Homeಮುಖಪುಟಕದನ ವಿರಾಮದ ಬಿಕ್ಕಟ್ಟು ನಿವಾರಣೆ: ಶನಿವಾರ 3 ಇಸ್ರೇಲಿಗಳ ಬಿಡುಗಡೆ

ಕದನ ವಿರಾಮದ ಬಿಕ್ಕಟ್ಟು ನಿವಾರಣೆ: ಶನಿವಾರ 3 ಇಸ್ರೇಲಿಗಳ ಬಿಡುಗಡೆ

- Advertisement -
- Advertisement -

ಇಸ್ರೇಲ್‌ನೊಂದಿಗಿನ ಕದನ ವಿರಾಮದ ಭವಿಷ್ಯದ ಬಗ್ಗೆ ಇದ್ದ ಬಿಕ್ಕಟ್ಟನ್ನು ನಿವಾರಿಸಲಾಗಿದೆ ಎಂದು ಸೂಚಿಸುವ ಮೂಲಕ ಹಮಾಸ್ ಶನಿವಾರದಂದು ಬಿಡುಗಡೆಯಾಗಲಿರುವ ಇನ್ನೂ ಮೂವರು ಇಸ್ರೇಲಿ ಒತ್ತೆಯಾಳುಗಳ ಹೆಸರುಗಳನ್ನು ಶುಕ್ರವಾರ ಪ್ರಕಟಿಸಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಸರಣಿ ವಿನಿಮಯದ ಭಾಗವಾಗಿ ಈ ಮೂವರು ಪುರುಷರನ್ನು ಶನಿವಾರ ಬಿಡುಗಡೆ ಮಾಡಲಾಗುವುದು. ಅಲೆಕ್ಸಾಂಡರ್ ಟ್ರೌಫನೋವ್, ಸಾಗುಯಿ ಡೆಕೆಲ್ ಚೆನ್ ಮತ್ತು ಯೈರ್ ಹಾರ್ನ್ ಎಂದು ಹಮಾಸ್ ತನ್ನ ಹೇಳಿಕೆಯಲ್ಲಿ ಹೆಸರಿಸಿದೆ. ಡೆಕೆಲ್-ಚೆನ್ ಗಾಜಾದಲ್ಲಿ ಬಂಧಿತರಾಗಿರುವ ಕೊನೆಯ ಅಮೇರಿಕನ್ ಇಸ್ರೇಲಿ ನಾಗರಿಕರಲ್ಲಿ ಒಬ್ಬರಾಗಿದ್ದಾರೆ.

ಅಕ್ಟೋಬರ್ 7, 2023 ರಂದು ನಡೆದ ಹಮಾಸ್ ದಾಳಿಯ ಸಮಯದಲ್ಲಿ ತನ್ನ ತಾಯಿ, ಗೆಳತಿ ಮತ್ತು ಅಜ್ಜಿಯೊಂದಿಗೆ ಅಪಹರಿಸಲ್ಪಟ್ಟ ರಷ್ಯಾದ ಇಸ್ರೇಲಿ ಉಭಯ ಪ್ರಜೆ ಟ್ರೌಫನೋವ್ ಅವರನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ಇಸ್ರೇಲ್ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಹೇಳಿಕೊಂಡು ಬಿಡುಗಡೆಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸುವುದಾಗಿ ಹಮಾಸ್ ಈ ವಾರ ಹೇಳಿತ್ತು. ಕತಾರ್ ಮತ್ತು ಈಜಿಪ್ಟ್‌ನ ಮಧ್ಯಸ್ಥಿಕೆಯ ನಂತರ ಇಸ್ರೇಲ್ ತನ್ನದೇ ಆದ ಬದ್ಧತೆಗಳನ್ನು ಎತ್ತಿಹಿಡಿಯುವವರೆಗೆ ಮುಂದುವರಿಯಲು ಸಿದ್ಧ ಎಂದು ಹಮಾಸ್ ಹೇಳಿದೆ.

ಜನವರಿಯಲ್ಲಿ ಸಹಿ ಹಾಕಲಾದ ಬಹು-ಹಂತದ ಕದನ ವಿರಾಮ ಒಪ್ಪಂದವು ಗಾಜಾದಲ್ಲಿ ವಿನಾಶಕಾರಿ ಹೋರಾಟವನ್ನು ನಿಲ್ಲಿಸುವ ಉದ್ದೇಶವನ್ನು ಹೊಂದಿತ್ತು. ಇದು ಆರಂಭಿಕ 42 ದಿನಗಳ ಕದನ ವಿರಾಮವನ್ನು ನಿಗದಿಪಡಿಸಿದೆ. ಈ ಸಮಯದಲ್ಲಿ ಹಮಾಸ್ 1,500ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ ಕೈದಿಗಳಿಗೆ ಬದಲಾಗಿ ಕನಿಷ್ಠ 33 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡುತ್ತದೆ.

ಕದನ ವಿರಾಮ ರೇಖೆಗಳನ್ನು ಮೀರಿ ಸೈನ್ಯವನ್ನು ಗಾಜಾದೆಡೆ ಕಳುಹಿಸುವುದನ್ನು ಮುಂದುವರಿಸುವ ಮೂಲಕ ಮತ್ತು ಲಕ್ಷಾಂತರ ಸ್ಥಳಾಂತರಗೊಂಡ ಪ್ಯಾಲೆಸ್ಟೀನಿಯನ್ನರಿಗೆ ಸಾಕಷ್ಟು ಆಶ್ರಯಗಳನ್ನು ಅನುಮತಿಸದ ಮೂಲಕ ಇಸ್ರೇಲ್ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಹಮಾಸ್ ಹೇಳಿದೆ.

ಒಪ್ಪಂದದ ಮೊದಲ ಹಂತದಲ್ಲಿ ಅವಶೇಷಗಳ ತೆರವುಗಾಗಿ ಉಪಕರಣಗಳ ಜೊತೆಗೆ, ಕನಿಷ್ಠ 60,000 ಪೂರ್ವನಿರ್ಮಿತ ವಸತಿ ಘಟಕಗಳು ಮತ್ತು 200,000 ಡೇರೆಗಳನ್ನು ಗಾಜಾಗೆ ತಲುಪಿಸಬೇಕು ಎಂಬುದಾಗಿತ್ತು.

ಶುಕ್ರವಾರದ ಹೊತ್ತಿಗೆ ಇಸ್ರೇಲ್ ಗಾಜಾಗೆ ಸರಬರಾಜುಗಳನ್ನು ಅನುಮತಿಸಲು ಮತ್ತೆ ಬದ್ಧವಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಗುರುವಾರದಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಕ್ತಾರ ಓಮರ್ ದೋಸ್ತ್ರಿ ಇಸ್ರೇಲ್ ಪೂರ್ವನಿರ್ಮಿತ ವಸತಿ ಅಥವಾ ಭಾರೀ ನಿರ್ಮಾಣ ಉಪಕರಣಗಳನ್ನು ಒಳಗೆ ಅನುಮತಿಸುತ್ತಿಲ್ಲ ಎಂದು ಹೇಳಿದ್ದರು, ಆದರೆ ಇದಕ್ಕೆ ಕಾರಣವನ್ನು ವಿವರಿಸಲಿಲ್ಲ. ಅದು ಬದಲಾಗಬಹುದೇ ಎಂದು ಕೂಡ ಅವರು ಹೇಳಿರಲಿಲ್ಲ.

ಕದನ ವಿರಾಮ ಮುಂದುವರಿಯುತ್ತದೆಯೇ ಎಂಬ ಬಗ್ಗೆ ಈ ಪ್ರಕ್ಷುಬ್ದತೆ ಮತ್ತಷ್ಟು ನಿರಾಶಾವಾದಕ್ಕೆ ಕಾರಣವಾಗಿದೆ. ಮೊದಲ ಹಂತವು ಮಾರ್ಚ್ ಆರಂಭದಲ್ಲಿ ಮುಕ್ತಾಯಗೊಳ್ಳಲಿದೆ ಮತ್ತು ಒಪ್ಪಂದವನ್ನು ವಿಸ್ತರಿಸುವ ನಿಯಮಗಳ ಬಗ್ಗೆ ಇಸ್ರೇಲ್ ಮತ್ತು ಹಮಾಸ್ ಇನ್ನೂ ಒಪ್ಪಿಕೊಂಡಿಲ್ಲ.

ಯುದ್ಧವನ್ನು ಕೊನೆಗೊಳಿಸುವುದು, ಉಳಿದ ಜೀವಂತ ಒತ್ತೆಯಾಳುಗಳ ಬಿಡುಗಡೆ ಮತ್ತು ಗಾಜಾದಿಂದ ಇಸ್ರೇಲಿ ಪಡೆಗಳನ್ನು ಹಿಂತೆಗೆದುಕೊಳ್ಳುವುದು ಸೇರಿದಂತೆ ಕಳೆದ ವಾರ ಕದನ ವಿರಾಮ ಒಪ್ಪಂದದ ಎರಡನೇ ಹಂತದ ಕುರಿತು ಇಸ್ರೇಲ್ ಮತ್ತು ಹಮಾಸ್ ಪರೋಕ್ಷ ಮಾತುಕತೆಗಳನ್ನು ಪ್ರಾರಂಭಿಸಬೇಕಿತ್ತು.

ಆದರೆ ಗುರುವಾರದಂದು ಇಸ್ರೇಲ್ “ಪ್ರಸ್ತುತ ಒಪ್ಪಂದದ ಎರಡನೇ ಹಂತದ ಕುರಿತು ಮಾತುಕತೆಗಳನ್ನು ನಡೆಸುತ್ತಿಲ್ಲ” ಎಂದು ದೋಸ್ತ್ರಿ ಹೇಳಿದ್ದರು. ಆರು ವಾರಗಳ ನಂತರ ಹಮಾಸ್ ವಿರುದ್ಧದ ಹೋರಾಟವನ್ನು ಪುನರಾರಂಭಿಸುವಂತೆ ನೆತನ್ಯಾಹು ತಮ್ಮ ಬಲಪಂಥೀಯ ಆಡಳಿತ ಒಕ್ಕೂಟದ ಸದಸ್ಯರಿಂದ ಒತ್ತಡವನ್ನು ಎದುರಿಸಿದ್ದಾರೆ.

ಒತ್ತೆಯಾಳುಗಳ ಬಿಡದಿದ್ದರೆ ಈಜಿಫ್ಟ್ ಗೆ 20 ಲಕ್ಷ ಫೆಲೆಸ್ತೀನಿಯನ್ನರ ಸ್ಥಳಾಂತರಿಸುವ ಟ್ರಂಪ್ ಯೋಜನೆ ಜಾರಿ : ಇಸ್ರೇಲ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...