Homeಕರ್ನಾಟಕಸೋಮವಾರ ಸಿಡಿ ಪ್ರಕರಣದ ಸಂತ್ರಸ್ತೆ ಕೋರ್ಟ್‌ಗೆ ಹಾಜರು- ವಕೀಲ ಜಗದೀಶ್

ಸೋಮವಾರ ಸಿಡಿ ಪ್ರಕರಣದ ಸಂತ್ರಸ್ತೆ ಕೋರ್ಟ್‌ಗೆ ಹಾಜರು- ವಕೀಲ ಜಗದೀಶ್

- Advertisement -
- Advertisement -

ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾದ ಯುವತಿಯು, ಪ್ರಕರಣದ ಕುರಿತು ಹೇಳಿಕೆ ನೀಡಲು ಸೋಮವಾರ (ಮಾರ್ಚ್ 29) ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎಂದು ಸಂತ್ರಸ್ತ ಯುವತಿ ಪರ ವಕೀಲರಾದ ಕೆ.ಎನ್. ಜಗದೀಶ್ ತಿಳಿಸಿದ್ದಾರೆ.

ಭಾನುವಾರ ಮಂಜುನಾಥ್ ಅವರೊಂದಿಗೆ ಪ್ರಕರಣದ ಕುರಿತ ಸಂವಾದದಲ್ಲಿ ಮಾತನಾಡುತ್ತಿದ್ದ ವಕೀಲರಾದ ಕೆ.ಎನ್. ಜಗದೀಶ್, ಫೇಸ್‌ಬುಕ್ ಲೈವ್‌ನಲ್ಲಿ ಈ ಮಾಹಿತಿ ಹೊರಹಾಕಿದ್ದಾರೆ.

ಸ್ಟೇಟ್‌‌ಮೆಂಟ್ 164 ದಾಖಲಿಸಲು ಆಕೆ ನ್ಯಾಯಾಲಯಕ್ಕೆ ಬರುತ್ತಾರೆ. ಇದು ಇಡೀ ಪ್ರಕರಣದ ಬೆನ್ನೆಲುಬು. ಹಾಗಾಗಿ ಇದನ್ನು ಆಕೆ ದಾಖಲಿಸಬೇಕು. ಪ್ರಕರಣದ ಬಗ್ಗೆ ಎಲ್ಲಾ ವಿವರಗಳನ್ನು ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಸೋಮವಾರ ಪ್ರಸ್ತುತಪಡಿಸುತ್ತಾರೆ ಎಂದು ಲೈವ್‌ನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಸಿ.ಡಿ. ಹಗರಣ: ಐದನೆ ವಿಡಿಯೋ ರಿಲೀಸ್ ಮಾಡಿ ಸಂತ್ರಸ್ತ ಯುವತಿ; ಹೇಳಿದ್ದೇನು?

ಈ ಒಂದು ಪ್ರಕರಣದ ತಾರ್ತಿಕ ಅಂತ್ಯ ಕಾಣಬೇಕು ಎಂದರೇ ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹಾಜರಾಗಿ  ಸ್ಟೇಟ್‌‌ಮೆಂಟ್ 164 ದಾಖಲಿಸಬೇಕು. ನ್ಯಾಯಾಲಯದ ಅನುಮತಿ ತೆಗೆದುಕೊಂಡು ಈ ಪ್ರಕ್ರಿಯೆ ನಡೆಸಲು ನಮ್ಮ ತಂಡ ಪ್ರಯತ್ನಿಸುತ್ತಿದೆ ಎಂದು ವಕೀಲ ಕೆ.ಎನ್.ಜಗದೀಶ್ ತಿಳಿಸಿದ್ದಾರೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣ ಮತ್ತು ಸುಲಿಗೆ ಪ್ರಕರಣ ಎರಡು ದಾಖಲಾಗಿದೆ. ಆದರೆ, ಎರಡೂ ಪ್ರಕರಣಗಳನ್ನು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿರುವುದರಿಂದ ನ್ಯಾಯಯುತವಾದ ತನಿಖೆ ನಡೆಸುವುದು ಅನುಮಾನ ಎಂದು ತನಿಖಾ ತಂಡದ ಮೇಲೆ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಯುವತಿ ಕೈಬರಹದಲ್ಲಿ ನೀಡಿದ್ದ ದೂರಿನ ಪ್ರತಿಯನ್ನು ವಕೀಲ ಜಗದೀಶ್‌ ಅವರು ಶುಕ್ರವಾರ ಪ್ರಕರಣದ ಎಸ್‌ಐಟಿ ಮುಖ್ಯಸ್ಥರಾದ ನಗರ ಪೊಲೀಸ್ ಕಮಿಷನರ್‌ಗೆ ತಲುಪಿಸಿದ್ದರು. ನಂತರ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಜೀವ ಬೆದರಿಕೆ (ಐಪಿಸಿ 506), ಅವಾಚ್ಯ ಶಬ್ದಗಳಿಂದ ನಿಂದನೆ (ಐಪಿಸಿ 504), ಅಧಿಕಾರದಲ್ಲಿ ದುರುಪಯೋಗಪಡಿಸಿಕೊಂಡು ಅತ್ಯಾಚಾರ (376–ಸಿ), ಕೆಲಸ ಕೊಡಿಸುವುದಾಗಿ ವಂಚನೆ (ಐಪಿಸಿ 417), ಉದ್ದೇಶಪೂರ್ವಕ ಲೈಂಗಿಕ ದೌರ್ಜನ್ಯ (ಐಪಿಸಿ 354 ಎ), ಆರೋಪ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ‘ಆಕೆ’ ವಿಜಯ್ ಮಲ್ಯನೋ ಇಲ್ಲ ನೀರವ್ ಮೋದಿಯೋ? – ಸಿಡಿ ಪ್ರಕರಣದ ಕುರಿತು ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...