Homeಮುಖಪುಟಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

ಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

- Advertisement -
- Advertisement -

ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಹೇಳಿಕೊಂಡಿದ್ದ ಟ್ರಂಪ್, ಸೋಮವಾರ ಹೊಸದಾಗಿ, ವ್ಯಾಪಾರ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ ಕಾರಣಕ್ಕೆ ಉಭಯ ದೇಶಗಳು ಒಪ್ಪಂದಕ್ಕೆ ಒಪ್ಪಿಕೊಂಡವು ಎಂದು ಹೇಳಿದ ನಂತರ ದೇಶದಾದ್ಯಂತ ಭಾರತದ ಸಾರ್ವಭೌಮತೆಯ ಬಗ್ಗೆ ವಿವಾದಗಳು ಎದ್ದಿವೆ. ಈ ಬಗ್ಗೆ ವಿಪಕ್ಷಗಳು ಸೇರಿದಂತೆ ಹೋರಾಟಗಾರರು ಪ್ರಧಾನಿ ಮೋದಿಗೆ ಸ್ಪಷ್ಟನೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ವ್ಯಾಪಾರಿಗಳ ಹಿತಾಸಕ್ತಿಗಾಗಿ ಪ್ರಧಾನಿ ಮೋದಿ ದೇಶದ ಸಾರ್ವಭೌಮತೆಯನ್ನು, ದೇಶದ ಗೌರವವನ್ನು ಮತ್ತೊಂದು ದೇಶದ ಮುಂದೆ ಕಳೆದುಕೊಳ್ಳುವುದು ಸರಿಯೆ ಎಂದು ಪ್ರಶ್ನಿಸಿದ್ದಾರೆ. ಕದನ ವಿರಾಮ ಒಪ್ಪದಿದ್ದರೆ

ಪಹಲ್ಗಾಮ್ ದಾಳಿಯು ಪಾಕಿಸ್ತಾನ ಪ್ರೇರಿತ ಎಂದು ಹೇಳಿಕೊಂಡಿದ್ದ ಭಾರತ, ಆಪರೇಷನ್ ಸಿಂಧೂರವನ್ನು ನಡೆಸಿ ನೆರೆಯ ದೇಶದ 9 ಭಯೋತ್ಪಾದಕ ಕೇಂದ್ರಗಳನ್ನು ನಾಶ ಮಾಡಿದ್ದಾಗಿ ತಿಳಿಸಿತ್ತು. ಇದರ ನಂತರ ಉಭಯ ದೇಶಗಳ ನಡುವೆ ನಾಲ್ಕು ದಿನಗಳ ಕಾಲ ನಡೆದ ಮಿಲಿಟರಿ ಸಂಘರ್ಷದಲ್ಲಿ ಭಾರತದ ಹಲವಾರು ನಾಗರಿಕರು ಮತ್ತು ಸೈನಿಕರು ಮೃತಪಟ್ಟಿದ್ದರು. ಅದಾಗ್ಯೂ, ಶನಿವಾರ ಕದನ ವಿರಾಮಕ್ಕೆ ಉಭಯ ದೇಶಗಳು ಒಪ್ಪಿಕೊಂಡಿದೆ ಎಂದು ಭಾರತ ಘೋಷಿಸುವ ಮುಂಚೆಯೆ, ಕದನ ವಿರಾಮಕ್ಕೆ ತಾನು ಮಧ್ಯಸ್ಥಿಕೆ ವಹಿಸಿದ್ದಾಗಿ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದರು.

ಅದಾಗ್ಯೂ, ಈ ವೇಳೆ ಕೂಡಾ ಭಾರತದ ಸಾರ್ವಭೌಮತೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಅದರ ನಂತರ ಸೋಮವಾರ ಮತ್ತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಲಾಗಿರುವ ವಿಡಿಯೊದಲ್ಲಿ ಅಮೆರಿಕೆ ಅಧ್ಯಕ್ಷ ಉಭಯ ದೇಶಗಳಿಗೆ ವ್ಯಾಪಾರ ಬೇಕೆಂದರೆ ಯುದ್ಧ ನಿಲ್ಲಿಸಿ ಎಂದು ಹೇಳಿದ ನಂತರ ಅವು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು ಎಂದು ಹೇಳಿದ್ದಾರೆ. ಈ ಹೇಳಿಕೆಯ ನಂತರ ಭಾರತ ಸಾರ್ವಭೌಮತೆಯ ಬಗ್ಗೆ ದೇಶದಾದ್ಯಂತ ಪ್ರಶ್ನೆಗಳು ಎದ್ದಿವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಮಸ್ಯೆಗಳನ್ನು ದ್ವಿಪಕ್ಷೀಯ ಒಪ್ಪಂದದ ಮೂಲಕ ಸಾಧ್ಯವಿಲ್ಲವೆ ಎಂದು ವಿಪಕ್ಷಗಳು ಕೇಳಿದ್ದು, ಅದಕ್ಕಾಗಿ ಮತ್ತೊಂದು ದೇಶದ ಮಧ್ಯಸ್ಥಿಕೆ ಯಾಕೆ ಬೇಕು ಎಂದು ಪ್ರಶ್ನಿಸಿದ್ದಾರೆ.

ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ

ಭಾರತ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನಗಳ ನಡುವಿನ ವ್ಯಾಪಾರ ಸಂಬಂಧಗಳು ವಿಶ್ವದ ಅತಿದೊಡ್ಡ ಆರ್ಥಿಕ ಸಂಬಂಧಗಳಲ್ಲಿ ಒಂದಾಗಿದೆ. ಇದು ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರದ ಮೂಲಕ ಗುಣಾತ್ಮಕವಾಗಿ ಬೆಳೆಯುತ್ತಿದೆ. 2023ರಲ್ಲಿ, ಭಾರತ-ಅಮೆರಿಕ ಒಟ್ಟು ವ್ಯಾಪಾರವು ಸರಕು ಮತ್ತು ಸೇವೆಗಳಲ್ಲಿ $191 ಬಿಲಿಯನ್‌ಗೆ ತಲುಪಿದೆ. ಇದರಲ್ಲಿ ಭಾರತದಿಂದ ಅಮೆರಿಕಕ್ಕೆ ರಫ್ತು $118 ಬಿಲಿಯನ್ ಮತ್ತು ಆಮದು $73 ಬಿಲಿಯನ್ ಆಗಿತ್ತು.

ಅಮೆರಿಕಾದಲ್ಲಿ ಭಾರತೀಯ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ (FDI) $40 ಬಿಲಿಯನ್‌ಗಿಂತ ಹೆಚ್ಚಾಗಿದೆ. ಅಮೆರಿಕಾದಲ್ಲಿ ಭಾರತದ 163 ಕಂಪನಿಗಳು ಒಟ್ಟು $40 ಬಿಲಿಯನ್ ಹೂಡಿಕೆಯನ್ನು ಮಾಡಿದೆ.

ಪ್ರಮುಖ ಸರಕುಗಳು: ಭಾರತವು ಅಮೆರಿಕಕ್ಕೆ ಔಷಧಗಳು, ಜವಳಿ, ರತ್ನಗಂಬಳಿಗಳು, ಮಾಹಿತಿ ತಂತ್ರಜ್ಞಾನ ಉತ್ಪನ್ನಗಳು ಮತ್ತು ಯಂತ್ರೋಪಕರಣಗಳನ್ನು ರಫ್ತು ಮಾಡುತ್ತದೆ. ಅಮೆರಿಕದಿಂದ ಭಾರತಕ್ಕೆ ವಿಮಾನಯಾನ ಉತ್ಪನ್ನಗಳು, ಯಂತ್ರೋಪಕರಣಗಳು, ಕೃಷಿ ಉತ್ಪನ್ನಗಳು ಮತ್ತು ತೈಲ-ಗ್ಯಾಸ್ ಆಮದಾಗುತ್ತವೆ.

ಸೇವೆಗಳು: ಭಾರತದ ಐಟಿ ಮತ್ತು ಸಾಫ್ಟ್‌ವೇರ್ ಸೇವೆಗಳು, ವಿಶೇಷವಾಗಿ ಬೆಂಗಳೂರು ಮತ್ತು ಹೈದರಾಬಾದ್‌ನಿಂದ, ಅಮೆರಿಕದ ಮಾರುಕಟ್ಟೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. 2022ರಲ್ಲಿ, ಭಾರತದ ಸೇವಾ ರಫ್ತು ಅಮೆರಿಕಕ್ಕೆ $32 ಬಿಲಿಯನ್‌ಗಿಂತ ಹೆಚ್ಚಿತ್ತು.

ವಿದೇಶಿ ನೇರ ಹೂಡಿಕೆ (FDI):

ಅಮೆರಿಕವು ಭಾರತದಲ್ಲಿ ಅತಿದೊಡ್ಡ ವಿದೇಶಿ ಹೂಡಿಕೆದಾರರಲ್ಲಿ ಒಂದಾಗಿದೆ, 2000-2023ರ ನಡುವೆ $61 ಬಿಲಿಯನ್‌ಗಿಂತ ಹೆಚ್ಚಿನ FDI ಹರಿದುಬಂದಿದೆ. ಅಮೆರಿಕದ ಕಂಪನಿಗಳಾದ ಗೂಗಲ್, ಅಮೆಜಾನ್, ಮತ್ತು ಟೆಸ್ಲಾ ಭಾರತದಲ್ಲಿ ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸುತ್ತಿವೆ. ಭಾರತೀಯ ಕಂಪನಿಗಳಾದ ಟಾಟಾ, ರಿಲಯನ್ಸ್, ಮತ್ತು ಇನ್ಫೋಸಿಸ್ ಅಮೆರಿಕದಲ್ಲಿ ತಂತ್ರಜ್ಞಾನ, ಉತ್ಪಾದನೆ ಮತ್ತು ಸೇವಾ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿವೆ.

ಅಮೆರಿಕಾದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವವರು ಯಾರು?

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿಗಳಾದ ಗೌತಮ್ ಅದಾನಿ (ಅದಾನಿ ಗ್ರೂಪ್) ಮತ್ತು ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್) ಅಮೆರಿಕದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವ ಭಾರತೀಯ ಉದ್ಯಮಿಗಳಾಗಿದ್ದಾರೆ. ಈ ಇಬ್ಬರು ಉದ್ಯಮಿಗಳ ಕಂಪನಿಗಳು ಶಕ್ತಿ, ಮೂಲಸೌಕರ್ಯ, ತಂತ್ರಜ್ಞಾನ, ಮತ್ತು ಚಿಲ್ಲರೆ ವ್ಯಾಪಾರ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿವೆ.

ಗೌತಮ್ ಅದಾನಿ (ಅದಾನಿ ಗ್ರೂಪ್):

ಅದಾನಿ ಗ್ರೂಪ್ 2024ರಲ್ಲಿ ಅಮೆರಿಕದಲ್ಲಿ $10 ಬಿಲಿಯನ್ (ಸುಮಾರು ₹83,000 ಕೋಟಿ) ಹೂಡಿಕೆಯ ಯೋಜನೆಯನ್ನು ಘೋಷಿಸಿತ್ತು. ಇದು ಶಕ್ತಿ (ವಿಶೇಷವಾಗಿ ಹಸಿರು ಶಕ್ತಿ) ಮತ್ತು ಮೂಲಸೌಕರ್ಯ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಹೂಡಿಕೆಯು ಭಾರತೀಯ ಕಂಪನಿಗಳು ಅಮೆರಿಕಾದಲ್ಲಿ ಮಾಡಲಾದ ಒಟ್ಟು $40 ಬಿಲಿಯನ್ ಹೂಡಿಕೆಯಲ್ಲಿ ಸುಮಾರು 25% ಪಾಲನ್ನು ಹೊಂದಿದೆ.

ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್):

ವಾಸ್ತವದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನ ನೇರ ಹೂಡಿಕೆಯ ನಿಖರ ಮೊತ್ತವನ್ನು ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ ಎಂದು ವರದಿಗಳು ಹೇಳುತ್ತವೆ. ಅದಾಗ್ಯೂ ಅಂದಾಜಿನ ಪ್ರಕಾರ, ಅಮೆರಿಕಾದಲ್ಲಿ ಭಾರತೀಯರು ಹೂಡಿಕೆ ಮಾಡಿರುವ ಒಟ್ಟು ಮೊತ್ತದ 10-15% ಪಾಲಿನಷ್ಟಿದೆ ಎನ್ನಲಾಗಿದೆ.

ಮುಖೇಶ್ ಅಂಬಾನಿಯ ರಿಲಯನ್ಸ್‌ ಸಂಸ್ಥೆಯು ತೈಲ ಶುದ್ಧೀಕರಣ ಮತ್ತು ಪೆಟ್ರೋಕೆಮಿಕಲ್ ವ್ಯವಹಾರಗಳನ್ನು ನಡೆಸುತ್ತಿದೆ. ಕಂಪನಿಯು ಅಮೆರಿಕದಿಂದ $33 ಬಿಲಿಯನ್ ಮೌಲ್ಯದ ಕಚ್ಚಾ ತೈಲ ಆಮದು ಮಾಡಿಕೊಂಡಿದ್ದು, ಶಕ್ತಿ ಮತ್ತು ಡಿಜಿಟಲ್ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿದೆ ಎನ್ನಲಾಗಿದೆ. Jio Platforms ಮೂಲಕ ಡಿಜಿಟಲ್ ಸೇವೆಗಳು ಮತ್ತು ಟೆಕ್ ಆವಿಷ್ಕಾರಗಳನ್ನು, ರೀಟೇಲ್ ಮತ್ತು ಇ-ಕಾಮರ್ಸ್ ವಿಭಾಗಗಳಲ್ಲಿ ಹೂಡಿಕೆ ಮಾಡಿದೆ ಎಂದು ವರದಿಯಾಗಿದೆ.

ಇತರ ಗಮನಾರ್ಹ ಭಾರತೀಯ ಕಂಪನಿಗಳ ಹೂಡಿಕೆ:

ಅದಾನಿ ಮತ್ತು ಅಂಬಾನಿ ಮಾತ್ರವಲ್ಲದೆ ಭಾರತದ ಇತರ ಕಂಪನಿಗಳು ಕೂಡಾ ಅಮೆರಿಕದಲ್ಲಿ ಗಣನೀಯ ಹೂಡಿಕೆ ಮಾಡಿವೆ:

  • ಟಾಟಾ ಗ್ರೂಪ್: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಮತ್ತು ಜಾಗ್ವಾರ್ ಲ್ಯಾಂಡ್ ರೋವರ್ (JLR) ಮೂಲಕ $20 ಬಿಲಿಯನ್ಗಿಂತ ಹೆಚ್ಚಿನ ವಿಲೀನ-ಸ್ವಾಧೀನ (M&A) ಒಪ್ಪಂದಗಳನ್ನು ಮಾಡಿಕೊಂಡಿದೆ.
  • ಆದಿತ್ಯ ಬಿರ್ಲಾ ಗ್ರೂಪ್: 2025ರಲ್ಲಿ ಟೆಕ್ಸಾಸ್‌ನಲ್ಲಿ $50 ಮಿಲಿಯನ್ ಹೂಡಿಕೆಯೊಂದಿಗೆ ಎಪಾಕ್ಸಿ ರೆಸಿನ್ ಉತ್ಪಾದನಾ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿದೆ.
  • ಒಯೊ: 2025ರಲ್ಲಿ ಅಮೆರಿಕದ G6 ಹಾಸ್ಪಿಟಾಲಿಟಿಯ ಡಿಜಿಟಲ್ ಆಸ್ತಿಗಳಲ್ಲಿ $10 ಮಿಲಿಯನ್ (₹86.69 ಕೋಟಿ) ಹೂಡಿಕೆ ಘೋಷಿಸಿದೆ.
  • ಜಯ್ ಚೌಧರಿ (Zscaler): ಜಯ್ ಚೌಧರಿ ಅವರ Zscaler ಕಂಪನಿಯು ಸೈಬರ್‌ಸೆಕ್ಯುರಿಟಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತದೆ. ಅವರ ಆಸ್ತಿಯ ಮೌಲ್ಯ $9.37 ಬಿಲಿಯನ್ ಆಗಿದೆ. ಕದನ ವಿರಾಮ ಒಪ್ಪದಿದ್ದರೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...