Homeಕರ್ನಾಟಕಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

ಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

’ಮಾನ್ಯ ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ಆರೋಪಮುಕ್ತರಾಗಿ ಹೊರಗೆ ಬರುತ್ತಾರೆ ಎಂದು ಹೇಳಿರುವುದು ನನಗೆ ತೀವ್ರ ಆತಂಕ ಉಂಟು ಮಾಡಿದೆ’

- Advertisement -
- Advertisement -

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ, ಸಿಡಿ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ಅಧಿಕಾರಿಗಳ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಭಾವ ಬೀರುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಅವರನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿ, ಸ್ವತಃ ಸಂತ್ರಸ್ತ ಯುವತಿಯೇ  ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದಿದ್ದಾರೆ.

’ನಾನು ದೂರು ನೀಡಿರುವ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ರಕ್ಷಿಸುವ ಸಲುವಾಗಿ, ನನ್ನ ವಿರುದ್ಧ ಷಡ್ಯಂತ್ರ ಮಾಡಿ, ತನಿಖಾಧಿಕಾರಿಗಳ ಮೇಲೆ ರಾಜಕೀಯ ಪ್ರಭಣಾವ ಬೀರುತ್ತಿದ್ದಾರೆ’ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಅತ್ಯಾಚಾರ ಪ್ರಕರಣವನ್ನು ಎಸ್ಐಟಿ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ತನಿಖೆ ಮಾಡುತ್ತಿಲ್ಲ. ನನಗೆ ಪ್ರತಿಬಾರಿ ನೋಟಿಸ್ ನೀಡಿ ವಿಚಾರಣೆಗೆ ಕರೆಸಲಾಗುತ್ತಿದೆ. ಆರೋಪಿ ಸ್ಥಾನದಲ್ಲಿ ಇರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರನ್ನು ವಿಚಾರಣೆ ಮಾಡುತ್ತಿಲ್ಲ. ಅವರನ್ನು ರಾಜಾರೋಷವಾಗಿ ಓಡಾಡಿಕೊಂಡಿರಲು ಬಿಟ್ಟಿದ್ದಾರೆ. ಒಟ್ಟಾರೆ ಪ್ರಕ್ರಿಯೆಗಳನ್ನು ನೋಡುತ್ತಿದ್ದರೇ, ಈ ಪ್ರಕರಣದಲ್ಲಿ ನಾನು ಸಂತ್ರಸ್ತೆಯೋ ಆರೋಪಿಯೋ ಎಂಬ ಅನುಮಾನ ಮೂಡಿದೆ ಎಂದಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಂತ್ರಸ್ತೆ ಪರ ವಕೀಲ ಜಗದೀಶ್ ವಿರುದ್ಧವೇ ದೂರು ನೀಡಿದ ಎಸ್‌ಐಟಿ!

ಸಂತ್ರಸ್ತ ಯುವತಿ ಬರೆದಿರುವ ಪತ್ರದ ಯಥಾವತ್ತು ಇಲ್ಲಿದೆ.

ವಿಷಯ: ನಾನು ನೀಡಿದ ಅತ್ಯಾಚಾರ ಪ್ರಕರಣದ ದೂರಿನ ವಿಚಾರಣೆಯಲ್ಲಿ ಆರೋಪಿ ರಕ್ಷಿಸುವ ಸಲುವಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಿ ತನಿಖಾಧಿಕಾರಿಗಳ ಮೇಲೆ ರಾಜಕೀಯ ಪ್ರಭಾವ ಬೀರುತ್ತಿರುವ ಬಗ್ಗೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ: 16-03-2021ರಂದು ನನ್ನ ವಕೀಲರಾದ ಶ್ರೀ ಜಗದೀಶ್ ಕೆ ಎನ್ ಅವರ ಮುಖಾಂತರ ತಮಗೆ ಮಾಜಿ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ಲೈಂಗಿಕ ಸಂಪರ್ಕ ಮಾಡಿ ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ ಸಂಬಂಧ ದೂರನ್ನು ಸಲ್ಲಿಸಿರುತ್ತೇನೆ.

ಈ ದೂರನ್ನು ತಾವೇ ಸ್ವೀಕರಿಸಿ ನನಗೆ ನ್ಯಾಯ ಕೊಡಿಸುವ ಸಲುವಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿ ಮೊಕದ್ದಮೆ ಸಂಖ್ಯೆ 30/2021ರಲ್ಲಿ ಐಪಿಸಿ 354(A), 506, 504, 376(C), 417 ಹಾಗೂ IT Act 67(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ. ನಂತರ ಪೊಲೀಸರು ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡುವಂತೆ ಮತ್ತು ಭದ್ರತೆ ಕಲ್ಪಿಸುವಂತೆ ಮಾಹಿತಿ ಒದಗಿಸುವಂತೆ ಪೊಲೀಸ್ ನೋಟಿಸ್ ನೀಡಲಾಗಿರುತ್ತದೆ.

ನಂತರ ನಾನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡಲಾಗಿ ನನ್ನ 164 ಹೇಳಿಕೆ ದಾಖಲಿಸಲು ಸೂಕ್ತ ಭದ್ರತೆಯೊಂದಿಗೆ ನ್ಯಾಯಾಲಯದಲ್ಲಿ ಅವಕಾಶ ಮಾಡಿಕೊಟ್ಟ ಕಾರಣ 30-03-2021ರಂದು ನಾನು ನನ್ನ ವಕೀಲರ ಮೂಲಕ ನ್ಯಾಯಾಲಯಕ್ಕೆ ಹಾಜರಾದೆನು. ಹಾಜರಾದ ದಿನ ಎಸ್ಐಟಿ ಮುಖ್ಯಸ್ಥರಾದ ಶ್ರೀ ಸೌಮೇಂದು ಮುಖರ್ಜಿ ಅವರು ನನ್ನನ್ನು ವಿಚಾರಣೆಗಾಗಿ ಆಡುಗೋಡಿ ಟೆಕ್ನಿಕಲ್ ವಿಭಾಗಕ್ಕೆ ಭದ್ರತೆಯೊಂದಿಗೆ ಕರೆದೊಯ್ದರು.

ಅಲ್ಲಿ ಅವರೊಂದಿಗೆ ಎಸ್ಐಟಿ ತಂಡದ ತನಿಖಾಧಿಕಾರಿಗಳಾದ ಶ್ರೀ ಸಂದೀಪ್ ಪಾಟೀಲ್(ಐಪಿಎಸ್), ಹಾಗೂ ಶ್ರೀಮತಿ ಕವಿತಾ (ಎಸಿಪಿ) ಇವರು ನನಗೆ ಪ್ರಕರಣ ಸಂಬಂಧವಾಗಿ ಪ್ರಶ್ನೆಗಳನ್ನು ಕೇಳಿದರು. ನಾನು ಸಂಪೂರ್ಣವಾಗಿ ಎಲ್ಲ ವಿಚಾರಗಳನ್ನು ಅವರಿಗೆ ವಿವರಿಸಿದೆನು. ನಂತರ ದಿನಾಂಕ 31-03-2021ರಂದು ನನಗೆ ವೈದ್ಯಕೀಯ ಪರೀಕ್ಷೆ ನಡೆಸಿ ಅಲ್ಲಿಂದ ಆಡುಗೋಡಿ ಟೆಕ್ನಿಕಲ್ ವಿಭಾಗಕ್ಕೆ ಕರೆದೊಯ್ದು 161 ಹೇಳಿಕೆ ಪಡೆದಿರುವ ಪ್ರಕ್ರಿಯೆ ಪ್ರಾರಂಭಿಸಿದರು.

ನಂತರ ಸಮಯವಾದ ಕಾರಣ 01-04-2021ರಂದು ಬೆಳಗ್ಗೆ ಸ್ಥಲ ಹಾಗೂ ಪಂಚನಾಮೆ ಪ್ರಕ್ರಿಯೆಗೆ ನನ್ನ ಆರ್‌ಟಿ ನಗರ ಪಿಜಿ ಹಾಗೂ ಕೃತ್ಯ ನಡೆದ ರಮೇಶ್ ಜಾರಕಿಹೊಳಿ ಅವರ ಮಂತ್ರಿ ಗ್ರೀನ್ಸ್ ಅಪಾರ್ಟ್ಮೆಂಟ್‌ಗೆ ಕರೆದೊಯ್ಯಲಾಯಿತು.

ಇದೆಲ್ಲಾ ಆದ ನಂತರ 02-04-2021 ರಂದು ನನ್ನ 161 ಹೇಳಿಕೆಯ ಮುಂದುವರಿದ ವಿಚಾರಗಳನ್ನು ದಾಖಲಿಸಿಕೊಳ್ಳಲಾಯಿತು.

ನನಗೆ ಒಟ್ಟಾರೆ ಪ್ರಕ್ರಿಯೆಗಳನ್ನು ನೋಡುತ್ತಿದ್ದರೆ ನಾನು ಸಂತ್ರಸ್ತೆಯೋ ಇಲ್ಲವೋ ಪ್ರಕರಣದ ಆರೋಪಿಯೋ ಎಂದು ಅನುಮಾನ ಮೂಡಿದೆ. ಪ್ರಕರಣದ ಆರೋಪಿಗೆ ಕೇವಲ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿ ಅವರ ವಕೀಲರೊಂದಿಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಿದ್ದು ಅವರನ್ನು ಮುಕ್ತವಾಗಿ ಓಡಾಡಿಕೊಂಡು ಇರಲು ಎಸ್ಐಟಿ ತಂಡ ಅವಕಾಶ ಮಾಡಿಕೊಟ್ಟು ನನ್ನನ್ನು ನಿರಂತರವಾಗಿ ಒಂದು ದಿನವೂ ಬಿಡುವು ನೀಡದಂತೆ ಹೇಳಿಕೆಗಳನ್ನು ಪಡೆಯಲಾಗುತ್ತಿದೆ. ನನ್ನ ಹೆಸರು ರಮೇಶ್ ಜಾರಕಿಹೊಳಿ ಅವರು ನೀಡಿದ ದೂರಿನಲ್ಲಿ ಉಲ್ಲೇಖವಾಗದಿದ್ದರೂ ನನ್ನ ಪಿಜಿ ಮೇಲೆ ದಾಳಿ ಮಾಡಿ ಅಲ್ಲಿ ಇರುವ ಸಾಕ್ಷ್ಯಗಳನ್ನು ನಾಶಮಾಡಿ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಸರ್ಕಾರದ ಒತ್ತಡಕ್ಕೆ ಮಣಿದಿರುತ್ತಾರೆ.

ಈ ಕ್ಷಣದವರೆಗೂ ನನ್ನ ತೇಜೋವಧೆ ಮಾಡುವಂತಾ ಅಸಂಬದ್ಧ ಕಪೋಲ ಕಲ್ಪಿತ ವಿಚಾರಗಳನ್ನು ಮಾಧ್ಯಮಗಳಲ್ಲಿ ವರದಿಯಾಗುವಂತೆ ಮಾಡುವ ಮೂಲಕ ಆರೋಪಿಯ ರಕ್ಷಣೆಗೆ ಮುಂದಾಗಿರುವುದು ಎದ್ದು ಕಾಣುತ್ತಿದೆ.

ನಾನು ಪ್ರಕರಣದ ದೂರುದಾರಳಾಗಿದ್ದು ನನ್ನನ್ನು ಚಾರಿತ್ರ್ಯ ವಧೆ ಮಾಡುವಂತಹ ಷಡ್ಯಂತ್ರವನ್ನು ರಮೇಶ್ ಜಾರಕಿಹೊಳಿ ಮಾಡುತ್ತಿದ್ದು, ಎಸ್ಐಟಿ ಅಧಿಕಾರಿಗಳ ಮೇಲೆ ತೀವ್ರವಾದ ಒತ್ತಡವನ್ನು ಸರ್ಕಾರದಿಂದ ಹಾಕಿಸುತ್ತಿದ್ದಾರೆ. ಪ್ರತಿನಿತ್ಯ ಮಾಧ್ಯಮಗಳಲ್ಲಿ ನಾನು ಅತ್ಯಾಚಾರದ ಸಂತ್ರಸ್ತೆ ಎಂಬುದನ್ನು ಮರೆಮಾಡಲು ಅನೇಕ ಸೃಷ್ಟಿತ ಸುದ್ದಿಗಳನ್ನು ಅವಹೇಳನಕಾರಿಯಾಗಿ ಪ್ರಸಾರ ಮಾಡಲಾಗುತ್ತಿದೆ.

ಈ ಕ್ಷಣದವರೆಗೂ ನನಗೆ ನಾನು ನೀಡಿದ ದೂರಿನ ವಿಚಾರವಾಗಿ ಆರೋಪಿ ವಿರುದ್ಧ ಯಾವುದೇ ಗಂಭೀರ ವಿಚಾರಣೆ ನಡೆಸುತ್ತಿರುವ ಬಗ್ಗೆ ನನಗೆ ವಿಶ್ವಾಸ ಬಂದಿಲ್ಲ. ಇದರ ಜೊತೆಗೆ ಮಾನ್ಯ ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ಆರೋಪಮುಕ್ತರಾಗಿ ಹೊರಗೆ ಬರುತ್ತಾರೆ ಎಂದು ಹೇಳಿರುವುದು ನನಗೆ ತೀವ್ರ ಆತಂಕ ಉಂಟು ಮಾಡಿದೆ.

ನನ್ನ ಸಹಮತ ಪಡೆಯದೇ ಈ ಪ್ರಕರಣಕ್ಕೆ ಗೃಹ ಇಲಾಖೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಿರುವುದಕ್ಕೆ ನನ್ನ ಆಕ್ಷೇಪವಿದೆ. ಇಡೀ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸುತ್ತಿರುವ ಬಗ್ಗೆ ನನಗೆ ನಂಬಿಕೆ ವಿಶ್ವಾಸ ಇಲ್ಲದಂತಾಗಿದೆ. ದಯಮಾಡಿ ತಾವು ನನ್ನ ದೂರನ್ನು ಒಬ್ಬ ಸಂತ್ರಸ್ತ, ಅಸಹಾಯಕ, ಯುವತಿಯ ದೃಷ್ಟಿಯಿಂದ ನೋಡುವ ಮೂಲಕ ಸರ್ಕಾರದ ಒತ್ತಡಗಳಿಗೆ ಮಣಿಯದೇ ಆರೋಪಿಗೆ ಯಾವುದೇ ರಿಯಾಯತಿ ನೀಡದೇ ನ್ಯಾಯ ಸಮ್ಮತವಾಗಿ ವಿಚಾರಣೆ ನಡೆಸಬೇಕೆಂದು ಕಳಕಳಿಯಿಂದ ಪ್ರಾರ್ಥಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ಸಿಡಿ ಪ್ರಕರಣ: ರಕ್ಷಣೆ ಕೊಡಿ ಎಂದು ಹೈಕೋರ್ಟ್ ಸಿಜೆಐಗೆ ಪತ್ರ ಬರೆದ ಸಂತ್ರಸ್ತ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...