Homeಕರ್ನಾಟಕಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ಮೈ ತೋರಿಸಿಕೊಂಡವಳು ಅವಳು ನನ್ನ ಪರ ಇರಲು ಸಾಧ್ಯವೇ? ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

- Advertisement -
- Advertisement -

ಕಳೆದೊಂದು ತಿಂಗಳಿನಿಂದ ವಿವಾದ ಹುಟ್ಟು ಹಾಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಲೈಂಗಿಕ ಸಿಡಿ ಪ್ರಕರಣದಲ್ಲಿ ಮತ್ತೊಂದು ತಿರುವು ಸಿಕ್ಕಿದ್ದು, ವಿಡಿಯೋದಲ್ಲಿದ್ದವರು ಎಂದು ಹೇಳಲಾದ ಸಂತ್ರಸ್ತ ಯುವತಿಯು ಇಂದು ಸಚಿವರ ವಿರುದ್ಧ ಕೆಲಸ ನೀಡುವುದಾಗಿ ಲೈಂಗಿಕ ದುರುಪಯೋಗದ ಆರೋಪದಲ್ಲಿ ದೂರು ದಾಖಲಿಸಿದ್ದಾರೆ.

ಈ ಕುರಿತು ಸಂತ್ರಸ್ತ ಯುವತಿಯು 29 ಸೆಕೆಂಡ್‌ಗಳ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, “ಎಲ್ಲರ ಬೆಂಬಲದಿಂದ ನಾನು ಇಂದು ಬದುಕುಳಿದಿದ್ದೇನೆ. ಕಳೆದ 24 ದಿನಗಳಿಂದ ಜೀವ ಕೈಯಲ್ಲಿಡಿದು ಬದುಕಿದೆ. ಈಗ ನಿಮ್ಮ ಬೆಂಬಲದಿಂದ ನಾನು ರಮೇಶ್ ಜಾರಕಿಹೊಳಿಯವರ ವಿರುದ್ದ ನಮ್ಮ ವಕೀಲರಾದ ಜಗದೀಶ್ ಅವರ ಮೂಲಕ ಪೊಲೀಸ್ ಕಮಿಷನರ್‌ರವರಿಗೆ ದೂರು ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಈ ಬೆನ್ನಲ್ಲೇ ವಕೀಲರಾದ ಜಗದೀಶ್‌ರವರು ಸಹ, “ಸಂತ್ರಸ್ತ ಯುವತಿಗೆ ನ್ಯಾಯ ದೊರಕಿಸಿಕೊಡುವುದಾಗಿ ನಾವು ಘೋಷಿಸಿದ್ದೇವೆ. ಅದರಂತೆ ಆಕೆ ನಮ್ಮ ಸಹಾಯ ಕೋರಿ ಪತ್ರ ಬರೆದಿದ್ದಾರೆ. ಸ್ವಂತ ಕೈ ಬರಹದಲ್ಲಿ 2 ಪುಟಗಳ ದೂರು ಸಲ್ಲಿಸಿದ್ದಾಳೆ. ಅದನ್ನು ಈ ಪ್ರಕರಣದ ಎಸ್‌ಐಟಿ ಮುಖ್ಯಸ್ಥರಾದ ನಗರ ಪೊಲೀಸ್ ಕಮಿಷನರ್‌ರವರಿಗೆ ತಲುಪಿಸಿದ್ದೇವೆ” ಎಂದು ಫೇಸ್‌ಬುಕ್ ಮೂಲಕ ತಿಳಿಸಿದ್ದಾರೆ.

ಸಂತ್ರಸ್ತ ಯುವತಿಯು ಎರಡು ದಿನಗಳ ಹಿಂದೆ ತಾನೇ ವಿಡಿಯೋವೊಂದನ್ನು ಬಿಡುಗಡೆ ಮಾಡಿ “ದಯವಿಟ್ಟು ನನ್ನ ತಂದೆ ತಾಯಿಯರಿಗೆ ರಕ್ಷಣೆ ನೀಡಿ. ಅವರು ಸುರಕ್ಷಿತರವಾಗಿದ್ದರೆ ನಾನು ಎಸ್‌ಐಟಿ ಮುಂದೆ ಬಂದು ಹೇಳಿಕೆ ನೀಡುತ್ತೇನೆ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ರವರು ನನಗೆ ಸಹಾಯ ಮಾಡಬೇಕು” ಎಂದು ಮನವಿ ಮಾಡಿದ್ದರು.

ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿಯವರು ಉದ್ಯೋಗದ ಭರವಸೆ ನೀಡಿ ತಮ್ಮನ್ನು ಲೈಂಗಿಕವಾಗಿ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.

ನಾಳೆ ನಮ್ಮ ಅಸ್ತ್ರ ಪ್ರಯೋಗ ಆಗಲಿದೆ: ರಮೇಶ್ ಜಾರಕಿಹೊಳಿ

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ರಮೇಶ್ ಜಾರಕಿಹೊಳಿ, “ಇಂತಹ ಹತ್ತು ಕಂಪ್ಲೈಂಟ್ ಮತ್ತು ಹತ್ತು ಜನ ಬಂದರೂ ನಾನು ಹೆದರಿಸುತ್ತೇನೆ. ಈ ಕುರಿತು ಏನು ಮಾಡಬೇಕೆಂದು ನಾನು ಕಾನೂನು ತಜ್ಞರ ಜೊತೆ ಚರ್ಚೆ ಮಾಡಿದ್ದೇನೆ. ನನ್ನ ತಪ್ಪಿದ್ರೆ ನಾನೇ ಜೈಲಿಗೆ ಹೋಗುತ್ತೇನೆ, ನಾಳೆ ನಮ್ಮ ಅಸ್ತ್ರ ಪ್ರಯೋಗ ಆಗಲಿದೆ” ಎಂದಿದ್ದಾರೆ.

ನಾನು ಸಿಎಂಗೆ, ಗೃಹಸಚಿವರಿಗೆ ಇದರ ಹಿಂದೆ ಯಾರಿದ್ದಾರೆ ಹೇಳಿದ್ದೀನಿ. ಇದೆಲ್ಲ ಷಡ್ಯಂತ್ರ, ಅವರ ಕೊನೆಯ ಅಸ್ತ್ರ ಮುಗಿದಿದೆ. ನನ್ನ ಆಟ ಈಗ ಶುರುವಾಗಿದೆ. ಮೈ ತೋರಿಸಿಕೊಂಡವಳು ಅವಳು ನನ್ನ ಪರ ಇರಲು ಸಾಧ್ಯವೇ? ಸರ್ಕಾರವನ್ನು ತೆಗೆದವನು ನಾನು ಇದಕ್ಕೆ ಹೆದರುತ್ತೇನೆಯೇ? ಎಂದಿದ್ದಾರೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...