್ಯಮಗಳಲ್ಲಿ ಸಿಡಿ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆ ತಂದಿವೆ.


ಇದನ್ನೂ ಓದಿ: ರಾಮ ಮಂದಿರ ನಿರ್ಮಾಣದ ನಂತರ ವೃದ್ದರನ್ನು ದರ್ಶನಕ್ಕಾಗಿ ಕಳುಹಿಸುತ್ತೇವೆ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...