Homeಕರ್ನಾಟಕಸೋಮವಾರ ಸಿಡಿ ಪ್ರಕರಣದ ಸಂತ್ರಸ್ತೆ ಕೋರ್ಟ್‌ಗೆ ಹಾಜರು- ವಕೀಲ ಜಗದೀಶ್

ಸೋಮವಾರ ಸಿಡಿ ಪ್ರಕರಣದ ಸಂತ್ರಸ್ತೆ ಕೋರ್ಟ್‌ಗೆ ಹಾಜರು- ವಕೀಲ ಜಗದೀಶ್

- Advertisement -
- Advertisement -

ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾದ ಯುವತಿಯು, ಪ್ರಕರಣದ ಕುರಿತು ಹೇಳಿಕೆ ನೀಡಲು ಸೋಮವಾರ (ಮಾರ್ಚ್ 29) ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎಂದು ಸಂತ್ರಸ್ತ ಯುವತಿ ಪರ ವಕೀಲರಾದ ಕೆ.ಎನ್. ಜಗದೀಶ್ ತಿಳಿಸಿದ್ದಾರೆ.

ಭಾನುವಾರ ಮಂಜುನಾಥ್ ಅವರೊಂದಿಗೆ ಪ್ರಕರಣದ ಕುರಿತ ಸಂವಾದದಲ್ಲಿ ಮಾತನಾಡುತ್ತಿದ್ದ ವಕೀಲರಾದ ಕೆ.ಎನ್. ಜಗದೀಶ್, ಫೇಸ್‌ಬುಕ್ ಲೈವ್‌ನಲ್ಲಿ ಈ ಮಾಹಿತಿ ಹೊರಹಾಕಿದ್ದಾರೆ.

ಸ್ಟೇಟ್‌‌ಮೆಂಟ್ 164 ದಾಖಲಿಸಲು ಆಕೆ ನ್ಯಾಯಾಲಯಕ್ಕೆ ಬರುತ್ತಾರೆ. ಇದು ಇಡೀ ಪ್ರಕರಣದ ಬೆನ್ನೆಲುಬು. ಹಾಗಾಗಿ ಇದನ್ನು ಆಕೆ ದಾಖಲಿಸಬೇಕು. ಪ್ರಕರಣದ ಬಗ್ಗೆ ಎಲ್ಲಾ ವಿವರಗಳನ್ನು ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಸೋಮವಾರ ಪ್ರಸ್ತುತಪಡಿಸುತ್ತಾರೆ ಎಂದು ಲೈವ್‌ನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಸಿ.ಡಿ. ಹಗರಣ: ಐದನೆ ವಿಡಿಯೋ ರಿಲೀಸ್ ಮಾಡಿ ಸಂತ್ರಸ್ತ ಯುವತಿ; ಹೇಳಿದ್ದೇನು?

ಈ ಒಂದು ಪ್ರಕರಣದ ತಾರ್ತಿಕ ಅಂತ್ಯ ಕಾಣಬೇಕು ಎಂದರೇ ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹಾಜರಾಗಿ  ಸ್ಟೇಟ್‌‌ಮೆಂಟ್ 164 ದಾಖಲಿಸಬೇಕು. ನ್ಯಾಯಾಲಯದ ಅನುಮತಿ ತೆಗೆದುಕೊಂಡು ಈ ಪ್ರಕ್ರಿಯೆ ನಡೆಸಲು ನಮ್ಮ ತಂಡ ಪ್ರಯತ್ನಿಸುತ್ತಿದೆ ಎಂದು ವಕೀಲ ಕೆ.ಎನ್.ಜಗದೀಶ್ ತಿಳಿಸಿದ್ದಾರೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣ ಮತ್ತು ಸುಲಿಗೆ ಪ್ರಕರಣ ಎರಡು ದಾಖಲಾಗಿದೆ. ಆದರೆ, ಎರಡೂ ಪ್ರಕರಣಗಳನ್ನು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿರುವುದರಿಂದ ನ್ಯಾಯಯುತವಾದ ತನಿಖೆ ನಡೆಸುವುದು ಅನುಮಾನ ಎಂದು ತನಿಖಾ ತಂಡದ ಮೇಲೆ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಯುವತಿ ಕೈಬರಹದಲ್ಲಿ ನೀಡಿದ್ದ ದೂರಿನ ಪ್ರತಿಯನ್ನು ವಕೀಲ ಜಗದೀಶ್‌ ಅವರು ಶುಕ್ರವಾರ ಪ್ರಕರಣದ ಎಸ್‌ಐಟಿ ಮುಖ್ಯಸ್ಥರಾದ ನಗರ ಪೊಲೀಸ್ ಕಮಿಷನರ್‌ಗೆ ತಲುಪಿಸಿದ್ದರು. ನಂತರ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಜೀವ ಬೆದರಿಕೆ (ಐಪಿಸಿ 506), ಅವಾಚ್ಯ ಶಬ್ದಗಳಿಂದ ನಿಂದನೆ (ಐಪಿಸಿ 504), ಅಧಿಕಾರದಲ್ಲಿ ದುರುಪಯೋಗಪಡಿಸಿಕೊಂಡು ಅತ್ಯಾಚಾರ (376–ಸಿ), ಕೆಲಸ ಕೊಡಿಸುವುದಾಗಿ ವಂಚನೆ (ಐಪಿಸಿ 417), ಉದ್ದೇಶಪೂರ್ವಕ ಲೈಂಗಿಕ ದೌರ್ಜನ್ಯ (ಐಪಿಸಿ 354 ಎ), ಆರೋಪ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ‘ಆಕೆ’ ವಿಜಯ್ ಮಲ್ಯನೋ ಇಲ್ಲ ನೀರವ್ ಮೋದಿಯೋ? – ಸಿಡಿ ಪ್ರಕರಣದ ಕುರಿತು ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...