Homeಮುಖಪುಟಕದನ ವಿರಾಮದ ಬಿಕ್ಕಟ್ಟು ನಿವಾರಣೆ: ಶನಿವಾರ 3 ಇಸ್ರೇಲಿಗಳ ಬಿಡುಗಡೆ

ಕದನ ವಿರಾಮದ ಬಿಕ್ಕಟ್ಟು ನಿವಾರಣೆ: ಶನಿವಾರ 3 ಇಸ್ರೇಲಿಗಳ ಬಿಡುಗಡೆ

- Advertisement -
- Advertisement -

ಇಸ್ರೇಲ್‌ನೊಂದಿಗಿನ ಕದನ ವಿರಾಮದ ಭವಿಷ್ಯದ ಬಗ್ಗೆ ಇದ್ದ ಬಿಕ್ಕಟ್ಟನ್ನು ನಿವಾರಿಸಲಾಗಿದೆ ಎಂದು ಸೂಚಿಸುವ ಮೂಲಕ ಹಮಾಸ್ ಶನಿವಾರದಂದು ಬಿಡುಗಡೆಯಾಗಲಿರುವ ಇನ್ನೂ ಮೂವರು ಇಸ್ರೇಲಿ ಒತ್ತೆಯಾಳುಗಳ ಹೆಸರುಗಳನ್ನು ಶುಕ್ರವಾರ ಪ್ರಕಟಿಸಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಸರಣಿ ವಿನಿಮಯದ ಭಾಗವಾಗಿ ಈ ಮೂವರು ಪುರುಷರನ್ನು ಶನಿವಾರ ಬಿಡುಗಡೆ ಮಾಡಲಾಗುವುದು. ಅಲೆಕ್ಸಾಂಡರ್ ಟ್ರೌಫನೋವ್, ಸಾಗುಯಿ ಡೆಕೆಲ್ ಚೆನ್ ಮತ್ತು ಯೈರ್ ಹಾರ್ನ್ ಎಂದು ಹಮಾಸ್ ತನ್ನ ಹೇಳಿಕೆಯಲ್ಲಿ ಹೆಸರಿಸಿದೆ. ಡೆಕೆಲ್-ಚೆನ್ ಗಾಜಾದಲ್ಲಿ ಬಂಧಿತರಾಗಿರುವ ಕೊನೆಯ ಅಮೇರಿಕನ್ ಇಸ್ರೇಲಿ ನಾಗರಿಕರಲ್ಲಿ ಒಬ್ಬರಾಗಿದ್ದಾರೆ.

ಅಕ್ಟೋಬರ್ 7, 2023 ರಂದು ನಡೆದ ಹಮಾಸ್ ದಾಳಿಯ ಸಮಯದಲ್ಲಿ ತನ್ನ ತಾಯಿ, ಗೆಳತಿ ಮತ್ತು ಅಜ್ಜಿಯೊಂದಿಗೆ ಅಪಹರಿಸಲ್ಪಟ್ಟ ರಷ್ಯಾದ ಇಸ್ರೇಲಿ ಉಭಯ ಪ್ರಜೆ ಟ್ರೌಫನೋವ್ ಅವರನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ಇಸ್ರೇಲ್ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಹೇಳಿಕೊಂಡು ಬಿಡುಗಡೆಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸುವುದಾಗಿ ಹಮಾಸ್ ಈ ವಾರ ಹೇಳಿತ್ತು. ಕತಾರ್ ಮತ್ತು ಈಜಿಪ್ಟ್‌ನ ಮಧ್ಯಸ್ಥಿಕೆಯ ನಂತರ ಇಸ್ರೇಲ್ ತನ್ನದೇ ಆದ ಬದ್ಧತೆಗಳನ್ನು ಎತ್ತಿಹಿಡಿಯುವವರೆಗೆ ಮುಂದುವರಿಯಲು ಸಿದ್ಧ ಎಂದು ಹಮಾಸ್ ಹೇಳಿದೆ.

ಜನವರಿಯಲ್ಲಿ ಸಹಿ ಹಾಕಲಾದ ಬಹು-ಹಂತದ ಕದನ ವಿರಾಮ ಒಪ್ಪಂದವು ಗಾಜಾದಲ್ಲಿ ವಿನಾಶಕಾರಿ ಹೋರಾಟವನ್ನು ನಿಲ್ಲಿಸುವ ಉದ್ದೇಶವನ್ನು ಹೊಂದಿತ್ತು. ಇದು ಆರಂಭಿಕ 42 ದಿನಗಳ ಕದನ ವಿರಾಮವನ್ನು ನಿಗದಿಪಡಿಸಿದೆ. ಈ ಸಮಯದಲ್ಲಿ ಹಮಾಸ್ 1,500ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ ಕೈದಿಗಳಿಗೆ ಬದಲಾಗಿ ಕನಿಷ್ಠ 33 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡುತ್ತದೆ.

ಕದನ ವಿರಾಮ ರೇಖೆಗಳನ್ನು ಮೀರಿ ಸೈನ್ಯವನ್ನು ಗಾಜಾದೆಡೆ ಕಳುಹಿಸುವುದನ್ನು ಮುಂದುವರಿಸುವ ಮೂಲಕ ಮತ್ತು ಲಕ್ಷಾಂತರ ಸ್ಥಳಾಂತರಗೊಂಡ ಪ್ಯಾಲೆಸ್ಟೀನಿಯನ್ನರಿಗೆ ಸಾಕಷ್ಟು ಆಶ್ರಯಗಳನ್ನು ಅನುಮತಿಸದ ಮೂಲಕ ಇಸ್ರೇಲ್ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಹಮಾಸ್ ಹೇಳಿದೆ.

ಒಪ್ಪಂದದ ಮೊದಲ ಹಂತದಲ್ಲಿ ಅವಶೇಷಗಳ ತೆರವುಗಾಗಿ ಉಪಕರಣಗಳ ಜೊತೆಗೆ, ಕನಿಷ್ಠ 60,000 ಪೂರ್ವನಿರ್ಮಿತ ವಸತಿ ಘಟಕಗಳು ಮತ್ತು 200,000 ಡೇರೆಗಳನ್ನು ಗಾಜಾಗೆ ತಲುಪಿಸಬೇಕು ಎಂಬುದಾಗಿತ್ತು.

ಶುಕ್ರವಾರದ ಹೊತ್ತಿಗೆ ಇಸ್ರೇಲ್ ಗಾಜಾಗೆ ಸರಬರಾಜುಗಳನ್ನು ಅನುಮತಿಸಲು ಮತ್ತೆ ಬದ್ಧವಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಗುರುವಾರದಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಕ್ತಾರ ಓಮರ್ ದೋಸ್ತ್ರಿ ಇಸ್ರೇಲ್ ಪೂರ್ವನಿರ್ಮಿತ ವಸತಿ ಅಥವಾ ಭಾರೀ ನಿರ್ಮಾಣ ಉಪಕರಣಗಳನ್ನು ಒಳಗೆ ಅನುಮತಿಸುತ್ತಿಲ್ಲ ಎಂದು ಹೇಳಿದ್ದರು, ಆದರೆ ಇದಕ್ಕೆ ಕಾರಣವನ್ನು ವಿವರಿಸಲಿಲ್ಲ. ಅದು ಬದಲಾಗಬಹುದೇ ಎಂದು ಕೂಡ ಅವರು ಹೇಳಿರಲಿಲ್ಲ.

ಕದನ ವಿರಾಮ ಮುಂದುವರಿಯುತ್ತದೆಯೇ ಎಂಬ ಬಗ್ಗೆ ಈ ಪ್ರಕ್ಷುಬ್ದತೆ ಮತ್ತಷ್ಟು ನಿರಾಶಾವಾದಕ್ಕೆ ಕಾರಣವಾಗಿದೆ. ಮೊದಲ ಹಂತವು ಮಾರ್ಚ್ ಆರಂಭದಲ್ಲಿ ಮುಕ್ತಾಯಗೊಳ್ಳಲಿದೆ ಮತ್ತು ಒಪ್ಪಂದವನ್ನು ವಿಸ್ತರಿಸುವ ನಿಯಮಗಳ ಬಗ್ಗೆ ಇಸ್ರೇಲ್ ಮತ್ತು ಹಮಾಸ್ ಇನ್ನೂ ಒಪ್ಪಿಕೊಂಡಿಲ್ಲ.

ಯುದ್ಧವನ್ನು ಕೊನೆಗೊಳಿಸುವುದು, ಉಳಿದ ಜೀವಂತ ಒತ್ತೆಯಾಳುಗಳ ಬಿಡುಗಡೆ ಮತ್ತು ಗಾಜಾದಿಂದ ಇಸ್ರೇಲಿ ಪಡೆಗಳನ್ನು ಹಿಂತೆಗೆದುಕೊಳ್ಳುವುದು ಸೇರಿದಂತೆ ಕಳೆದ ವಾರ ಕದನ ವಿರಾಮ ಒಪ್ಪಂದದ ಎರಡನೇ ಹಂತದ ಕುರಿತು ಇಸ್ರೇಲ್ ಮತ್ತು ಹಮಾಸ್ ಪರೋಕ್ಷ ಮಾತುಕತೆಗಳನ್ನು ಪ್ರಾರಂಭಿಸಬೇಕಿತ್ತು.

ಆದರೆ ಗುರುವಾರದಂದು ಇಸ್ರೇಲ್ “ಪ್ರಸ್ತುತ ಒಪ್ಪಂದದ ಎರಡನೇ ಹಂತದ ಕುರಿತು ಮಾತುಕತೆಗಳನ್ನು ನಡೆಸುತ್ತಿಲ್ಲ” ಎಂದು ದೋಸ್ತ್ರಿ ಹೇಳಿದ್ದರು. ಆರು ವಾರಗಳ ನಂತರ ಹಮಾಸ್ ವಿರುದ್ಧದ ಹೋರಾಟವನ್ನು ಪುನರಾರಂಭಿಸುವಂತೆ ನೆತನ್ಯಾಹು ತಮ್ಮ ಬಲಪಂಥೀಯ ಆಡಳಿತ ಒಕ್ಕೂಟದ ಸದಸ್ಯರಿಂದ ಒತ್ತಡವನ್ನು ಎದುರಿಸಿದ್ದಾರೆ.

ಒತ್ತೆಯಾಳುಗಳ ಬಿಡದಿದ್ದರೆ ಈಜಿಫ್ಟ್ ಗೆ 20 ಲಕ್ಷ ಫೆಲೆಸ್ತೀನಿಯನ್ನರ ಸ್ಥಳಾಂತರಿಸುವ ಟ್ರಂಪ್ ಯೋಜನೆ ಜಾರಿ : ಇಸ್ರೇಲ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...