Homeಕರ್ನಾಟಕಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

ಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

’ಮಾನ್ಯ ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ಆರೋಪಮುಕ್ತರಾಗಿ ಹೊರಗೆ ಬರುತ್ತಾರೆ ಎಂದು ಹೇಳಿರುವುದು ನನಗೆ ತೀವ್ರ ಆತಂಕ ಉಂಟು ಮಾಡಿದೆ’

- Advertisement -
- Advertisement -

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ, ಸಿಡಿ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ಅಧಿಕಾರಿಗಳ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಭಾವ ಬೀರುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಅವರನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿ, ಸ್ವತಃ ಸಂತ್ರಸ್ತ ಯುವತಿಯೇ  ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದಿದ್ದಾರೆ.

’ನಾನು ದೂರು ನೀಡಿರುವ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ರಕ್ಷಿಸುವ ಸಲುವಾಗಿ, ನನ್ನ ವಿರುದ್ಧ ಷಡ್ಯಂತ್ರ ಮಾಡಿ, ತನಿಖಾಧಿಕಾರಿಗಳ ಮೇಲೆ ರಾಜಕೀಯ ಪ್ರಭಣಾವ ಬೀರುತ್ತಿದ್ದಾರೆ’ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಅತ್ಯಾಚಾರ ಪ್ರಕರಣವನ್ನು ಎಸ್ಐಟಿ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ತನಿಖೆ ಮಾಡುತ್ತಿಲ್ಲ. ನನಗೆ ಪ್ರತಿಬಾರಿ ನೋಟಿಸ್ ನೀಡಿ ವಿಚಾರಣೆಗೆ ಕರೆಸಲಾಗುತ್ತಿದೆ. ಆರೋಪಿ ಸ್ಥಾನದಲ್ಲಿ ಇರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರನ್ನು ವಿಚಾರಣೆ ಮಾಡುತ್ತಿಲ್ಲ. ಅವರನ್ನು ರಾಜಾರೋಷವಾಗಿ ಓಡಾಡಿಕೊಂಡಿರಲು ಬಿಟ್ಟಿದ್ದಾರೆ. ಒಟ್ಟಾರೆ ಪ್ರಕ್ರಿಯೆಗಳನ್ನು ನೋಡುತ್ತಿದ್ದರೇ, ಈ ಪ್ರಕರಣದಲ್ಲಿ ನಾನು ಸಂತ್ರಸ್ತೆಯೋ ಆರೋಪಿಯೋ ಎಂಬ ಅನುಮಾನ ಮೂಡಿದೆ ಎಂದಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಂತ್ರಸ್ತೆ ಪರ ವಕೀಲ ಜಗದೀಶ್ ವಿರುದ್ಧವೇ ದೂರು ನೀಡಿದ ಎಸ್‌ಐಟಿ!

ಸಂತ್ರಸ್ತ ಯುವತಿ ಬರೆದಿರುವ ಪತ್ರದ ಯಥಾವತ್ತು ಇಲ್ಲಿದೆ.

ವಿಷಯ: ನಾನು ನೀಡಿದ ಅತ್ಯಾಚಾರ ಪ್ರಕರಣದ ದೂರಿನ ವಿಚಾರಣೆಯಲ್ಲಿ ಆರೋಪಿ ರಕ್ಷಿಸುವ ಸಲುವಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಿ ತನಿಖಾಧಿಕಾರಿಗಳ ಮೇಲೆ ರಾಜಕೀಯ ಪ್ರಭಾವ ಬೀರುತ್ತಿರುವ ಬಗ್ಗೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ: 16-03-2021ರಂದು ನನ್ನ ವಕೀಲರಾದ ಶ್ರೀ ಜಗದೀಶ್ ಕೆ ಎನ್ ಅವರ ಮುಖಾಂತರ ತಮಗೆ ಮಾಜಿ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ಲೈಂಗಿಕ ಸಂಪರ್ಕ ಮಾಡಿ ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ ಸಂಬಂಧ ದೂರನ್ನು ಸಲ್ಲಿಸಿರುತ್ತೇನೆ.

ಈ ದೂರನ್ನು ತಾವೇ ಸ್ವೀಕರಿಸಿ ನನಗೆ ನ್ಯಾಯ ಕೊಡಿಸುವ ಸಲುವಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿ ಮೊಕದ್ದಮೆ ಸಂಖ್ಯೆ 30/2021ರಲ್ಲಿ ಐಪಿಸಿ 354(A), 506, 504, 376(C), 417 ಹಾಗೂ IT Act 67(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ. ನಂತರ ಪೊಲೀಸರು ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡುವಂತೆ ಮತ್ತು ಭದ್ರತೆ ಕಲ್ಪಿಸುವಂತೆ ಮಾಹಿತಿ ಒದಗಿಸುವಂತೆ ಪೊಲೀಸ್ ನೋಟಿಸ್ ನೀಡಲಾಗಿರುತ್ತದೆ.

ನಂತರ ನಾನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡಲಾಗಿ ನನ್ನ 164 ಹೇಳಿಕೆ ದಾಖಲಿಸಲು ಸೂಕ್ತ ಭದ್ರತೆಯೊಂದಿಗೆ ನ್ಯಾಯಾಲಯದಲ್ಲಿ ಅವಕಾಶ ಮಾಡಿಕೊಟ್ಟ ಕಾರಣ 30-03-2021ರಂದು ನಾನು ನನ್ನ ವಕೀಲರ ಮೂಲಕ ನ್ಯಾಯಾಲಯಕ್ಕೆ ಹಾಜರಾದೆನು. ಹಾಜರಾದ ದಿನ ಎಸ್ಐಟಿ ಮುಖ್ಯಸ್ಥರಾದ ಶ್ರೀ ಸೌಮೇಂದು ಮುಖರ್ಜಿ ಅವರು ನನ್ನನ್ನು ವಿಚಾರಣೆಗಾಗಿ ಆಡುಗೋಡಿ ಟೆಕ್ನಿಕಲ್ ವಿಭಾಗಕ್ಕೆ ಭದ್ರತೆಯೊಂದಿಗೆ ಕರೆದೊಯ್ದರು.

ಅಲ್ಲಿ ಅವರೊಂದಿಗೆ ಎಸ್ಐಟಿ ತಂಡದ ತನಿಖಾಧಿಕಾರಿಗಳಾದ ಶ್ರೀ ಸಂದೀಪ್ ಪಾಟೀಲ್(ಐಪಿಎಸ್), ಹಾಗೂ ಶ್ರೀಮತಿ ಕವಿತಾ (ಎಸಿಪಿ) ಇವರು ನನಗೆ ಪ್ರಕರಣ ಸಂಬಂಧವಾಗಿ ಪ್ರಶ್ನೆಗಳನ್ನು ಕೇಳಿದರು. ನಾನು ಸಂಪೂರ್ಣವಾಗಿ ಎಲ್ಲ ವಿಚಾರಗಳನ್ನು ಅವರಿಗೆ ವಿವರಿಸಿದೆನು. ನಂತರ ದಿನಾಂಕ 31-03-2021ರಂದು ನನಗೆ ವೈದ್ಯಕೀಯ ಪರೀಕ್ಷೆ ನಡೆಸಿ ಅಲ್ಲಿಂದ ಆಡುಗೋಡಿ ಟೆಕ್ನಿಕಲ್ ವಿಭಾಗಕ್ಕೆ ಕರೆದೊಯ್ದು 161 ಹೇಳಿಕೆ ಪಡೆದಿರುವ ಪ್ರಕ್ರಿಯೆ ಪ್ರಾರಂಭಿಸಿದರು.

ನಂತರ ಸಮಯವಾದ ಕಾರಣ 01-04-2021ರಂದು ಬೆಳಗ್ಗೆ ಸ್ಥಲ ಹಾಗೂ ಪಂಚನಾಮೆ ಪ್ರಕ್ರಿಯೆಗೆ ನನ್ನ ಆರ್‌ಟಿ ನಗರ ಪಿಜಿ ಹಾಗೂ ಕೃತ್ಯ ನಡೆದ ರಮೇಶ್ ಜಾರಕಿಹೊಳಿ ಅವರ ಮಂತ್ರಿ ಗ್ರೀನ್ಸ್ ಅಪಾರ್ಟ್ಮೆಂಟ್‌ಗೆ ಕರೆದೊಯ್ಯಲಾಯಿತು.

ಇದೆಲ್ಲಾ ಆದ ನಂತರ 02-04-2021 ರಂದು ನನ್ನ 161 ಹೇಳಿಕೆಯ ಮುಂದುವರಿದ ವಿಚಾರಗಳನ್ನು ದಾಖಲಿಸಿಕೊಳ್ಳಲಾಯಿತು.

ನನಗೆ ಒಟ್ಟಾರೆ ಪ್ರಕ್ರಿಯೆಗಳನ್ನು ನೋಡುತ್ತಿದ್ದರೆ ನಾನು ಸಂತ್ರಸ್ತೆಯೋ ಇಲ್ಲವೋ ಪ್ರಕರಣದ ಆರೋಪಿಯೋ ಎಂದು ಅನುಮಾನ ಮೂಡಿದೆ. ಪ್ರಕರಣದ ಆರೋಪಿಗೆ ಕೇವಲ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿ ಅವರ ವಕೀಲರೊಂದಿಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಿದ್ದು ಅವರನ್ನು ಮುಕ್ತವಾಗಿ ಓಡಾಡಿಕೊಂಡು ಇರಲು ಎಸ್ಐಟಿ ತಂಡ ಅವಕಾಶ ಮಾಡಿಕೊಟ್ಟು ನನ್ನನ್ನು ನಿರಂತರವಾಗಿ ಒಂದು ದಿನವೂ ಬಿಡುವು ನೀಡದಂತೆ ಹೇಳಿಕೆಗಳನ್ನು ಪಡೆಯಲಾಗುತ್ತಿದೆ. ನನ್ನ ಹೆಸರು ರಮೇಶ್ ಜಾರಕಿಹೊಳಿ ಅವರು ನೀಡಿದ ದೂರಿನಲ್ಲಿ ಉಲ್ಲೇಖವಾಗದಿದ್ದರೂ ನನ್ನ ಪಿಜಿ ಮೇಲೆ ದಾಳಿ ಮಾಡಿ ಅಲ್ಲಿ ಇರುವ ಸಾಕ್ಷ್ಯಗಳನ್ನು ನಾಶಮಾಡಿ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಸರ್ಕಾರದ ಒತ್ತಡಕ್ಕೆ ಮಣಿದಿರುತ್ತಾರೆ.

ಈ ಕ್ಷಣದವರೆಗೂ ನನ್ನ ತೇಜೋವಧೆ ಮಾಡುವಂತಾ ಅಸಂಬದ್ಧ ಕಪೋಲ ಕಲ್ಪಿತ ವಿಚಾರಗಳನ್ನು ಮಾಧ್ಯಮಗಳಲ್ಲಿ ವರದಿಯಾಗುವಂತೆ ಮಾಡುವ ಮೂಲಕ ಆರೋಪಿಯ ರಕ್ಷಣೆಗೆ ಮುಂದಾಗಿರುವುದು ಎದ್ದು ಕಾಣುತ್ತಿದೆ.

ನಾನು ಪ್ರಕರಣದ ದೂರುದಾರಳಾಗಿದ್ದು ನನ್ನನ್ನು ಚಾರಿತ್ರ್ಯ ವಧೆ ಮಾಡುವಂತಹ ಷಡ್ಯಂತ್ರವನ್ನು ರಮೇಶ್ ಜಾರಕಿಹೊಳಿ ಮಾಡುತ್ತಿದ್ದು, ಎಸ್ಐಟಿ ಅಧಿಕಾರಿಗಳ ಮೇಲೆ ತೀವ್ರವಾದ ಒತ್ತಡವನ್ನು ಸರ್ಕಾರದಿಂದ ಹಾಕಿಸುತ್ತಿದ್ದಾರೆ. ಪ್ರತಿನಿತ್ಯ ಮಾಧ್ಯಮಗಳಲ್ಲಿ ನಾನು ಅತ್ಯಾಚಾರದ ಸಂತ್ರಸ್ತೆ ಎಂಬುದನ್ನು ಮರೆಮಾಡಲು ಅನೇಕ ಸೃಷ್ಟಿತ ಸುದ್ದಿಗಳನ್ನು ಅವಹೇಳನಕಾರಿಯಾಗಿ ಪ್ರಸಾರ ಮಾಡಲಾಗುತ್ತಿದೆ.

ಈ ಕ್ಷಣದವರೆಗೂ ನನಗೆ ನಾನು ನೀಡಿದ ದೂರಿನ ವಿಚಾರವಾಗಿ ಆರೋಪಿ ವಿರುದ್ಧ ಯಾವುದೇ ಗಂಭೀರ ವಿಚಾರಣೆ ನಡೆಸುತ್ತಿರುವ ಬಗ್ಗೆ ನನಗೆ ವಿಶ್ವಾಸ ಬಂದಿಲ್ಲ. ಇದರ ಜೊತೆಗೆ ಮಾನ್ಯ ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ಆರೋಪಮುಕ್ತರಾಗಿ ಹೊರಗೆ ಬರುತ್ತಾರೆ ಎಂದು ಹೇಳಿರುವುದು ನನಗೆ ತೀವ್ರ ಆತಂಕ ಉಂಟು ಮಾಡಿದೆ.

ನನ್ನ ಸಹಮತ ಪಡೆಯದೇ ಈ ಪ್ರಕರಣಕ್ಕೆ ಗೃಹ ಇಲಾಖೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಿರುವುದಕ್ಕೆ ನನ್ನ ಆಕ್ಷೇಪವಿದೆ. ಇಡೀ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸುತ್ತಿರುವ ಬಗ್ಗೆ ನನಗೆ ನಂಬಿಕೆ ವಿಶ್ವಾಸ ಇಲ್ಲದಂತಾಗಿದೆ. ದಯಮಾಡಿ ತಾವು ನನ್ನ ದೂರನ್ನು ಒಬ್ಬ ಸಂತ್ರಸ್ತ, ಅಸಹಾಯಕ, ಯುವತಿಯ ದೃಷ್ಟಿಯಿಂದ ನೋಡುವ ಮೂಲಕ ಸರ್ಕಾರದ ಒತ್ತಡಗಳಿಗೆ ಮಣಿಯದೇ ಆರೋಪಿಗೆ ಯಾವುದೇ ರಿಯಾಯತಿ ನೀಡದೇ ನ್ಯಾಯ ಸಮ್ಮತವಾಗಿ ವಿಚಾರಣೆ ನಡೆಸಬೇಕೆಂದು ಕಳಕಳಿಯಿಂದ ಪ್ರಾರ್ಥಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ಸಿಡಿ ಪ್ರಕರಣ: ರಕ್ಷಣೆ ಕೊಡಿ ಎಂದು ಹೈಕೋರ್ಟ್ ಸಿಜೆಐಗೆ ಪತ್ರ ಬರೆದ ಸಂತ್ರಸ್ತ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...