Homeಕರ್ನಾಟಕಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ಮೈ ತೋರಿಸಿಕೊಂಡವಳು ಅವಳು ನನ್ನ ಪರ ಇರಲು ಸಾಧ್ಯವೇ? ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

- Advertisement -
- Advertisement -

ಕಳೆದೊಂದು ತಿಂಗಳಿನಿಂದ ವಿವಾದ ಹುಟ್ಟು ಹಾಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಲೈಂಗಿಕ ಸಿಡಿ ಪ್ರಕರಣದಲ್ಲಿ ಮತ್ತೊಂದು ತಿರುವು ಸಿಕ್ಕಿದ್ದು, ವಿಡಿಯೋದಲ್ಲಿದ್ದವರು ಎಂದು ಹೇಳಲಾದ ಸಂತ್ರಸ್ತ ಯುವತಿಯು ಇಂದು ಸಚಿವರ ವಿರುದ್ಧ ಕೆಲಸ ನೀಡುವುದಾಗಿ ಲೈಂಗಿಕ ದುರುಪಯೋಗದ ಆರೋಪದಲ್ಲಿ ದೂರು ದಾಖಲಿಸಿದ್ದಾರೆ.

ಈ ಕುರಿತು ಸಂತ್ರಸ್ತ ಯುವತಿಯು 29 ಸೆಕೆಂಡ್‌ಗಳ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, “ಎಲ್ಲರ ಬೆಂಬಲದಿಂದ ನಾನು ಇಂದು ಬದುಕುಳಿದಿದ್ದೇನೆ. ಕಳೆದ 24 ದಿನಗಳಿಂದ ಜೀವ ಕೈಯಲ್ಲಿಡಿದು ಬದುಕಿದೆ. ಈಗ ನಿಮ್ಮ ಬೆಂಬಲದಿಂದ ನಾನು ರಮೇಶ್ ಜಾರಕಿಹೊಳಿಯವರ ವಿರುದ್ದ ನಮ್ಮ ವಕೀಲರಾದ ಜಗದೀಶ್ ಅವರ ಮೂಲಕ ಪೊಲೀಸ್ ಕಮಿಷನರ್‌ರವರಿಗೆ ದೂರು ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಈ ಬೆನ್ನಲ್ಲೇ ವಕೀಲರಾದ ಜಗದೀಶ್‌ರವರು ಸಹ, “ಸಂತ್ರಸ್ತ ಯುವತಿಗೆ ನ್ಯಾಯ ದೊರಕಿಸಿಕೊಡುವುದಾಗಿ ನಾವು ಘೋಷಿಸಿದ್ದೇವೆ. ಅದರಂತೆ ಆಕೆ ನಮ್ಮ ಸಹಾಯ ಕೋರಿ ಪತ್ರ ಬರೆದಿದ್ದಾರೆ. ಸ್ವಂತ ಕೈ ಬರಹದಲ್ಲಿ 2 ಪುಟಗಳ ದೂರು ಸಲ್ಲಿಸಿದ್ದಾಳೆ. ಅದನ್ನು ಈ ಪ್ರಕರಣದ ಎಸ್‌ಐಟಿ ಮುಖ್ಯಸ್ಥರಾದ ನಗರ ಪೊಲೀಸ್ ಕಮಿಷನರ್‌ರವರಿಗೆ ತಲುಪಿಸಿದ್ದೇವೆ” ಎಂದು ಫೇಸ್‌ಬುಕ್ ಮೂಲಕ ತಿಳಿಸಿದ್ದಾರೆ.

ಸಂತ್ರಸ್ತ ಯುವತಿಯು ಎರಡು ದಿನಗಳ ಹಿಂದೆ ತಾನೇ ವಿಡಿಯೋವೊಂದನ್ನು ಬಿಡುಗಡೆ ಮಾಡಿ “ದಯವಿಟ್ಟು ನನ್ನ ತಂದೆ ತಾಯಿಯರಿಗೆ ರಕ್ಷಣೆ ನೀಡಿ. ಅವರು ಸುರಕ್ಷಿತರವಾಗಿದ್ದರೆ ನಾನು ಎಸ್‌ಐಟಿ ಮುಂದೆ ಬಂದು ಹೇಳಿಕೆ ನೀಡುತ್ತೇನೆ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ರವರು ನನಗೆ ಸಹಾಯ ಮಾಡಬೇಕು” ಎಂದು ಮನವಿ ಮಾಡಿದ್ದರು.

ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿಯವರು ಉದ್ಯೋಗದ ಭರವಸೆ ನೀಡಿ ತಮ್ಮನ್ನು ಲೈಂಗಿಕವಾಗಿ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.

ನಾಳೆ ನಮ್ಮ ಅಸ್ತ್ರ ಪ್ರಯೋಗ ಆಗಲಿದೆ: ರಮೇಶ್ ಜಾರಕಿಹೊಳಿ

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ರಮೇಶ್ ಜಾರಕಿಹೊಳಿ, “ಇಂತಹ ಹತ್ತು ಕಂಪ್ಲೈಂಟ್ ಮತ್ತು ಹತ್ತು ಜನ ಬಂದರೂ ನಾನು ಹೆದರಿಸುತ್ತೇನೆ. ಈ ಕುರಿತು ಏನು ಮಾಡಬೇಕೆಂದು ನಾನು ಕಾನೂನು ತಜ್ಞರ ಜೊತೆ ಚರ್ಚೆ ಮಾಡಿದ್ದೇನೆ. ನನ್ನ ತಪ್ಪಿದ್ರೆ ನಾನೇ ಜೈಲಿಗೆ ಹೋಗುತ್ತೇನೆ, ನಾಳೆ ನಮ್ಮ ಅಸ್ತ್ರ ಪ್ರಯೋಗ ಆಗಲಿದೆ” ಎಂದಿದ್ದಾರೆ.

ನಾನು ಸಿಎಂಗೆ, ಗೃಹಸಚಿವರಿಗೆ ಇದರ ಹಿಂದೆ ಯಾರಿದ್ದಾರೆ ಹೇಳಿದ್ದೀನಿ. ಇದೆಲ್ಲ ಷಡ್ಯಂತ್ರ, ಅವರ ಕೊನೆಯ ಅಸ್ತ್ರ ಮುಗಿದಿದೆ. ನನ್ನ ಆಟ ಈಗ ಶುರುವಾಗಿದೆ. ಮೈ ತೋರಿಸಿಕೊಂಡವಳು ಅವಳು ನನ್ನ ಪರ ಇರಲು ಸಾಧ್ಯವೇ? ಸರ್ಕಾರವನ್ನು ತೆಗೆದವನು ನಾನು ಇದಕ್ಕೆ ಹೆದರುತ್ತೇನೆಯೇ? ಎಂದಿದ್ದಾರೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....