Homeಕರ್ನಾಟಕಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

ಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

’ಮಾನ್ಯ ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ಆರೋಪಮುಕ್ತರಾಗಿ ಹೊರಗೆ ಬರುತ್ತಾರೆ ಎಂದು ಹೇಳಿರುವುದು ನನಗೆ ತೀವ್ರ ಆತಂಕ ಉಂಟು ಮಾಡಿದೆ’

- Advertisement -
- Advertisement -

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ, ಸಿಡಿ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ಅಧಿಕಾರಿಗಳ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಭಾವ ಬೀರುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಅವರನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿ, ಸ್ವತಃ ಸಂತ್ರಸ್ತ ಯುವತಿಯೇ  ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದಿದ್ದಾರೆ.

’ನಾನು ದೂರು ನೀಡಿರುವ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ರಕ್ಷಿಸುವ ಸಲುವಾಗಿ, ನನ್ನ ವಿರುದ್ಧ ಷಡ್ಯಂತ್ರ ಮಾಡಿ, ತನಿಖಾಧಿಕಾರಿಗಳ ಮೇಲೆ ರಾಜಕೀಯ ಪ್ರಭಣಾವ ಬೀರುತ್ತಿದ್ದಾರೆ’ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಅತ್ಯಾಚಾರ ಪ್ರಕರಣವನ್ನು ಎಸ್ಐಟಿ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ತನಿಖೆ ಮಾಡುತ್ತಿಲ್ಲ. ನನಗೆ ಪ್ರತಿಬಾರಿ ನೋಟಿಸ್ ನೀಡಿ ವಿಚಾರಣೆಗೆ ಕರೆಸಲಾಗುತ್ತಿದೆ. ಆರೋಪಿ ಸ್ಥಾನದಲ್ಲಿ ಇರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರನ್ನು ವಿಚಾರಣೆ ಮಾಡುತ್ತಿಲ್ಲ. ಅವರನ್ನು ರಾಜಾರೋಷವಾಗಿ ಓಡಾಡಿಕೊಂಡಿರಲು ಬಿಟ್ಟಿದ್ದಾರೆ. ಒಟ್ಟಾರೆ ಪ್ರಕ್ರಿಯೆಗಳನ್ನು ನೋಡುತ್ತಿದ್ದರೇ, ಈ ಪ್ರಕರಣದಲ್ಲಿ ನಾನು ಸಂತ್ರಸ್ತೆಯೋ ಆರೋಪಿಯೋ ಎಂಬ ಅನುಮಾನ ಮೂಡಿದೆ ಎಂದಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಂತ್ರಸ್ತೆ ಪರ ವಕೀಲ ಜಗದೀಶ್ ವಿರುದ್ಧವೇ ದೂರು ನೀಡಿದ ಎಸ್‌ಐಟಿ!

ಸಂತ್ರಸ್ತ ಯುವತಿ ಬರೆದಿರುವ ಪತ್ರದ ಯಥಾವತ್ತು ಇಲ್ಲಿದೆ.

ವಿಷಯ: ನಾನು ನೀಡಿದ ಅತ್ಯಾಚಾರ ಪ್ರಕರಣದ ದೂರಿನ ವಿಚಾರಣೆಯಲ್ಲಿ ಆರೋಪಿ ರಕ್ಷಿಸುವ ಸಲುವಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಿ ತನಿಖಾಧಿಕಾರಿಗಳ ಮೇಲೆ ರಾಜಕೀಯ ಪ್ರಭಾವ ಬೀರುತ್ತಿರುವ ಬಗ್ಗೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ: 16-03-2021ರಂದು ನನ್ನ ವಕೀಲರಾದ ಶ್ರೀ ಜಗದೀಶ್ ಕೆ ಎನ್ ಅವರ ಮುಖಾಂತರ ತಮಗೆ ಮಾಜಿ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ಲೈಂಗಿಕ ಸಂಪರ್ಕ ಮಾಡಿ ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ ಸಂಬಂಧ ದೂರನ್ನು ಸಲ್ಲಿಸಿರುತ್ತೇನೆ.

ಈ ದೂರನ್ನು ತಾವೇ ಸ್ವೀಕರಿಸಿ ನನಗೆ ನ್ಯಾಯ ಕೊಡಿಸುವ ಸಲುವಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿ ಮೊಕದ್ದಮೆ ಸಂಖ್ಯೆ 30/2021ರಲ್ಲಿ ಐಪಿಸಿ 354(A), 506, 504, 376(C), 417 ಹಾಗೂ IT Act 67(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ. ನಂತರ ಪೊಲೀಸರು ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡುವಂತೆ ಮತ್ತು ಭದ್ರತೆ ಕಲ್ಪಿಸುವಂತೆ ಮಾಹಿತಿ ಒದಗಿಸುವಂತೆ ಪೊಲೀಸ್ ನೋಟಿಸ್ ನೀಡಲಾಗಿರುತ್ತದೆ.

ನಂತರ ನಾನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡಲಾಗಿ ನನ್ನ 164 ಹೇಳಿಕೆ ದಾಖಲಿಸಲು ಸೂಕ್ತ ಭದ್ರತೆಯೊಂದಿಗೆ ನ್ಯಾಯಾಲಯದಲ್ಲಿ ಅವಕಾಶ ಮಾಡಿಕೊಟ್ಟ ಕಾರಣ 30-03-2021ರಂದು ನಾನು ನನ್ನ ವಕೀಲರ ಮೂಲಕ ನ್ಯಾಯಾಲಯಕ್ಕೆ ಹಾಜರಾದೆನು. ಹಾಜರಾದ ದಿನ ಎಸ್ಐಟಿ ಮುಖ್ಯಸ್ಥರಾದ ಶ್ರೀ ಸೌಮೇಂದು ಮುಖರ್ಜಿ ಅವರು ನನ್ನನ್ನು ವಿಚಾರಣೆಗಾಗಿ ಆಡುಗೋಡಿ ಟೆಕ್ನಿಕಲ್ ವಿಭಾಗಕ್ಕೆ ಭದ್ರತೆಯೊಂದಿಗೆ ಕರೆದೊಯ್ದರು.

ಅಲ್ಲಿ ಅವರೊಂದಿಗೆ ಎಸ್ಐಟಿ ತಂಡದ ತನಿಖಾಧಿಕಾರಿಗಳಾದ ಶ್ರೀ ಸಂದೀಪ್ ಪಾಟೀಲ್(ಐಪಿಎಸ್), ಹಾಗೂ ಶ್ರೀಮತಿ ಕವಿತಾ (ಎಸಿಪಿ) ಇವರು ನನಗೆ ಪ್ರಕರಣ ಸಂಬಂಧವಾಗಿ ಪ್ರಶ್ನೆಗಳನ್ನು ಕೇಳಿದರು. ನಾನು ಸಂಪೂರ್ಣವಾಗಿ ಎಲ್ಲ ವಿಚಾರಗಳನ್ನು ಅವರಿಗೆ ವಿವರಿಸಿದೆನು. ನಂತರ ದಿನಾಂಕ 31-03-2021ರಂದು ನನಗೆ ವೈದ್ಯಕೀಯ ಪರೀಕ್ಷೆ ನಡೆಸಿ ಅಲ್ಲಿಂದ ಆಡುಗೋಡಿ ಟೆಕ್ನಿಕಲ್ ವಿಭಾಗಕ್ಕೆ ಕರೆದೊಯ್ದು 161 ಹೇಳಿಕೆ ಪಡೆದಿರುವ ಪ್ರಕ್ರಿಯೆ ಪ್ರಾರಂಭಿಸಿದರು.

ನಂತರ ಸಮಯವಾದ ಕಾರಣ 01-04-2021ರಂದು ಬೆಳಗ್ಗೆ ಸ್ಥಲ ಹಾಗೂ ಪಂಚನಾಮೆ ಪ್ರಕ್ರಿಯೆಗೆ ನನ್ನ ಆರ್‌ಟಿ ನಗರ ಪಿಜಿ ಹಾಗೂ ಕೃತ್ಯ ನಡೆದ ರಮೇಶ್ ಜಾರಕಿಹೊಳಿ ಅವರ ಮಂತ್ರಿ ಗ್ರೀನ್ಸ್ ಅಪಾರ್ಟ್ಮೆಂಟ್‌ಗೆ ಕರೆದೊಯ್ಯಲಾಯಿತು.

ಇದೆಲ್ಲಾ ಆದ ನಂತರ 02-04-2021 ರಂದು ನನ್ನ 161 ಹೇಳಿಕೆಯ ಮುಂದುವರಿದ ವಿಚಾರಗಳನ್ನು ದಾಖಲಿಸಿಕೊಳ್ಳಲಾಯಿತು.

ನನಗೆ ಒಟ್ಟಾರೆ ಪ್ರಕ್ರಿಯೆಗಳನ್ನು ನೋಡುತ್ತಿದ್ದರೆ ನಾನು ಸಂತ್ರಸ್ತೆಯೋ ಇಲ್ಲವೋ ಪ್ರಕರಣದ ಆರೋಪಿಯೋ ಎಂದು ಅನುಮಾನ ಮೂಡಿದೆ. ಪ್ರಕರಣದ ಆರೋಪಿಗೆ ಕೇವಲ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿ ಅವರ ವಕೀಲರೊಂದಿಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ಅನುಮತಿ ನೀಡಿದ್ದು ಅವರನ್ನು ಮುಕ್ತವಾಗಿ ಓಡಾಡಿಕೊಂಡು ಇರಲು ಎಸ್ಐಟಿ ತಂಡ ಅವಕಾಶ ಮಾಡಿಕೊಟ್ಟು ನನ್ನನ್ನು ನಿರಂತರವಾಗಿ ಒಂದು ದಿನವೂ ಬಿಡುವು ನೀಡದಂತೆ ಹೇಳಿಕೆಗಳನ್ನು ಪಡೆಯಲಾಗುತ್ತಿದೆ. ನನ್ನ ಹೆಸರು ರಮೇಶ್ ಜಾರಕಿಹೊಳಿ ಅವರು ನೀಡಿದ ದೂರಿನಲ್ಲಿ ಉಲ್ಲೇಖವಾಗದಿದ್ದರೂ ನನ್ನ ಪಿಜಿ ಮೇಲೆ ದಾಳಿ ಮಾಡಿ ಅಲ್ಲಿ ಇರುವ ಸಾಕ್ಷ್ಯಗಳನ್ನು ನಾಶಮಾಡಿ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಸರ್ಕಾರದ ಒತ್ತಡಕ್ಕೆ ಮಣಿದಿರುತ್ತಾರೆ.

ಈ ಕ್ಷಣದವರೆಗೂ ನನ್ನ ತೇಜೋವಧೆ ಮಾಡುವಂತಾ ಅಸಂಬದ್ಧ ಕಪೋಲ ಕಲ್ಪಿತ ವಿಚಾರಗಳನ್ನು ಮಾಧ್ಯಮಗಳಲ್ಲಿ ವರದಿಯಾಗುವಂತೆ ಮಾಡುವ ಮೂಲಕ ಆರೋಪಿಯ ರಕ್ಷಣೆಗೆ ಮುಂದಾಗಿರುವುದು ಎದ್ದು ಕಾಣುತ್ತಿದೆ.

ನಾನು ಪ್ರಕರಣದ ದೂರುದಾರಳಾಗಿದ್ದು ನನ್ನನ್ನು ಚಾರಿತ್ರ್ಯ ವಧೆ ಮಾಡುವಂತಹ ಷಡ್ಯಂತ್ರವನ್ನು ರಮೇಶ್ ಜಾರಕಿಹೊಳಿ ಮಾಡುತ್ತಿದ್ದು, ಎಸ್ಐಟಿ ಅಧಿಕಾರಿಗಳ ಮೇಲೆ ತೀವ್ರವಾದ ಒತ್ತಡವನ್ನು ಸರ್ಕಾರದಿಂದ ಹಾಕಿಸುತ್ತಿದ್ದಾರೆ. ಪ್ರತಿನಿತ್ಯ ಮಾಧ್ಯಮಗಳಲ್ಲಿ ನಾನು ಅತ್ಯಾಚಾರದ ಸಂತ್ರಸ್ತೆ ಎಂಬುದನ್ನು ಮರೆಮಾಡಲು ಅನೇಕ ಸೃಷ್ಟಿತ ಸುದ್ದಿಗಳನ್ನು ಅವಹೇಳನಕಾರಿಯಾಗಿ ಪ್ರಸಾರ ಮಾಡಲಾಗುತ್ತಿದೆ.

ಈ ಕ್ಷಣದವರೆಗೂ ನನಗೆ ನಾನು ನೀಡಿದ ದೂರಿನ ವಿಚಾರವಾಗಿ ಆರೋಪಿ ವಿರುದ್ಧ ಯಾವುದೇ ಗಂಭೀರ ವಿಚಾರಣೆ ನಡೆಸುತ್ತಿರುವ ಬಗ್ಗೆ ನನಗೆ ವಿಶ್ವಾಸ ಬಂದಿಲ್ಲ. ಇದರ ಜೊತೆಗೆ ಮಾನ್ಯ ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ಆರೋಪಮುಕ್ತರಾಗಿ ಹೊರಗೆ ಬರುತ್ತಾರೆ ಎಂದು ಹೇಳಿರುವುದು ನನಗೆ ತೀವ್ರ ಆತಂಕ ಉಂಟು ಮಾಡಿದೆ.

ನನ್ನ ಸಹಮತ ಪಡೆಯದೇ ಈ ಪ್ರಕರಣಕ್ಕೆ ಗೃಹ ಇಲಾಖೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಿರುವುದಕ್ಕೆ ನನ್ನ ಆಕ್ಷೇಪವಿದೆ. ಇಡೀ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸುತ್ತಿರುವ ಬಗ್ಗೆ ನನಗೆ ನಂಬಿಕೆ ವಿಶ್ವಾಸ ಇಲ್ಲದಂತಾಗಿದೆ. ದಯಮಾಡಿ ತಾವು ನನ್ನ ದೂರನ್ನು ಒಬ್ಬ ಸಂತ್ರಸ್ತ, ಅಸಹಾಯಕ, ಯುವತಿಯ ದೃಷ್ಟಿಯಿಂದ ನೋಡುವ ಮೂಲಕ ಸರ್ಕಾರದ ಒತ್ತಡಗಳಿಗೆ ಮಣಿಯದೇ ಆರೋಪಿಗೆ ಯಾವುದೇ ರಿಯಾಯತಿ ನೀಡದೇ ನ್ಯಾಯ ಸಮ್ಮತವಾಗಿ ವಿಚಾರಣೆ ನಡೆಸಬೇಕೆಂದು ಕಳಕಳಿಯಿಂದ ಪ್ರಾರ್ಥಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ಸಿಡಿ ಪ್ರಕರಣ: ರಕ್ಷಣೆ ಕೊಡಿ ಎಂದು ಹೈಕೋರ್ಟ್ ಸಿಜೆಐಗೆ ಪತ್ರ ಬರೆದ ಸಂತ್ರಸ್ತ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...