Homeಕರ್ನಾಟಕಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ಮೈ ತೋರಿಸಿಕೊಂಡವಳು ಅವಳು ನನ್ನ ಪರ ಇರಲು ಸಾಧ್ಯವೇ? ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

- Advertisement -
- Advertisement -

ಕಳೆದೊಂದು ತಿಂಗಳಿನಿಂದ ವಿವಾದ ಹುಟ್ಟು ಹಾಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಲೈಂಗಿಕ ಸಿಡಿ ಪ್ರಕರಣದಲ್ಲಿ ಮತ್ತೊಂದು ತಿರುವು ಸಿಕ್ಕಿದ್ದು, ವಿಡಿಯೋದಲ್ಲಿದ್ದವರು ಎಂದು ಹೇಳಲಾದ ಸಂತ್ರಸ್ತ ಯುವತಿಯು ಇಂದು ಸಚಿವರ ವಿರುದ್ಧ ಕೆಲಸ ನೀಡುವುದಾಗಿ ಲೈಂಗಿಕ ದುರುಪಯೋಗದ ಆರೋಪದಲ್ಲಿ ದೂರು ದಾಖಲಿಸಿದ್ದಾರೆ.

ಈ ಕುರಿತು ಸಂತ್ರಸ್ತ ಯುವತಿಯು 29 ಸೆಕೆಂಡ್‌ಗಳ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, “ಎಲ್ಲರ ಬೆಂಬಲದಿಂದ ನಾನು ಇಂದು ಬದುಕುಳಿದಿದ್ದೇನೆ. ಕಳೆದ 24 ದಿನಗಳಿಂದ ಜೀವ ಕೈಯಲ್ಲಿಡಿದು ಬದುಕಿದೆ. ಈಗ ನಿಮ್ಮ ಬೆಂಬಲದಿಂದ ನಾನು ರಮೇಶ್ ಜಾರಕಿಹೊಳಿಯವರ ವಿರುದ್ದ ನಮ್ಮ ವಕೀಲರಾದ ಜಗದೀಶ್ ಅವರ ಮೂಲಕ ಪೊಲೀಸ್ ಕಮಿಷನರ್‌ರವರಿಗೆ ದೂರು ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಈ ಬೆನ್ನಲ್ಲೇ ವಕೀಲರಾದ ಜಗದೀಶ್‌ರವರು ಸಹ, “ಸಂತ್ರಸ್ತ ಯುವತಿಗೆ ನ್ಯಾಯ ದೊರಕಿಸಿಕೊಡುವುದಾಗಿ ನಾವು ಘೋಷಿಸಿದ್ದೇವೆ. ಅದರಂತೆ ಆಕೆ ನಮ್ಮ ಸಹಾಯ ಕೋರಿ ಪತ್ರ ಬರೆದಿದ್ದಾರೆ. ಸ್ವಂತ ಕೈ ಬರಹದಲ್ಲಿ 2 ಪುಟಗಳ ದೂರು ಸಲ್ಲಿಸಿದ್ದಾಳೆ. ಅದನ್ನು ಈ ಪ್ರಕರಣದ ಎಸ್‌ಐಟಿ ಮುಖ್ಯಸ್ಥರಾದ ನಗರ ಪೊಲೀಸ್ ಕಮಿಷನರ್‌ರವರಿಗೆ ತಲುಪಿಸಿದ್ದೇವೆ” ಎಂದು ಫೇಸ್‌ಬುಕ್ ಮೂಲಕ ತಿಳಿಸಿದ್ದಾರೆ.

ಸಂತ್ರಸ್ತ ಯುವತಿಯು ಎರಡು ದಿನಗಳ ಹಿಂದೆ ತಾನೇ ವಿಡಿಯೋವೊಂದನ್ನು ಬಿಡುಗಡೆ ಮಾಡಿ “ದಯವಿಟ್ಟು ನನ್ನ ತಂದೆ ತಾಯಿಯರಿಗೆ ರಕ್ಷಣೆ ನೀಡಿ. ಅವರು ಸುರಕ್ಷಿತರವಾಗಿದ್ದರೆ ನಾನು ಎಸ್‌ಐಟಿ ಮುಂದೆ ಬಂದು ಹೇಳಿಕೆ ನೀಡುತ್ತೇನೆ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ರವರು ನನಗೆ ಸಹಾಯ ಮಾಡಬೇಕು” ಎಂದು ಮನವಿ ಮಾಡಿದ್ದರು.

ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿಯವರು ಉದ್ಯೋಗದ ಭರವಸೆ ನೀಡಿ ತಮ್ಮನ್ನು ಲೈಂಗಿಕವಾಗಿ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.

ನಾಳೆ ನಮ್ಮ ಅಸ್ತ್ರ ಪ್ರಯೋಗ ಆಗಲಿದೆ: ರಮೇಶ್ ಜಾರಕಿಹೊಳಿ

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ರಮೇಶ್ ಜಾರಕಿಹೊಳಿ, “ಇಂತಹ ಹತ್ತು ಕಂಪ್ಲೈಂಟ್ ಮತ್ತು ಹತ್ತು ಜನ ಬಂದರೂ ನಾನು ಹೆದರಿಸುತ್ತೇನೆ. ಈ ಕುರಿತು ಏನು ಮಾಡಬೇಕೆಂದು ನಾನು ಕಾನೂನು ತಜ್ಞರ ಜೊತೆ ಚರ್ಚೆ ಮಾಡಿದ್ದೇನೆ. ನನ್ನ ತಪ್ಪಿದ್ರೆ ನಾನೇ ಜೈಲಿಗೆ ಹೋಗುತ್ತೇನೆ, ನಾಳೆ ನಮ್ಮ ಅಸ್ತ್ರ ಪ್ರಯೋಗ ಆಗಲಿದೆ” ಎಂದಿದ್ದಾರೆ.

ನಾನು ಸಿಎಂಗೆ, ಗೃಹಸಚಿವರಿಗೆ ಇದರ ಹಿಂದೆ ಯಾರಿದ್ದಾರೆ ಹೇಳಿದ್ದೀನಿ. ಇದೆಲ್ಲ ಷಡ್ಯಂತ್ರ, ಅವರ ಕೊನೆಯ ಅಸ್ತ್ರ ಮುಗಿದಿದೆ. ನನ್ನ ಆಟ ಈಗ ಶುರುವಾಗಿದೆ. ಮೈ ತೋರಿಸಿಕೊಂಡವಳು ಅವಳು ನನ್ನ ಪರ ಇರಲು ಸಾಧ್ಯವೇ? ಸರ್ಕಾರವನ್ನು ತೆಗೆದವನು ನಾನು ಇದಕ್ಕೆ ಹೆದರುತ್ತೇನೆಯೇ? ಎಂದಿದ್ದಾರೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...