Homeಕರ್ನಾಟಕಜಾರಕಿಹೊಳಿ ಲೈಂಗಿಕ ಸಿಡಿ ಹಗರಣ: ಬಂಧನದ ಭೀತಿಯಲ್ಲಿ ಅತ್ಯಾಚಾರ ಸಂತ್ರಸ್ತೆ!

ಜಾರಕಿಹೊಳಿ ಲೈಂಗಿಕ ಸಿಡಿ ಹಗರಣ: ಬಂಧನದ ಭೀತಿಯಲ್ಲಿ ಅತ್ಯಾಚಾರ ಸಂತ್ರಸ್ತೆ!

ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಮಾಜಿ ಸಚಿವ ರಮೇಶ್‌ ಜಾರಕಿಹೊಳಿಯ ಬಂಧನ ಇನ್ನೂ ಆಗಿಲ್ಲ

- Advertisement -
- Advertisement -

ರಾಜ್ಯ ರಾಜಕಾರಣವನ್ನು ಅಲ್ಲೋಲ ಕಲ್ಲೋಲ ಮಾಡಿದ್ದ ಲೈಂಗಿಕ ಹಗರಣದಲ್ಲಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ದ ಅತ್ಯಾಚಾರ ಆರೋಪ ಹೊರಿಸಿದ್ದ ಸಂತ್ರಸ್ತೆ ಯುವತಿಗೆ ಬಂಧನದ ಭೀತಿ ಎದುರಾಗಿದೆ. ಯುವತಿಯ ವಿರುದ್ದ ರಮೇಶ್‌ ಜಾರಕಿಹೊಳಿ ದೂರು ನೀಡಿದ್ದು, ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಯುವತಿಯ ಪರ ವಕೀಲರು ಹೈಕೋಟ್‌ಗೆ ಹೇಳಿಕೆ ನೀಡಿದ್ದಾರೆ.

ರಮೇಶ್‌ ಜಾರಕಿಹೊಳಿ ವಿರುದ್ದ ಕೂಡಾ ಸಂತ್ರಸ್ತ ಯುವತಿ ದೂರು ನೀಡಿದ್ದರು. ಅತ್ಯಾಚಾರದ ಆರೋಪ ಹೊರಿಸಿದ್ದರು. ಪೊಲೀಸರು ಅವರನ್ನು ಇದುವರೆಗೂ ಬಂಧಿಸಿಲ್ಲ. ಆದರೆ, ಜಾರಕಿಹೊಳಿ ನೀಡಿದ ದೂರಿನಂತೆ ಯುವತಿಯನ್ನು ಬಂಧಿಸುವ ಸಾಧ್ಯತೆ ಇದೆ. ಹೀಗಾಗಿ ಯುವತಿಯನ್ನು ಬಂಧಿಸದಂತೆ ಎಸ್‌ಐಟಿ ಪೊಲೀಸರಿಗೆ ನಿರ್ದೇಶಿಸುವಂತೆ ಹೈಕೋರ್ಟ್‌ಗೆ ಯುವತಿ ಪರ ವಕೀಲರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಿಡಿ ಕೇಸ್: FIR ದಾಖಲಿಸದ ಕಮಲ್ ಪಂತ್ ವಿರುದ್ಧ ಖಾಸಗಿ ದೂರು ನೀಡಿದ ಜನಾಧಿಕಾರ ಸಂಘರ್ಷ ಪರಿಷತ್

ಯುವತಿಯ ಪರವಾಗಿ ವಕೀಲರು, ಸಿಆರ್‌ಪಿಸಿ 482 ರದ್ದು ಮಾಡುವಂತೆ ಹೈಕೋರ್ಟ್‌‌ಗೆ ಕೋರಿದ್ದರು. ಆದರೆ ಸಿಆರ್‌ಪಿಸಿ 482 ಅಡಿ ಬಂಧಿಸದಂತೆ ಸೂಚಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಬಂಧಿಸದಂತೆ ಇರಲು ಪ್ರತ್ಯೆಕವಾಗಿ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಲಿ ಎಂದು ಹೈಕೋರ್ಟ್ ನ್ಯಾಯಮೂರ್ತಿ‌‌ ಸುನೀಲ್ ದತ್ ಯಾದವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಖ್ಯಾತ ವಕೀಲೆ ಇಂದಿರಾ ಜೈಸಿಂಗ್‌ ಅವರು ಸಂತ್ರಸ್ತೆ ಯುವತಿಯ ಪರ ವಕಾಲತು ನಡೆಸಲು ಒಪ್ಪಿಕೊಂಡಿದ್ದಾರೆ. ಇನ್ನೊಂದು ಕಡೆ ಮಾಜಿ ಸಚಿವ, ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿ ಪ್ರಕರಣವನ್ನು ಮುಗಿಸಲು ಮತ್ತು ತನಗೆ ಸಚಿವ ಸ್ಥಾನ ಕೊಡಿಸುವಂತೆ ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಫಡ್ನವಿಸ್ ಕರ್ನಾಟಕ ರಾಜಕೀಯದಲ್ಲಿ ತಾನು ತಲೆ ಹಾಕುವುದಿಲ್ಲ ಆದರೆ ತಮ್ಮ ಬೇಡಿಕೆಯನ್ನು ಹೈಕಮಾಂಡ್‌ಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಕೇಸ್: ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಇಂದಿರಾ ಜೈಸಿಂಗ್ ವಕಾಲತ್ತು

ಪ್ರಕರಣ ಬೆಳಕಿಗೆ ಬಂದಿದ್ದ ಸಮಯದಲ್ಲಿ ವಿಡಿಯೊದಲ್ಲಿ ಇರುವುದು ತಾನಲ್ಲ ಎಂದು ಹೇಳಿದ್ದ ಜಾರಕಿಹೊಳಿ, ಇತ್ತೀಚೆಗೆ ಎಸ್‌ಐಟಿ ಮುಂದೆ ವಿಡಿಯೊದಲ್ಲಿ ಇರುವುದು ತಾನೆ ಎಂದು ಒಪ್ಪಿಕೊಂಡಿದ್ದರು. ಆದರೆ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಆರೋಪಿ ಜಾರಕಿಹೊಳಿಯನ್ನು ಇದುವರೆಗೂ ಬಂಧಿಸಿಲ್ಲ. ಇದು ಸಂತ್ರಸ್ತೆ ಯುವತಿಯ ಅಸಮಾಧಾನಕ್ಕೆ ಕಾರಣವಾಗಿದ್ದು, ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದರು.

ಪ್ರಕರಣದ ಕುರಿತು ಕಾನೂನು ತಜ್ಞರು, “ಪ್ರಕರಣದ ತನಿಖೆ ಮುಂದುವರೆಯಬೇಕಾದರೆ, ಅತ್ಯಾಚಾರ ಆರೋಪಿಯ ವೈದ್ಯಕೀಯ ಸಾಕ್ಷ್ಯಗಳನ್ನು ಸಂಗ್ರಹಿಸುವ ಹಾಗೂ ಅತ್ಯಾಚಾರ ಆರೋಪಿಯ ಗಂಡಸುತನದ ವೈದ್ಯಕೀಯ ಪರೀಕ್ಷೆ ಕಡ್ಡಾಯವಾಗಿ ಆಗಲೇಬೇಕಿದೆ. ಈ ಕಾರಣದಿಂದ ತನಿಖಾಧಿಕಾರಿಯು ಆರೋಪಿಯನ್ನು ವಶಕ್ಕೆ ಪಡೆದು ವೈದ್ಯರ ಮುಂದೆ ಹಾಜರು ಪಡಿಸಬೇಕಿರುತ್ತದೆ. ಆದರೆ ಪ್ರಕರಣವು ರಾಜ್ಯದ ಪ್ರಭಾವಿ ರಾಜಕೀಯ ನಾಯಕನ ವಿರುದ್ದವೇ ಇರುವುದರಿಂದ ಈ ಪ್ರಕ್ರಿಯೆ ನಡೆಯುತ್ತಿಲ್ಲ” ಎಂದು ಅಭಿಪ್ರಾಯಪಡುತ್ತಾರೆ.

ಇದನ್ನೂ ಓದಿ: ಲೈಂಗಿಕ ಸಿಡಿ ಹಗರಣ: ಅಡಕತ್ತರಿಯಲ್ಲಿ ತನಿಖೆ, ಸಚಿವ ಸ್ಥಾನದ ಆಸೆಯಲ್ಲಿ ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...