Homeಕರ್ನಾಟಕಜಾರಕಿಹೊಳಿ ಸಿಡಿ ಮಾಡಿದವರನ್ನು ಪತ್ತೆ ಹಚ್ಚಲು SIT ರಚಿಸಿದ ರಾಜ್ಯ ಸರ್ಕಾರ

ಜಾರಕಿಹೊಳಿ ಸಿಡಿ ಮಾಡಿದವರನ್ನು ಪತ್ತೆ ಹಚ್ಚಲು SIT ರಚಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಕಳೆದ ವಾರ ಮಾಧ್ಯಮಗಳಲ್ಲಿ ಪ್ರಸಾರಗೊಂಡು ರಾಜ್ಯ ರಾಜಕೀಯದಲ್ಲಿ ಬದಲಾವಣೆಗೆ ಕಾರಣವಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಿಡಿ ಪ್ರಕರಣವನ್ನು ಷಡ್ಯಂತ್ರ ಎಂದು ಕರೆದಿರುವ ರಾಜ್ಯ ಸರ್ಕಾರ, ಸಿಡಿ ಮಾಡಿದ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.

’ಜಾರಕಿಹೊಳಿ ಸಿ.ಡಿ ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಮುಖ್ಯಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪ್ರಕರಣದ ಹಿಂದಿರುವ ವ್ಯಕ್ತಿಗಳು ಯಾರು, ಅವರ ಉದ್ದೇಶಗಳೇನು, ಸಿಡಿ ಎಲ್ಲಿ ತಯಾರಾಗಿದೆ? ವೆಬ್‌ಸೈಟ್‌ಗಳಿಗೆ ಎಲ್ಲಿಂದ ಸಿಡಿ ಅಪ್‌ಲೋಡ್ ಆಗಿದೆ ಎಂಬ ಬಗ್ಗೆ ಈ ವಿಶೇಷ ತನಿಖಾ ತಂಡ ಕೂಲಂಕಷವಾಗಿ ತನಿಖೆ ನಡೆಸಲಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ಮಾಜಿ ಸಚಿವ ರಮೇಶ ಜಾರಕಿಹೊಳಿ ನನಗೆ ಪತ್ರ ಬರೆದಿದ್ದು, ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶದಿಂದ ಹಲವರು ಸೇರಿ ತಮ್ಮ ವಿರುದ್ಧ ಷಡ್ಯಂತ್ರ ರಚಿಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ ಎಂದಿದ್ದಾರೆ.

ಪ್ರತ್ಯೇಕವಾಗಿ ಪತ್ರಿಕಾಗೋಷ್ಠಿ ಕರೆದಿದ್ದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಪ್ರಕರಣದ ಕುರಿತು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರಲ್ಲಿ ಮನವಿ ಮಾಡಿದ್ದರು. ಜೊತೆಗೆ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಿರುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಈ ಸಿಡಿ 100 ರಷ್ಟು ನಕಲಿ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ನನ್ನ ರಾಜಕೀಯ ಏಳಿಗೆ ಸಹಿಸದ ಜನ, ನನ್ನನ್ನು ಎದುರಿಸಲಾಗದವರು ಈ ಕೆಲಸ ಮಾಡಿದ್ದಾರೆ.  ನಾನು ನಿರಪರಾಧಿ’ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದರು.

ಇದನ್ನೂ ಓದಿ: ವೀರಶೈವ ಲಿಂಗಾಯತ, ಒಕ್ಕಲಿಗರ ನಿಗಮ ಸ್ಥಾಪನೆಯನ್ನು ಸ್ವಾಗತಿಸುತ್ತೇನೆ: ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

ಸಿಡಿ ನಕಲಿ ಎಂದು ಹೇಳಿ ಈಗ ಎಸ್‌ಐಟಿ ತನಿಖೆ ಯಾಕೆ ಎಂದು ಹಲವರು ಪ್ರಶ್ನಿಸಿದ್ದಾರೆ. ಮಾಜಿ ಸಚಿವರೇ ತನಗೆ ಕಾಂಗ್ರೆಸ್, ಜೆಡಿಎಸ್‌ನಲ್ಲಿ ಯಾರು ಶತ್ರುಗಳಿಲ್ಲ ಎಂದು ಹೇಳಿದ್ದರು. ಆದರೆ ಕಾಂಗ್ರೆಸ್, ಬಿಜೆಪಿ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ರಮೇಶ್ ಜಾರಕಿಹೊಳಿಯವರ ಮೇಲೆ ಯುವತಿಯೊಬ್ಬರಿಗೆ ಕೆಲಸದ ಆಮಿವೊಡ್ಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪವಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ  ವಿಡಿಯೋ ಸಿ.ಡಿ ಜೊತೆಗೆ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಕಳೆದೆರಡು ದಿನಗಳ ಹಿಂದೆ ದೂರ ವಾಪಸ್ ಪಡೆಯುವುದಾಗಿ ತಿಳಿಸಿದ್ದರು.

ರಾಜ್ಯ ರಾಜಕಾರಣದಲ್ಲಿ ಸಿಡಿ ಎಂಬ ಪದವೇ ಹೆಚ್ಚು ಓಡಾಡುತ್ತಿದೆ. ಹಲವು ರಾಜಕಾರಣಿಗಳ ಸಿಡಿಗಳು ಹೊರಬರಲಿವೆ ಎಂಬ ಮಾತುಗಳು ಹರಿದಾಡುತ್ತಿವೆ. ಆರು ಮಂದಿ ಸಚಿವರು ಈಗಾಗಲೇ ಮಾಧ್ಯಮಗಳಲ್ಲಿ ಸಿಡಿ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆ ತಂದಿವೆ.


ಇದನ್ನೂ ಓದಿ: ರಾಮ ಮಂದಿರ ನಿರ್ಮಾಣದ ನಂತರ ವೃದ್ದರನ್ನು ದರ್ಶನಕ್ಕಾಗಿ ಕಳುಹಿಸುತ್ತೇವೆ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...